Homeಮುಖಪುಟಲೋಕಸಭಾ ಚುನಾವಣೆಗೆ ತಯಾರಿ: ಕನೌಜ್ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಅಖಿಲೇಶ್ ಯಾದವ್

ಲೋಕಸಭಾ ಚುನಾವಣೆಗೆ ತಯಾರಿ: ಕನೌಜ್ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಅಖಿಲೇಶ್ ಯಾದವ್

- Advertisement -
- Advertisement -

ದೇಶದಲ್ಲಿಯೇ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು (80) ಹೊಂದಿರುವ ಉತ್ತರ ಪ್ರದೇಶದಲ್ಲಿ ಚುನಾವಣಾ ಚಟುವಟಿಕೆಗಳು ಆರಂಭವಾಗಿವೆ. ಕಳೆದ ಎರಡು ಚುನಾವಣೆಗಳಲ್ಲಿ ಬಿಜೆಪಿ ಇಲ್ಲಿ ಪರಾಕ್ರಮ ಮೆರೆದಿದೆ. ಈ ಹಿಂದೆ ಇಲ್ಲಿ ಪ್ರಬಲವಾಗಿದ್ದ ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ ಮತ್ತು ಕಾಂಗ್ರೆಸ್ ಕುಸಿದಿವೆ. 2024ರ ಚುನಾವಣೆಯಲ್ಲಿ ಮತ್ತೆ ತಮ್ಮ ಅಸ್ತಿತ್ವ ಸಾರಲು ಮುಂದಾಗಿವೆ. ಈ ನಿಟ್ಟಿನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ, ಮಾಜಿ ಸಿಎಂ ಅಖಿಲೇಶ್ ಯಾದವ್ ತಯಾರಿ ಆರಂಭಿಸಿದ್ದಾರೆ. ಸದ್ಯಕ್ಕೆ ಕರ್ಹಾಲ್ ವಿಧಾನಸಭಾ ಕ್ಷೇತ್ರದ ಸದಸ್ಯರಾಗಿರುವ ಅವರು ಮುಂದಿನ ವರ್ಷದ ಸಂಸತ್ ಚುನಾವಣೆಯಲ್ಲಿ ತಮ್ಮ ಕುಟುಂಬದ ಭದ್ರನೆಲೆಯಾದ ಮತ್ತು ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದ ಕನೌಜ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಕನೌಜ್ ಸಮಾಜವಾದಿಗಳ ನೆಲೆ. ಈ ಕ್ಷೇತ್ರದಲ್ಲಿ ಒಂದು ಕಾಲದಲ್ಲಿ (1967) ಸಮಾಜವಾದಿ ಹೋರಾಟಗಾರ ರಾಮಮನೋಹರ ಲೋಹಿಯಾರವರು ಸ್ಪರ್ಧಿಸಿ ಗೆಲುವು ಕಂಡಿದ್ದರು. ಅಖಿಲೇಶ್ ಯಾದವರ್‌ರವರು ಲೋಹಿಯಾರವರ ಅನುಯಾಯಿಯಾಗಿದ್ದಾರೆ. ಹಾಗಾಗಿ ಪಕ್ಷ ನಿರ್ಧರಿಸಿದರೆ ಅಲ್ಲಿಂದಲೇ ಸ್ಪರ್ಧಿಸುತ್ತಾರೆ ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಾಜೇಂದ್ರ ಚೌಧರಿ ತಿಳಿಸಿದ್ದಾರೆ.

1999ರಲ್ಲಿ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್‌ರವರು ಕನೌಜ್‌ನಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ 2000 ನೇ ಇಸವಿಯಲ್ಲಿ ಅವರು ಸಂಭಾಲ್‌ಗೆ ಹೋಗಿ ತಮ್ಮ ಪುತ್ರ ಅಖಿಲೇಶ್‌ ಯಾದವ್ ಕನೌಜ್‌ನಿಂದ ಸ್ಪರ್ಧಿಸಲು ಅನುವು ಮಾಡಿಕೊಟ್ಟಿದ್ದರು. ಮೊದಲ ಯತ್ನದಲ್ಲಿಯೇ ಅಖಿಲೇಶ್ ಯಾದವ್ ಅಲ್ಲಿ ಜಯ ಗಳಿಸಿದ್ದರು. ಆನಂತರ 2004 ಮತ್ತು 2008ರಲ್ಲಿಯೂ ಗೆದ್ದು ಬಂದರು. 2014ರಲ್ಲಿ ಅವರ ಪತ್ನಿ ಡಿಂಪಲ್ ಯಾದವ್ ಅಲ್ಲಿಂದ ಸ್ಪರ್ಧಿಸಿ ಜಯ ಗಳಿಸಿದರು. 2019ರ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಅಜಂಘರ್ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದರು. ಆದರೆ 2019ರಲ್ಲಿ ಡಿಂಪಲ್ ಯಾದವ್ ಕನೌಜ್‌ನಲ್ಲಿ ಬಿಜೆಪಿಯ ಸುಬ್ರಾತ್ ಪಾಠಕ್ ಎದುರು ಸೋಲು ಕಂಡರು. ಆನಂತರ ಮುಲಾಯಂ ಸಿಂಗ್ ಯಾದವ್‌ ನಿಧನದ ನಂತರ ತೆರವಾದ ಮೈನ್‌ಪುರಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

