Homeಮುಖಪುಟಕ್ರಿಮಿನಲ್ ಕಾನೂನುಗಳನ್ನು ಬದಲಿಸುವ 3 ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ 3 ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

- Advertisement -
- Advertisement -

ಲೋಕಸಭೆ ಮತ್ತು ರಾಜ್ಯಸಭೆ ಸೇರಿ ಉಭಯ ಸದನದಲ್ಲಿ ಅಂಗೀಕಾರವಾದ ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ 3 ಮಸೂದೆಗೆ ರಾಷ್ಟ್ರಪತಿಗಳು ಅಂತಿಮ ಮುದ್ರೆಯನ್ನು ಹಾಕಿದ್ದು, ಅದು ಕಾನೂನಾಗಿ ಮಾರ್ಪಟ್ಟಿವೆ. ಇದಿರಿಂದ ಭಾರತದಲ್ಲಿ ಹೊಸ ಕ್ರಿಮಿನಲ್‌ ಕಾನೂನುಗಳು ಜಾರಿಗೆ ಬರಲಿವೆ.

ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ ಮತ್ತು ಭಾರತೀಯ ಸಾಕ್ಷಿ (ಎರಡನೇ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತವನ್ನು ಹಾಕಿದ್ದಾರೆ.

ಈ ಮಸೂದೆಗಳು ಉಭಯ ಸದನಗಳಿಂದ ಸಂಸತ್ತಿನ ಭದ್ರತಾ ಲೋಪದ ಕುರಿತು ಗೃಹ ಸಚಿವರ ಹೇಳಿಕೆಗೆ ಪಟ್ಟು ಹಿಡದ ಬಳಿಕ ಪ್ರತಿಪಕ್ಷದ ಬಹುಪಾಲು ಸಂಸದರ ಅಮಾನತಿನ ಬೆನ್ನಲ್ಲೆ ಡಿ.20ರಂದು ಲೋಕಸಭೆ ಮತ್ತು ಡಿ.21ರಂದು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದವು. ಮಸೂದೆ ಕುರಿತು ಸರಿಯಾದ ಚರ್ಚೆ ಮತ್ತು ಪ್ರತಿಪಕ್ಷಗಳ ಸಲಹೆಯನ್ನು ಪಡೆಯದೆ ಏಕಪಕ್ಷೀಯವಾಗಿ ಅಂಗೀಕಾರ ಮಾಡಲಾಗಿತ್ತು ಎಂದು ಆರೋಪಿಸಲಾಗಿತ್ತು.

ಕಳೆದ ವಾರ ಲೋಕಸಭೆಯಲ್ಲಿ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡಿಸಿದ್ದರು. ಈ ಮಸೂದೆಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ-1860, ಕ್ರಿಮಿನಲ್ ಪ್ರೊಸೀಜರ್ ಆಕ್ಟ್-1898 ಮತ್ತು 1872ರ ಭಾರತೀಯ ಸಾಕ್ಷ್ಯ ಕಾಯಿದೆಗೆ ಬದಲಾವಣೆಗಳನ್ನು ಸೂಚಿಸುತ್ತದೆ.

ಇದು ಪೊಲೀಸ್ ಬಲವನ್ನು ಮಿತಿಮೀರಿದ ಬಳಕೆಗೆ ಕಾರಣವಾಗಬಹುದು ಮತ್ತು ಮಾನವ ಹಕ್ಕುಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂಬ ಕಳವಳದ ನಡುವೆ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಸೂದೆಗಳ ಬಗ್ಗೆ ಚರ್ಚಿಸುವಾಗ, ಪ್ರಸ್ತಾವಿತ ಕಾನೂನುಗಳನ್ನು ಸಮಗ್ರ ಸಮಾಲೋಚನೆಯ ನಂತರ ರಚಿಸಲಾಗಿದೆ ಮತ್ತು ಸದನದ ಅನುಮೋದನೆಗೆ ತರುವ ಮೊದಲು ಕರಡು ಶಾಸನಗಳ ಕೂಲಂಕುಷವಾಗಿ ಪರಿಶೀಲಿಸಲಾಗಿದೆ ಎಂದು ಹೇಳಿದರು. ಅಸ್ತಿತ್ವದಲ್ಲಿರುವ ಕ್ರಿಮಿನಲ್ ಕಾನೂನುಗಳು ವಸಾಹತುಶಾಹಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ ಮತ್ತು ಶಿಕ್ಷಿಸುವ ಉದ್ದೇಶವನ್ನು ಹೊಂದಿದೆ ನ್ಯಾಯವನ್ನು ನೀಡುವ ಉದ್ದೇಶ ಹೊಂದಿರಲಿಲ್ಲ ಎಂದು ಹೇಳಿದ್ದರು.

