Homeಮುಖಪುಟ'ವಲಸೆ ಮತ್ತು ವಿದೇಶಿಯರ ಮಸೂದೆ-2025' ಅನುಮೋದಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

‘ವಲಸೆ ಮತ್ತು ವಿದೇಶಿಯರ ಮಸೂದೆ-2025’ ಅನುಮೋದಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

- Advertisement -
- Advertisement -

ವಿದೇಶಿಯರು ಮತ್ತು ವಲಸೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿರ್ವಹಿಸುವ ‘ವಲಸೆ ಮತ್ತು ವಿದೇಶಿಯರ ಮಸೂದೆ, 2025’ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಕ್ರವಾರ ಒಪ್ಪಿಗೆ ನೀಡಿದ್ದು, ಅದು ಈಗ ಕಾನೂನಾಗುತ್ತಿದೆ.

ಈ ಶಾಸನವು ಏಪ್ರಿಲ್ 4, 2025 ರಂದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಿತು; ನಂತರ ಅದನ್ನು ಗೆಜೆಟ್ ಅಧಿಸೂಚನೆಯ ಮೂಲಕ ತಿಳಿಸಲಾಯಿತು.

ಕಾನೂನಿನ ಪ್ರಕಾರ, ಇನ್ನು ಮುಂದೆ ಯಾರಾದರೂ ಭಾರತಕ್ಕೆ ಪ್ರವೇಶಿಸಲು ಅಥವಾ ದೇಶದಲ್ಲಿ ಉಳಿಯಲು ಅಥವಾ ನಿರ್ಗಮಿಸಲು ನಕಲಿ ಪಾಸ್‌ಪೋರ್ಟ್ ಅಥವಾ ವೀಸಾವನ್ನು ಬಳಸುತ್ತಿರುವುದು ಕಂಡುಬಂದರೆ, ಅವರಿಗೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲಾಗುತ್ತದೆ.

ವಿದೇಶಿಯರು ಹೆಚ್ಚು ಕಾಲ ನೆಲೆಸಿರುವವರನ್ನು ಪತ್ತೆಹಚ್ಚಲು ಹೋಟೆಲ್‌ಗಳು, ವಿಶ್ವವಿದ್ಯಾಲಯಗಳು, ಇತರ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ವಿದೇಶಿಯರ ಬಗ್ಗೆ ಮಾಹಿತಿಯನ್ನು ಕಡ್ಡಾಯವಾಗಿ ವರದಿ ಮಾಡಲು ಶಾಸನವು ಅವಕಾಶ ನೀಡುತ್ತದೆ.

ಎಲ್ಲ ಅಂತರರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳು ಮತ್ತು ಹಡಗುಗಳು ಭಾರತದ ಬಂದರು ಅಥವಾ ಸ್ಥಳದಲ್ಲಿ ನಾಗರಿಕ ಪ್ರಾಧಿಕಾರ ಅಥವಾ ವಲಸೆ ಅಧಿಕಾರಿಗೆ ಅಂತಹ ವಿಮಾನ, ಹಡಗು ಅಥವಾ ಇತರ ಸಾರಿಗೆ ವಿಧಾನದಲ್ಲಿರುವ ಪ್ರಯಾಣಿಕರು ಮತ್ತು ಸಿಬ್ಬಂದಿಯ ಮುಂಗಡ ಮಾಹಿತಿಯನ್ನು ಸಲ್ಲಿಸಬೇಕಾಗುತ್ತದೆ.

“ಯಾರು ಭಾರತಕ್ಕೆ ಪ್ರವೇಶಿಸಲು ಅಥವಾ ಭಾರತದಲ್ಲಿ ಉಳಿಯಲು ಅಥವಾ ನಿರ್ಗಮಿಸಲು ನಕಲಿ ಅಥವಾ ವಂಚನೆಯಿಂದ ಪಡೆದ ಪಾಸ್‌ಪೋರ್ಟ್ ಅಥವಾ ಇತರ ಪ್ರಯಾಣ ದಾಖಲೆ ಅಥವಾ ವೀಸಾವನ್ನು ತಿಳಿದೂ ಬಳಸಿದರೆ ಅಥವಾ ಪೂರೈಸಿದರೆ. ಎರಡು ವರ್ಷಗಳಿಗಿಂತ ಕಡಿಮೆಯಿಲ್ಲದ; ಆದರೆ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಮತ್ತು ಒಂದು ಲಕ್ಷ ರೂಪಾಯಿಗಳಿಗಿಂತ ಕಡಿಮೆಯಿಲ್ಲದ, ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ದಂಡಕ್ಕೆ ಗುರಿಯಾಗುತ್ತಾರೆ” ಎಂದು ಕಾಯಿದೆ ಹೇಳುತ್ತದೆ.

