Homeಮುಖಪುಟ'ವಲಸೆ ಮತ್ತು ವಿದೇಶಿಯರ ಮಸೂದೆ-2025' ಅನುಮೋದಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

‘ವಲಸೆ ಮತ್ತು ವಿದೇಶಿಯರ ಮಸೂದೆ-2025’ ಅನುಮೋದಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

- Advertisement -
- Advertisement -

ವಿದೇಶಿಯರು ಮತ್ತು ವಲಸೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿರ್ವಹಿಸುವ ‘ವಲಸೆ ಮತ್ತು ವಿದೇಶಿಯರ ಮಸೂದೆ, 2025’ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಕ್ರವಾರ ಒಪ್ಪಿಗೆ ನೀಡಿದ್ದು, ಅದು ಈಗ ಕಾನೂನಾಗುತ್ತಿದೆ.

ಈ ಶಾಸನವು ಏಪ್ರಿಲ್ 4, 2025 ರಂದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಿತು; ನಂತರ ಅದನ್ನು ಗೆಜೆಟ್ ಅಧಿಸೂಚನೆಯ ಮೂಲಕ ತಿಳಿಸಲಾಯಿತು.

ಕಾನೂನಿನ ಪ್ರಕಾರ, ಇನ್ನು ಮುಂದೆ ಯಾರಾದರೂ ಭಾರತಕ್ಕೆ ಪ್ರವೇಶಿಸಲು ಅಥವಾ ದೇಶದಲ್ಲಿ ಉಳಿಯಲು ಅಥವಾ ನಿರ್ಗಮಿಸಲು ನಕಲಿ ಪಾಸ್‌ಪೋರ್ಟ್ ಅಥವಾ ವೀಸಾವನ್ನು ಬಳಸುತ್ತಿರುವುದು ಕಂಡುಬಂದರೆ, ಅವರಿಗೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲಾಗುತ್ತದೆ.

ವಿದೇಶಿಯರು ಹೆಚ್ಚು ಕಾಲ ನೆಲೆಸಿರುವವರನ್ನು ಪತ್ತೆಹಚ್ಚಲು ಹೋಟೆಲ್‌ಗಳು, ವಿಶ್ವವಿದ್ಯಾಲಯಗಳು, ಇತರ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ವಿದೇಶಿಯರ ಬಗ್ಗೆ ಮಾಹಿತಿಯನ್ನು ಕಡ್ಡಾಯವಾಗಿ ವರದಿ ಮಾಡಲು ಶಾಸನವು ಅವಕಾಶ ನೀಡುತ್ತದೆ.

ಎಲ್ಲ ಅಂತರರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳು ಮತ್ತು ಹಡಗುಗಳು ಭಾರತದ ಬಂದರು ಅಥವಾ ಸ್ಥಳದಲ್ಲಿ ನಾಗರಿಕ ಪ್ರಾಧಿಕಾರ ಅಥವಾ ವಲಸೆ ಅಧಿಕಾರಿಗೆ ಅಂತಹ ವಿಮಾನ, ಹಡಗು ಅಥವಾ ಇತರ ಸಾರಿಗೆ ವಿಧಾನದಲ್ಲಿರುವ ಪ್ರಯಾಣಿಕರು ಮತ್ತು ಸಿಬ್ಬಂದಿಯ ಮುಂಗಡ ಮಾಹಿತಿಯನ್ನು ಸಲ್ಲಿಸಬೇಕಾಗುತ್ತದೆ.

“ಯಾರು ಭಾರತಕ್ಕೆ ಪ್ರವೇಶಿಸಲು ಅಥವಾ ಭಾರತದಲ್ಲಿ ಉಳಿಯಲು ಅಥವಾ ನಿರ್ಗಮಿಸಲು ನಕಲಿ ಅಥವಾ ವಂಚನೆಯಿಂದ ಪಡೆದ ಪಾಸ್‌ಪೋರ್ಟ್ ಅಥವಾ ಇತರ ಪ್ರಯಾಣ ದಾಖಲೆ ಅಥವಾ ವೀಸಾವನ್ನು ತಿಳಿದೂ ಬಳಸಿದರೆ ಅಥವಾ ಪೂರೈಸಿದರೆ. ಎರಡು ವರ್ಷಗಳಿಗಿಂತ ಕಡಿಮೆಯಿಲ್ಲದ; ಆದರೆ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಮತ್ತು ಒಂದು ಲಕ್ಷ ರೂಪಾಯಿಗಳಿಗಿಂತ ಕಡಿಮೆಯಿಲ್ಲದ, ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ದಂಡಕ್ಕೆ ಗುರಿಯಾಗುತ್ತಾರೆ” ಎಂದು ಕಾಯಿದೆ ಹೇಳುತ್ತದೆ.

