Homeಮುಖಪುಟಕ್ರಿಮಿನಲ್ ಕಾನೂನುಗಳನ್ನು ಬದಲಿಸುವ 3 ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ 3 ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

- Advertisement -
- Advertisement -

ಲೋಕಸಭೆ ಮತ್ತು ರಾಜ್ಯಸಭೆ ಸೇರಿ ಉಭಯ ಸದನದಲ್ಲಿ ಅಂಗೀಕಾರವಾದ ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ 3 ಮಸೂದೆಗೆ ರಾಷ್ಟ್ರಪತಿಗಳು ಅಂತಿಮ ಮುದ್ರೆಯನ್ನು ಹಾಕಿದ್ದು, ಅದು ಕಾನೂನಾಗಿ ಮಾರ್ಪಟ್ಟಿವೆ. ಇದಿರಿಂದ ಭಾರತದಲ್ಲಿ ಹೊಸ ಕ್ರಿಮಿನಲ್‌ ಕಾನೂನುಗಳು ಜಾರಿಗೆ ಬರಲಿವೆ.

ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ ಮತ್ತು ಭಾರತೀಯ ಸಾಕ್ಷಿ (ಎರಡನೇ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತವನ್ನು ಹಾಕಿದ್ದಾರೆ.

ಈ ಮಸೂದೆಗಳು ಉಭಯ ಸದನಗಳಿಂದ ಸಂಸತ್ತಿನ ಭದ್ರತಾ ಲೋಪದ ಕುರಿತು ಗೃಹ ಸಚಿವರ ಹೇಳಿಕೆಗೆ ಪಟ್ಟು ಹಿಡದ ಬಳಿಕ ಪ್ರತಿಪಕ್ಷದ ಬಹುಪಾಲು ಸಂಸದರ ಅಮಾನತಿನ ಬೆನ್ನಲ್ಲೆ ಡಿ.20ರಂದು ಲೋಕಸಭೆ ಮತ್ತು ಡಿ.21ರಂದು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದವು. ಮಸೂದೆ ಕುರಿತು ಸರಿಯಾದ ಚರ್ಚೆ ಮತ್ತು ಪ್ರತಿಪಕ್ಷಗಳ ಸಲಹೆಯನ್ನು ಪಡೆಯದೆ ಏಕಪಕ್ಷೀಯವಾಗಿ ಅಂಗೀಕಾರ ಮಾಡಲಾಗಿತ್ತು ಎಂದು ಆರೋಪಿಸಲಾಗಿತ್ತು.

ಕಳೆದ ವಾರ ಲೋಕಸಭೆಯಲ್ಲಿ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡಿಸಿದ್ದರು. ಈ ಮಸೂದೆಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ-1860, ಕ್ರಿಮಿನಲ್ ಪ್ರೊಸೀಜರ್ ಆಕ್ಟ್-1898 ಮತ್ತು 1872ರ ಭಾರತೀಯ ಸಾಕ್ಷ್ಯ ಕಾಯಿದೆಗೆ ಬದಲಾವಣೆಗಳನ್ನು ಸೂಚಿಸುತ್ತದೆ.

ಇದು ಪೊಲೀಸ್ ಬಲವನ್ನು ಮಿತಿಮೀರಿದ ಬಳಕೆಗೆ ಕಾರಣವಾಗಬಹುದು ಮತ್ತು ಮಾನವ ಹಕ್ಕುಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂಬ ಕಳವಳದ ನಡುವೆ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಸೂದೆಗಳ ಬಗ್ಗೆ ಚರ್ಚಿಸುವಾಗ, ಪ್ರಸ್ತಾವಿತ ಕಾನೂನುಗಳನ್ನು ಸಮಗ್ರ ಸಮಾಲೋಚನೆಯ ನಂತರ ರಚಿಸಲಾಗಿದೆ ಮತ್ತು ಸದನದ ಅನುಮೋದನೆಗೆ ತರುವ ಮೊದಲು ಕರಡು ಶಾಸನಗಳ ಕೂಲಂಕುಷವಾಗಿ ಪರಿಶೀಲಿಸಲಾಗಿದೆ ಎಂದು ಹೇಳಿದರು. ಅಸ್ತಿತ್ವದಲ್ಲಿರುವ ಕ್ರಿಮಿನಲ್ ಕಾನೂನುಗಳು ವಸಾಹತುಶಾಹಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ ಮತ್ತು ಶಿಕ್ಷಿಸುವ ಉದ್ದೇಶವನ್ನು ಹೊಂದಿದೆ ನ್ಯಾಯವನ್ನು ನೀಡುವ ಉದ್ದೇಶ ಹೊಂದಿರಲಿಲ್ಲ ಎಂದು ಹೇಳಿದ್ದರು.

