Homeಮುಖಪುಟಕಾಂಗ್ರೆಸ್ಸಿನ ಅಧ್ಯಕ್ಷ ಪಟ್ಟದ ಕೈ ಹಿಡಿತಾರ ರಾಹುಲ್ ಗಾಂಧಿ

ಕಾಂಗ್ರೆಸ್ಸಿನ ಅಧ್ಯಕ್ಷ ಪಟ್ಟದ ಕೈ ಹಿಡಿತಾರ ರಾಹುಲ್ ಗಾಂಧಿ

- Advertisement -
- Advertisement -

|| ಸೋಮಶೇಖರ್ ಚಲ್ಯ ||

ಆಧಾರ:: ಎನ್‍ಡಿಟಿವಿ ವರದಿ

ರಾಹುಲ್ ಗಾಂಧಿಯವರು ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ನೀಡಿ, ಹೀನಾಯ ಸೋಲು ಕಂಡ ನಂತರ ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಘೋಷಣೆ ಮಾಡಿದ್ದರು. ಆ ನಿರ್ಧಾರಕ್ಕೆ ಬದ್ದರಾಗಿದ್ದು, ಪಕ್ಷದ ಹೊಸ ಮುಖ್ಯಸ್ಥರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯ ವೈಫಲ್ಯಕ್ಕೆ ಸಂಪೂರ್ಣವಾಗಿ ತಾನೇ ಜವಾಬ್ದಾರನೆಂದು ಮೇ 26ರಂದು ಹೇಳಿದ್ದ ರಾಹುಲ್‍ಗಾಂಧಿ, ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಪಕ್ಷದ ಕಾರ್ಯಕಾರಿ ಸಮಿತಿಯ 52 ಸದಸ್ಯರಿಗೂ ತಿಳಿಸಿದ್ದರು. ಆದರೆ ಅವರೇ ಅಧ್ಯಕ್ಷರಾಗಿರಬೇಕು ಎಂಬ ನಿಲುವಿಗೆ ಅಂಟಿಕೊಂಡಿರುವ ಕಾಂಗ್ರೆಸ್ ರಾಹುಲ್‍ರವರ ನಿರ್ಧಾರವನ್ನು ನಿರಾಕರಿಸಿತ್ತು.

ಇದನ್ನು ಓದಿ:  ರಾಹುಲ್ ಅಲ್ಲದಿದ್ದರೆ ಇನ್ಯಾರು??

ಪಕ್ಷದ ಚುಕ್ಕಾಣಿಯನ್ನು ಗಾಂಧಿ ಕುಟುಂಬದ ಸದಸ್ಯರು ಮಾತ್ರ ಹಿಡಿದಿಟ್ಟುಕೊಳ್ಳಬೇಕು ಎಂದು ಪಕ್ಷದ ಹಿರಿಯರು ಸೂಚಿಸಿದ್ದಾರೆ. ರಾಹುಲ್ ಗಾಂಧಿಯವರೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಬೇಕೆಂದು ಪಕ್ಷದ ಹಿರಿಯರಿಂದ ಕಿರಿಯರವರೆಗೂ ಒತ್ತಾಯಿಸುತ್ತಿದ್ದಾರೆ. ಆದರೆ ರಾಹುಲ್ ಮಾತ್ರ ತಮ್ಮ ನಿರ್ಧಾರವನ್ನು ಬದಲಿಸಲು ನಿರಾಕರಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಸೋನಿಯಾ ಗಾಂಧಿ ಅಥವಾ ಪ್ರಿಯಾಂಕ ಗಾಂಧಿಯವರಿಗೂ ಪಕ್ಷದ ಜವಾಬ್ದಾರಿ ನೀಡಬಾರದೆಂದು ಹೇಳಿದ್ದಾರೆ.

ಪಕ್ಷದ ವ್ಯವಸ್ಥೆಯೊಳಗೆ ಪಕ್ಷವನ್ನು ಕಟ್ಟಿಬೆಳೆಸುವ ಹೊಣೆಗಾರಿಕೆ ಇರಬೇಕು. ಒಂದು ವಂಶದ ನಿಯಂತ್ರಣವು ಕಾಂಗ್ರೆಸ್ ವಿರುದ್ಧ ಬಿಜೆಪಿಗೆ ದೊಡ್ಡ ಅಸ್ತ್ರವನ್ನು ಒದಗಿಸಿತ್ತು. ಲೋಕಸಭಾ ಚುನಾವಣೆಯ ನಂತರ ಮತ್ತಷ್ಟು ಹೆಚ್ಚಾಗಿದೆ. ಚುನಾವಣೆಯಲ್ಲಿ ಎರಡನೆ ಬಾರಿಯೂ ಪಕ್ಷವು ಕೇವಲ 52 ಸ್ಥಾನಗಳನ್ನು ಪಡೆದುಕೊಂಡಿದೆ, ಇದು 2014ರ ಚುನಾವಣೆಯಲ್ಲಿ ಪಡೆದಿದ್ದ 44 ಸ್ಥಾನಗಳಿಗಿಂತ ಸ್ವಲ್ಪ ಹೆಚ್ಚಾಗಿದೆ ಅಷ್ಟೇ. ಇದರಿಂದ ಪಕ್ಷವನ್ನು ಗಟ್ಟಿಗೊಳಿಸಲಾಗಿಲ್ಲ, ಜವಾಬ್ದಾರಿಯಿಂದ ಪಕ್ಷವನ್ನು ಮುನ್ನಡೆಸಬೇಕು, ಅದರಲ್ಲಿ ತಾವು ವಿಫಲವಾಗಿದ್ದೇನೆ. ಆಯ್ಕೆ ಪ್ರಕ್ರಿಯೆಯಲ್ಲಿ ನನ್ನ ಭಾಗವಹಿಸುವಿಕೆಯು ವಿಷಯಗಳನ್ನು ಸಂಕೀರ್ಣಗೊಳಿಸುತ್ತದೆ. ಹಾಗಾಗಿ ತಾನು ಆಯ್ಕೆ ಪ್ರಕ್ರಿಯೆಗೆ ಹೋಗುವುದಿಲ್ಲ ಎಂದು ನಿರ್ಧರಿಸಿದ್ದಾರೆ.