ಕಾನೂನಿನ ನಿಬಂಧನೆಗಳು ಅಥವಾ ಅದರ ಅನುಸಾರವಾಗಿ ನೀಡಲಾದ ಯಾವುದೇ ನಿಯಮ ಅಥವಾ ಆದೇಶವನ್ನು ಉಲ್ಲಂಘಿಸಿ ಅಂತಹ ಪ್ರವೇಶಕ್ಕೆ ಅಗತ್ಯವಿರುವ ವೀಸಾ ಸೇರಿದಂತೆ, ಮಾನ್ಯ ಪಾಸ್‌ಪೋರ್ಟ್ ಅಥವಾ ಇತರ ಪ್ರಯಾಣ ದಾಖಲೆಯಿಲ್ಲದೆ ಭಾರತದ ಯಾವುದೇ ಪ್ರದೇಶಕ್ಕೆ ಪ್ರವೇಶಿಸುವ ಯಾವುದೇ ವಿದೇಶಿ, ಐದು ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಗೆ ಜೈಲು ಶಿಕ್ಷೆ ಅಥವಾ ಐದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ದಂಡ ಅಥವಾ ಎರಡನ್ನೂ ವಿಧಿಸಬಹುದು ಎಂದು ಕಾಯ್ದೆ ಹೇಳುತ್ತದೆ.

ಈ ಶಾಸನವು “ಯಾವುದೇ ವಿದೇಶಿಯರಿಂದ ಆಗಾಗ್ಗೆ ಭೇಟಿ ನೀಡಲ್ಪಡುವ” ಸ್ಥಳಗಳ ಮೇಲೆ ನಿಯಂತ್ರಣ ಸಾಧಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ಮಾಲೀಕರು ತಮ್ಮ ಆವರಣವನ್ನು ನಿರ್ಭಂದಿಸಲು, ನಿರ್ದಿಷ್ಟ ಷರತ್ತುಗಳ ಅಡಿಯಲ್ಲಿ ಅದರ ಬಳಕೆಯನ್ನು ಅನುಮತಿಸಲು ಅಥವಾ ಎಲ್ಲಾ ಅಥವಾ “ನಿರ್ದಿಷ್ಟ ವರ್ಗ” ವಿದೇಶಿಯರಿಗೆ ಪ್ರವೇಶವನ್ನು ನಿರಾಕರಿಸಲು ಒತ್ತಾಯಿಸುತ್ತದೆ.

ಈ ಕಾಯಿದೆಯು ವಿದೇಶಿಯರು ಮತ್ತು ವಲಸೆಗೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ನಿಯಂತ್ರಿಸಲು ಸಮಗ್ರ ಶಾಸನವಾಗಿದೆ.

ವಿದೇಶಿಯರು ಮತ್ತು ವಲಸೆಗೆ ಸಂಬಂಧಿಸಿದ ವಿಷಯಗಳನ್ನು ಇಲ್ಲಿಯವರೆಗೆ ನಾಲ್ಕು ಕಾಯಿದೆಗಳ ಮೂಲಕ ನಿರ್ವಹಿಸಲಾಗಿದೆ. ಅಂದರೆ ಪಾಸ್‌ಪೋರ್ಟ್ (ಭಾರತಕ್ಕೆ ಪ್ರವೇಶ) ಕಾಯ್ದೆ, 1920, ವಿದೇಶಿಯರ ನೋಂದಣಿ ಕಾಯ್ದೆ, 1939, ವಿದೇಶಿಯರ ಕಾಯ್ದೆ, 1946 ಮತ್ತು ವಲಸೆ (ವಾಹಕಗಳ ಹೊಣೆಗಾರಿಕೆ) ಕಾಯ್ದೆಗಳು ಸೇರಿವೆ. ಈ ಎಲ್ಲ ಕಾನೂನುಗಳನ್ನು ಈಗ ರದ್ದುಗೊಳಿಸಲಾಗಿದೆ.

2ನೇ ರ‍್ಯಾಂಕ್ ಪಡೆದಿದ್ದರೂ ಪಿಎಚ್‌ಡಿ ಪ್ರವೇಶ ನಿರಾಕರಣೆ: 14ನೇ ದಿನಕ್ಕೆ ಕಾಲಿಟ್ಟ ದಲಿತ ವಿದ್ಯಾರ್ಥಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...