ಭಾರತೀಯ ನ್ಯಾಯ (ಎರಡನೇ) ಸಂಹಿತಾ ಪ್ರಸ್ತುತ 358 ವಿಭಾಗಗಳನ್ನು ಹೊಂದಿದೆ. ಭಾರತೀಯ ನಾಗರಿಕಾ ಸುರಕ್ಷಾ (ಎರಡನೇ) ಸಂಹಿತಾ 531 ವಿಭಾಗಗಳನ್ನು ಹೊಂದಿದೆ ಮತ್ತು ಭಾರತೀಯ ಸಾಕ್ಷಿ (ಎರಡನೇ) ಸಂಹಿತಾ 170 ವಿಭಾಗಗಳನ್ನು ಹೊಂದಿದೆ. ಮಸೂದೆಗಳನ್ನು ಮೊದಲು ಆ.11ರಂದು ಸಂಸತ್ತಿನಲ್ಲಿ ಪರಿಚಯಿಸಲಾಯಿತು. ನಂತರ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಈ ಬಗ್ಗೆ ಹೆಚ್ಚಿನ ಶಿಫಾರಸುಗಳನ್ನು ಮಾಡಿದ ನಂತರ ಸರ್ಕಾರವು ಮಸೂದೆಯನ್ನು ಹಿಂಪಡೆದಿತ್ತು.

ಭಾರತೀಯ ನ್ಯಾಯ ಸಂಹಿತಾ (BNS2) ಅಡಿಯಲ್ಲಿ ದೇಶದ್ರೋಹವನ್ನು ‘ರಾಜ್ಯದ್ರೋಹದ’ (ಸರ್ಕಾರದ ವಿರುದ್ಧ) ಬದಲಾಗಿ ‘ದೇಶದ್ರೋಹ’ (ರಾಷ್ಟ್ರದ ವಿರುದ್ಧ) ಎಂದು ಬದಲಾಯಿಸಲಾಗಿದೆ. ಇದಲ್ಲದೆ, ‘ಸಂಘಟಿತ ಅಪರಾಧ’ವನ್ನು ಅಪರಾಧ ಎಂದು ಸೇರಿಸಲಾಗಿದೆ. ಐದು ಅಥವಾ ಹೆಚ್ಚು ಜನರ ಗುಂಪು ಒಬ್ಬ ವ್ಯಕ್ತಿಯ ಜನಾಂಗ, ಜಾತಿ, ಲಿಂಗ, ಭಾಷೆ ಅಥವಾ ವೈಯಕ್ತಿಕ ನಂಬಿಕೆಯ ಆಧಾರಗಳ ಮೇಲೆ ಕೊಲೆ ಅಥವಾ ಗಂಭೀರ ಗಾಯ ಮಾಡಿದರೆ ಅದು ಗುಂಪು ಹತ್ಯೆಯಾಗಲಿದೆ. ಇಂತಹ ಅಪರಾಧಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಲು ನೂತನ ಕಾನೂನಿನಲ್ಲಿ ಅವಕಾಶವಿದೆ.

ಇದನ್ನು ಓದಿ: ಪೂಂಛ್‌ ನಾಗರಿಕರ ಹತ್ಯೆ ಪ್ರಕರಣ: ಸಂತ್ರಸ್ತ ಕುಟುಂಬದ ಭೇಟಿಗೆ ಮುಂದಾದ ಮೆಹಬೂಬಾ ಮುಫ್ತಿಗೆ ಗೃಹಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...