Homeಮುಖಪುಟಕೃಷಿ ಕಾಯ್ದೆ ರದ್ದತಿಗೆ ಒಪ್ಪಿಗೆ ನೀಡಿದ ರಾಷ್ಟ್ರಪತಿ

ಕೃಷಿ ಕಾಯ್ದೆ ರದ್ದತಿಗೆ ಒಪ್ಪಿಗೆ ನೀಡಿದ ರಾಷ್ಟ್ರಪತಿ

- Advertisement -
- Advertisement -

ಸೋಮವಾರ ಉಭಯ ಸದನಗಳು ಸಂಸತ್ತಿನಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಿದ ಕೃಷಿ ಕಾನೂನುಗಳ ರದ್ದತಿ ಕಾಯ್ದೆ-2021 ಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಬುಧವಾರ ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ.

ಸೋಮವಾರದಂದು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಈ ವಿಷಯದ ಬಗ್ಗೆ ಪ್ರತಿ ಪಕ್ಷಗಳು ಚರ್ಚೆಯನ್ನು ಬಯಸಿ ಭಾರೀ ಘೋಷಣೆಗಳನ್ನು ಕೂಗಿದ್ದವು. ಆದರೆ ಯಾವುದೆ ಚರ್ಚೆಯಿಲ್ಲದೆ ಧ್ವನಿ ಮತದ ಮೂಲಕ ‘ದಿ ಫಾರ್ಮ್ ಲಾಸ್ ರಿಪೀಲ್ ಬಿಲ್-2021 ಅನ್ನು ಸರ್ಕಾರವು ಅಂಗೀಕರಿಸಿತ್ತು. ಉಭಯ ಸದನಗಳಲ್ಲಿ ಈ ಕಾಯ್ದೆಯನ್ನು ಸರ್ಕಾರವು ಮಂಡಿಸಿದ ಕೆಲವೇ ನಿಮಿಷಗಳಲ್ಲಿ ಮಸೂದೆಯನ್ನು ಅಂಗೀಕರಿಸಲಾಗಿತ್ತು. ನವೆಂಬರ್ 19 ರಂದು ಪ್ರಧಾನಿ ನರೇಂದ್ರ ಮೋದಿಯವರು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ:ಕೃಷಿ ಕಾನೂನುಗಳ ರದ್ಧತಿ ಮಸೂದೆ -2021 ಹುತಾತ್ಮ ರೈತರಿಗೆ ಅರ್ಪಣೆ: ರಾಕೇಶ್ ಟಿಕಾಯತ್

ಈ ಮಧ್ಯೆ, ಸರ್ಕಾರವು ಪ್ರಮುಖ ಬೇಡಿಕೆಯನ್ನು ಈಡೇರಿಸಿರುವುದರಿಂದ 32 ರೈತ ಸಂಘಗಳು ಆಂದೋಲನವನ್ನು ಕೊನೆಗೊಳಿಸಲು ಬಯಸುತ್ತಿವೆ ಎಂಬುವುದಾಗಿ ಮಾಧ್ಯಮಗಳು ವರದಿಗಳು ಮಾಡಿವೆ. ಈ ವರದಿಗೆ ಪ್ರತಿಕ್ರಿಯಿಸಿರುವ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್, ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಹೇಳಿದ್ದಾರೆ. ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೆ ನಾವು ಮನೆಗೆ ಹಿಂತಿರುಗುವುದಿಲ್ಲ, ರೈತರನ್ನು ಒಡೆಯಲು ಸರಕಾರ ವದಂತಿಗಳನ್ನು ಹಬ್ಬಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಡಿಸೆಂಬರ್ 4 ರಂದು ನಡೆಯಲಿರುವ ಸಂಯುಕ್ತ ಕಿಸಾನ್ ಮೋರ್ಚಾ ಸಭೆಯಲ್ಲಿ ಮುಂದಿನ ಹೋರಾಟದ ಹಾದಿಯನ್ನು ನಿರ್ಧರಿಸಲಾಗುವುದು ಎಂದು ತಿಳಿಸಿದ ಅವರು, ರೈತರು ರೈತ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ಒಗ್ಗಟ್ಟಾಗಿ ಉಳಿಯಬೇಕು ಮತ್ತು ಸಂಘಟನೆಯ ಅನುಮೋದನೆಯಿಲ್ಲದೆ ಯಾವುದೇ ಹೇಳಿಕೆ ನೀಡಬಾರದು ಎಂದು ಹೇಳಿದ್ದಾರೆ.

ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಲು ಬಯಸುವುದಿಲ್ಲ ಎಂದು ಟಿಕಾಯತ್ ಆರೋಪಿಸಿದ್ದಾರೆ.

ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಸರ್ಕಾರ ರದ್ದುಗೊಳಿಸಿದಾಗ ಆಂದೋಲನವನ್ನು ಕೊನೆಗೊಳಿಸದಿರುವುದು ಬ್ಲ್ಯಾಕ್‌ಮೇಲ್ ಅಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಬಗ್ಗೆ ಚರ್ಚಿಸಲು ಹಲವು ವಿಷಯಗಳಿವೆ. ಆಂದೋಲನದ ಸಂದರ್ಭದಲ್ಲಿ ರೈತರ ವಿರುದ್ಧ ದಾಖಲಿಸಲಾದ ಎಲ್ಲಾ ಪ್ರಕರಣಗಳನ್ನು ಸರ್ಕಾರ ಹಿಂಪಡೆಯಬೇಕು. ಸುಮಾರು 150 ಟ್ರ್ಯಾಕ್ಟರ್‌ಗಳನ್ನು ರೈತರು ಕಳೆದುಕೊಂಡಿದ್ದಾರೆ. ಇಂತಹ ಪ್ರಧಾನಿ ರೈತರಿಗೆ ಹೊಸ ಟ್ರ್ಯಾಕ್ಟರ್‌ಗಳನ್ನು ನೀಡಲಾರರು. ನಾರಾಯಣ ದತ್ತ್ ತಿವಾರಿ ಅವರು ಯುಪಿ ಮುಖ್ಯಮಂತ್ರಿಯಾಗಿದ್ದಾಗ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಿದ್ದರು. ನಷ್ಟವನ್ನು ಸರ್ಕಾರದಿಂದ ತುಂಬಲು ಸಾಧ್ಯವಿಲ್ಲ ಎಂದು ಪ್ರಧಾನಿ ಹೇಳಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಬಿಜೆಪಿಯ ದುರಹಂಕಾರಕ್ಕಾಗಿಯು ರೈತ ಚಳುವಳಿ ನೆನಪಿನಲ್ಲಿ ಉಳಿಯುತ್ತದೆ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...