Homeಮುಖಪುಟ'ವಲಸೆ ಮತ್ತು ವಿದೇಶಿಯರ ಮಸೂದೆ-2025' ಅನುಮೋದಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

‘ವಲಸೆ ಮತ್ತು ವಿದೇಶಿಯರ ಮಸೂದೆ-2025’ ಅನುಮೋದಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

- Advertisement -
- Advertisement -

ವಿದೇಶಿಯರು ಮತ್ತು ವಲಸೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿರ್ವಹಿಸುವ ‘ವಲಸೆ ಮತ್ತು ವಿದೇಶಿಯರ ಮಸೂದೆ, 2025’ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಕ್ರವಾರ ಒಪ್ಪಿಗೆ ನೀಡಿದ್ದು, ಅದು ಈಗ ಕಾನೂನಾಗುತ್ತಿದೆ.

ಈ ಶಾಸನವು ಏಪ್ರಿಲ್ 4, 2025 ರಂದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಿತು; ನಂತರ ಅದನ್ನು ಗೆಜೆಟ್ ಅಧಿಸೂಚನೆಯ ಮೂಲಕ ತಿಳಿಸಲಾಯಿತು.

ಕಾನೂನಿನ ಪ್ರಕಾರ, ಇನ್ನು ಮುಂದೆ ಯಾರಾದರೂ ಭಾರತಕ್ಕೆ ಪ್ರವೇಶಿಸಲು ಅಥವಾ ದೇಶದಲ್ಲಿ ಉಳಿಯಲು ಅಥವಾ ನಿರ್ಗಮಿಸಲು ನಕಲಿ ಪಾಸ್‌ಪೋರ್ಟ್ ಅಥವಾ ವೀಸಾವನ್ನು ಬಳಸುತ್ತಿರುವುದು ಕಂಡುಬಂದರೆ, ಅವರಿಗೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲಾಗುತ್ತದೆ.

ವಿದೇಶಿಯರು ಹೆಚ್ಚು ಕಾಲ ನೆಲೆಸಿರುವವರನ್ನು ಪತ್ತೆಹಚ್ಚಲು ಹೋಟೆಲ್‌ಗಳು, ವಿಶ್ವವಿದ್ಯಾಲಯಗಳು, ಇತರ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ವಿದೇಶಿಯರ ಬಗ್ಗೆ ಮಾಹಿತಿಯನ್ನು ಕಡ್ಡಾಯವಾಗಿ ವರದಿ ಮಾಡಲು ಶಾಸನವು ಅವಕಾಶ ನೀಡುತ್ತದೆ.

ಎಲ್ಲ ಅಂತರರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳು ಮತ್ತು ಹಡಗುಗಳು ಭಾರತದ ಬಂದರು ಅಥವಾ ಸ್ಥಳದಲ್ಲಿ ನಾಗರಿಕ ಪ್ರಾಧಿಕಾರ ಅಥವಾ ವಲಸೆ ಅಧಿಕಾರಿಗೆ ಅಂತಹ ವಿಮಾನ, ಹಡಗು ಅಥವಾ ಇತರ ಸಾರಿಗೆ ವಿಧಾನದಲ್ಲಿರುವ ಪ್ರಯಾಣಿಕರು ಮತ್ತು ಸಿಬ್ಬಂದಿಯ ಮುಂಗಡ ಮಾಹಿತಿಯನ್ನು ಸಲ್ಲಿಸಬೇಕಾಗುತ್ತದೆ.

“ಯಾರು ಭಾರತಕ್ಕೆ ಪ್ರವೇಶಿಸಲು ಅಥವಾ ಭಾರತದಲ್ಲಿ ಉಳಿಯಲು ಅಥವಾ ನಿರ್ಗಮಿಸಲು ನಕಲಿ ಅಥವಾ ವಂಚನೆಯಿಂದ ಪಡೆದ ಪಾಸ್‌ಪೋರ್ಟ್ ಅಥವಾ ಇತರ ಪ್ರಯಾಣ ದಾಖಲೆ ಅಥವಾ ವೀಸಾವನ್ನು ತಿಳಿದೂ ಬಳಸಿದರೆ ಅಥವಾ ಪೂರೈಸಿದರೆ. ಎರಡು ವರ್ಷಗಳಿಗಿಂತ ಕಡಿಮೆಯಿಲ್ಲದ; ಆದರೆ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಮತ್ತು ಒಂದು ಲಕ್ಷ ರೂಪಾಯಿಗಳಿಗಿಂತ ಕಡಿಮೆಯಿಲ್ಲದ, ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ದಂಡಕ್ಕೆ ಗುರಿಯಾಗುತ್ತಾರೆ” ಎಂದು ಕಾಯಿದೆ ಹೇಳುತ್ತದೆ.

