Homeದಲಿತ್ ಫೈಲ್ಸ್ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ಮತಾಂತರವಾದ ದಲಿತರಿಗೆ ಎಸ್‌ಸಿ ಮೀಸಲಾತಿ ನೀಡಬೇಕೇ, ಬೇಡವೇ ಎಂಬ ಪ್ರಶ್ನೆ ಸುಪ್ರೀಂಕೋರ್ಟ್‌ನಲ್ಲಿರುವ ಕಾರಣ, ಆಯೋಗ ರಚನೆಯ ಪ್ರಸ್ತಾಪ ಮಹತ್ವ ಪಡೆದಿದೆ.

- Advertisement -
- Advertisement -

ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಸಿಖ್ ಧರ್ಮವನ್ನು ಹೊರತುಪಡಿಸಿ ಇತರ ಧರ್ಮಗಳಿಗೆ ಮತಾಂತರಗೊಂಡ ಪರಿಶಿಷ್ಟ ಜಾತಿಗಳ ಅಥವಾ ದಲಿತರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಅಧ್ಯಯನ ಮಾಡಲು ರಾಷ್ಟ್ರೀಯ ಆಯೋಗವನ್ನು ರಚಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಇಂತಹ ಆಯೋಗವನ್ನು ರಚಿಸುವ ಪ್ರಸ್ತಾವನೆ ಕೇಂದ್ರದಲ್ಲಿ ಸಕ್ರಿಯವಾಗಿ ಚರ್ಚೆಯಾಗುತ್ತಿದ್ದು, ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿರುವುದಾಗಿ ‘ಇಂಡಿಯನ್‌ ಎಕ್ಸ್‌ಪ್ರೆಸ್’ ಸುದ್ದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಆಯೋಗ ರಚನೆಗೆ ಹಸಿರು ನಿಶಾನೆ ತೋರಿವೆ. ಗೃಹ, ಕಾನೂನು, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಹಾಗೂ ಹಣಕಾಸು ಸಚಿವಾಲಯಗಳ ನಡುವೆ ಈ ಪ್ರಸ್ತಾವನೆಯ ಕುರಿತು ಸಮಾಲೋಚನೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರಿಗೆ ಎಸ್‌ಸಿ ಮೀಸಲಾತಿ ಕಲ್ಪಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ. ಈ ಹಿನ್ನೆಲೆಯಲ್ಲಿ ಇಂತಹದೊಂದು ಆಯೋಗವನ್ನು ಸ್ಥಾಪಿಸಲು ಮುಂದಾಗಿರುವುದು ಮಹತ್ವ ಪಡೆದಿದೆ.

ಸಂವಿಧಾನದ ವಿಧಿ 341ರ ಪ್ರಕಾರ ಹಿಂದೂ ಧರ್ಮ, ಸಿಖ್ ಧರ್ಮ ಅಥವಾ ಬೌದ್ಧ ಧರ್ಮಕ್ಕಿಂತ ಭಿನ್ನವಾದ ಯಾವುದೇ ಧರ್ಮವನ್ನು ಪ್ರತಿಪಾದಿಸುವ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ. ಹಿಂದೂಧರ್ಮವನ್ನು ಮಾತ್ರ ಕೇಂದ್ರೀಕರಿಸಿ ‘ಎಸ್‌ಸಿ’ ಎಂದು ವರ್ಗೀಕರಿಸಿದ ಮೂಲ ಆದೇಶವನ್ನು 1956ರಲ್ಲಿ ತಿದ್ದುಪಡಿ ಮಾಡಿ ಸಿಖ್ಖರನ್ನು ಸೇರಿಸಲಾಯಿತು. 1990ರಲ್ಲಿ ಮತ್ತೆ ತಿದ್ದುಪಡಿ ಮಾಡಿ ಬೌದ್ಧರನ್ನೂ ಸೇರಿಸಲಾಯಿತು.

ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ, ವಿಕ್ರಮ್ ನಾಥ್ ಅವರನ್ನು ಒಳಗೊಂಡಂತೆ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಪ್ರಕರಣದ ವಿಚಾರಣೆಯನ್ನು ಆಗಸ್ಟ್‌ 30ರಂದು ನಡೆಸಿತು. ಅರ್ಜಿದಾರರು ಎತ್ತಿರುವ ವಿಷಯದ ಬಗ್ಗೆ ಸರ್ಕಾರದ ನಿಲುವನ್ನು ದಾಖಲಿಸುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು. ಪೀಠವು ಸಾಲಿಸಿಟರ್ ಜನರಲ್‌ಗೆ ಮೂರು ವಾರಗಳ ಕಾಲಾವಕಾಶ ನೀಡಿತು. ಅಕ್ಟೋಬರ್ 11 ಮತ್ತೆ ವಿಚಾರಣೆ ನಡೆಯಲಿದೆ.

ಪ್ರಸ್ತಾವಿತ ಆಯೋಗವು ಮೂರು ಅಥವಾ ನಾಲ್ಕು ಸದಸ್ಯರನ್ನು ಒಳಗೊಳ್ಳಬಹುದು, ಆಯೋಗದ ಅಧ್ಯಕ್ಷರು ಕೇಂದ್ರ ಕ್ಯಾಬಿನೆಟ್ ಮಂತ್ರಿಯ ಶ್ರೇಣಿಯನ್ನು ಹೊಂದಿರಬಹುದು. ಆಯೋಗದ ವರದಿಯನ್ನು ಸಲ್ಲಿಸಲು ಒಂದು ವರ್ಷಕ್ಕಿಂತ ಹೆಚ್ಚಿನ ಕಾಲಾವಧಿಯನ್ನು ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.

ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರ ಸ್ಥಿತಿಯಲ್ಲಿನ ಬದಲಾವಣೆಗಳನ್ನು ಅಧ್ಯಯನ ಮಾಡುವುದರ ಜೊತೆಗೆ, ಪ್ರಸ್ತುತ ಎಸ್‌ಸಿ ಪಟ್ಟಿಗೆ ಹೆಚ್ಚಿನ ಸಮುದಾಯಗಳನ್ನು ಸೇರಿಸುವ ಪರಿಣಾಮದ ಕುರಿತು ಪ್ರಸ್ತಾವಿತ ಆಯೋಗ ಚರ್ಚಿಸಲಿದೆ.

ಎಸ್ಟಿಗಳು ಮತ್ತು ಒಬಿಸಿಗಳಿಗೆ ಯಾವುದೇ ಧಾರ್ಮಿಕ ಚೌಕಟ್ಟು ಇಲ್ಲದ ಕಾರಣ ಈ ಆಯೋಗ ದಲಿತರಿಗೆ ಮಾತ್ರ ಸೀಮಿತವಾಗಿದೆ. “ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಯ ಹಕ್ಕುಗಳು ಧಾರ್ಮಿಕ ನಂಬಿಕೆಗೆ ಸಂಬಂಧಪಡುವುದಿಲ್ಲ” ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ವೆಬ್‌ಸೈಟ್ ಸ್ಪಷ್ಟಪಡಿಸುತ್ತದೆ.

ಇದಲ್ಲದೆ, ಮಂಡಲ್ ಆಯೋಗದ ವರದಿಯ ಅನುಷ್ಠಾನದ ನಂತರ, ಹಲವಾರು ಕ್ರಿಶ್ಚಿಯನ್ ಮತ್ತು ಮುಸ್ಲಿಂ ಸಮುದಾಯಗಳು ಕೇಂದ್ರ ಅಥವಾ ರಾಜ್ಯಗಳ ಒಬಿಸಿ ಪಟ್ಟಿಗಳಲ್ಲಿ ಸ್ಥಾನ ಪಡೆದಿವೆ.

