Homeಮುಖಪುಟ'ವಲಸೆ ಮತ್ತು ವಿದೇಶಿಯರ ಮಸೂದೆ-2025' ಅನುಮೋದಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

‘ವಲಸೆ ಮತ್ತು ವಿದೇಶಿಯರ ಮಸೂದೆ-2025’ ಅನುಮೋದಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

- Advertisement -
- Advertisement -

ವಿದೇಶಿಯರು ಮತ್ತು ವಲಸೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿರ್ವಹಿಸುವ ‘ವಲಸೆ ಮತ್ತು ವಿದೇಶಿಯರ ಮಸೂದೆ, 2025’ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಕ್ರವಾರ ಒಪ್ಪಿಗೆ ನೀಡಿದ್ದು, ಅದು ಈಗ ಕಾನೂನಾಗುತ್ತಿದೆ.

ಈ ಶಾಸನವು ಏಪ್ರಿಲ್ 4, 2025 ರಂದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಿತು; ನಂತರ ಅದನ್ನು ಗೆಜೆಟ್ ಅಧಿಸೂಚನೆಯ ಮೂಲಕ ತಿಳಿಸಲಾಯಿತು.

ಕಾನೂನಿನ ಪ್ರಕಾರ, ಇನ್ನು ಮುಂದೆ ಯಾರಾದರೂ ಭಾರತಕ್ಕೆ ಪ್ರವೇಶಿಸಲು ಅಥವಾ ದೇಶದಲ್ಲಿ ಉಳಿಯಲು ಅಥವಾ ನಿರ್ಗಮಿಸಲು ನಕಲಿ ಪಾಸ್‌ಪೋರ್ಟ್ ಅಥವಾ ವೀಸಾವನ್ನು ಬಳಸುತ್ತಿರುವುದು ಕಂಡುಬಂದರೆ, ಅವರಿಗೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲಾಗುತ್ತದೆ.

ವಿದೇಶಿಯರು ಹೆಚ್ಚು ಕಾಲ ನೆಲೆಸಿರುವವರನ್ನು ಪತ್ತೆಹಚ್ಚಲು ಹೋಟೆಲ್‌ಗಳು, ವಿಶ್ವವಿದ್ಯಾಲಯಗಳು, ಇತರ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ವಿದೇಶಿಯರ ಬಗ್ಗೆ ಮಾಹಿತಿಯನ್ನು ಕಡ್ಡಾಯವಾಗಿ ವರದಿ ಮಾಡಲು ಶಾಸನವು ಅವಕಾಶ ನೀಡುತ್ತದೆ.

ಎಲ್ಲ ಅಂತರರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳು ಮತ್ತು ಹಡಗುಗಳು ಭಾರತದ ಬಂದರು ಅಥವಾ ಸ್ಥಳದಲ್ಲಿ ನಾಗರಿಕ ಪ್ರಾಧಿಕಾರ ಅಥವಾ ವಲಸೆ ಅಧಿಕಾರಿಗೆ ಅಂತಹ ವಿಮಾನ, ಹಡಗು ಅಥವಾ ಇತರ ಸಾರಿಗೆ ವಿಧಾನದಲ್ಲಿರುವ ಪ್ರಯಾಣಿಕರು ಮತ್ತು ಸಿಬ್ಬಂದಿಯ ಮುಂಗಡ ಮಾಹಿತಿಯನ್ನು ಸಲ್ಲಿಸಬೇಕಾಗುತ್ತದೆ.

“ಯಾರು ಭಾರತಕ್ಕೆ ಪ್ರವೇಶಿಸಲು ಅಥವಾ ಭಾರತದಲ್ಲಿ ಉಳಿಯಲು ಅಥವಾ ನಿರ್ಗಮಿಸಲು ನಕಲಿ ಅಥವಾ ವಂಚನೆಯಿಂದ ಪಡೆದ ಪಾಸ್‌ಪೋರ್ಟ್ ಅಥವಾ ಇತರ ಪ್ರಯಾಣ ದಾಖಲೆ ಅಥವಾ ವೀಸಾವನ್ನು ತಿಳಿದೂ ಬಳಸಿದರೆ ಅಥವಾ ಪೂರೈಸಿದರೆ. ಎರಡು ವರ್ಷಗಳಿಗಿಂತ ಕಡಿಮೆಯಿಲ್ಲದ; ಆದರೆ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಮತ್ತು ಒಂದು ಲಕ್ಷ ರೂಪಾಯಿಗಳಿಗಿಂತ ಕಡಿಮೆಯಿಲ್ಲದ, ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ದಂಡಕ್ಕೆ ಗುರಿಯಾಗುತ್ತಾರೆ” ಎಂದು ಕಾಯಿದೆ ಹೇಳುತ್ತದೆ.

