Homeಮುಖಪುಟಕಾಂಗ್ರೆಸ್ಸಿನ ಅಧ್ಯಕ್ಷ ಪಟ್ಟದ ಕೈ ಹಿಡಿತಾರ ರಾಹುಲ್ ಗಾಂಧಿ

ಕಾಂಗ್ರೆಸ್ಸಿನ ಅಧ್ಯಕ್ಷ ಪಟ್ಟದ ಕೈ ಹಿಡಿತಾರ ರಾಹುಲ್ ಗಾಂಧಿ

- Advertisement -
- Advertisement -

|| ಸೋಮಶೇಖರ್ ಚಲ್ಯ ||

ಆಧಾರ:: ಎನ್‍ಡಿಟಿವಿ ವರದಿ

ರಾಹುಲ್ ಗಾಂಧಿಯವರು ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ನೀಡಿ, ಹೀನಾಯ ಸೋಲು ಕಂಡ ನಂತರ ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಘೋಷಣೆ ಮಾಡಿದ್ದರು. ಆ ನಿರ್ಧಾರಕ್ಕೆ ಬದ್ದರಾಗಿದ್ದು, ಪಕ್ಷದ ಹೊಸ ಮುಖ್ಯಸ್ಥರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯ ವೈಫಲ್ಯಕ್ಕೆ ಸಂಪೂರ್ಣವಾಗಿ ತಾನೇ ಜವಾಬ್ದಾರನೆಂದು ಮೇ 26ರಂದು ಹೇಳಿದ್ದ ರಾಹುಲ್‍ಗಾಂಧಿ, ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಪಕ್ಷದ ಕಾರ್ಯಕಾರಿ ಸಮಿತಿಯ 52 ಸದಸ್ಯರಿಗೂ ತಿಳಿಸಿದ್ದರು. ಆದರೆ ಅವರೇ ಅಧ್ಯಕ್ಷರಾಗಿರಬೇಕು ಎಂಬ ನಿಲುವಿಗೆ ಅಂಟಿಕೊಂಡಿರುವ ಕಾಂಗ್ರೆಸ್ ರಾಹುಲ್‍ರವರ ನಿರ್ಧಾರವನ್ನು ನಿರಾಕರಿಸಿತ್ತು.

ಇದನ್ನು ಓದಿ:  ರಾಹುಲ್ ಅಲ್ಲದಿದ್ದರೆ ಇನ್ಯಾರು??

ಪಕ್ಷದ ಚುಕ್ಕಾಣಿಯನ್ನು ಗಾಂಧಿ ಕುಟುಂಬದ ಸದಸ್ಯರು ಮಾತ್ರ ಹಿಡಿದಿಟ್ಟುಕೊಳ್ಳಬೇಕು ಎಂದು ಪಕ್ಷದ ಹಿರಿಯರು ಸೂಚಿಸಿದ್ದಾರೆ. ರಾಹುಲ್ ಗಾಂಧಿಯವರೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಬೇಕೆಂದು ಪಕ್ಷದ ಹಿರಿಯರಿಂದ ಕಿರಿಯರವರೆಗೂ ಒತ್ತಾಯಿಸುತ್ತಿದ್ದಾರೆ. ಆದರೆ ರಾಹುಲ್ ಮಾತ್ರ ತಮ್ಮ ನಿರ್ಧಾರವನ್ನು ಬದಲಿಸಲು ನಿರಾಕರಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಸೋನಿಯಾ ಗಾಂಧಿ ಅಥವಾ ಪ್ರಿಯಾಂಕ ಗಾಂಧಿಯವರಿಗೂ ಪಕ್ಷದ ಜವಾಬ್ದಾರಿ ನೀಡಬಾರದೆಂದು ಹೇಳಿದ್ದಾರೆ.

ಪಕ್ಷದ ವ್ಯವಸ್ಥೆಯೊಳಗೆ ಪಕ್ಷವನ್ನು ಕಟ್ಟಿಬೆಳೆಸುವ ಹೊಣೆಗಾರಿಕೆ ಇರಬೇಕು. ಒಂದು ವಂಶದ ನಿಯಂತ್ರಣವು ಕಾಂಗ್ರೆಸ್ ವಿರುದ್ಧ ಬಿಜೆಪಿಗೆ ದೊಡ್ಡ ಅಸ್ತ್ರವನ್ನು ಒದಗಿಸಿತ್ತು. ಲೋಕಸಭಾ ಚುನಾವಣೆಯ ನಂತರ ಮತ್ತಷ್ಟು ಹೆಚ್ಚಾಗಿದೆ. ಚುನಾವಣೆಯಲ್ಲಿ ಎರಡನೆ ಬಾರಿಯೂ ಪಕ್ಷವು ಕೇವಲ 52 ಸ್ಥಾನಗಳನ್ನು ಪಡೆದುಕೊಂಡಿದೆ, ಇದು 2014ರ ಚುನಾವಣೆಯಲ್ಲಿ ಪಡೆದಿದ್ದ 44 ಸ್ಥಾನಗಳಿಗಿಂತ ಸ್ವಲ್ಪ ಹೆಚ್ಚಾಗಿದೆ ಅಷ್ಟೇ. ಇದರಿಂದ ಪಕ್ಷವನ್ನು ಗಟ್ಟಿಗೊಳಿಸಲಾಗಿಲ್ಲ, ಜವಾಬ್ದಾರಿಯಿಂದ ಪಕ್ಷವನ್ನು ಮುನ್ನಡೆಸಬೇಕು, ಅದರಲ್ಲಿ ತಾವು ವಿಫಲವಾಗಿದ್ದೇನೆ. ಆಯ್ಕೆ ಪ್ರಕ್ರಿಯೆಯಲ್ಲಿ ನನ್ನ ಭಾಗವಹಿಸುವಿಕೆಯು ವಿಷಯಗಳನ್ನು ಸಂಕೀರ್ಣಗೊಳಿಸುತ್ತದೆ. ಹಾಗಾಗಿ ತಾನು ಆಯ್ಕೆ ಪ್ರಕ್ರಿಯೆಗೆ ಹೋಗುವುದಿಲ್ಲ ಎಂದು ನಿರ್ಧರಿಸಿದ್ದಾರೆ.

