Homeದಲಿತ್ ಫೈಲ್ಸ್ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ಮತಾಂತರವಾದ ದಲಿತರಿಗೆ ಎಸ್‌ಸಿ ಮೀಸಲಾತಿ ನೀಡಬೇಕೇ, ಬೇಡವೇ ಎಂಬ ಪ್ರಶ್ನೆ ಸುಪ್ರೀಂಕೋರ್ಟ್‌ನಲ್ಲಿರುವ ಕಾರಣ, ಆಯೋಗ ರಚನೆಯ ಪ್ರಸ್ತಾಪ ಮಹತ್ವ ಪಡೆದಿದೆ.

- Advertisement -
- Advertisement -

ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಸಿಖ್ ಧರ್ಮವನ್ನು ಹೊರತುಪಡಿಸಿ ಇತರ ಧರ್ಮಗಳಿಗೆ ಮತಾಂತರಗೊಂಡ ಪರಿಶಿಷ್ಟ ಜಾತಿಗಳ ಅಥವಾ ದಲಿತರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಅಧ್ಯಯನ ಮಾಡಲು ರಾಷ್ಟ್ರೀಯ ಆಯೋಗವನ್ನು ರಚಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಇಂತಹ ಆಯೋಗವನ್ನು ರಚಿಸುವ ಪ್ರಸ್ತಾವನೆ ಕೇಂದ್ರದಲ್ಲಿ ಸಕ್ರಿಯವಾಗಿ ಚರ್ಚೆಯಾಗುತ್ತಿದ್ದು, ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿರುವುದಾಗಿ ‘ಇಂಡಿಯನ್‌ ಎಕ್ಸ್‌ಪ್ರೆಸ್’ ಸುದ್ದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಆಯೋಗ ರಚನೆಗೆ ಹಸಿರು ನಿಶಾನೆ ತೋರಿವೆ. ಗೃಹ, ಕಾನೂನು, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಹಾಗೂ ಹಣಕಾಸು ಸಚಿವಾಲಯಗಳ ನಡುವೆ ಈ ಪ್ರಸ್ತಾವನೆಯ ಕುರಿತು ಸಮಾಲೋಚನೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರಿಗೆ ಎಸ್‌ಸಿ ಮೀಸಲಾತಿ ಕಲ್ಪಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ. ಈ ಹಿನ್ನೆಲೆಯಲ್ಲಿ ಇಂತಹದೊಂದು ಆಯೋಗವನ್ನು ಸ್ಥಾಪಿಸಲು ಮುಂದಾಗಿರುವುದು ಮಹತ್ವ ಪಡೆದಿದೆ.

ಸಂವಿಧಾನದ ವಿಧಿ 341ರ ಪ್ರಕಾರ ಹಿಂದೂ ಧರ್ಮ, ಸಿಖ್ ಧರ್ಮ ಅಥವಾ ಬೌದ್ಧ ಧರ್ಮಕ್ಕಿಂತ ಭಿನ್ನವಾದ ಯಾವುದೇ ಧರ್ಮವನ್ನು ಪ್ರತಿಪಾದಿಸುವ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ. ಹಿಂದೂಧರ್ಮವನ್ನು ಮಾತ್ರ ಕೇಂದ್ರೀಕರಿಸಿ ‘ಎಸ್‌ಸಿ’ ಎಂದು ವರ್ಗೀಕರಿಸಿದ ಮೂಲ ಆದೇಶವನ್ನು 1956ರಲ್ಲಿ ತಿದ್ದುಪಡಿ ಮಾಡಿ ಸಿಖ್ಖರನ್ನು ಸೇರಿಸಲಾಯಿತು. 1990ರಲ್ಲಿ ಮತ್ತೆ ತಿದ್ದುಪಡಿ ಮಾಡಿ ಬೌದ್ಧರನ್ನೂ ಸೇರಿಸಲಾಯಿತು.

ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ, ವಿಕ್ರಮ್ ನಾಥ್ ಅವರನ್ನು ಒಳಗೊಂಡಂತೆ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಪ್ರಕರಣದ ವಿಚಾರಣೆಯನ್ನು ಆಗಸ್ಟ್‌ 30ರಂದು ನಡೆಸಿತು. ಅರ್ಜಿದಾರರು ಎತ್ತಿರುವ ವಿಷಯದ ಬಗ್ಗೆ ಸರ್ಕಾರದ ನಿಲುವನ್ನು ದಾಖಲಿಸುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು. ಪೀಠವು ಸಾಲಿಸಿಟರ್ ಜನರಲ್‌ಗೆ ಮೂರು ವಾರಗಳ ಕಾಲಾವಕಾಶ ನೀಡಿತು. ಅಕ್ಟೋಬರ್ 11 ಮತ್ತೆ ವಿಚಾರಣೆ ನಡೆಯಲಿದೆ.

ಪ್ರಸ್ತಾವಿತ ಆಯೋಗವು ಮೂರು ಅಥವಾ ನಾಲ್ಕು ಸದಸ್ಯರನ್ನು ಒಳಗೊಳ್ಳಬಹುದು, ಆಯೋಗದ ಅಧ್ಯಕ್ಷರು ಕೇಂದ್ರ ಕ್ಯಾಬಿನೆಟ್ ಮಂತ್ರಿಯ ಶ್ರೇಣಿಯನ್ನು ಹೊಂದಿರಬಹುದು. ಆಯೋಗದ ವರದಿಯನ್ನು ಸಲ್ಲಿಸಲು ಒಂದು ವರ್ಷಕ್ಕಿಂತ ಹೆಚ್ಚಿನ ಕಾಲಾವಧಿಯನ್ನು ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.

ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರ ಸ್ಥಿತಿಯಲ್ಲಿನ ಬದಲಾವಣೆಗಳನ್ನು ಅಧ್ಯಯನ ಮಾಡುವುದರ ಜೊತೆಗೆ, ಪ್ರಸ್ತುತ ಎಸ್‌ಸಿ ಪಟ್ಟಿಗೆ ಹೆಚ್ಚಿನ ಸಮುದಾಯಗಳನ್ನು ಸೇರಿಸುವ ಪರಿಣಾಮದ ಕುರಿತು ಪ್ರಸ್ತಾವಿತ ಆಯೋಗ ಚರ್ಚಿಸಲಿದೆ.

ಎಸ್ಟಿಗಳು ಮತ್ತು ಒಬಿಸಿಗಳಿಗೆ ಯಾವುದೇ ಧಾರ್ಮಿಕ ಚೌಕಟ್ಟು ಇಲ್ಲದ ಕಾರಣ ಈ ಆಯೋಗ ದಲಿತರಿಗೆ ಮಾತ್ರ ಸೀಮಿತವಾಗಿದೆ. “ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಯ ಹಕ್ಕುಗಳು ಧಾರ್ಮಿಕ ನಂಬಿಕೆಗೆ ಸಂಬಂಧಪಡುವುದಿಲ್ಲ” ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ವೆಬ್‌ಸೈಟ್ ಸ್ಪಷ್ಟಪಡಿಸುತ್ತದೆ.

ಇದಲ್ಲದೆ, ಮಂಡಲ್ ಆಯೋಗದ ವರದಿಯ ಅನುಷ್ಠಾನದ ನಂತರ, ಹಲವಾರು ಕ್ರಿಶ್ಚಿಯನ್ ಮತ್ತು ಮುಸ್ಲಿಂ ಸಮುದಾಯಗಳು ಕೇಂದ್ರ ಅಥವಾ ರಾಜ್ಯಗಳ ಒಬಿಸಿ ಪಟ್ಟಿಗಳಲ್ಲಿ ಸ್ಥಾನ ಪಡೆದಿವೆ.

