Homeದಲಿತ್ ಫೈಲ್ಸ್ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ಮತಾಂತರವಾದ ದಲಿತರಿಗೆ ಎಸ್‌ಸಿ ಮೀಸಲಾತಿ ನೀಡಬೇಕೇ, ಬೇಡವೇ ಎಂಬ ಪ್ರಶ್ನೆ ಸುಪ್ರೀಂಕೋರ್ಟ್‌ನಲ್ಲಿರುವ ಕಾರಣ, ಆಯೋಗ ರಚನೆಯ ಪ್ರಸ್ತಾಪ ಮಹತ್ವ ಪಡೆದಿದೆ.

- Advertisement -
- Advertisement -

ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಸಿಖ್ ಧರ್ಮವನ್ನು ಹೊರತುಪಡಿಸಿ ಇತರ ಧರ್ಮಗಳಿಗೆ ಮತಾಂತರಗೊಂಡ ಪರಿಶಿಷ್ಟ ಜಾತಿಗಳ ಅಥವಾ ದಲಿತರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಅಧ್ಯಯನ ಮಾಡಲು ರಾಷ್ಟ್ರೀಯ ಆಯೋಗವನ್ನು ರಚಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಇಂತಹ ಆಯೋಗವನ್ನು ರಚಿಸುವ ಪ್ರಸ್ತಾವನೆ ಕೇಂದ್ರದಲ್ಲಿ ಸಕ್ರಿಯವಾಗಿ ಚರ್ಚೆಯಾಗುತ್ತಿದ್ದು, ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿರುವುದಾಗಿ ‘ಇಂಡಿಯನ್‌ ಎಕ್ಸ್‌ಪ್ರೆಸ್’ ಸುದ್ದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಆಯೋಗ ರಚನೆಗೆ ಹಸಿರು ನಿಶಾನೆ ತೋರಿವೆ. ಗೃಹ, ಕಾನೂನು, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಹಾಗೂ ಹಣಕಾಸು ಸಚಿವಾಲಯಗಳ ನಡುವೆ ಈ ಪ್ರಸ್ತಾವನೆಯ ಕುರಿತು ಸಮಾಲೋಚನೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರಿಗೆ ಎಸ್‌ಸಿ ಮೀಸಲಾತಿ ಕಲ್ಪಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ. ಈ ಹಿನ್ನೆಲೆಯಲ್ಲಿ ಇಂತಹದೊಂದು ಆಯೋಗವನ್ನು ಸ್ಥಾಪಿಸಲು ಮುಂದಾಗಿರುವುದು ಮಹತ್ವ ಪಡೆದಿದೆ.

ಸಂವಿಧಾನದ ವಿಧಿ 341ರ ಪ್ರಕಾರ ಹಿಂದೂ ಧರ್ಮ, ಸಿಖ್ ಧರ್ಮ ಅಥವಾ ಬೌದ್ಧ ಧರ್ಮಕ್ಕಿಂತ ಭಿನ್ನವಾದ ಯಾವುದೇ ಧರ್ಮವನ್ನು ಪ್ರತಿಪಾದಿಸುವ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ. ಹಿಂದೂಧರ್ಮವನ್ನು ಮಾತ್ರ ಕೇಂದ್ರೀಕರಿಸಿ ‘ಎಸ್‌ಸಿ’ ಎಂದು ವರ್ಗೀಕರಿಸಿದ ಮೂಲ ಆದೇಶವನ್ನು 1956ರಲ್ಲಿ ತಿದ್ದುಪಡಿ ಮಾಡಿ ಸಿಖ್ಖರನ್ನು ಸೇರಿಸಲಾಯಿತು. 1990ರಲ್ಲಿ ಮತ್ತೆ ತಿದ್ದುಪಡಿ ಮಾಡಿ ಬೌದ್ಧರನ್ನೂ ಸೇರಿಸಲಾಯಿತು.

ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ, ವಿಕ್ರಮ್ ನಾಥ್ ಅವರನ್ನು ಒಳಗೊಂಡಂತೆ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಪ್ರಕರಣದ ವಿಚಾರಣೆಯನ್ನು ಆಗಸ್ಟ್‌ 30ರಂದು ನಡೆಸಿತು. ಅರ್ಜಿದಾರರು ಎತ್ತಿರುವ ವಿಷಯದ ಬಗ್ಗೆ ಸರ್ಕಾರದ ನಿಲುವನ್ನು ದಾಖಲಿಸುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು. ಪೀಠವು ಸಾಲಿಸಿಟರ್ ಜನರಲ್‌ಗೆ ಮೂರು ವಾರಗಳ ಕಾಲಾವಕಾಶ ನೀಡಿತು. ಅಕ್ಟೋಬರ್ 11 ಮತ್ತೆ ವಿಚಾರಣೆ ನಡೆಯಲಿದೆ.

ಪ್ರಸ್ತಾವಿತ ಆಯೋಗವು ಮೂರು ಅಥವಾ ನಾಲ್ಕು ಸದಸ್ಯರನ್ನು ಒಳಗೊಳ್ಳಬಹುದು, ಆಯೋಗದ ಅಧ್ಯಕ್ಷರು ಕೇಂದ್ರ ಕ್ಯಾಬಿನೆಟ್ ಮಂತ್ರಿಯ ಶ್ರೇಣಿಯನ್ನು ಹೊಂದಿರಬಹುದು. ಆಯೋಗದ ವರದಿಯನ್ನು ಸಲ್ಲಿಸಲು ಒಂದು ವರ್ಷಕ್ಕಿಂತ ಹೆಚ್ಚಿನ ಕಾಲಾವಧಿಯನ್ನು ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.

ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರ ಸ್ಥಿತಿಯಲ್ಲಿನ ಬದಲಾವಣೆಗಳನ್ನು ಅಧ್ಯಯನ ಮಾಡುವುದರ ಜೊತೆಗೆ, ಪ್ರಸ್ತುತ ಎಸ್‌ಸಿ ಪಟ್ಟಿಗೆ ಹೆಚ್ಚಿನ ಸಮುದಾಯಗಳನ್ನು ಸೇರಿಸುವ ಪರಿಣಾಮದ ಕುರಿತು ಪ್ರಸ್ತಾವಿತ ಆಯೋಗ ಚರ್ಚಿಸಲಿದೆ.

ಎಸ್ಟಿಗಳು ಮತ್ತು ಒಬಿಸಿಗಳಿಗೆ ಯಾವುದೇ ಧಾರ್ಮಿಕ ಚೌಕಟ್ಟು ಇಲ್ಲದ ಕಾರಣ ಈ ಆಯೋಗ ದಲಿತರಿಗೆ ಮಾತ್ರ ಸೀಮಿತವಾಗಿದೆ. “ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಯ ಹಕ್ಕುಗಳು ಧಾರ್ಮಿಕ ನಂಬಿಕೆಗೆ ಸಂಬಂಧಪಡುವುದಿಲ್ಲ” ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ವೆಬ್‌ಸೈಟ್ ಸ್ಪಷ್ಟಪಡಿಸುತ್ತದೆ.

ಇದಲ್ಲದೆ, ಮಂಡಲ್ ಆಯೋಗದ ವರದಿಯ ಅನುಷ್ಠಾನದ ನಂತರ, ಹಲವಾರು ಕ್ರಿಶ್ಚಿಯನ್ ಮತ್ತು ಮುಸ್ಲಿಂ ಸಮುದಾಯಗಳು ಕೇಂದ್ರ ಅಥವಾ ರಾಜ್ಯಗಳ ಒಬಿಸಿ ಪಟ್ಟಿಗಳಲ್ಲಿ ಸ್ಥಾನ ಪಡೆದಿವೆ.

