Homeಮುಖಪುಟಕಾಂಗ್ರೆಸ್ಸಿನ ಅಧ್ಯಕ್ಷ ಪಟ್ಟದ ಕೈ ಹಿಡಿತಾರ ರಾಹುಲ್ ಗಾಂಧಿ

ಕಾಂಗ್ರೆಸ್ಸಿನ ಅಧ್ಯಕ್ಷ ಪಟ್ಟದ ಕೈ ಹಿಡಿತಾರ ರಾಹುಲ್ ಗಾಂಧಿ

- Advertisement -
- Advertisement -

|| ಸೋಮಶೇಖರ್ ಚಲ್ಯ ||

ಆಧಾರ:: ಎನ್‍ಡಿಟಿವಿ ವರದಿ

ರಾಹುಲ್ ಗಾಂಧಿಯವರು ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ನೀಡಿ, ಹೀನಾಯ ಸೋಲು ಕಂಡ ನಂತರ ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಘೋಷಣೆ ಮಾಡಿದ್ದರು. ಆ ನಿರ್ಧಾರಕ್ಕೆ ಬದ್ದರಾಗಿದ್ದು, ಪಕ್ಷದ ಹೊಸ ಮುಖ್ಯಸ್ಥರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯ ವೈಫಲ್ಯಕ್ಕೆ ಸಂಪೂರ್ಣವಾಗಿ ತಾನೇ ಜವಾಬ್ದಾರನೆಂದು ಮೇ 26ರಂದು ಹೇಳಿದ್ದ ರಾಹುಲ್‍ಗಾಂಧಿ, ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಪಕ್ಷದ ಕಾರ್ಯಕಾರಿ ಸಮಿತಿಯ 52 ಸದಸ್ಯರಿಗೂ ತಿಳಿಸಿದ್ದರು. ಆದರೆ ಅವರೇ ಅಧ್ಯಕ್ಷರಾಗಿರಬೇಕು ಎಂಬ ನಿಲುವಿಗೆ ಅಂಟಿಕೊಂಡಿರುವ ಕಾಂಗ್ರೆಸ್ ರಾಹುಲ್‍ರವರ ನಿರ್ಧಾರವನ್ನು ನಿರಾಕರಿಸಿತ್ತು.

ಇದನ್ನು ಓದಿ:  ರಾಹುಲ್ ಅಲ್ಲದಿದ್ದರೆ ಇನ್ಯಾರು??

ಪಕ್ಷದ ಚುಕ್ಕಾಣಿಯನ್ನು ಗಾಂಧಿ ಕುಟುಂಬದ ಸದಸ್ಯರು ಮಾತ್ರ ಹಿಡಿದಿಟ್ಟುಕೊಳ್ಳಬೇಕು ಎಂದು ಪಕ್ಷದ ಹಿರಿಯರು ಸೂಚಿಸಿದ್ದಾರೆ. ರಾಹುಲ್ ಗಾಂಧಿಯವರೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಬೇಕೆಂದು ಪಕ್ಷದ ಹಿರಿಯರಿಂದ ಕಿರಿಯರವರೆಗೂ ಒತ್ತಾಯಿಸುತ್ತಿದ್ದಾರೆ. ಆದರೆ ರಾಹುಲ್ ಮಾತ್ರ ತಮ್ಮ ನಿರ್ಧಾರವನ್ನು ಬದಲಿಸಲು ನಿರಾಕರಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಸೋನಿಯಾ ಗಾಂಧಿ ಅಥವಾ ಪ್ರಿಯಾಂಕ ಗಾಂಧಿಯವರಿಗೂ ಪಕ್ಷದ ಜವಾಬ್ದಾರಿ ನೀಡಬಾರದೆಂದು ಹೇಳಿದ್ದಾರೆ.

ಪಕ್ಷದ ವ್ಯವಸ್ಥೆಯೊಳಗೆ ಪಕ್ಷವನ್ನು ಕಟ್ಟಿಬೆಳೆಸುವ ಹೊಣೆಗಾರಿಕೆ ಇರಬೇಕು. ಒಂದು ವಂಶದ ನಿಯಂತ್ರಣವು ಕಾಂಗ್ರೆಸ್ ವಿರುದ್ಧ ಬಿಜೆಪಿಗೆ ದೊಡ್ಡ ಅಸ್ತ್ರವನ್ನು ಒದಗಿಸಿತ್ತು. ಲೋಕಸಭಾ ಚುನಾವಣೆಯ ನಂತರ ಮತ್ತಷ್ಟು ಹೆಚ್ಚಾಗಿದೆ. ಚುನಾವಣೆಯಲ್ಲಿ ಎರಡನೆ ಬಾರಿಯೂ ಪಕ್ಷವು ಕೇವಲ 52 ಸ್ಥಾನಗಳನ್ನು ಪಡೆದುಕೊಂಡಿದೆ, ಇದು 2014ರ ಚುನಾವಣೆಯಲ್ಲಿ ಪಡೆದಿದ್ದ 44 ಸ್ಥಾನಗಳಿಗಿಂತ ಸ್ವಲ್ಪ ಹೆಚ್ಚಾಗಿದೆ ಅಷ್ಟೇ. ಇದರಿಂದ ಪಕ್ಷವನ್ನು ಗಟ್ಟಿಗೊಳಿಸಲಾಗಿಲ್ಲ, ಜವಾಬ್ದಾರಿಯಿಂದ ಪಕ್ಷವನ್ನು ಮುನ್ನಡೆಸಬೇಕು, ಅದರಲ್ಲಿ ತಾವು ವಿಫಲವಾಗಿದ್ದೇನೆ. ಆಯ್ಕೆ ಪ್ರಕ್ರಿಯೆಯಲ್ಲಿ ನನ್ನ ಭಾಗವಹಿಸುವಿಕೆಯು ವಿಷಯಗಳನ್ನು ಸಂಕೀರ್ಣಗೊಳಿಸುತ್ತದೆ. ಹಾಗಾಗಿ ತಾನು ಆಯ್ಕೆ ಪ್ರಕ್ರಿಯೆಗೆ ಹೋಗುವುದಿಲ್ಲ ಎಂದು ನಿರ್ಧರಿಸಿದ್ದಾರೆ.

