Homeಮುಖಪುಟಬಾಂಬೆ ಹೈಕೋರ್ಟ್‌ನ ವಿವಾದಾತ್ಮಕ ನ್ಯಾಯಮೂರ್ತಿ ಪುಷ್ಪಾ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ

ಬಾಂಬೆ ಹೈಕೋರ್ಟ್‌ನ ವಿವಾದಾತ್ಮಕ ನ್ಯಾಯಮೂರ್ತಿ ಪುಷ್ಪಾ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ

‘ಚರ್ಮ ಸ್ಪರ್ಶವಾದರೆ ಮಾತ್ರ ಲೈಂಗಿಕ ದೌರ್ಜನ್ಯ’ ಎಂದು ಪೋಸ್ಕೊ ಪ್ರಕರಣದಲ್ಲಿ ಅವರು ವಿವಾದಾತ್ಮಕವಾಗಿ ತೀರ್ಪು ನೀಡಿದ್ದರು

- Advertisement -
- Advertisement -

ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರ ಕಚೇರಿಯಿಂದ ನ್ಯಾಯಮೂರ್ತಿ ಪುಷ್ಪಾ ವೀರೇಂದ್ರ ಗಣೆಡಿವಾಲಾ ಅವರ ಅಧಿಕೃತ ರಾಜೀನಾಮೆಯನ್ನು ಖಚಿತಪಡಿಸಿ ಕಾನೂನು ಮತ್ತು ನ್ಯಾಯ ಸಚಿವಾಲಯ ಅಧಿಸೂಚನೆಯನ್ನು ಹೊರಡಿಸಿದೆ. ಅಧಿಸೂಚನೆಯನ್ನು ಸಂವಿಧಾನದ 217 ನೇ ವಿಧಿಯ ಷರತ್ತು (1) ರ ನಿಬಂಧನೆ (ಎ) ಯ ಅನುಸಾರವಾಗಿ ಹೊರಡಿಸಲಾಗಿದ್ದು, ಅಧಿಸೂಚನೆಯ ಪ್ರಕಾರ, ರಾಜೀನಾಮೆಯು ಫೆಬ್ರವರಿ 11, 2022 ರಿಂದ ಜಾರಿಗೆ ಬರುತ್ತದೆ.

ಬಾಂಬೆ ಹೈಕೋರ್ಟ್‌ನ (ನಾಗ್ಪುರ ಪೀಠ) ಹೆಚ್ಚುವರಿ ನ್ಯಾಯಾಧೀಶರಾಗಿದ್ದ ಪುಷ್ಪಾ ಅವರು ಲೈಂಗಿಕ ಪ್ರಕರಣದ ಕುರಿತು ವಿವಾದಾತ್ಮಕ ತೀರ್ಪು ನೀಡಿದ್ದರು. ಪುಷ್ಪಾ ಅವರ ಸೇವಾ ಅವಧಿಯನ್ನು ವಿಸ್ತರಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡದ ಕಾರಣ, ಅವರ ಅಧಿಕಾರಾವಧಿಯು 12 ಫೆಬ್ರವರಿ 2022 ರಂದು ಮುಕ್ತಾಯಗೊಳ್ಳಲಿತ್ತು.

ಇದನ್ನೂ ಓದಿ: ಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

ನ್ಯಾಯಮೂರ್ತಿ ಗಣೇಡಿವಾಲಾ ಅವರು ಮಕ್ಕಳ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಎರಡು ವಿವಾದಾತ್ಮಕ ತೀರ್ಪುಗಳನ್ನು ನೀಡಿದ್ದರು. ಪೋಕ್ಸೊ ಕಾಯ್ದೆಯಡಿ ಲೈಂಗಿಕ ದೌರ್ಜನ್ಯದ ಅಪರಾಧವನ್ನು ರೂಪಿಸಲು ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಆಗಿರಬೇಕು ಎಂಬ ಪ್ರತಿಪಾದನೆಯನ್ನು ಮಾಡಿದ್ದರು. ಈ ತೀರ್ಪು ವ್ಯಾಪಕ ಟೀಕೆಗೆ ಗುರಿಯಾಯಿತ್ತು. ಈ ವಿವಾದದ ನಂತರ, ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರನ್ನು ಬಾಂಬೆ ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರನ್ನಾಗಿ ಮಾಡಲು ಜನವರಿ 20 ರಂದು ಮಾಡಿದ್ದ ಶಿಫಾರಸನ್ನು ರದ್ದುಗೊಳಿಸಿತ್ತು.

ಇದಾಗಿ ಒಂದು ತಿಂಗಳ ನಂತರ, ಫೆಬ್ರವರಿ 2021 ರಲ್ಲಿ, ಕೊಲಿಜಿಯಂ ಅವರನ್ನು ಕಾಯಂ ನ್ಯಾಯಾಧೀಶರನ್ನಾಗಿ ಮಾಡಲು ಪ್ರಸ್ತಾಪಿಸುವ ಬದಲು ಹೆಚ್ಚುವರಿ ನ್ಯಾಯಾಧೀಶರಾಗಿ ಅವರ ಅವಧಿಯನ್ನು ಇನ್ನೂ ಒಂದು ವರ್ಷಕ್ಕೆ ವಿಸ್ತರಿಸಲು ಶಿಫಾರಸು ಮಾಡಿತ್ತು.

ಕಳೆದ ವರ್ಷ ಭಾರತದ ಅಟಾರ್ನಿ ಜನರಲ್ ಸಲ್ಲಿಸಿದ ಮೇಲ್ಮನವಿಯನ್ನು ಪರಿಗಣಿಸಿ ಅವರ ವಿವಾದಾತ್ಮಕ ತೀರ್ಪುಗಳನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿತ್ತು.

ಇದನ್ನೂ ಓದಿ: ‘ಚರ್ಮ ಸ್ಪರ್ಶವಾದರೆ ಮಾತ್ರ ಲೈಂಗಿಕ ದೌರ್ಜನ್ಯ’ ಎಂದು ತೀರ್ಪು ನೀಡಿದ್ದ ನ್ಯಾಯಾಧೀಶೆಗೆ ಮತ್ತೊಮ್ಮೆ ಹಿನ್ನಡೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...