Homeಮುಖಪುಟಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆಯುವವರೆಗೂ ಜೈಲಿನಲ್ಲಿರಲು ಸಿದ್ಧ: ಸೋನಮ್ ವಾಂಗ್ಚುಕ್

ಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆಯುವವರೆಗೂ ಜೈಲಿನಲ್ಲಿರಲು ಸಿದ್ಧ: ಸೋನಮ್ ವಾಂಗ್ಚುಕ್

- Advertisement -
- Advertisement -

ಲಡಾಖ್ ಹಿಂಸಾಚಾರದ ಸಂದರ್ಭದಲ್ಲಿ ನಾಲ್ವರ ಹತ್ಯೆ ಕುರಿತು ಸ್ವತಂತ್ರ ನ್ಯಾಯಾಂಗ ತನಿಖೆಗೆ ಆದೇಶಿಸುವವರೆಗೆ ಜೈಲಿನಲ್ಲಿರಲು ಸಿದ್ಧ ಎಂದು ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ರಾಜಸ್ಥಾನದ ಜೋಧ್‌ಪುರ ಕೇಂದ್ರ ಕಾರಾಗೃಹದಿಂದ ಸಂದೇಶ ಕಳುಹಿಸಿದ್ದಾರೆ.

ಶನಿವಾರ ಜೈಲಿನಲ್ಲಿ ತನ್ನನ್ನು ಭೇಟಿಯಾದ ವಕೀಲ ಮುಸ್ತಫಾ ಹಾಜಿ ಮತ್ತು ಹಿರಿಯ ಸೋದರ ಕಾ ತ್ಸೆತಾನ್ ದೋರ್ಜೆ ಲೇ ಮೂಲಕ ವಾಂಗ್ಚುಕ್ ಈ ಸಂದೇಶ ರವಾನಿಸಿದ್ದಾರೆ.

ವಾಂಗ್ಚುಕ್ ಅವರನ್ನು ಎನ್‌ಎಸ್‌ಎ ಅಡಿ ಬಂಧಿಸಿರುವುದನ್ನು ಪ್ರಶ್ನಿಸಿ ಮತ್ತು ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಕೋರಿ ಅವರ ಪತ್ನಿ ಗೀತಾಂಜಲಿ ಜೆ ಆಂಗ್ಮೋ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

“ನಮ್ಮ ನಾಲ್ವರು ಜನರ ಹತ್ಯೆಯ ಬಗ್ಗೆ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಯಬೇಕು. ಅದು ನಡೆಯದ ಹೊರತು, ನಾನು ಜೈಲಿನಲ್ಲಿಯೇ ಇರಲು ಸಿದ್ಧನಿದ್ದೇನೆ. ಲಡಾಖ್‌ ಅನ್ನು ಸಂವಿಧಾನ ಆರನೇ ಪರಿಚ್ಛೇದಕ್ಕೆ ಸೇರಿಸಬೇಕು ಮತ್ತು ರಾಜ್ಯದ ಸ್ಥಾನಮಾನ ನೀಡಬೇಕು ಎಂಬ ನಮ್ಮ ನಿಜವಾದ ಸಾಂವಿಧಾನಿಕ ಬೇಡಿಕೆ ವಿಷಯದಲ್ಲಿ ನಾನು, ಅಪೆಕ್ಸ್ ಬಾಡಿ, ಕೆಡಿಎ ಲಡಾಖ್ ಜನರೊಂದಿಗೆ ದೃಢವಾಗಿ ನಿಲ್ಲುತ್ತೇವೆ. ಲಡಾಖ್‌ನ ಹಿತದೃಷ್ಟಿಯಿಂದ ಅಪೆಕ್ಸ್ ಬಾಡಿ ತೆಗೆದುಕೊಳ್ಳುವ ಯಾವುದೇ ಕ್ರಮಗಳನ್ನು ನಾನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ” ಎಂದು ಸೋನಮ್ ವಾಂಗ್ಚುಕ್ ಹೇಳಿದ್ದಾರೆ.

ಕೇಂದ್ರ ಸರ್ಕಾರ ಪ್ರಸ್ತಾಪಿಸಿದ ಮಾತುಕತೆಯಿಂದ ಅಪೆಕ್ಸ್ ಬಾಡಿ ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (ಕೆಡಿಎ) ಎರಡೂ ಹಿಂದೆ ಸರಿದಿದ್ದು, ಬಂಧಿತ ಹೋರಾಟಗಾರರನ್ನು ಬಿಡುಗಡೆ ಮಾಡಿ ನ್ಯಾಯಾಂಗ ವಿಚಾರಣೆ ನಡೆಸುವವರೆಗೆ ನಾವು ಮಾತುಕತೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿವೆ.

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು ಮತ್ತು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ನಡೆದ ಪ್ರತಿಭಟನೆಗಳಲ್ಲಿ ನಾಲ್ವರು ಸಾವನ್ನಪ್ಪಿ, 90 ಜನರು ಗಾಯಗೊಂಡ ಎರಡು ದಿನಗಳ ನಂತರ, ಅಂದರೆ ಸೆಪ್ಟೆಂಬರ್ 26ರಂದು ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ವಾಂಗ್‌ಚುಕ್ ಅವರನ್ನು ಬಂಧಿಸಲಾಗಿದೆ.

ತನ್ನ ಬಗ್ಗೆ ಜನರ ಕಾಳಜಿ ಮತ್ತು ಪ್ರಾರ್ಥನೆಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿರುವ ವಾಂಗ್ಚುಕ್, ತಾನು ದೈಹಿಕವಾಗಿ ಮತ್ತು ಮಾನಸಿಕವಾಗಿ ಚೆನ್ನಾಗಿದ್ದೇನೆ ಎಂದು ಹೇಳಿದ್ದಾರೆ. ಜೀವ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪಗಳನ್ನು ವ್ಯಕ್ತಪಡಿಸಿರುವ ಅವರು, ಗಾಯಾಳುಗಳು ಅಥವಾ ಬಂಧಿತರಿಗಾಗಿ ತಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಶಾಂತಿ ಮತ್ತು ಏಕತೆಯನ್ನು ಕಾಯ್ದುಕೊಳ್ಳುವಂತೆ ಹಾಗೂ ಗಾಂಧಿವಾದಿ ರೀತಿಯಲ್ಲಿ ಶಾಂತಿಯುತವಾಗಿ,ಅಹಿಂಸಾತ್ಮಕವಾಗಿ ಹೋರಾಟವನ್ನು ಮುಂದುವರಿಸುವಂತೆ ಅವರು ಜನತೆಯನ್ನು ಕೋರಿಕೊಂಡಿದ್ದಾರೆ.

ಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...