Homeಮುಖಪುಟಅಧ್ಯಕ್ಷ ಅಸ್ಸಾದ್‌ನ ಆಳ್ವಿಕೆ ಅಂತ್ಯ: ಸಿರಿಯಾ ಸೇನೆ

ಅಧ್ಯಕ್ಷ ಅಸ್ಸಾದ್‌ನ ಆಳ್ವಿಕೆ ಅಂತ್ಯ: ಸಿರಿಯಾ ಸೇನೆ

- Advertisement -
- Advertisement -

 ಸೈದ್ನಾಯಾ ಪ್ರಿಸನ್ ಗೇಟ್ಸ್ ತೆರೆದ ಬಂಡುಕೋರರು

ಸಿರಿಯಾ: ಸಿರಿಯಾದಲ್ಲಿ ಎರಡು ದಿನಗಳ ಬಂಡುಕೋರರ ದಾಳಿಯ ನಂತರ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅವರ ಆಡಳಿತ ಅಂತ್ಯಗೊಂಡಿದೆ ಎಂದು ಸಿರಿಯಾದ ಸೇನಾ ಕಮಾಂಡ್ ತನ್ನ ಅಧಿಕಾರಿಗಳಿಗೆ ತಿಳಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಸಿರಿಯನ್ ಬಂಡುಕೋರರು ಡಮಾಸ್ಕಸ್ “ಈಗ ಅಸ್ಸಾದ್ ಮುಕ್ತವಾಗಿದೆ” ಎಂದು ಹೇಳಿದ್ದಾರೆ.

ಅಸ್ಸಾದ್ ಪರಾರಿಯಾಗಿದ್ದಾರೆ ಎಂಬ ವದಂತಿಗಳಿವೆ.

ಇಸ್ಲಾಮಿ ಉಗ್ರಗಾಮಿ ಸಂಘಟನೆಯಾದ ಹಯಾತ್ ತಹ್ರೀರ್ ಅಲ್-ಶಾಮ್‌ಗೆ ಸೇರಿದ ಬಂಡಾಯ ಹೋರಾಟಗಾರರು ಗುರುವಾರದಂದು ಸಿರಿಯಾದ ಹಮಾ ನಗರದ ಮೇಲೆ ನಿಯಂತ್ರಣ ಸಾಧಿಸಿದ್ದರು ಮತ್ತು ಸಿರಿಯಾದ ರಾಜಧಾನಿ ಡಮಾಸ್ಕಸ್ ಮಾರ್ಗವಾಗಿ ಹೋಮ್ಸ್‌ಗೆ ಸಮೀಪಿಸಿದ್ದರು. ಪ್ರಸ್ತುತ ಬಶರ್ ಅಲ್-ಅಸ್ಸಾದ್ ಸರ್ಕಾರವನ್ನು ಉರುಳಿಸಿ ಹೊಸ ಸರ್ಕಾರವನ್ನು ಸ್ಥಾಪಿಸಲು ಬಯಸುತ್ತೇವೆ ಎಂದು ಬಂಡುಕೋರ ಗುಂಪಿನ ನಾಯಕ ಅಬು ಮೊಹಮ್ಮದ್ ಅಲ್-ಜವ್ಲಾನಿ ಹೇಳಿದ್ದಾನೆ. ಕಳೆದ ವಾರ, ಬಂಡುಕೋರ ಪಡೆಗಳು ಸಿರಿಯಾದ ಎರಡನೇ ಅತಿದೊಡ್ಡ ನಗರವಾದ ಅಲೆಪ್ಪೊವನ್ನು ವಶಪಡಿಸಿಕೊಂಡಿದ್ದವು.

ಡಮಾಸ್ಕಸ್ನ  ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಳಾಂತರಿಸಲಾಗಿದೆ ಮತ್ತು ಎಲ್ಲಾ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಸರ್ಕಾರಿ ರೇಡಿಯೊ ಸ್ಟೇಷನ್ ಶಾಮ್ ಎಫ್‌ಎಂ ತಿಳಿಸಿದೆ.

ಬಂಡುಕೋರರು ಡಮಾಸ್ಕಸ್‌ನ ಹೊರಭಾಗ ಸೈದ್ನಾಯಾ ಮಿಲಿಟರಿ ಜೈಲಿಗೆ ನುಗ್ಗಿದರು ಮತ್ತು ಕೈದಿಗಳಿಗೆ ಅದರ ಬಾಗಿಲುಗಳನ್ನು ತೆರೆದಿದ್ದಾರೆ.