ಭಾರತೀಯ ನ್ಯಾಯ (ಎರಡನೇ) ಸಂಹಿತಾ ಪ್ರಸ್ತುತ 358 ವಿಭಾಗಗಳನ್ನು ಹೊಂದಿದೆ. ಭಾರತೀಯ ನಾಗರಿಕಾ ಸುರಕ್ಷಾ (ಎರಡನೇ) ಸಂಹಿತಾ 531 ವಿಭಾಗಗಳನ್ನು ಹೊಂದಿದೆ ಮತ್ತು ಭಾರತೀಯ ಸಾಕ್ಷಿ (ಎರಡನೇ) ಸಂಹಿತಾ 170 ವಿಭಾಗಗಳನ್ನು ಹೊಂದಿದೆ. ಮಸೂದೆಗಳನ್ನು ಮೊದಲು ಆ.11ರಂದು ಸಂಸತ್ತಿನಲ್ಲಿ ಪರಿಚಯಿಸಲಾಯಿತು. ನಂತರ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಈ ಬಗ್ಗೆ ಹೆಚ್ಚಿನ ಶಿಫಾರಸುಗಳನ್ನು ಮಾಡಿದ ನಂತರ ಸರ್ಕಾರವು ಮಸೂದೆಯನ್ನು ಹಿಂಪಡೆದಿತ್ತು.

ಭಾರತೀಯ ನ್ಯಾಯ ಸಂಹಿತಾ (BNS2) ಅಡಿಯಲ್ಲಿ ದೇಶದ್ರೋಹವನ್ನು ‘ರಾಜ್ಯದ್ರೋಹದ’ (ಸರ್ಕಾರದ ವಿರುದ್ಧ) ಬದಲಾಗಿ ‘ದೇಶದ್ರೋಹ’ (ರಾಷ್ಟ್ರದ ವಿರುದ್ಧ) ಎಂದು ಬದಲಾಯಿಸಲಾಗಿದೆ. ಇದಲ್ಲದೆ, ‘ಸಂಘಟಿತ ಅಪರಾಧ’ವನ್ನು ಅಪರಾಧ ಎಂದು ಸೇರಿಸಲಾಗಿದೆ. ಐದು ಅಥವಾ ಹೆಚ್ಚು ಜನರ ಗುಂಪು ಒಬ್ಬ ವ್ಯಕ್ತಿಯ ಜನಾಂಗ, ಜಾತಿ, ಲಿಂಗ, ಭಾಷೆ ಅಥವಾ ವೈಯಕ್ತಿಕ ನಂಬಿಕೆಯ ಆಧಾರಗಳ ಮೇಲೆ ಕೊಲೆ ಅಥವಾ ಗಂಭೀರ ಗಾಯ ಮಾಡಿದರೆ ಅದು ಗುಂಪು ಹತ್ಯೆಯಾಗಲಿದೆ. ಇಂತಹ ಅಪರಾಧಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಲು ನೂತನ ಕಾನೂನಿನಲ್ಲಿ ಅವಕಾಶವಿದೆ.

ಇದನ್ನು ಓದಿ: ಪೂಂಛ್‌ ನಾಗರಿಕರ ಹತ್ಯೆ ಪ್ರಕರಣ: ಸಂತ್ರಸ್ತ ಕುಟುಂಬದ ಭೇಟಿಗೆ ಮುಂದಾದ ಮೆಹಬೂಬಾ ಮುಫ್ತಿಗೆ ಗೃಹಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...