2022ರಲ್ಲಿ ಅಖಿಲೇಶ್ ಯಾದವ್ ಕರ್ಹಾಲ್ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಕಾರಣ ಅಜಂಘರ್ ಕ್ಷೇತ್ರದ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರ ಸಹೋದರ ಸಂಬಂಧಿ ಧರ್ಮೇಂದ್ರ ಯಾದವ್ ಸ್ಪರ್ಧಿಸಿ ಸೋಲು ಕಂಡಿದ್ದಾರೆ.

ಕನೌಜ್ ಕ್ಷೇತ್ರದಲ್ಲಿ ಮುಸ್ಲಿಮರು, ದಲಿತರು ಮತ್ತು ಯಾದವರು ಪ್ರಾಬಲ್ಯ ಹೊಂದಿದ್ದಾರೆ. ಮೂರು ಲಕ್ಷ ಮುಸ್ಲಿಂ ಮತದಾರರಿದ್ದರೆ, ದಲಿತ ಮತದಾರರು ಸುಮಾರು 2.8 ಲಕ್ಷ ಮತ್ತು ಯಾದವರು 2.5 ಲಕ್ಷದಷ್ಟಿದ್ದಾರೆ. ಕಳೆದ ಬಾರಿ ಯಾದವ ಮತ್ತು ದಲಿತ ಮತದಾರರು ತಮ್ಮ ನಿಷ್ಠೆಯನ್ನು ಬಿಜೆಪಿಗೆ ಬದಲಾಯಿಸಿದ ಪರಿಣಾಮ ಸಮಾಜವಾದಿ ಪಕ್ಷ ಸೋಲಬೇಕಾಯಿತು.

ಅಖಿಲೇಶ್ ಯಾದವ್ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಕನೌಜ್‌ನಿಂದ ಸ್ಪರ್ಧಿಸುವುದಾಗಿ ಈಗಾಗಲೇ ಹೇಳಿದ್ದಾರೆ. ಅದಕ್ಕಾಗಿ ಸಿದ್ಧತೆ ಆರಂಭಿಸಿದ್ದೇವೆ. ಜೂನ್ 1 ರಿಂದ ಪಕ್ಷವು ಬೂತ್ ಸಮಿತಿಗಳ ಪುನರ್ ರಚನೆಯನ್ನು ಪ್ರಾರಂಭಿಸುತ್ತದೆ. ಜಿಲ್ಲಾ ಸಮಿತಿಯನ್ನು ಸಹ ರಚಿಸಲಾಗುವುದು ಎಂದು ಸಮಾಜವಾದಿ ಪಕ್ಷದ ಕನೌಜ್ ಜಿಲ್ಲಾ ಘಟಕದ ಅಧ್ಯಕ್ಷ ಕಲೀಂ ಖಾನ್ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇತ್ತೀಚೆಗೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಸಮಾಜವಾದಿ ಪಕ್ಷ ಉತ್ತಮ ಸಾಧನೆ ಮಾಡಿಲ್ಲ. 5 ಮುನಿಸಿಪಲ್‌ಗಳಲ್ಲಿ ಒಂದರಲ್ಲಿ ಮಾತ್ರ ಅಧಿಕಾರ ಹಿಡಿಯಲು ಸಾಧ್ಯವಾಗಿದೆ. ಹಾಗಾಗಿ ಅಖಿಲೇಶ್ ಯಾದವ್‌ರವರ ಸ್ಪರ್ಧೆಯಿಂದ ಪಕ್ಷಕ್ಕೆ ಬಲ ಬರುತ್ತದೆ ಎಂದು ಸ್ಥಳೀಯ ಕಾರ್ಯಕರ್ತರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಪಕ್ಷಗಳ ಒಗ್ಗಟ್ಟು ಯತ್ನ: ಖರ್ಗೆ, ರಾಹುಲ್ ಭೇಟಿಯಾಗಲಿರುವ ನಿತೀಶ್ ಕುಮಾರ್, ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...