Homeಮುಖಪುಟಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆಯುವವರೆಗೂ ಜೈಲಿನಲ್ಲಿರಲು ಸಿದ್ಧ: ಸೋನಮ್ ವಾಂಗ್ಚುಕ್

ಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆಯುವವರೆಗೂ ಜೈಲಿನಲ್ಲಿರಲು ಸಿದ್ಧ: ಸೋನಮ್ ವಾಂಗ್ಚುಕ್

- Advertisement -
- Advertisement -

ಲಡಾಖ್ ಹಿಂಸಾಚಾರದ ಸಂದರ್ಭದಲ್ಲಿ ನಾಲ್ವರ ಹತ್ಯೆ ಕುರಿತು ಸ್ವತಂತ್ರ ನ್ಯಾಯಾಂಗ ತನಿಖೆಗೆ ಆದೇಶಿಸುವವರೆಗೆ ಜೈಲಿನಲ್ಲಿರಲು ಸಿದ್ಧ ಎಂದು ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ರಾಜಸ್ಥಾನದ ಜೋಧ್‌ಪುರ ಕೇಂದ್ರ ಕಾರಾಗೃಹದಿಂದ ಸಂದೇಶ ಕಳುಹಿಸಿದ್ದಾರೆ.

ಶನಿವಾರ ಜೈಲಿನಲ್ಲಿ ತನ್ನನ್ನು ಭೇಟಿಯಾದ ವಕೀಲ ಮುಸ್ತಫಾ ಹಾಜಿ ಮತ್ತು ಹಿರಿಯ ಸೋದರ ಕಾ ತ್ಸೆತಾನ್ ದೋರ್ಜೆ ಲೇ ಮೂಲಕ ವಾಂಗ್ಚುಕ್ ಈ ಸಂದೇಶ ರವಾನಿಸಿದ್ದಾರೆ.

ವಾಂಗ್ಚುಕ್ ಅವರನ್ನು ಎನ್‌ಎಸ್‌ಎ ಅಡಿ ಬಂಧಿಸಿರುವುದನ್ನು ಪ್ರಶ್ನಿಸಿ ಮತ್ತು ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಕೋರಿ ಅವರ ಪತ್ನಿ ಗೀತಾಂಜಲಿ ಜೆ ಆಂಗ್ಮೋ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

“ನಮ್ಮ ನಾಲ್ವರು ಜನರ ಹತ್ಯೆಯ ಬಗ್ಗೆ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಯಬೇಕು. ಅದು ನಡೆಯದ ಹೊರತು, ನಾನು ಜೈಲಿನಲ್ಲಿಯೇ ಇರಲು ಸಿದ್ಧನಿದ್ದೇನೆ. ಲಡಾಖ್‌ ಅನ್ನು ಸಂವಿಧಾನ ಆರನೇ ಪರಿಚ್ಛೇದಕ್ಕೆ ಸೇರಿಸಬೇಕು ಮತ್ತು ರಾಜ್ಯದ ಸ್ಥಾನಮಾನ ನೀಡಬೇಕು ಎಂಬ ನಮ್ಮ ನಿಜವಾದ ಸಾಂವಿಧಾನಿಕ ಬೇಡಿಕೆ ವಿಷಯದಲ್ಲಿ ನಾನು, ಅಪೆಕ್ಸ್ ಬಾಡಿ, ಕೆಡಿಎ ಲಡಾಖ್ ಜನರೊಂದಿಗೆ ದೃಢವಾಗಿ ನಿಲ್ಲುತ್ತೇವೆ. ಲಡಾಖ್‌ನ ಹಿತದೃಷ್ಟಿಯಿಂದ ಅಪೆಕ್ಸ್ ಬಾಡಿ ತೆಗೆದುಕೊಳ್ಳುವ ಯಾವುದೇ ಕ್ರಮಗಳನ್ನು ನಾನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ” ಎಂದು ಸೋನಮ್ ವಾಂಗ್ಚುಕ್ ಹೇಳಿದ್ದಾರೆ.

ಕೇಂದ್ರ ಸರ್ಕಾರ ಪ್ರಸ್ತಾಪಿಸಿದ ಮಾತುಕತೆಯಿಂದ ಅಪೆಕ್ಸ್ ಬಾಡಿ ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (ಕೆಡಿಎ) ಎರಡೂ ಹಿಂದೆ ಸರಿದಿದ್ದು, ಬಂಧಿತ ಹೋರಾಟಗಾರರನ್ನು ಬಿಡುಗಡೆ ಮಾಡಿ ನ್ಯಾಯಾಂಗ ವಿಚಾರಣೆ ನಡೆಸುವವರೆಗೆ ನಾವು ಮಾತುಕತೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿವೆ.

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು ಮತ್ತು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ನಡೆದ ಪ್ರತಿಭಟನೆಗಳಲ್ಲಿ ನಾಲ್ವರು ಸಾವನ್ನಪ್ಪಿ, 90 ಜನರು ಗಾಯಗೊಂಡ ಎರಡು ದಿನಗಳ ನಂತರ, ಅಂದರೆ ಸೆಪ್ಟೆಂಬರ್ 26ರಂದು ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ವಾಂಗ್‌ಚುಕ್ ಅವರನ್ನು ಬಂಧಿಸಲಾಗಿದೆ.

ತನ್ನ ಬಗ್ಗೆ ಜನರ ಕಾಳಜಿ ಮತ್ತು ಪ್ರಾರ್ಥನೆಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿರುವ ವಾಂಗ್ಚುಕ್, ತಾನು ದೈಹಿಕವಾಗಿ ಮತ್ತು ಮಾನಸಿಕವಾಗಿ ಚೆನ್ನಾಗಿದ್ದೇನೆ ಎಂದು ಹೇಳಿದ್ದಾರೆ. ಜೀವ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪಗಳನ್ನು ವ್ಯಕ್ತಪಡಿಸಿರುವ ಅವರು, ಗಾಯಾಳುಗಳು ಅಥವಾ ಬಂಧಿತರಿಗಾಗಿ ತಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಶಾಂತಿ ಮತ್ತು ಏಕತೆಯನ್ನು ಕಾಯ್ದುಕೊಳ್ಳುವಂತೆ ಹಾಗೂ ಗಾಂಧಿವಾದಿ ರೀತಿಯಲ್ಲಿ ಶಾಂತಿಯುತವಾಗಿ,ಅಹಿಂಸಾತ್ಮಕವಾಗಿ ಹೋರಾಟವನ್ನು ಮುಂದುವರಿಸುವಂತೆ ಅವರು ಜನತೆಯನ್ನು ಕೋರಿಕೊಂಡಿದ್ದಾರೆ.

ಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...