ಕಾನೂನಿನ ನಿಬಂಧನೆಗಳು ಅಥವಾ ಅದರ ಅನುಸಾರವಾಗಿ ನೀಡಲಾದ ಯಾವುದೇ ನಿಯಮ ಅಥವಾ ಆದೇಶವನ್ನು ಉಲ್ಲಂಘಿಸಿ ಅಂತಹ ಪ್ರವೇಶಕ್ಕೆ ಅಗತ್ಯವಿರುವ ವೀಸಾ ಸೇರಿದಂತೆ, ಮಾನ್ಯ ಪಾಸ್‌ಪೋರ್ಟ್ ಅಥವಾ ಇತರ ಪ್ರಯಾಣ ದಾಖಲೆಯಿಲ್ಲದೆ ಭಾರತದ ಯಾವುದೇ ಪ್ರದೇಶಕ್ಕೆ ಪ್ರವೇಶಿಸುವ ಯಾವುದೇ ವಿದೇಶಿ, ಐದು ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಗೆ ಜೈಲು ಶಿಕ್ಷೆ ಅಥವಾ ಐದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ದಂಡ ಅಥವಾ ಎರಡನ್ನೂ ವಿಧಿಸಬಹುದು ಎಂದು ಕಾಯ್ದೆ ಹೇಳುತ್ತದೆ.

ಈ ಶಾಸನವು “ಯಾವುದೇ ವಿದೇಶಿಯರಿಂದ ಆಗಾಗ್ಗೆ ಭೇಟಿ ನೀಡಲ್ಪಡುವ” ಸ್ಥಳಗಳ ಮೇಲೆ ನಿಯಂತ್ರಣ ಸಾಧಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ಮಾಲೀಕರು ತಮ್ಮ ಆವರಣವನ್ನು ನಿರ್ಭಂದಿಸಲು, ನಿರ್ದಿಷ್ಟ ಷರತ್ತುಗಳ ಅಡಿಯಲ್ಲಿ ಅದರ ಬಳಕೆಯನ್ನು ಅನುಮತಿಸಲು ಅಥವಾ ಎಲ್ಲಾ ಅಥವಾ “ನಿರ್ದಿಷ್ಟ ವರ್ಗ” ವಿದೇಶಿಯರಿಗೆ ಪ್ರವೇಶವನ್ನು ನಿರಾಕರಿಸಲು ಒತ್ತಾಯಿಸುತ್ತದೆ.

ಈ ಕಾಯಿದೆಯು ವಿದೇಶಿಯರು ಮತ್ತು ವಲಸೆಗೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ನಿಯಂತ್ರಿಸಲು ಸಮಗ್ರ ಶಾಸನವಾಗಿದೆ.

ವಿದೇಶಿಯರು ಮತ್ತು ವಲಸೆಗೆ ಸಂಬಂಧಿಸಿದ ವಿಷಯಗಳನ್ನು ಇಲ್ಲಿಯವರೆಗೆ ನಾಲ್ಕು ಕಾಯಿದೆಗಳ ಮೂಲಕ ನಿರ್ವಹಿಸಲಾಗಿದೆ. ಅಂದರೆ ಪಾಸ್‌ಪೋರ್ಟ್ (ಭಾರತಕ್ಕೆ ಪ್ರವೇಶ) ಕಾಯ್ದೆ, 1920, ವಿದೇಶಿಯರ ನೋಂದಣಿ ಕಾಯ್ದೆ, 1939, ವಿದೇಶಿಯರ ಕಾಯ್ದೆ, 1946 ಮತ್ತು ವಲಸೆ (ವಾಹಕಗಳ ಹೊಣೆಗಾರಿಕೆ) ಕಾಯ್ದೆಗಳು ಸೇರಿವೆ. ಈ ಎಲ್ಲ ಕಾನೂನುಗಳನ್ನು ಈಗ ರದ್ದುಗೊಳಿಸಲಾಗಿದೆ.

2ನೇ ರ‍್ಯಾಂಕ್ ಪಡೆದಿದ್ದರೂ ಪಿಎಚ್‌ಡಿ ಪ್ರವೇಶ ನಿರಾಕರಣೆ: 14ನೇ ದಿನಕ್ಕೆ ಕಾಲಿಟ್ಟ ದಲಿತ ವಿದ್ಯಾರ್ಥಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...