Homeಮುಖಪುಟಭರದಿಂದ ಸಾಗಿದ ತಯಾರಿಗಳು: ನವೆಂಬರ್ 26-27ಕ್ಕೆ ದೆಹಲಿ ಚಲೋ ನಿಶ್ಚಿತ

ಭರದಿಂದ ಸಾಗಿದ ತಯಾರಿಗಳು: ನವೆಂಬರ್ 26-27ಕ್ಕೆ ದೆಹಲಿ ಚಲೋ ನಿಶ್ಚಿತ

ಪಂಜಾಬ್‌ನ ಹಲವು ಸಂಘಟನೆಗಳು ಈಗಾಗಲೇ ದೆಹಲಿಯಲ್ಲಿ ಹಲವು ಲಂಗರ್‌ಗಳನ್ನು ಸ್ಥಾಪಿಸಿದ್ದು ಆತಿಥ್ಯ ವಹಿಸಲು ಸಜ್ಜಾಗಿವೆ. 

- Advertisement -
- Advertisement -

ಭಾರತ ಒಂದ ಕೃಷಿ ಪ್ರಧಾನ ದೇಶ, ಕೃಷಿ ಭಾರತದ ಬೆನ್ನೆಲುಬು ಎಂದು ಹಿಂದಿನಿಂದಲೂ ಇರುವ ಒಂದು ಮಾತು. ಹಾಗೆ ದೇಶದ 50% ಕ್ಕಿಂತ ಹೆಚ್ಚು ಜನರು ಕೃಷಿಯನ್ನು ಅವಲಂಭಿಸಿದ್ದಾರೆ. ಆದರೆ ವಿಶ್ವದಾದ್ಯಂತ ಕೊರೊನಾ ಸಮಯದಲ್ಲಿ ಎಲ್ಲಾ ಆರ್ಥಿಕ ಚಟುವಟಿಕೆಗಳು ನಿಂತು ಹೋದರೂ ಕೃಷಿ ಚಟುವಟಿಕೆ ಮಾತ್ರ ಮುಂದುವರೆದಿತ್ತು. ಕೃಷಿಯಿಂದ ಬೇಸತ್ತು ಉದ್ಯೋಗ ಅರಸಿಕೊಂಡು ಪೇಟೆಗೆ ಹೊರಟಿದ್ದ ಯುವಜನರು ಮರಳಿ ತಮ್ಮ ಹಳ್ಳಿಗೆ ತೆರಳಿ ಕೃಷಿ ಪ್ರಾರಂಭಿಸಿದ್ದರು.

ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರಗಳು ಜನರ ಪರವಾಗಿ ನಿಂತು ಜನಪರವಾಗಿ ಕೆಲಸ ಮಾಡಬೇಕಿತ್ತು. ಜನರ ಹಸಿವು ಸೇರಿದಂತೆ ಅವರ ಸಂಕಷ್ಟಗಳ ಪರಿಹಾರಕ್ಕೆ ಬೇಕಾಗಿ ಯೋಜನೆಗಳನ್ನು ತರಬೇಕಾಗಿತ್ತು. ಆದರೆ ಸರ್ಕಾರಗಳು ಏನು ಮಾಡಿದ್ದಾರೆ ಎಂದು ನೋಡಿದರೆ ನಿರಾಸೆ ಮೂಡುತ್ತದೆ. ಕೊರೊನಾ ನಿರ್ವಹಣೆಯಲ್ಲಿನ ಲೋಪದೋಷಗಳನ್ನು ಸರಿಪಡಿಸದೆ, ಅದರಲ್ಲಿ ನಡೆಯುತ್ತಿರುವ ಸಾಲು ಸಾಲು ಭ್ರಷ್ಟಾಚಾರ ಆರೋಪಗಳ ಬಗ್ಗೆ ಕಿವಿಕೊಡದೆ ಪ್ರಸ್ತುತ ಬಿಕ್ಕಟ್ಟಿಗೆ ಸಂಬಂಧವೆ ಇಲ್ಲದೆ ಹಲವಾರು ಕಾಯ್ದೆಗಳನ್ನು-ತಿದ್ದುಪಡಿಗಳನ್ನು ತಂದಿತು. ಮೂರು ಕೃಷಿ ಮಸೂದೆಗಳನ್ನು ಸುಗ್ರೀವಾಜ್ಞೆಗಳ ಮೂಲಕ ಹೊರಡಿಸಿ ಯಾವುದೇ ಚರ್ಚೆ ನಡೆಸದೇ ಸಂಸತ್ತಿನಲ್ಲಿ ಅಂಗೀಕರಿಸಿದೆ. ಈ ಕಾಯ್ದೆಗಳು ರೈತವಿರೋಧಿ ಎಂದು ರೈತ ಸಂಘಟನೆಗಳು ಹಲವು ದಿನಗಳಿಂದ ಹೋರಾಟಕ್ಕಿಳಿದಿವೆ.

ಅಲ್ಲದೆ ಕೊರೊನಾದಿಂದಾಗಿ ಕಂಗೆಟ್ಟ ಆರ್ಥಿಕತೆಯನ್ನು ಸರಿಯಾಗಿಸುವ ನೆಪದಲ್ಲಿ ಕಾರ್ಮಿಕ ಕಾನೂನುಗಳನ್ನೇ ಬದಲಾವಣೆ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಈ ಕಾನೂನುಗಳ ವಿರುದ್ದ ಈಗಾಗಲೇ ನಿರಂತರ ಪ್ರತಿಭಟನೆ ನಡೆಯುತ್ತಲೇ ಇದ್ದರೂ ಸರ್ಕಾರಕ್ಕೆ ಈ ಧ್ವನಿ ಕೇಳಿಸುತ್ತಿಲ್ಲ ಅಥವಾ ಕೇಳಿಸದಂತೆ ನಟನೆ ಮಾಡುತ್ತಿದೆ.

