Homeದಲಿತ್ ಫೈಲ್ಸ್ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ಮತಾಂತರವಾದ ದಲಿತರಿಗೆ ಎಸ್‌ಸಿ ಮೀಸಲಾತಿ ನೀಡಬೇಕೇ, ಬೇಡವೇ ಎಂಬ ಪ್ರಶ್ನೆ ಸುಪ್ರೀಂಕೋರ್ಟ್‌ನಲ್ಲಿರುವ ಕಾರಣ, ಆಯೋಗ ರಚನೆಯ ಪ್ರಸ್ತಾಪ ಮಹತ್ವ ಪಡೆದಿದೆ.

- Advertisement -
- Advertisement -

ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಸಿಖ್ ಧರ್ಮವನ್ನು ಹೊರತುಪಡಿಸಿ ಇತರ ಧರ್ಮಗಳಿಗೆ ಮತಾಂತರಗೊಂಡ ಪರಿಶಿಷ್ಟ ಜಾತಿಗಳ ಅಥವಾ ದಲಿತರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಅಧ್ಯಯನ ಮಾಡಲು ರಾಷ್ಟ್ರೀಯ ಆಯೋಗವನ್ನು ರಚಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಇಂತಹ ಆಯೋಗವನ್ನು ರಚಿಸುವ ಪ್ರಸ್ತಾವನೆ ಕೇಂದ್ರದಲ್ಲಿ ಸಕ್ರಿಯವಾಗಿ ಚರ್ಚೆಯಾಗುತ್ತಿದ್ದು, ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿರುವುದಾಗಿ ‘ಇಂಡಿಯನ್‌ ಎಕ್ಸ್‌ಪ್ರೆಸ್’ ಸುದ್ದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಆಯೋಗ ರಚನೆಗೆ ಹಸಿರು ನಿಶಾನೆ ತೋರಿವೆ. ಗೃಹ, ಕಾನೂನು, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಹಾಗೂ ಹಣಕಾಸು ಸಚಿವಾಲಯಗಳ ನಡುವೆ ಈ ಪ್ರಸ್ತಾವನೆಯ ಕುರಿತು ಸಮಾಲೋಚನೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರಿಗೆ ಎಸ್‌ಸಿ ಮೀಸಲಾತಿ ಕಲ್ಪಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ. ಈ ಹಿನ್ನೆಲೆಯಲ್ಲಿ ಇಂತಹದೊಂದು ಆಯೋಗವನ್ನು ಸ್ಥಾಪಿಸಲು ಮುಂದಾಗಿರುವುದು ಮಹತ್ವ ಪಡೆದಿದೆ.

ಸಂವಿಧಾನದ ವಿಧಿ 341ರ ಪ್ರಕಾರ ಹಿಂದೂ ಧರ್ಮ, ಸಿಖ್ ಧರ್ಮ ಅಥವಾ ಬೌದ್ಧ ಧರ್ಮಕ್ಕಿಂತ ಭಿನ್ನವಾದ ಯಾವುದೇ ಧರ್ಮವನ್ನು ಪ್ರತಿಪಾದಿಸುವ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ. ಹಿಂದೂಧರ್ಮವನ್ನು ಮಾತ್ರ ಕೇಂದ್ರೀಕರಿಸಿ ‘ಎಸ್‌ಸಿ’ ಎಂದು ವರ್ಗೀಕರಿಸಿದ ಮೂಲ ಆದೇಶವನ್ನು 1956ರಲ್ಲಿ ತಿದ್ದುಪಡಿ ಮಾಡಿ ಸಿಖ್ಖರನ್ನು ಸೇರಿಸಲಾಯಿತು. 1990ರಲ್ಲಿ ಮತ್ತೆ ತಿದ್ದುಪಡಿ ಮಾಡಿ ಬೌದ್ಧರನ್ನೂ ಸೇರಿಸಲಾಯಿತು.

ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ, ವಿಕ್ರಮ್ ನಾಥ್ ಅವರನ್ನು ಒಳಗೊಂಡಂತೆ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಪ್ರಕರಣದ ವಿಚಾರಣೆಯನ್ನು ಆಗಸ್ಟ್‌ 30ರಂದು ನಡೆಸಿತು. ಅರ್ಜಿದಾರರು ಎತ್ತಿರುವ ವಿಷಯದ ಬಗ್ಗೆ ಸರ್ಕಾರದ ನಿಲುವನ್ನು ದಾಖಲಿಸುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು. ಪೀಠವು ಸಾಲಿಸಿಟರ್ ಜನರಲ್‌ಗೆ ಮೂರು ವಾರಗಳ ಕಾಲಾವಕಾಶ ನೀಡಿತು. ಅಕ್ಟೋಬರ್ 11 ಮತ್ತೆ ವಿಚಾರಣೆ ನಡೆಯಲಿದೆ.

ಪ್ರಸ್ತಾವಿತ ಆಯೋಗವು ಮೂರು ಅಥವಾ ನಾಲ್ಕು ಸದಸ್ಯರನ್ನು ಒಳಗೊಳ್ಳಬಹುದು, ಆಯೋಗದ ಅಧ್ಯಕ್ಷರು ಕೇಂದ್ರ ಕ್ಯಾಬಿನೆಟ್ ಮಂತ್ರಿಯ ಶ್ರೇಣಿಯನ್ನು ಹೊಂದಿರಬಹುದು. ಆಯೋಗದ ವರದಿಯನ್ನು ಸಲ್ಲಿಸಲು ಒಂದು ವರ್ಷಕ್ಕಿಂತ ಹೆಚ್ಚಿನ ಕಾಲಾವಧಿಯನ್ನು ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.

ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರ ಸ್ಥಿತಿಯಲ್ಲಿನ ಬದಲಾವಣೆಗಳನ್ನು ಅಧ್ಯಯನ ಮಾಡುವುದರ ಜೊತೆಗೆ, ಪ್ರಸ್ತುತ ಎಸ್‌ಸಿ ಪಟ್ಟಿಗೆ ಹೆಚ್ಚಿನ ಸಮುದಾಯಗಳನ್ನು ಸೇರಿಸುವ ಪರಿಣಾಮದ ಕುರಿತು ಪ್ರಸ್ತಾವಿತ ಆಯೋಗ ಚರ್ಚಿಸಲಿದೆ.

ಎಸ್ಟಿಗಳು ಮತ್ತು ಒಬಿಸಿಗಳಿಗೆ ಯಾವುದೇ ಧಾರ್ಮಿಕ ಚೌಕಟ್ಟು ಇಲ್ಲದ ಕಾರಣ ಈ ಆಯೋಗ ದಲಿತರಿಗೆ ಮಾತ್ರ ಸೀಮಿತವಾಗಿದೆ. “ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಯ ಹಕ್ಕುಗಳು ಧಾರ್ಮಿಕ ನಂಬಿಕೆಗೆ ಸಂಬಂಧಪಡುವುದಿಲ್ಲ” ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ವೆಬ್‌ಸೈಟ್ ಸ್ಪಷ್ಟಪಡಿಸುತ್ತದೆ.

ಇದಲ್ಲದೆ, ಮಂಡಲ್ ಆಯೋಗದ ವರದಿಯ ಅನುಷ್ಠಾನದ ನಂತರ, ಹಲವಾರು ಕ್ರಿಶ್ಚಿಯನ್ ಮತ್ತು ಮುಸ್ಲಿಂ ಸಮುದಾಯಗಳು ಕೇಂದ್ರ ಅಥವಾ ರಾಜ್ಯಗಳ ಒಬಿಸಿ ಪಟ್ಟಿಗಳಲ್ಲಿ ಸ್ಥಾನ ಪಡೆದಿವೆ.

