Homeಮುಖಪುಟಕಾಂಗ್ರೆಸ್ಸಿನ ಅಧ್ಯಕ್ಷ ಪಟ್ಟದ ಕೈ ಹಿಡಿತಾರ ರಾಹುಲ್ ಗಾಂಧಿ

ಕಾಂಗ್ರೆಸ್ಸಿನ ಅಧ್ಯಕ್ಷ ಪಟ್ಟದ ಕೈ ಹಿಡಿತಾರ ರಾಹುಲ್ ಗಾಂಧಿ

- Advertisement -
- Advertisement -

|| ಸೋಮಶೇಖರ್ ಚಲ್ಯ ||

ಆಧಾರ:: ಎನ್‍ಡಿಟಿವಿ ವರದಿ

ರಾಹುಲ್ ಗಾಂಧಿಯವರು ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ನೀಡಿ, ಹೀನಾಯ ಸೋಲು ಕಂಡ ನಂತರ ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಘೋಷಣೆ ಮಾಡಿದ್ದರು. ಆ ನಿರ್ಧಾರಕ್ಕೆ ಬದ್ದರಾಗಿದ್ದು, ಪಕ್ಷದ ಹೊಸ ಮುಖ್ಯಸ್ಥರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯ ವೈಫಲ್ಯಕ್ಕೆ ಸಂಪೂರ್ಣವಾಗಿ ತಾನೇ ಜವಾಬ್ದಾರನೆಂದು ಮೇ 26ರಂದು ಹೇಳಿದ್ದ ರಾಹುಲ್‍ಗಾಂಧಿ, ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಪಕ್ಷದ ಕಾರ್ಯಕಾರಿ ಸಮಿತಿಯ 52 ಸದಸ್ಯರಿಗೂ ತಿಳಿಸಿದ್ದರು. ಆದರೆ ಅವರೇ ಅಧ್ಯಕ್ಷರಾಗಿರಬೇಕು ಎಂಬ ನಿಲುವಿಗೆ ಅಂಟಿಕೊಂಡಿರುವ ಕಾಂಗ್ರೆಸ್ ರಾಹುಲ್‍ರವರ ನಿರ್ಧಾರವನ್ನು ನಿರಾಕರಿಸಿತ್ತು.

ಇದನ್ನು ಓದಿ:  ರಾಹುಲ್ ಅಲ್ಲದಿದ್ದರೆ ಇನ್ಯಾರು??

ಪಕ್ಷದ ಚುಕ್ಕಾಣಿಯನ್ನು ಗಾಂಧಿ ಕುಟುಂಬದ ಸದಸ್ಯರು ಮಾತ್ರ ಹಿಡಿದಿಟ್ಟುಕೊಳ್ಳಬೇಕು ಎಂದು ಪಕ್ಷದ ಹಿರಿಯರು ಸೂಚಿಸಿದ್ದಾರೆ. ರಾಹುಲ್ ಗಾಂಧಿಯವರೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಬೇಕೆಂದು ಪಕ್ಷದ ಹಿರಿಯರಿಂದ ಕಿರಿಯರವರೆಗೂ ಒತ್ತಾಯಿಸುತ್ತಿದ್ದಾರೆ. ಆದರೆ ರಾಹುಲ್ ಮಾತ್ರ ತಮ್ಮ ನಿರ್ಧಾರವನ್ನು ಬದಲಿಸಲು ನಿರಾಕರಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಸೋನಿಯಾ ಗಾಂಧಿ ಅಥವಾ ಪ್ರಿಯಾಂಕ ಗಾಂಧಿಯವರಿಗೂ ಪಕ್ಷದ ಜವಾಬ್ದಾರಿ ನೀಡಬಾರದೆಂದು ಹೇಳಿದ್ದಾರೆ.

ಪಕ್ಷದ ವ್ಯವಸ್ಥೆಯೊಳಗೆ ಪಕ್ಷವನ್ನು ಕಟ್ಟಿಬೆಳೆಸುವ ಹೊಣೆಗಾರಿಕೆ ಇರಬೇಕು. ಒಂದು ವಂಶದ ನಿಯಂತ್ರಣವು ಕಾಂಗ್ರೆಸ್ ವಿರುದ್ಧ ಬಿಜೆಪಿಗೆ ದೊಡ್ಡ ಅಸ್ತ್ರವನ್ನು ಒದಗಿಸಿತ್ತು. ಲೋಕಸಭಾ ಚುನಾವಣೆಯ ನಂತರ ಮತ್ತಷ್ಟು ಹೆಚ್ಚಾಗಿದೆ. ಚುನಾವಣೆಯಲ್ಲಿ ಎರಡನೆ ಬಾರಿಯೂ ಪಕ್ಷವು ಕೇವಲ 52 ಸ್ಥಾನಗಳನ್ನು ಪಡೆದುಕೊಂಡಿದೆ, ಇದು 2014ರ ಚುನಾವಣೆಯಲ್ಲಿ ಪಡೆದಿದ್ದ 44 ಸ್ಥಾನಗಳಿಗಿಂತ ಸ್ವಲ್ಪ ಹೆಚ್ಚಾಗಿದೆ ಅಷ್ಟೇ. ಇದರಿಂದ ಪಕ್ಷವನ್ನು ಗಟ್ಟಿಗೊಳಿಸಲಾಗಿಲ್ಲ, ಜವಾಬ್ದಾರಿಯಿಂದ ಪಕ್ಷವನ್ನು ಮುನ್ನಡೆಸಬೇಕು, ಅದರಲ್ಲಿ ತಾವು ವಿಫಲವಾಗಿದ್ದೇನೆ. ಆಯ್ಕೆ ಪ್ರಕ್ರಿಯೆಯಲ್ಲಿ ನನ್ನ ಭಾಗವಹಿಸುವಿಕೆಯು ವಿಷಯಗಳನ್ನು ಸಂಕೀರ್ಣಗೊಳಿಸುತ್ತದೆ. ಹಾಗಾಗಿ ತಾನು ಆಯ್ಕೆ ಪ್ರಕ್ರಿಯೆಗೆ ಹೋಗುವುದಿಲ್ಲ ಎಂದು ನಿರ್ಧರಿಸಿದ್ದಾರೆ.

