Homeಮುಖಪುಟಭರದಿಂದ ಸಾಗಿದ ತಯಾರಿಗಳು: ನವೆಂಬರ್ 26-27ಕ್ಕೆ ದೆಹಲಿ ಚಲೋ ನಿಶ್ಚಿತ

ಭರದಿಂದ ಸಾಗಿದ ತಯಾರಿಗಳು: ನವೆಂಬರ್ 26-27ಕ್ಕೆ ದೆಹಲಿ ಚಲೋ ನಿಶ್ಚಿತ

ಪಂಜಾಬ್‌ನ ಹಲವು ಸಂಘಟನೆಗಳು ಈಗಾಗಲೇ ದೆಹಲಿಯಲ್ಲಿ ಹಲವು ಲಂಗರ್‌ಗಳನ್ನು ಸ್ಥಾಪಿಸಿದ್ದು ಆತಿಥ್ಯ ವಹಿಸಲು ಸಜ್ಜಾಗಿವೆ. 

- Advertisement -
- Advertisement -

ಭಾರತ ಒಂದ ಕೃಷಿ ಪ್ರಧಾನ ದೇಶ, ಕೃಷಿ ಭಾರತದ ಬೆನ್ನೆಲುಬು ಎಂದು ಹಿಂದಿನಿಂದಲೂ ಇರುವ ಒಂದು ಮಾತು. ಹಾಗೆ ದೇಶದ 50% ಕ್ಕಿಂತ ಹೆಚ್ಚು ಜನರು ಕೃಷಿಯನ್ನು ಅವಲಂಭಿಸಿದ್ದಾರೆ. ಆದರೆ ವಿಶ್ವದಾದ್ಯಂತ ಕೊರೊನಾ ಸಮಯದಲ್ಲಿ ಎಲ್ಲಾ ಆರ್ಥಿಕ ಚಟುವಟಿಕೆಗಳು ನಿಂತು ಹೋದರೂ ಕೃಷಿ ಚಟುವಟಿಕೆ ಮಾತ್ರ ಮುಂದುವರೆದಿತ್ತು. ಕೃಷಿಯಿಂದ ಬೇಸತ್ತು ಉದ್ಯೋಗ ಅರಸಿಕೊಂಡು ಪೇಟೆಗೆ ಹೊರಟಿದ್ದ ಯುವಜನರು ಮರಳಿ ತಮ್ಮ ಹಳ್ಳಿಗೆ ತೆರಳಿ ಕೃಷಿ ಪ್ರಾರಂಭಿಸಿದ್ದರು.

ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರಗಳು ಜನರ ಪರವಾಗಿ ನಿಂತು ಜನಪರವಾಗಿ ಕೆಲಸ ಮಾಡಬೇಕಿತ್ತು. ಜನರ ಹಸಿವು ಸೇರಿದಂತೆ ಅವರ ಸಂಕಷ್ಟಗಳ ಪರಿಹಾರಕ್ಕೆ ಬೇಕಾಗಿ ಯೋಜನೆಗಳನ್ನು ತರಬೇಕಾಗಿತ್ತು. ಆದರೆ ಸರ್ಕಾರಗಳು ಏನು ಮಾಡಿದ್ದಾರೆ ಎಂದು ನೋಡಿದರೆ ನಿರಾಸೆ ಮೂಡುತ್ತದೆ. ಕೊರೊನಾ ನಿರ್ವಹಣೆಯಲ್ಲಿನ ಲೋಪದೋಷಗಳನ್ನು ಸರಿಪಡಿಸದೆ, ಅದರಲ್ಲಿ ನಡೆಯುತ್ತಿರುವ ಸಾಲು ಸಾಲು ಭ್ರಷ್ಟಾಚಾರ ಆರೋಪಗಳ ಬಗ್ಗೆ ಕಿವಿಕೊಡದೆ ಪ್ರಸ್ತುತ ಬಿಕ್ಕಟ್ಟಿಗೆ ಸಂಬಂಧವೆ ಇಲ್ಲದೆ ಹಲವಾರು ಕಾಯ್ದೆಗಳನ್ನು-ತಿದ್ದುಪಡಿಗಳನ್ನು ತಂದಿತು. ಮೂರು ಕೃಷಿ ಮಸೂದೆಗಳನ್ನು ಸುಗ್ರೀವಾಜ್ಞೆಗಳ ಮೂಲಕ ಹೊರಡಿಸಿ ಯಾವುದೇ ಚರ್ಚೆ ನಡೆಸದೇ ಸಂಸತ್ತಿನಲ್ಲಿ ಅಂಗೀಕರಿಸಿದೆ. ಈ ಕಾಯ್ದೆಗಳು ರೈತವಿರೋಧಿ ಎಂದು ರೈತ ಸಂಘಟನೆಗಳು ಹಲವು ದಿನಗಳಿಂದ ಹೋರಾಟಕ್ಕಿಳಿದಿವೆ.

ಅಲ್ಲದೆ ಕೊರೊನಾದಿಂದಾಗಿ ಕಂಗೆಟ್ಟ ಆರ್ಥಿಕತೆಯನ್ನು ಸರಿಯಾಗಿಸುವ ನೆಪದಲ್ಲಿ ಕಾರ್ಮಿಕ ಕಾನೂನುಗಳನ್ನೇ ಬದಲಾವಣೆ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಈ ಕಾನೂನುಗಳ ವಿರುದ್ದ ಈಗಾಗಲೇ ನಿರಂತರ ಪ್ರತಿಭಟನೆ ನಡೆಯುತ್ತಲೇ ಇದ್ದರೂ ಸರ್ಕಾರಕ್ಕೆ ಈ ಧ್ವನಿ ಕೇಳಿಸುತ್ತಿಲ್ಲ ಅಥವಾ ಕೇಳಿಸದಂತೆ ನಟನೆ ಮಾಡುತ್ತಿದೆ.