ಎಸ್‌ಸಿ ಸಮುದಾಯಕ್ಕೆ ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 15 ರಷ್ಟು ಮೀಸಲಾತಿ ಮತ್ತು ಎಸ್‌ಟಿಗಳಿಗೆ ಶೇಕಡಾ 7.5 ಮೀಸಲಾತಿ, ಒಬಿಸಿಗಳಿಗೆ ಶೇಕಡಾ 27 ಮೀಸಲಾತಿ ನೀಡಲಾಗಿದೆ.

ಮುಖ್ಯವಾಗಿ ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರಿಗೆ ಎಸ್‌ಸಿ ಮೀಸಲಾತಿ ನೀಡಬೇಕೇ ಎಂಬ ಪ್ರಶ್ನೆ ಹಿಂದಿನ ಸರ್ಕಾರಗಳ ಮುಂದೆಯೂ ಬಂದಿತ್ತು.

ಇದನ್ನೂ ಓದಿರಿ: ದಲಿತ ಮಕ್ಕಳ ಮೇಲೆ ಮುಂದುವರಿದ ದೌರ್ಜನ್ಯ: ಪ್ರಕರಣ 1, 2, 3, 4

ಅಕ್ಟೋಬರ್ 2004ರಲ್ಲಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಆಗಿನ ಯುಪಿಎ ಸರ್ಕಾರವು, ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ಸಾಮಾಜಿಕ, ಆರ್ಥಿಕ ಸ್ಥಿತಿಯ ಉನ್ನತಿಗೆ ಕ್ರಮ ವಹಿಸಲು ಮುಂದಾಗಿತ್ತು. ಸೂಕ್ತ ಶಿಫಾರಸು ನೀಡುವಂತೆ ಮಾಜಿ ಮುಖ್ಯ ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಅವರ ನೇತೃತ್ವದಲ್ಲಿ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗವನ್ನು ರಚಿಸಲಾಗಿತ್ತು.

ಮೇ 2007ರಲ್ಲಿ ರಂಗನಾಥ್ ಮಿಶ್ರಾ ಆಯೋಗವು ತನ್ನ ವರದಿಯನ್ನು ಸಲ್ಲಿಸಿತು. ಎಸ್‌ಸಿ ಸ್ಥಾನಮಾನವನ್ನು ಸಂಪೂರ್ಣವಾಗಿ ಧರ್ಮದಿಂದ ಬೇರ್ಪಡಿಸಬೇಕು. ಎಸ್‌ಟಿ ಸ್ಥಾನಮಾನದಂತೆ ಇಲ್ಲಿ ಧರ್ಮ-ತಟಸ್ಥವಾಗಿರಬೇಕು ಎಂದು ಶಿಫಾರಸು ಮಾಡಿತು. ಶಿಫಾರಸ್ಸುಗಳು ಕ್ಷೇತ್ರ ಅಧ್ಯಯನದಿಂದ ರುಜುವಾತಾಗಿಲ್ಲ ಎಂಬ ಕಾರಣಕ್ಕೆ ಅಂದಿನ ಯುಪಿಎ ಸರಕಾರ ಶಿಫಾರಸಗಳನ್ನು ಅಂಗೀಕರಿಸಿರಲಿಲ್ಲ.

ಪ್ರತ್ಯೇಕವಾಗಿ, 2007ರಲ್ಲಿ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ನೀಡಿದ ಅಧ್ಯಯನವು ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರಿಗೆ ಎಸ್‌ಸಿ ಸ್ಥಾನಮಾನವನ್ನು ನೀಡಬೇಕೆಂದು ತೀರ್ಮಾನಿಸಿದೆ. ಆ ಶೋಧನೆಯು ಸಹ, ವಿಶ್ವಾಸಾರ್ಹವಾಗಿಲ್ಲವೆಂದು ಅಂಗೀಕರಿಸಲ್ಪಟ್ಟಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...