ಕಾನೂನಿನ ನಿಬಂಧನೆಗಳು ಅಥವಾ ಅದರ ಅನುಸಾರವಾಗಿ ನೀಡಲಾದ ಯಾವುದೇ ನಿಯಮ ಅಥವಾ ಆದೇಶವನ್ನು ಉಲ್ಲಂಘಿಸಿ ಅಂತಹ ಪ್ರವೇಶಕ್ಕೆ ಅಗತ್ಯವಿರುವ ವೀಸಾ ಸೇರಿದಂತೆ, ಮಾನ್ಯ ಪಾಸ್‌ಪೋರ್ಟ್ ಅಥವಾ ಇತರ ಪ್ರಯಾಣ ದಾಖಲೆಯಿಲ್ಲದೆ ಭಾರತದ ಯಾವುದೇ ಪ್ರದೇಶಕ್ಕೆ ಪ್ರವೇಶಿಸುವ ಯಾವುದೇ ವಿದೇಶಿ, ಐದು ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಗೆ ಜೈಲು ಶಿಕ್ಷೆ ಅಥವಾ ಐದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ದಂಡ ಅಥವಾ ಎರಡನ್ನೂ ವಿಧಿಸಬಹುದು ಎಂದು ಕಾಯ್ದೆ ಹೇಳುತ್ತದೆ.

ಈ ಶಾಸನವು “ಯಾವುದೇ ವಿದೇಶಿಯರಿಂದ ಆಗಾಗ್ಗೆ ಭೇಟಿ ನೀಡಲ್ಪಡುವ” ಸ್ಥಳಗಳ ಮೇಲೆ ನಿಯಂತ್ರಣ ಸಾಧಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ಮಾಲೀಕರು ತಮ್ಮ ಆವರಣವನ್ನು ನಿರ್ಭಂದಿಸಲು, ನಿರ್ದಿಷ್ಟ ಷರತ್ತುಗಳ ಅಡಿಯಲ್ಲಿ ಅದರ ಬಳಕೆಯನ್ನು ಅನುಮತಿಸಲು ಅಥವಾ ಎಲ್ಲಾ ಅಥವಾ “ನಿರ್ದಿಷ್ಟ ವರ್ಗ” ವಿದೇಶಿಯರಿಗೆ ಪ್ರವೇಶವನ್ನು ನಿರಾಕರಿಸಲು ಒತ್ತಾಯಿಸುತ್ತದೆ.

ಈ ಕಾಯಿದೆಯು ವಿದೇಶಿಯರು ಮತ್ತು ವಲಸೆಗೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ನಿಯಂತ್ರಿಸಲು ಸಮಗ್ರ ಶಾಸನವಾಗಿದೆ.

ವಿದೇಶಿಯರು ಮತ್ತು ವಲಸೆಗೆ ಸಂಬಂಧಿಸಿದ ವಿಷಯಗಳನ್ನು ಇಲ್ಲಿಯವರೆಗೆ ನಾಲ್ಕು ಕಾಯಿದೆಗಳ ಮೂಲಕ ನಿರ್ವಹಿಸಲಾಗಿದೆ. ಅಂದರೆ ಪಾಸ್‌ಪೋರ್ಟ್ (ಭಾರತಕ್ಕೆ ಪ್ರವೇಶ) ಕಾಯ್ದೆ, 1920, ವಿದೇಶಿಯರ ನೋಂದಣಿ ಕಾಯ್ದೆ, 1939, ವಿದೇಶಿಯರ ಕಾಯ್ದೆ, 1946 ಮತ್ತು ವಲಸೆ (ವಾಹಕಗಳ ಹೊಣೆಗಾರಿಕೆ) ಕಾಯ್ದೆಗಳು ಸೇರಿವೆ. ಈ ಎಲ್ಲ ಕಾನೂನುಗಳನ್ನು ಈಗ ರದ್ದುಗೊಳಿಸಲಾಗಿದೆ.

2ನೇ ರ‍್ಯಾಂಕ್ ಪಡೆದಿದ್ದರೂ ಪಿಎಚ್‌ಡಿ ಪ್ರವೇಶ ನಿರಾಕರಣೆ: 14ನೇ ದಿನಕ್ಕೆ ಕಾಲಿಟ್ಟ ದಲಿತ ವಿದ್ಯಾರ್ಥಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...