ಸರ್ಕಾರ ತಾನು ರೈತರಿಗೆ ಒಳಿತು ಮಾಡುತ್ತಿದ್ದೇನೆ ಎಂದು ಹೇಳುತ್ತಲೇ ಕೃಷಿ ವಲಯದಲ್ಲೂ ಬೃಹತ್‌ ಬಂಡವಾಳಶಾಹಿಗಳನ್ನು ಇಳಿಸಲು ಹೊರಟಿದೆ. ಆರ್ಥಿಕತೆ ಮೇಲೆತ್ತುತ್ತೇವೆ ಎಂಬ ಹೆಸರಿನಲ್ಲಿ ಸುಮಾರು 200 ವರ್ಷಗಳ ಕಾಲ ಸಂಘರ್ಷ, ಹೋರಾಟ, ತ್ಯಾಗ ಮತ್ತು ಬಲಿದಾನಗಳಿಂದ ಪಡೆದ ಕಾರ್ಮಿಕರ ಹಕ್ಕುಗಳನ್ನು, ಕಾನೂನುಗಳನ್ನೇ ಸರ್ಕಾರ ಇಲ್ಲವಾಗಿಸಲು ಹೊರಟಿದೆ ಎಂಬುದು ರೈತ-ಕಾರ್ಮಿಕ ಸಂಘಟನೆಗಳ ಆರೋಪ.

ಈ ದೇಶದ ಸಂಪತ್ತನ್ನು ಸೃಷ್ಟಿಸುವ ಮೂಲಕ ಸುಭದ್ರ ದೇಶವನ್ನು ಕಟ್ಟುವ ರೈತ ಹಾಗೂ ಕಾರ್ಮಿಕರನ್ನು ಬಂಡವಾಳಶಾಹಿಗಳ ಗುಲಾಮರನ್ನಾಗಿಸಲು ಸರ್ಕಾರ ಹೊರಟಿದೆ. ಕೃಷಿ ನೀತಿಗಳ ಹೆಸರಿನಲ್ಲಿ ಕೃಷಿಯನ್ನು, ಆಹಾರ ಉತ್ಪನ್ನಗಳನ್ನು, ಅವುಗಳ ಮಾರುಕಟ್ಟೆಗಳನ್ನು ಬೃಹತ್ ಬಂಡವಾಳ ಶಾಹಿಗಳಿಗೆ ಪರಭಾರೆ ಮಾಡುತ್ತಲೆ, ಕಾರ್ಮಿಕರನ್ನು ಶೋಷಣೆ ಮಾಡುವ ಶತಮಾನಗಳಷ್ಟು ಹಿಂದೆ ಇದ್ದ ಕಾನೂನಗಳಿಗೆ ಮತ್ತೇ ಜಾರಿಗೆ ತರುತ್ತಿದೆ ಎಂದು ಹಲವು ಸಂಘಟನೆಗಳು ಹೋರಾಟಕ್ಕಿಳಿದಿವೆ.

ಈ ಹಿನ್ನಲೆಯಲ್ಲಿ ನವೆಂಬರ್‌ 26-27 ರಂದು ’ದೆಹಲಿ ಚಲೋ’ ನಡೆಯಲಿದೆ. ಎಐಕೆಎಸ್‌ಸಿಸಿ ನೇತೃತ್ವದಲ್ಲಿ 500 ಕ್ಕೂ ಹೆಚ್ಚಿನ ಪ್ರಮುಖ ರೈತ ಸಂಘಟನೆಗಳು ಇದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೆ ಕಾರ್ಮಿಕ ಕಾನೂನಿನ ತಿದ್ದುಪಡಿ ವಿರೋಧಿಸಿ ಕಾರ್ಮಿಕ ಸಂಘಟನೆಗಳು ನೆವೆಂಬರ್‌ 26(ನಾಳೆ) ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದೆ. ವಿದ್ಯಾರ್ಥಿ ಸಂಘಟನೆಗಳು ’ಹೊಸ ಶಿಕ್ಷಣ ನೀತಿ’ಯ ವಿರುದ್ದ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದೆ.

ಈಗಾಗಲೇ ಕರ್ನಾಟಕದಿಂದ ಒಂದು ತಂಡ ದೆಹಲಿಗೆ ಹೊರಟಿದೆ. ಅಲ್ಲದೇ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಮುಷ್ಕರಗಳು ನಡೆಯಲಿದೆ. ಹರಿಯಾಣದ ರೈತ ಸಂಘಟನೆಗಳು ತೀವ್ರ ಪ್ರತಿಭಟನೆಗೆ ಸಿದ್ದತೆ ನಡೆಸಿದ ಬೆನ್ನಲ್ಲೆ ಸುಮಾರು 24 ರೈತ ಮುಖಂಡರನ್ನು ಬಂಧಿಸಲಾಗಿದೆ. ಪಂಜಾಬ್‌ನ ಹಲವು ಸಂಘಟನೆಗಳು ಈಗಾಗಲೇ ದೆಹಲಿಯಲ್ಲಿ ಹಲವು ಲಂಗರ್‌ಗಳನ್ನು ಸ್ಥಾಪಿಸಿದ್ದು ಆತಿಥ್ಯ ವಹಿಸಲು ಸಜ್ಜಾಗಿವೆ.


ಇದನ್ನೂ ಓದಿ: ದೆಹಲಿ ಚಲೋಗೆ ಮುನ್ನ ಡಜನ್‌ಗಟ್ಟಲೇ ರೈತ ಮುಖಂಡರ ಬಂಧನ: ಯೋಗೇಂದ್ರ ಯಾದವ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...