ಹೋಮ್ಸ್‌ನ ಸಾವಿರಾರು ನಿವಾಸಿಗಳು ಈಗಾಗಲೇ ನಗರದಿಂದ ಪಲಾಯನ ಮಾಡಿ, ಸಿರಿಯಾ ಅಧ್ಯಕ್ಷ ಅಲ್-ಅಸ್ಸಾದ್ ಅವರು ಇನ್ನೂ ನಿಯಂತ್ರಣ ಹೊಂದಿರುವ ಪಶ್ಚಿಮ ಕರಾವಳಿಗೆ ತೆರಳಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ. ನವೆಂಬರ್ 27 ರಿಂದ ಸಿರಿಯಾದಾದ್ಯಂತ ಕನಿಷ್ಠ 3,70,000 ಜನರನ್ನು ಈ ಸಂಘರ್ಷದಿಂದಾಗಿ ಸ್ಥಳಾಂತರಗೊಂಡಿದ್ದಾರೆ ಎಂದು ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್ ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಅವರ ಹೇಳಿಕೆಯನ್ನು ಜಜೀರಾ ವರದಿ ಮಾಡಿದೆ. ನಿರಾಶ್ರಿತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಅದು ಹೇಳಿದೆ.

ಸಿರಿಯಾ ಅಧ್ಯಕ್ಷ ಬಶರ್ ಅಲ್-ಅಸ್ಸಾದ್‌ಗೆ ರಷ್ಯಾ ಮಿಲಿಟರಿ ಬೆಂಬಲವನ್ನು ನೀಡಿದ್ದರೂ ಸಹ ಡಮಾಸ್ಕಸ್‌ನಲ್ಲಿರುವ ರಷ್ಯಾದ ರಾಯಭಾರ ಕಚೇರಿಯು ಸಿರಿಯಾವನ್ನು ತೊರೆಯುವಂತೆ ರಷ್ಯಾದ ಪ್ರಜೆಗಳಿಗೆ ಸೂಚನೆ ನೀಡಿದೆ.

ಡಿಸೆಂಬರ್ 6 ರಂದು, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸಿರಿಯಾದಲ್ಲಿರುವ ಭಾರತೀಯರಿಗೆ ಪ್ರಯಾಣದ ಸಲಹೆ ನೀಡಿತು.

ಡಿಸೆಂಬರ್ 6ರಂದು ಭಾರತೀಯ ವಿದೇಶಾಂಗ ಸಚಿವಾಲಯವು ಭಾರತೀಯ ಪ್ರಜೆಗಳಿಗೆ ಮುಂದಿನ ಅಧಿಸೂಚನೆಯ ತನಕ ಸಿರಿಯಾಕ್ಕೆ ಪ್ರಯಾಣಿಸದಂತೆ ಸಲಹೆ ನೀಡಿತು. ಪ್ರಸ್ತುತ ಸಿರಿಯಾದಲ್ಲಿರುವ ಭಾರತೀಯರಿಗೆ ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಅದರ ತುರ್ತು ಸಹಾಯವಾಣಿ ಸಂಖ್ಯೆ +963 993385973 (ವಾಟ್ಸಾಪ್‌ನಲ್ಲಿಯೂ ಸಹ) ಮತ್ತು ಇಮೇಲ್ ಐಡಿ ನವೀಕರಣಗಳಿಗಾಗಿ ಸಂಪರ್ಕದಲ್ಲಿರಬೇಕು ಎಂದು ಅದು ಹೇಳಿದೆ.

ಸಾಧ್ಯವಿರುವವರು, ಲಭ್ಯವಿರುವ ವಾಣಿಜ್ಯ ವಿಮಾನಗಳ ಮೂಲಕ ಅದಷ್ಟು ಬೇಗ ಹೊರಡಲು ಸಲಹೆ ನೀಡಲಾಗಿದೆ ಮತ್ತು ಇತರರು ತಮ್ಮ ಸುರಕ್ಷತೆಯ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲು ಮತ್ತು ಚಲನವಲನವನ್ನು ಕನಿಷ್ಠಕ್ಕೆ ನಿರ್ಬಂಧಿಸಲು ವಿನಂತಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯವು ಹೇಳಿದೆ.

ಇದನ್ನೂ ಓದಿ….ಇಂದು ಮತ್ತೆ ರೈತರಿಂದ ದೆಹಲಿಗೆ ಪ್ರತಿಭಟನಾ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...