ಹಾಗೆ ನೋಡಿದರೆ, ಮಾಜಿ ಪ್ರಧಾನಿ ರಾಜೀವ್ ಗಾಂಧಿ 1991ರಲ್ಲಿ ಹತ್ಯೆಯಾದ ಸಂದರ್ಭವನ್ನು ಹೊರತು ಪಡಿಸಿದರೆ ಎಲ್ಲಾ ಕಾಲದಲ್ಲಿಯೂ ಗಾಂಧಿ ಕುಟುಂಬವೇ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದು ಮುನ್ನಡೆಸಿಕೊಂಡು ಬಂದಿದೆ. ಆದರೆ 1991ರಲ್ಲಿ ಪಕ್ಷದ ನೇತೃತ್ವದ ವಹಿಸಿಕೊಂಡ ಪಿ.ವಿ.ನರಸಿಂಹರಾವ್‍ರವರು ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ಪ್ರಧಾನಿ ಪಟ್ಟ ಎರಡನ್ನೂ ನಿರ್ವಹಿಸಿದ್ದರು. ಅವರನ್ನು ಕೆಳಗಿಳಿಸಿದ ನಂತರ ಸೀತಾರಾಂ ಕೇಸರಿಯವರು ಪಕ್ಷವನ್ನು ಸಕ್ರಿಯವಾಗಿ ಮುಂದುವರೆಸಲು ವಿಫರಾದರು. ಆ ಅವಧಿಯಲ್ಲಿ ಪಕ್ಷವು ಉತ್ತಮವಾಗಿ ಕಾರ್ಯನಿರ್ವಹಿಸಲಿಲ್ಲ. ಹಾಗಾಗಿ ಹಲವು ನಾಯಕರು ಸೋನಿಯಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಬರುವಂತೆ ಮನವೊಲಿಸಿದ್ದರು. ಸೋನಿಯಾ ಗಾಂಧಿಯವರ ರಾಜಕೀಯ ಪ್ರವೇಶದಿಂದ ಕಾಂಗ್ರೆಸ್ ಮತ್ತಷ್ಟು ಚೇತರಿಸಿಕೊಂಡಿತ್ತು. 2004ರಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಗಿತ್ತು. 10 ವರ್ಷಗಳ ಯಶಸ್ವಿ ಆಡಳಿತದ ಕೊನೆಯಲ್ಲಿ ಹಗರಣಗಳು ಮತ್ತು ಮೋದಿ ಅಲೆಯಿಂದ ಕಾಂಗ್ರೆಸ್ ಧೂಳೀಪಟವಾಗಿತ್ತು.

ಇದನ್ನು ಓದಿ:  ರಾಹುಲ್ ಗಾಂಧಿ ಹೋರಾಟವನ್ನು ಮಣ್ಣುಗೂಡಿಸಿದ ರಾಜ್ಯ ಸರ್ಕಾರ! ಕಾರಣ ಜೆಡಿಎಸ್ಸೋ? ಕಾಂಗ್ರೆಸ್ಸೋ?

ಆ ನಂತರ ನೇತೃತ್ವ ವಹಿಸಿಕೊಂಡ ರಾಹುಲ್‍ಗಾಂಧಿ ಕೊನೆ ಕೊನೆಗೆ ಒಂದಷ್ಟು ಭರವಸೆ ಮೂಡಿಸಿದ್ದರಾದರೂ, ಅದು ಚುನಾವಣಾ ಫಲಿತಾಂಶದಲ್ಲಿ ವ್ಯಕ್ತವಾಗಿಲ್ಲ. ಪುರಾತನ ಬಂಡಿಯಲ್ಲಿ ಸ್ಥಾಪಿತರಾಗಿರುವ ಹಳೇ ತಲೆಗಳನ್ನು ಕಟ್ಟಿಕೊಂಡು ಪ್ರಯಾಣ ಕಷ್ಟ ಎನ್ನುವ ಅಭಿಪ್ರಾಯ ರಾಹುಲ್‍ರದ್ದಾಗಿರಬಹುದು ಎನಿಸುತ್ತದೆ.

ಅದೇನೇ ಇರಲಿ, ಗಾಂಧಿ ಕುಟುಂಬದವರು ಸಕ್ರಿಯವಾಗಿದ್ದಾಗಲೇ, ಬೇರೆಯವರು ಪಕ್ಷದ ಚುಕ್ಕಾಣಿ ಹಿಡಿಯುವುದು ಸಾಧ್ಯವೇ ಎಂಬುದನ್ನು ಭವಿಷ್ಯದ ದಿನಗಳು ನಿರ್ಧರಿಸಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...