ಎಸ್‌ಸಿ ಸಮುದಾಯಕ್ಕೆ ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 15 ರಷ್ಟು ಮೀಸಲಾತಿ ಮತ್ತು ಎಸ್‌ಟಿಗಳಿಗೆ ಶೇಕಡಾ 7.5 ಮೀಸಲಾತಿ, ಒಬಿಸಿಗಳಿಗೆ ಶೇಕಡಾ 27 ಮೀಸಲಾತಿ ನೀಡಲಾಗಿದೆ.

ಮುಖ್ಯವಾಗಿ ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರಿಗೆ ಎಸ್‌ಸಿ ಮೀಸಲಾತಿ ನೀಡಬೇಕೇ ಎಂಬ ಪ್ರಶ್ನೆ ಹಿಂದಿನ ಸರ್ಕಾರಗಳ ಮುಂದೆಯೂ ಬಂದಿತ್ತು.

ಇದನ್ನೂ ಓದಿರಿ: ದಲಿತ ಮಕ್ಕಳ ಮೇಲೆ ಮುಂದುವರಿದ ದೌರ್ಜನ್ಯ: ಪ್ರಕರಣ 1, 2, 3, 4

ಅಕ್ಟೋಬರ್ 2004ರಲ್ಲಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಆಗಿನ ಯುಪಿಎ ಸರ್ಕಾರವು, ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ಸಾಮಾಜಿಕ, ಆರ್ಥಿಕ ಸ್ಥಿತಿಯ ಉನ್ನತಿಗೆ ಕ್ರಮ ವಹಿಸಲು ಮುಂದಾಗಿತ್ತು. ಸೂಕ್ತ ಶಿಫಾರಸು ನೀಡುವಂತೆ ಮಾಜಿ ಮುಖ್ಯ ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಅವರ ನೇತೃತ್ವದಲ್ಲಿ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗವನ್ನು ರಚಿಸಲಾಗಿತ್ತು.

ಮೇ 2007ರಲ್ಲಿ ರಂಗನಾಥ್ ಮಿಶ್ರಾ ಆಯೋಗವು ತನ್ನ ವರದಿಯನ್ನು ಸಲ್ಲಿಸಿತು. ಎಸ್‌ಸಿ ಸ್ಥಾನಮಾನವನ್ನು ಸಂಪೂರ್ಣವಾಗಿ ಧರ್ಮದಿಂದ ಬೇರ್ಪಡಿಸಬೇಕು. ಎಸ್‌ಟಿ ಸ್ಥಾನಮಾನದಂತೆ ಇಲ್ಲಿ ಧರ್ಮ-ತಟಸ್ಥವಾಗಿರಬೇಕು ಎಂದು ಶಿಫಾರಸು ಮಾಡಿತು. ಶಿಫಾರಸ್ಸುಗಳು ಕ್ಷೇತ್ರ ಅಧ್ಯಯನದಿಂದ ರುಜುವಾತಾಗಿಲ್ಲ ಎಂಬ ಕಾರಣಕ್ಕೆ ಅಂದಿನ ಯುಪಿಎ ಸರಕಾರ ಶಿಫಾರಸಗಳನ್ನು ಅಂಗೀಕರಿಸಿರಲಿಲ್ಲ.

ಪ್ರತ್ಯೇಕವಾಗಿ, 2007ರಲ್ಲಿ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ನೀಡಿದ ಅಧ್ಯಯನವು ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರಿಗೆ ಎಸ್‌ಸಿ ಸ್ಥಾನಮಾನವನ್ನು ನೀಡಬೇಕೆಂದು ತೀರ್ಮಾನಿಸಿದೆ. ಆ ಶೋಧನೆಯು ಸಹ, ವಿಶ್ವಾಸಾರ್ಹವಾಗಿಲ್ಲವೆಂದು ಅಂಗೀಕರಿಸಲ್ಪಟ್ಟಿಲ್ಲ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...