ಕಾನೂನಿನ ನಿಬಂಧನೆಗಳು ಅಥವಾ ಅದರ ಅನುಸಾರವಾಗಿ ನೀಡಲಾದ ಯಾವುದೇ ನಿಯಮ ಅಥವಾ ಆದೇಶವನ್ನು ಉಲ್ಲಂಘಿಸಿ ಅಂತಹ ಪ್ರವೇಶಕ್ಕೆ ಅಗತ್ಯವಿರುವ ವೀಸಾ ಸೇರಿದಂತೆ, ಮಾನ್ಯ ಪಾಸ್‌ಪೋರ್ಟ್ ಅಥವಾ ಇತರ ಪ್ರಯಾಣ ದಾಖಲೆಯಿಲ್ಲದೆ ಭಾರತದ ಯಾವುದೇ ಪ್ರದೇಶಕ್ಕೆ ಪ್ರವೇಶಿಸುವ ಯಾವುದೇ ವಿದೇಶಿ, ಐದು ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಗೆ ಜೈಲು ಶಿಕ್ಷೆ ಅಥವಾ ಐದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ದಂಡ ಅಥವಾ ಎರಡನ್ನೂ ವಿಧಿಸಬಹುದು ಎಂದು ಕಾಯ್ದೆ ಹೇಳುತ್ತದೆ.

ಈ ಶಾಸನವು “ಯಾವುದೇ ವಿದೇಶಿಯರಿಂದ ಆಗಾಗ್ಗೆ ಭೇಟಿ ನೀಡಲ್ಪಡುವ” ಸ್ಥಳಗಳ ಮೇಲೆ ನಿಯಂತ್ರಣ ಸಾಧಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ಮಾಲೀಕರು ತಮ್ಮ ಆವರಣವನ್ನು ನಿರ್ಭಂದಿಸಲು, ನಿರ್ದಿಷ್ಟ ಷರತ್ತುಗಳ ಅಡಿಯಲ್ಲಿ ಅದರ ಬಳಕೆಯನ್ನು ಅನುಮತಿಸಲು ಅಥವಾ ಎಲ್ಲಾ ಅಥವಾ “ನಿರ್ದಿಷ್ಟ ವರ್ಗ” ವಿದೇಶಿಯರಿಗೆ ಪ್ರವೇಶವನ್ನು ನಿರಾಕರಿಸಲು ಒತ್ತಾಯಿಸುತ್ತದೆ.

ಈ ಕಾಯಿದೆಯು ವಿದೇಶಿಯರು ಮತ್ತು ವಲಸೆಗೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ನಿಯಂತ್ರಿಸಲು ಸಮಗ್ರ ಶಾಸನವಾಗಿದೆ.

ವಿದೇಶಿಯರು ಮತ್ತು ವಲಸೆಗೆ ಸಂಬಂಧಿಸಿದ ವಿಷಯಗಳನ್ನು ಇಲ್ಲಿಯವರೆಗೆ ನಾಲ್ಕು ಕಾಯಿದೆಗಳ ಮೂಲಕ ನಿರ್ವಹಿಸಲಾಗಿದೆ. ಅಂದರೆ ಪಾಸ್‌ಪೋರ್ಟ್ (ಭಾರತಕ್ಕೆ ಪ್ರವೇಶ) ಕಾಯ್ದೆ, 1920, ವಿದೇಶಿಯರ ನೋಂದಣಿ ಕಾಯ್ದೆ, 1939, ವಿದೇಶಿಯರ ಕಾಯ್ದೆ, 1946 ಮತ್ತು ವಲಸೆ (ವಾಹಕಗಳ ಹೊಣೆಗಾರಿಕೆ) ಕಾಯ್ದೆಗಳು ಸೇರಿವೆ. ಈ ಎಲ್ಲ ಕಾನೂನುಗಳನ್ನು ಈಗ ರದ್ದುಗೊಳಿಸಲಾಗಿದೆ.

2ನೇ ರ‍್ಯಾಂಕ್ ಪಡೆದಿದ್ದರೂ ಪಿಎಚ್‌ಡಿ ಪ್ರವೇಶ ನಿರಾಕರಣೆ: 14ನೇ ದಿನಕ್ಕೆ ಕಾಲಿಟ್ಟ ದಲಿತ ವಿದ್ಯಾರ್ಥಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...