ಸರ್ಕಾರ ತಾನು ರೈತರಿಗೆ ಒಳಿತು ಮಾಡುತ್ತಿದ್ದೇನೆ ಎಂದು ಹೇಳುತ್ತಲೇ ಕೃಷಿ ವಲಯದಲ್ಲೂ ಬೃಹತ್‌ ಬಂಡವಾಳಶಾಹಿಗಳನ್ನು ಇಳಿಸಲು ಹೊರಟಿದೆ. ಆರ್ಥಿಕತೆ ಮೇಲೆತ್ತುತ್ತೇವೆ ಎಂಬ ಹೆಸರಿನಲ್ಲಿ ಸುಮಾರು 200 ವರ್ಷಗಳ ಕಾಲ ಸಂಘರ್ಷ, ಹೋರಾಟ, ತ್ಯಾಗ ಮತ್ತು ಬಲಿದಾನಗಳಿಂದ ಪಡೆದ ಕಾರ್ಮಿಕರ ಹಕ್ಕುಗಳನ್ನು, ಕಾನೂನುಗಳನ್ನೇ ಸರ್ಕಾರ ಇಲ್ಲವಾಗಿಸಲು ಹೊರಟಿದೆ ಎಂಬುದು ರೈತ-ಕಾರ್ಮಿಕ ಸಂಘಟನೆಗಳ ಆರೋಪ.

ಈ ದೇಶದ ಸಂಪತ್ತನ್ನು ಸೃಷ್ಟಿಸುವ ಮೂಲಕ ಸುಭದ್ರ ದೇಶವನ್ನು ಕಟ್ಟುವ ರೈತ ಹಾಗೂ ಕಾರ್ಮಿಕರನ್ನು ಬಂಡವಾಳಶಾಹಿಗಳ ಗುಲಾಮರನ್ನಾಗಿಸಲು ಸರ್ಕಾರ ಹೊರಟಿದೆ. ಕೃಷಿ ನೀತಿಗಳ ಹೆಸರಿನಲ್ಲಿ ಕೃಷಿಯನ್ನು, ಆಹಾರ ಉತ್ಪನ್ನಗಳನ್ನು, ಅವುಗಳ ಮಾರುಕಟ್ಟೆಗಳನ್ನು ಬೃಹತ್ ಬಂಡವಾಳ ಶಾಹಿಗಳಿಗೆ ಪರಭಾರೆ ಮಾಡುತ್ತಲೆ, ಕಾರ್ಮಿಕರನ್ನು ಶೋಷಣೆ ಮಾಡುವ ಶತಮಾನಗಳಷ್ಟು ಹಿಂದೆ ಇದ್ದ ಕಾನೂನಗಳಿಗೆ ಮತ್ತೇ ಜಾರಿಗೆ ತರುತ್ತಿದೆ ಎಂದು ಹಲವು ಸಂಘಟನೆಗಳು ಹೋರಾಟಕ್ಕಿಳಿದಿವೆ.

ಈ ಹಿನ್ನಲೆಯಲ್ಲಿ ನವೆಂಬರ್‌ 26-27 ರಂದು ’ದೆಹಲಿ ಚಲೋ’ ನಡೆಯಲಿದೆ. ಎಐಕೆಎಸ್‌ಸಿಸಿ ನೇತೃತ್ವದಲ್ಲಿ 500 ಕ್ಕೂ ಹೆಚ್ಚಿನ ಪ್ರಮುಖ ರೈತ ಸಂಘಟನೆಗಳು ಇದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೆ ಕಾರ್ಮಿಕ ಕಾನೂನಿನ ತಿದ್ದುಪಡಿ ವಿರೋಧಿಸಿ ಕಾರ್ಮಿಕ ಸಂಘಟನೆಗಳು ನೆವೆಂಬರ್‌ 26(ನಾಳೆ) ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದೆ. ವಿದ್ಯಾರ್ಥಿ ಸಂಘಟನೆಗಳು ’ಹೊಸ ಶಿಕ್ಷಣ ನೀತಿ’ಯ ವಿರುದ್ದ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದೆ.

ಈಗಾಗಲೇ ಕರ್ನಾಟಕದಿಂದ ಒಂದು ತಂಡ ದೆಹಲಿಗೆ ಹೊರಟಿದೆ. ಅಲ್ಲದೇ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಮುಷ್ಕರಗಳು ನಡೆಯಲಿದೆ. ಹರಿಯಾಣದ ರೈತ ಸಂಘಟನೆಗಳು ತೀವ್ರ ಪ್ರತಿಭಟನೆಗೆ ಸಿದ್ದತೆ ನಡೆಸಿದ ಬೆನ್ನಲ್ಲೆ ಸುಮಾರು 24 ರೈತ ಮುಖಂಡರನ್ನು ಬಂಧಿಸಲಾಗಿದೆ. ಪಂಜಾಬ್‌ನ ಹಲವು ಸಂಘಟನೆಗಳು ಈಗಾಗಲೇ ದೆಹಲಿಯಲ್ಲಿ ಹಲವು ಲಂಗರ್‌ಗಳನ್ನು ಸ್ಥಾಪಿಸಿದ್ದು ಆತಿಥ್ಯ ವಹಿಸಲು ಸಜ್ಜಾಗಿವೆ.


ಇದನ್ನೂ ಓದಿ: ದೆಹಲಿ ಚಲೋಗೆ ಮುನ್ನ ಡಜನ್‌ಗಟ್ಟಲೇ ರೈತ ಮುಖಂಡರ ಬಂಧನ: ಯೋಗೇಂದ್ರ ಯಾದವ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...