ಹಾಗೆ ನೋಡಿದರೆ, ಮಾಜಿ ಪ್ರಧಾನಿ ರಾಜೀವ್ ಗಾಂಧಿ 1991ರಲ್ಲಿ ಹತ್ಯೆಯಾದ ಸಂದರ್ಭವನ್ನು ಹೊರತು ಪಡಿಸಿದರೆ ಎಲ್ಲಾ ಕಾಲದಲ್ಲಿಯೂ ಗಾಂಧಿ ಕುಟುಂಬವೇ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದು ಮುನ್ನಡೆಸಿಕೊಂಡು ಬಂದಿದೆ. ಆದರೆ 1991ರಲ್ಲಿ ಪಕ್ಷದ ನೇತೃತ್ವದ ವಹಿಸಿಕೊಂಡ ಪಿ.ವಿ.ನರಸಿಂಹರಾವ್‍ರವರು ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ಪ್ರಧಾನಿ ಪಟ್ಟ ಎರಡನ್ನೂ ನಿರ್ವಹಿಸಿದ್ದರು. ಅವರನ್ನು ಕೆಳಗಿಳಿಸಿದ ನಂತರ ಸೀತಾರಾಂ ಕೇಸರಿಯವರು ಪಕ್ಷವನ್ನು ಸಕ್ರಿಯವಾಗಿ ಮುಂದುವರೆಸಲು ವಿಫರಾದರು. ಆ ಅವಧಿಯಲ್ಲಿ ಪಕ್ಷವು ಉತ್ತಮವಾಗಿ ಕಾರ್ಯನಿರ್ವಹಿಸಲಿಲ್ಲ. ಹಾಗಾಗಿ ಹಲವು ನಾಯಕರು ಸೋನಿಯಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಬರುವಂತೆ ಮನವೊಲಿಸಿದ್ದರು. ಸೋನಿಯಾ ಗಾಂಧಿಯವರ ರಾಜಕೀಯ ಪ್ರವೇಶದಿಂದ ಕಾಂಗ್ರೆಸ್ ಮತ್ತಷ್ಟು ಚೇತರಿಸಿಕೊಂಡಿತ್ತು. 2004ರಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಗಿತ್ತು. 10 ವರ್ಷಗಳ ಯಶಸ್ವಿ ಆಡಳಿತದ ಕೊನೆಯಲ್ಲಿ ಹಗರಣಗಳು ಮತ್ತು ಮೋದಿ ಅಲೆಯಿಂದ ಕಾಂಗ್ರೆಸ್ ಧೂಳೀಪಟವಾಗಿತ್ತು.

ಇದನ್ನು ಓದಿ:  ರಾಹುಲ್ ಗಾಂಧಿ ಹೋರಾಟವನ್ನು ಮಣ್ಣುಗೂಡಿಸಿದ ರಾಜ್ಯ ಸರ್ಕಾರ! ಕಾರಣ ಜೆಡಿಎಸ್ಸೋ? ಕಾಂಗ್ರೆಸ್ಸೋ?

ಆ ನಂತರ ನೇತೃತ್ವ ವಹಿಸಿಕೊಂಡ ರಾಹುಲ್‍ಗಾಂಧಿ ಕೊನೆ ಕೊನೆಗೆ ಒಂದಷ್ಟು ಭರವಸೆ ಮೂಡಿಸಿದ್ದರಾದರೂ, ಅದು ಚುನಾವಣಾ ಫಲಿತಾಂಶದಲ್ಲಿ ವ್ಯಕ್ತವಾಗಿಲ್ಲ. ಪುರಾತನ ಬಂಡಿಯಲ್ಲಿ ಸ್ಥಾಪಿತರಾಗಿರುವ ಹಳೇ ತಲೆಗಳನ್ನು ಕಟ್ಟಿಕೊಂಡು ಪ್ರಯಾಣ ಕಷ್ಟ ಎನ್ನುವ ಅಭಿಪ್ರಾಯ ರಾಹುಲ್‍ರದ್ದಾಗಿರಬಹುದು ಎನಿಸುತ್ತದೆ.

ಅದೇನೇ ಇರಲಿ, ಗಾಂಧಿ ಕುಟುಂಬದವರು ಸಕ್ರಿಯವಾಗಿದ್ದಾಗಲೇ, ಬೇರೆಯವರು ಪಕ್ಷದ ಚುಕ್ಕಾಣಿ ಹಿಡಿಯುವುದು ಸಾಧ್ಯವೇ ಎಂಬುದನ್ನು ಭವಿಷ್ಯದ ದಿನಗಳು ನಿರ್ಧರಿಸಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...