ಎಸ್‌ಸಿ ಸಮುದಾಯಕ್ಕೆ ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 15 ರಷ್ಟು ಮೀಸಲಾತಿ ಮತ್ತು ಎಸ್‌ಟಿಗಳಿಗೆ ಶೇಕಡಾ 7.5 ಮೀಸಲಾತಿ, ಒಬಿಸಿಗಳಿಗೆ ಶೇಕಡಾ 27 ಮೀಸಲಾತಿ ನೀಡಲಾಗಿದೆ.

ಮುಖ್ಯವಾಗಿ ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರಿಗೆ ಎಸ್‌ಸಿ ಮೀಸಲಾತಿ ನೀಡಬೇಕೇ ಎಂಬ ಪ್ರಶ್ನೆ ಹಿಂದಿನ ಸರ್ಕಾರಗಳ ಮುಂದೆಯೂ ಬಂದಿತ್ತು.

ಇದನ್ನೂ ಓದಿರಿ: ದಲಿತ ಮಕ್ಕಳ ಮೇಲೆ ಮುಂದುವರಿದ ದೌರ್ಜನ್ಯ: ಪ್ರಕರಣ 1, 2, 3, 4

ಅಕ್ಟೋಬರ್ 2004ರಲ್ಲಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಆಗಿನ ಯುಪಿಎ ಸರ್ಕಾರವು, ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ಸಾಮಾಜಿಕ, ಆರ್ಥಿಕ ಸ್ಥಿತಿಯ ಉನ್ನತಿಗೆ ಕ್ರಮ ವಹಿಸಲು ಮುಂದಾಗಿತ್ತು. ಸೂಕ್ತ ಶಿಫಾರಸು ನೀಡುವಂತೆ ಮಾಜಿ ಮುಖ್ಯ ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಅವರ ನೇತೃತ್ವದಲ್ಲಿ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗವನ್ನು ರಚಿಸಲಾಗಿತ್ತು.

ಮೇ 2007ರಲ್ಲಿ ರಂಗನಾಥ್ ಮಿಶ್ರಾ ಆಯೋಗವು ತನ್ನ ವರದಿಯನ್ನು ಸಲ್ಲಿಸಿತು. ಎಸ್‌ಸಿ ಸ್ಥಾನಮಾನವನ್ನು ಸಂಪೂರ್ಣವಾಗಿ ಧರ್ಮದಿಂದ ಬೇರ್ಪಡಿಸಬೇಕು. ಎಸ್‌ಟಿ ಸ್ಥಾನಮಾನದಂತೆ ಇಲ್ಲಿ ಧರ್ಮ-ತಟಸ್ಥವಾಗಿರಬೇಕು ಎಂದು ಶಿಫಾರಸು ಮಾಡಿತು. ಶಿಫಾರಸ್ಸುಗಳು ಕ್ಷೇತ್ರ ಅಧ್ಯಯನದಿಂದ ರುಜುವಾತಾಗಿಲ್ಲ ಎಂಬ ಕಾರಣಕ್ಕೆ ಅಂದಿನ ಯುಪಿಎ ಸರಕಾರ ಶಿಫಾರಸಗಳನ್ನು ಅಂಗೀಕರಿಸಿರಲಿಲ್ಲ.

ಪ್ರತ್ಯೇಕವಾಗಿ, 2007ರಲ್ಲಿ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ನೀಡಿದ ಅಧ್ಯಯನವು ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರಿಗೆ ಎಸ್‌ಸಿ ಸ್ಥಾನಮಾನವನ್ನು ನೀಡಬೇಕೆಂದು ತೀರ್ಮಾನಿಸಿದೆ. ಆ ಶೋಧನೆಯು ಸಹ, ವಿಶ್ವಾಸಾರ್ಹವಾಗಿಲ್ಲವೆಂದು ಅಂಗೀಕರಿಸಲ್ಪಟ್ಟಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...