ಹಾಗೆ ನೋಡಿದರೆ, ಮಾಜಿ ಪ್ರಧಾನಿ ರಾಜೀವ್ ಗಾಂಧಿ 1991ರಲ್ಲಿ ಹತ್ಯೆಯಾದ ಸಂದರ್ಭವನ್ನು ಹೊರತು ಪಡಿಸಿದರೆ ಎಲ್ಲಾ ಕಾಲದಲ್ಲಿಯೂ ಗಾಂಧಿ ಕುಟುಂಬವೇ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದು ಮುನ್ನಡೆಸಿಕೊಂಡು ಬಂದಿದೆ. ಆದರೆ 1991ರಲ್ಲಿ ಪಕ್ಷದ ನೇತೃತ್ವದ ವಹಿಸಿಕೊಂಡ ಪಿ.ವಿ.ನರಸಿಂಹರಾವ್‍ರವರು ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ಪ್ರಧಾನಿ ಪಟ್ಟ ಎರಡನ್ನೂ ನಿರ್ವಹಿಸಿದ್ದರು. ಅವರನ್ನು ಕೆಳಗಿಳಿಸಿದ ನಂತರ ಸೀತಾರಾಂ ಕೇಸರಿಯವರು ಪಕ್ಷವನ್ನು ಸಕ್ರಿಯವಾಗಿ ಮುಂದುವರೆಸಲು ವಿಫರಾದರು. ಆ ಅವಧಿಯಲ್ಲಿ ಪಕ್ಷವು ಉತ್ತಮವಾಗಿ ಕಾರ್ಯನಿರ್ವಹಿಸಲಿಲ್ಲ. ಹಾಗಾಗಿ ಹಲವು ನಾಯಕರು ಸೋನಿಯಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಬರುವಂತೆ ಮನವೊಲಿಸಿದ್ದರು. ಸೋನಿಯಾ ಗಾಂಧಿಯವರ ರಾಜಕೀಯ ಪ್ರವೇಶದಿಂದ ಕಾಂಗ್ರೆಸ್ ಮತ್ತಷ್ಟು ಚೇತರಿಸಿಕೊಂಡಿತ್ತು. 2004ರಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಗಿತ್ತು. 10 ವರ್ಷಗಳ ಯಶಸ್ವಿ ಆಡಳಿತದ ಕೊನೆಯಲ್ಲಿ ಹಗರಣಗಳು ಮತ್ತು ಮೋದಿ ಅಲೆಯಿಂದ ಕಾಂಗ್ರೆಸ್ ಧೂಳೀಪಟವಾಗಿತ್ತು.

ಇದನ್ನು ಓದಿ:  ರಾಹುಲ್ ಗಾಂಧಿ ಹೋರಾಟವನ್ನು ಮಣ್ಣುಗೂಡಿಸಿದ ರಾಜ್ಯ ಸರ್ಕಾರ! ಕಾರಣ ಜೆಡಿಎಸ್ಸೋ? ಕಾಂಗ್ರೆಸ್ಸೋ?

ಆ ನಂತರ ನೇತೃತ್ವ ವಹಿಸಿಕೊಂಡ ರಾಹುಲ್‍ಗಾಂಧಿ ಕೊನೆ ಕೊನೆಗೆ ಒಂದಷ್ಟು ಭರವಸೆ ಮೂಡಿಸಿದ್ದರಾದರೂ, ಅದು ಚುನಾವಣಾ ಫಲಿತಾಂಶದಲ್ಲಿ ವ್ಯಕ್ತವಾಗಿಲ್ಲ. ಪುರಾತನ ಬಂಡಿಯಲ್ಲಿ ಸ್ಥಾಪಿತರಾಗಿರುವ ಹಳೇ ತಲೆಗಳನ್ನು ಕಟ್ಟಿಕೊಂಡು ಪ್ರಯಾಣ ಕಷ್ಟ ಎನ್ನುವ ಅಭಿಪ್ರಾಯ ರಾಹುಲ್‍ರದ್ದಾಗಿರಬಹುದು ಎನಿಸುತ್ತದೆ.

ಅದೇನೇ ಇರಲಿ, ಗಾಂಧಿ ಕುಟುಂಬದವರು ಸಕ್ರಿಯವಾಗಿದ್ದಾಗಲೇ, ಬೇರೆಯವರು ಪಕ್ಷದ ಚುಕ್ಕಾಣಿ ಹಿಡಿಯುವುದು ಸಾಧ್ಯವೇ ಎಂಬುದನ್ನು ಭವಿಷ್ಯದ ದಿನಗಳು ನಿರ್ಧರಿಸಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...