Homeಮುಖಪುಟಅಧ್ಯಕ್ಷ ಅಸ್ಸಾದ್‌ನ ಆಳ್ವಿಕೆ ಅಂತ್ಯ: ಸಿರಿಯಾ ಸೇನೆ

ಅಧ್ಯಕ್ಷ ಅಸ್ಸಾದ್‌ನ ಆಳ್ವಿಕೆ ಅಂತ್ಯ: ಸಿರಿಯಾ ಸೇನೆ

- Advertisement -
- Advertisement -

 ಸೈದ್ನಾಯಾ ಪ್ರಿಸನ್ ಗೇಟ್ಸ್ ತೆರೆದ ಬಂಡುಕೋರರು

ಸಿರಿಯಾ: ಸಿರಿಯಾದಲ್ಲಿ ಎರಡು ದಿನಗಳ ಬಂಡುಕೋರರ ದಾಳಿಯ ನಂತರ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅವರ ಆಡಳಿತ ಅಂತ್ಯಗೊಂಡಿದೆ ಎಂದು ಸಿರಿಯಾದ ಸೇನಾ ಕಮಾಂಡ್ ತನ್ನ ಅಧಿಕಾರಿಗಳಿಗೆ ತಿಳಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಸಿರಿಯನ್ ಬಂಡುಕೋರರು ಡಮಾಸ್ಕಸ್ “ಈಗ ಅಸ್ಸಾದ್ ಮುಕ್ತವಾಗಿದೆ” ಎಂದು ಹೇಳಿದ್ದಾರೆ.

ಅಸ್ಸಾದ್ ಪರಾರಿಯಾಗಿದ್ದಾರೆ ಎಂಬ ವದಂತಿಗಳಿವೆ.

ಇಸ್ಲಾಮಿ ಉಗ್ರಗಾಮಿ ಸಂಘಟನೆಯಾದ ಹಯಾತ್ ತಹ್ರೀರ್ ಅಲ್-ಶಾಮ್‌ಗೆ ಸೇರಿದ ಬಂಡಾಯ ಹೋರಾಟಗಾರರು ಗುರುವಾರದಂದು ಸಿರಿಯಾದ ಹಮಾ ನಗರದ ಮೇಲೆ ನಿಯಂತ್ರಣ ಸಾಧಿಸಿದ್ದರು ಮತ್ತು ಸಿರಿಯಾದ ರಾಜಧಾನಿ ಡಮಾಸ್ಕಸ್ ಮಾರ್ಗವಾಗಿ ಹೋಮ್ಸ್‌ಗೆ ಸಮೀಪಿಸಿದ್ದರು. ಪ್ರಸ್ತುತ ಬಶರ್ ಅಲ್-ಅಸ್ಸಾದ್ ಸರ್ಕಾರವನ್ನು ಉರುಳಿಸಿ ಹೊಸ ಸರ್ಕಾರವನ್ನು ಸ್ಥಾಪಿಸಲು ಬಯಸುತ್ತೇವೆ ಎಂದು ಬಂಡುಕೋರ ಗುಂಪಿನ ನಾಯಕ ಅಬು ಮೊಹಮ್ಮದ್ ಅಲ್-ಜವ್ಲಾನಿ ಹೇಳಿದ್ದಾನೆ. ಕಳೆದ ವಾರ, ಬಂಡುಕೋರ ಪಡೆಗಳು ಸಿರಿಯಾದ ಎರಡನೇ ಅತಿದೊಡ್ಡ ನಗರವಾದ ಅಲೆಪ್ಪೊವನ್ನು ವಶಪಡಿಸಿಕೊಂಡಿದ್ದವು.

ಡಮಾಸ್ಕಸ್ನ  ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಳಾಂತರಿಸಲಾಗಿದೆ ಮತ್ತು ಎಲ್ಲಾ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಸರ್ಕಾರಿ ರೇಡಿಯೊ ಸ್ಟೇಷನ್ ಶಾಮ್ ಎಫ್‌ಎಂ ತಿಳಿಸಿದೆ.

ಬಂಡುಕೋರರು ಡಮಾಸ್ಕಸ್‌ನ ಹೊರಭಾಗ ಸೈದ್ನಾಯಾ ಮಿಲಿಟರಿ ಜೈಲಿಗೆ ನುಗ್ಗಿದರು ಮತ್ತು ಕೈದಿಗಳಿಗೆ ಅದರ ಬಾಗಿಲುಗಳನ್ನು ತೆರೆದಿದ್ದಾರೆ.

