Homeಮುಖಪುಟಲೋಕಪಾಲ್‌ ಮುಖ್ಯಸ್ಥರಾಗಿ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್‌ ರಾವ್ ಖಾನ್ವಿಲ್ಕರ್ ನೇಮಕ

ಲೋಕಪಾಲ್‌ ಮುಖ್ಯಸ್ಥರಾಗಿ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್‌ ರಾವ್ ಖಾನ್ವಿಲ್ಕರ್ ನೇಮಕ

- Advertisement -
- Advertisement -

ಲೋಕಪಾಲ್‌ ಮುಖ್ಯಸ್ಥರಾಗಿ ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್‌ ರಾವ್ ಖಾನ್ವಿಲ್ಕರ್ ಅವರನ್ನು ನೇಮಕ ಮಾಡಲಾಗಿದ್ದು, ಈ ಕುರಿತು ಭಾರತದ ರಾಷ್ಟ್ರಪತಿ, ದ್ರೌಪದಿ ಮುರ್ಮು ಅವರು ಆದೇಶವನ್ನು ಹೊರಡಿಸಿದ್ದಾರೆ.

ಪಿನಾಕಿ ಚಂದ್ರ ಘೋಸ್ ಎರಡು ವರ್ಷಗಳ ಅಧಿಕಾರಾವಧಿಯ ನಂತರ ಮೇ 2022ರಲ್ಲಿ ನಿವೃತ್ತರಾಗಿದ್ದರು. ಇದೀಗ ಎರಡನೇ ಲೋಕಪಾಲ್ ಆಗಿ ಅಜಯ್ ಮಾಣಿಕ್ರಾವ್ ಖಾನ್ವಿಲ್ಕರ್ ಅವರನ್ನು ನೇಮಕ ಮಾಡಲಾಗಿದೆ.

ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್ರಾವ್ ಖಾನ್ವಿಲ್ಕರ್ ಅವರನ್ನು ಲೋಕಪಾಲ್ ಮುಖ್ಯಸ್ಥರಾಗಿ ನೇಮಿಸಿದ್ದಾರೆ. ಪ್ರಧಾನಿ, ಲೋಕಸಭೆಯ ಸ್ಪೀಕರ್, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳ ಆಯ್ಕೆ ಸಮಿತಿಯು ಅವರ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಿದ ಸುಮಾರು ಮೂರು ವಾರಗಳ ನಂತರ ನೇಮಕಾತಿ ನಡೆದಿದೆ.

ಇದಲ್ಲದೆ ಮಾಜಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಲಿಂಗಪ್ಪ ನಾರಾಯಣ ಸ್ವಾಮಿ, ನ್ಯಾಯಮೂರ್ತಿ ಸಂಜಯ್ ಯಾದವ್, ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಅವರನ್ನು ಲೋಕಪಾಲ್‌ಗೆ ನ್ಯಾಯಾಂಗ ಸದಸ್ಯರನ್ನಾಗಿ ನೇಮಿಸಲಾಗಿದೆ ಮತ್ತು ಸುಶೀಲ್ ಚಂದ್ರ, ಪಂಕಜ್ ಕುಮಾರ್ ಮತ್ತು ಅಜಯ್ ಟಿರ್ಕಿ ಅವರನ್ನು ನ್ಯಾಯಾಂಗೇತರ ಸದಸ್ಯರನ್ನಾಗಿ ನೇಮಿಸಲಾಗಿದೆ.

ಸುಶೀಲ್ ಚಂದ್ರ ಅವರು ಮಾಜಿ ಮುಖ್ಯ ಚುನಾವಣಾ ಆಯುಕ್ತರು. ಅವಸ್ತಿ ಪ್ರಸ್ತುತ ಕಾನೂನು ಆಯೋಗದ ಅಧ್ಯಕ್ಷರಾಗಿದ್ದಾರೆ. ಅವಸ್ತಿ ಅವರ ನೇಮಕದೊಂದಿಗೆ ಸರ್ಕಾರವು ಕಾನೂನು ಆಯೋಗಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಬೇಕಾಗುತ್ತದೆ. ಮೇಲಿನ ನೇಮಕಾತಿಗಳು ಅವರು ತಮ್ಮ ತಮ್ಮ ಕಚೇರಿಗಳ ಉಸ್ತುವಾರಿ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುತ್ತವೆ ಎಂದು ರಾಷ್ಟ್ರಪತಿ ಭವನದ ಪತ್ರಿಕಾ ಹೇಳಿಕೆ ತಿಳಿಸಿದೆ.

ಲೋಕಪಾಲ ಕಾಯಿದೆ 2013ರ ಅಡಿಯಲ್ಲಿ ಲೋಕಪಾಲವನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕ ಸೇವಕರ ವಿರುದ್ಧದ ಭ್ರಷ್ಟಾಚಾರದ ಆರೋಪಗಳನ್ನು ತನಿಖೆ ಮಾಡುವ ಉದ್ದೇಶದಿಂದ ಇದನ್ನು ಸ್ಥಾಪಸಿಲಾಗಿದೆ. ಲೋಕಪಾಲ್ ಅಧ್ಯಕ್ಷರು ಮತ್ತು ಎಂಟು ಸದಸ್ಯರನ್ನು ಒಳಗೊಂಡಿರುತ್ತದೆ, ಅವರಲ್ಲಿ 50% ರಷ್ಟು ನ್ಯಾಯಾಂಗ ಸದಸ್ಯರಾಗಿರುತ್ತಾರೆ. ಸದಸ್ಯರು ಐದು ವರ್ಷಗಳ ಅವಧಿಯನ್ನು ಹೊಂದಿರುತ್ತಾರೆ.

ಎ, ಬಿ, ಸಿ ಮತ್ತು ಡಿ ಗ್ರೂಪ್‌ಗಳ ಅಡಿಯಲ್ಲಿ ಪ್ರಧಾನ ಮಂತ್ರಿ, ಕೇಂದ್ರ ಸರ್ಕಾರದಲ್ಲಿ ಮಂತ್ರಿ, ಸಂಸತ್ತಿನ ಸದಸ್ಯರು ಅಥವಾ ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರದ ಆರೋಪಗಳನ್ನು ವಿಚಾರಣೆ ಮಾಡಲು ಲೋಕಪಾಲ್ ಅಧಿಕಾರ ವ್ಯಾಪ್ತಿ ಹೊಂದಿದೆ. ಸಂಸತ್ತಿನ ಕಾಯಿದೆಯಿಂದ ಸ್ಥಾಪಿಸಲ್ಪಟ್ಟ ಅಥವಾ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಸಂಪೂರ್ಣವಾಗಿ ಅಥವಾ ಭಾಗಶಃ ಧನಸಹಾಯವನ್ನು ಪಡೆಯುವ ಯಾವುದೇ ಮಂಡಳಿ, ನಿಗಮ, ಸಮಾಜ, ಟ್ರಸ್ಟ್ ಅಥವಾ ಸ್ವಾಯತ್ತ ಸಂಸ್ಥೆಯ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಮತ್ತು ನಿರ್ದೇಶಕರು ಇದರ ತನಿಖಾ ವ್ಯಾಪ್ತಿಗೆ ಬರುತ್ತದೆ.

ಇದನ್ನು ಓದಿ: ದೆಹಲಿ, ಹರಿಯಾಣದ ಲೋಕಸಭಾ ಅಭ್ಯರ್ಥಿಗಳನ್ನು ಘೋಷಿಸಿದ ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...