Homeಮುಖಪುಟಬಾಂಬೆ ಹೈಕೋರ್ಟ್‌ನ ವಿವಾದಾತ್ಮಕ ನ್ಯಾಯಮೂರ್ತಿ ಪುಷ್ಪಾ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ

ಬಾಂಬೆ ಹೈಕೋರ್ಟ್‌ನ ವಿವಾದಾತ್ಮಕ ನ್ಯಾಯಮೂರ್ತಿ ಪುಷ್ಪಾ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ

‘ಚರ್ಮ ಸ್ಪರ್ಶವಾದರೆ ಮಾತ್ರ ಲೈಂಗಿಕ ದೌರ್ಜನ್ಯ’ ಎಂದು ಪೋಸ್ಕೊ ಪ್ರಕರಣದಲ್ಲಿ ಅವರು ವಿವಾದಾತ್ಮಕವಾಗಿ ತೀರ್ಪು ನೀಡಿದ್ದರು

- Advertisement -
- Advertisement -

ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರ ಕಚೇರಿಯಿಂದ ನ್ಯಾಯಮೂರ್ತಿ ಪುಷ್ಪಾ ವೀರೇಂದ್ರ ಗಣೆಡಿವಾಲಾ ಅವರ ಅಧಿಕೃತ ರಾಜೀನಾಮೆಯನ್ನು ಖಚಿತಪಡಿಸಿ ಕಾನೂನು ಮತ್ತು ನ್ಯಾಯ ಸಚಿವಾಲಯ ಅಧಿಸೂಚನೆಯನ್ನು ಹೊರಡಿಸಿದೆ. ಅಧಿಸೂಚನೆಯನ್ನು ಸಂವಿಧಾನದ 217 ನೇ ವಿಧಿಯ ಷರತ್ತು (1) ರ ನಿಬಂಧನೆ (ಎ) ಯ ಅನುಸಾರವಾಗಿ ಹೊರಡಿಸಲಾಗಿದ್ದು, ಅಧಿಸೂಚನೆಯ ಪ್ರಕಾರ, ರಾಜೀನಾಮೆಯು ಫೆಬ್ರವರಿ 11, 2022 ರಿಂದ ಜಾರಿಗೆ ಬರುತ್ತದೆ.

ಬಾಂಬೆ ಹೈಕೋರ್ಟ್‌ನ (ನಾಗ್ಪುರ ಪೀಠ) ಹೆಚ್ಚುವರಿ ನ್ಯಾಯಾಧೀಶರಾಗಿದ್ದ ಪುಷ್ಪಾ ಅವರು ಲೈಂಗಿಕ ಪ್ರಕರಣದ ಕುರಿತು ವಿವಾದಾತ್ಮಕ ತೀರ್ಪು ನೀಡಿದ್ದರು. ಪುಷ್ಪಾ ಅವರ ಸೇವಾ ಅವಧಿಯನ್ನು ವಿಸ್ತರಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡದ ಕಾರಣ, ಅವರ ಅಧಿಕಾರಾವಧಿಯು 12 ಫೆಬ್ರವರಿ 2022 ರಂದು ಮುಕ್ತಾಯಗೊಳ್ಳಲಿತ್ತು.

ಇದನ್ನೂ ಓದಿ: ಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

ನ್ಯಾಯಮೂರ್ತಿ ಗಣೇಡಿವಾಲಾ ಅವರು ಮಕ್ಕಳ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಎರಡು ವಿವಾದಾತ್ಮಕ ತೀರ್ಪುಗಳನ್ನು ನೀಡಿದ್ದರು. ಪೋಕ್ಸೊ ಕಾಯ್ದೆಯಡಿ ಲೈಂಗಿಕ ದೌರ್ಜನ್ಯದ ಅಪರಾಧವನ್ನು ರೂಪಿಸಲು ಚರ್ಮದಿಂದ ಚರ್ಮಕ್ಕೆ ನೇರ ಸಂಪರ್ಕ ಆಗಿರಬೇಕು ಎಂಬ ಪ್ರತಿಪಾದನೆಯನ್ನು ಮಾಡಿದ್ದರು. ಈ ತೀರ್ಪು ವ್ಯಾಪಕ ಟೀಕೆಗೆ ಗುರಿಯಾಯಿತ್ತು. ಈ ವಿವಾದದ ನಂತರ, ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರನ್ನು ಬಾಂಬೆ ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರನ್ನಾಗಿ ಮಾಡಲು ಜನವರಿ 20 ರಂದು ಮಾಡಿದ್ದ ಶಿಫಾರಸನ್ನು ರದ್ದುಗೊಳಿಸಿತ್ತು.

ಇದಾಗಿ ಒಂದು ತಿಂಗಳ ನಂತರ, ಫೆಬ್ರವರಿ 2021 ರಲ್ಲಿ, ಕೊಲಿಜಿಯಂ ಅವರನ್ನು ಕಾಯಂ ನ್ಯಾಯಾಧೀಶರನ್ನಾಗಿ ಮಾಡಲು ಪ್ರಸ್ತಾಪಿಸುವ ಬದಲು ಹೆಚ್ಚುವರಿ ನ್ಯಾಯಾಧೀಶರಾಗಿ ಅವರ ಅವಧಿಯನ್ನು ಇನ್ನೂ ಒಂದು ವರ್ಷಕ್ಕೆ ವಿಸ್ತರಿಸಲು ಶಿಫಾರಸು ಮಾಡಿತ್ತು.

ಕಳೆದ ವರ್ಷ ಭಾರತದ ಅಟಾರ್ನಿ ಜನರಲ್ ಸಲ್ಲಿಸಿದ ಮೇಲ್ಮನವಿಯನ್ನು ಪರಿಗಣಿಸಿ ಅವರ ವಿವಾದಾತ್ಮಕ ತೀರ್ಪುಗಳನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿತ್ತು.

ಇದನ್ನೂ ಓದಿ: ‘ಚರ್ಮ ಸ್ಪರ್ಶವಾದರೆ ಮಾತ್ರ ಲೈಂಗಿಕ ದೌರ್ಜನ್ಯ’ ಎಂದು ತೀರ್ಪು ನೀಡಿದ್ದ ನ್ಯಾಯಾಧೀಶೆಗೆ ಮತ್ತೊಮ್ಮೆ ಹಿನ್ನಡೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...