ಎಸ್‌ಸಿ ಸಮುದಾಯಕ್ಕೆ ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 15 ರಷ್ಟು ಮೀಸಲಾತಿ ಮತ್ತು ಎಸ್‌ಟಿಗಳಿಗೆ ಶೇಕಡಾ 7.5 ಮೀಸಲಾತಿ, ಒಬಿಸಿಗಳಿಗೆ ಶೇಕಡಾ 27 ಮೀಸಲಾತಿ ನೀಡಲಾಗಿದೆ.

ಮುಖ್ಯವಾಗಿ ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರಿಗೆ ಎಸ್‌ಸಿ ಮೀಸಲಾತಿ ನೀಡಬೇಕೇ ಎಂಬ ಪ್ರಶ್ನೆ ಹಿಂದಿನ ಸರ್ಕಾರಗಳ ಮುಂದೆಯೂ ಬಂದಿತ್ತು.

ಇದನ್ನೂ ಓದಿರಿ: ದಲಿತ ಮಕ್ಕಳ ಮೇಲೆ ಮುಂದುವರಿದ ದೌರ್ಜನ್ಯ: ಪ್ರಕರಣ 1, 2, 3, 4

ಅಕ್ಟೋಬರ್ 2004ರಲ್ಲಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಆಗಿನ ಯುಪಿಎ ಸರ್ಕಾರವು, ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ಸಾಮಾಜಿಕ, ಆರ್ಥಿಕ ಸ್ಥಿತಿಯ ಉನ್ನತಿಗೆ ಕ್ರಮ ವಹಿಸಲು ಮುಂದಾಗಿತ್ತು. ಸೂಕ್ತ ಶಿಫಾರಸು ನೀಡುವಂತೆ ಮಾಜಿ ಮುಖ್ಯ ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಅವರ ನೇತೃತ್ವದಲ್ಲಿ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗವನ್ನು ರಚಿಸಲಾಗಿತ್ತು.

ಮೇ 2007ರಲ್ಲಿ ರಂಗನಾಥ್ ಮಿಶ್ರಾ ಆಯೋಗವು ತನ್ನ ವರದಿಯನ್ನು ಸಲ್ಲಿಸಿತು. ಎಸ್‌ಸಿ ಸ್ಥಾನಮಾನವನ್ನು ಸಂಪೂರ್ಣವಾಗಿ ಧರ್ಮದಿಂದ ಬೇರ್ಪಡಿಸಬೇಕು. ಎಸ್‌ಟಿ ಸ್ಥಾನಮಾನದಂತೆ ಇಲ್ಲಿ ಧರ್ಮ-ತಟಸ್ಥವಾಗಿರಬೇಕು ಎಂದು ಶಿಫಾರಸು ಮಾಡಿತು. ಶಿಫಾರಸ್ಸುಗಳು ಕ್ಷೇತ್ರ ಅಧ್ಯಯನದಿಂದ ರುಜುವಾತಾಗಿಲ್ಲ ಎಂಬ ಕಾರಣಕ್ಕೆ ಅಂದಿನ ಯುಪಿಎ ಸರಕಾರ ಶಿಫಾರಸಗಳನ್ನು ಅಂಗೀಕರಿಸಿರಲಿಲ್ಲ.

ಪ್ರತ್ಯೇಕವಾಗಿ, 2007ರಲ್ಲಿ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ನೀಡಿದ ಅಧ್ಯಯನವು ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರಿಗೆ ಎಸ್‌ಸಿ ಸ್ಥಾನಮಾನವನ್ನು ನೀಡಬೇಕೆಂದು ತೀರ್ಮಾನಿಸಿದೆ. ಆ ಶೋಧನೆಯು ಸಹ, ವಿಶ್ವಾಸಾರ್ಹವಾಗಿಲ್ಲವೆಂದು ಅಂಗೀಕರಿಸಲ್ಪಟ್ಟಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...