ಹೋಮ್ಸ್‌ನ ಸಾವಿರಾರು ನಿವಾಸಿಗಳು ಈಗಾಗಲೇ ನಗರದಿಂದ ಪಲಾಯನ ಮಾಡಿ, ಸಿರಿಯಾ ಅಧ್ಯಕ್ಷ ಅಲ್-ಅಸ್ಸಾದ್ ಅವರು ಇನ್ನೂ ನಿಯಂತ್ರಣ ಹೊಂದಿರುವ ಪಶ್ಚಿಮ ಕರಾವಳಿಗೆ ತೆರಳಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ. ನವೆಂಬರ್ 27 ರಿಂದ ಸಿರಿಯಾದಾದ್ಯಂತ ಕನಿಷ್ಠ 3,70,000 ಜನರನ್ನು ಈ ಸಂಘರ್ಷದಿಂದಾಗಿ ಸ್ಥಳಾಂತರಗೊಂಡಿದ್ದಾರೆ ಎಂದು ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್ ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಅವರ ಹೇಳಿಕೆಯನ್ನು ಜಜೀರಾ ವರದಿ ಮಾಡಿದೆ. ನಿರಾಶ್ರಿತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಅದು ಹೇಳಿದೆ.

ಸಿರಿಯಾ ಅಧ್ಯಕ್ಷ ಬಶರ್ ಅಲ್-ಅಸ್ಸಾದ್‌ಗೆ ರಷ್ಯಾ ಮಿಲಿಟರಿ ಬೆಂಬಲವನ್ನು ನೀಡಿದ್ದರೂ ಸಹ ಡಮಾಸ್ಕಸ್‌ನಲ್ಲಿರುವ ರಷ್ಯಾದ ರಾಯಭಾರ ಕಚೇರಿಯು ಸಿರಿಯಾವನ್ನು ತೊರೆಯುವಂತೆ ರಷ್ಯಾದ ಪ್ರಜೆಗಳಿಗೆ ಸೂಚನೆ ನೀಡಿದೆ.

ಡಿಸೆಂಬರ್ 6 ರಂದು, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸಿರಿಯಾದಲ್ಲಿರುವ ಭಾರತೀಯರಿಗೆ ಪ್ರಯಾಣದ ಸಲಹೆ ನೀಡಿತು.

ಡಿಸೆಂಬರ್ 6ರಂದು ಭಾರತೀಯ ವಿದೇಶಾಂಗ ಸಚಿವಾಲಯವು ಭಾರತೀಯ ಪ್ರಜೆಗಳಿಗೆ ಮುಂದಿನ ಅಧಿಸೂಚನೆಯ ತನಕ ಸಿರಿಯಾಕ್ಕೆ ಪ್ರಯಾಣಿಸದಂತೆ ಸಲಹೆ ನೀಡಿತು. ಪ್ರಸ್ತುತ ಸಿರಿಯಾದಲ್ಲಿರುವ ಭಾರತೀಯರಿಗೆ ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಅದರ ತುರ್ತು ಸಹಾಯವಾಣಿ ಸಂಖ್ಯೆ +963 993385973 (ವಾಟ್ಸಾಪ್‌ನಲ್ಲಿಯೂ ಸಹ) ಮತ್ತು ಇಮೇಲ್ ಐಡಿ ನವೀಕರಣಗಳಿಗಾಗಿ ಸಂಪರ್ಕದಲ್ಲಿರಬೇಕು ಎಂದು ಅದು ಹೇಳಿದೆ.

ಸಾಧ್ಯವಿರುವವರು, ಲಭ್ಯವಿರುವ ವಾಣಿಜ್ಯ ವಿಮಾನಗಳ ಮೂಲಕ ಅದಷ್ಟು ಬೇಗ ಹೊರಡಲು ಸಲಹೆ ನೀಡಲಾಗಿದೆ ಮತ್ತು ಇತರರು ತಮ್ಮ ಸುರಕ್ಷತೆಯ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲು ಮತ್ತು ಚಲನವಲನವನ್ನು ಕನಿಷ್ಠಕ್ಕೆ ನಿರ್ಬಂಧಿಸಲು ವಿನಂತಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯವು ಹೇಳಿದೆ.

ಇದನ್ನೂ ಓದಿ….ಇಂದು ಮತ್ತೆ ರೈತರಿಂದ ದೆಹಲಿಗೆ ಪ್ರತಿಭಟನಾ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...