ಹಾಗೆ ನೋಡಿದರೆ, ಮಾಜಿ ಪ್ರಧಾನಿ ರಾಜೀವ್ ಗಾಂಧಿ 1991ರಲ್ಲಿ ಹತ್ಯೆಯಾದ ಸಂದರ್ಭವನ್ನು ಹೊರತು ಪಡಿಸಿದರೆ ಎಲ್ಲಾ ಕಾಲದಲ್ಲಿಯೂ ಗಾಂಧಿ ಕುಟುಂಬವೇ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದು ಮುನ್ನಡೆಸಿಕೊಂಡು ಬಂದಿದೆ. ಆದರೆ 1991ರಲ್ಲಿ ಪಕ್ಷದ ನೇತೃತ್ವದ ವಹಿಸಿಕೊಂಡ ಪಿ.ವಿ.ನರಸಿಂಹರಾವ್‍ರವರು ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ಪ್ರಧಾನಿ ಪಟ್ಟ ಎರಡನ್ನೂ ನಿರ್ವಹಿಸಿದ್ದರು. ಅವರನ್ನು ಕೆಳಗಿಳಿಸಿದ ನಂತರ ಸೀತಾರಾಂ ಕೇಸರಿಯವರು ಪಕ್ಷವನ್ನು ಸಕ್ರಿಯವಾಗಿ ಮುಂದುವರೆಸಲು ವಿಫರಾದರು. ಆ ಅವಧಿಯಲ್ಲಿ ಪಕ್ಷವು ಉತ್ತಮವಾಗಿ ಕಾರ್ಯನಿರ್ವಹಿಸಲಿಲ್ಲ. ಹಾಗಾಗಿ ಹಲವು ನಾಯಕರು ಸೋನಿಯಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಬರುವಂತೆ ಮನವೊಲಿಸಿದ್ದರು. ಸೋನಿಯಾ ಗಾಂಧಿಯವರ ರಾಜಕೀಯ ಪ್ರವೇಶದಿಂದ ಕಾಂಗ್ರೆಸ್ ಮತ್ತಷ್ಟು ಚೇತರಿಸಿಕೊಂಡಿತ್ತು. 2004ರಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಗಿತ್ತು. 10 ವರ್ಷಗಳ ಯಶಸ್ವಿ ಆಡಳಿತದ ಕೊನೆಯಲ್ಲಿ ಹಗರಣಗಳು ಮತ್ತು ಮೋದಿ ಅಲೆಯಿಂದ ಕಾಂಗ್ರೆಸ್ ಧೂಳೀಪಟವಾಗಿತ್ತು.

ಇದನ್ನು ಓದಿ:  ರಾಹುಲ್ ಗಾಂಧಿ ಹೋರಾಟವನ್ನು ಮಣ್ಣುಗೂಡಿಸಿದ ರಾಜ್ಯ ಸರ್ಕಾರ! ಕಾರಣ ಜೆಡಿಎಸ್ಸೋ? ಕಾಂಗ್ರೆಸ್ಸೋ?

ಆ ನಂತರ ನೇತೃತ್ವ ವಹಿಸಿಕೊಂಡ ರಾಹುಲ್‍ಗಾಂಧಿ ಕೊನೆ ಕೊನೆಗೆ ಒಂದಷ್ಟು ಭರವಸೆ ಮೂಡಿಸಿದ್ದರಾದರೂ, ಅದು ಚುನಾವಣಾ ಫಲಿತಾಂಶದಲ್ಲಿ ವ್ಯಕ್ತವಾಗಿಲ್ಲ. ಪುರಾತನ ಬಂಡಿಯಲ್ಲಿ ಸ್ಥಾಪಿತರಾಗಿರುವ ಹಳೇ ತಲೆಗಳನ್ನು ಕಟ್ಟಿಕೊಂಡು ಪ್ರಯಾಣ ಕಷ್ಟ ಎನ್ನುವ ಅಭಿಪ್ರಾಯ ರಾಹುಲ್‍ರದ್ದಾಗಿರಬಹುದು ಎನಿಸುತ್ತದೆ.

ಅದೇನೇ ಇರಲಿ, ಗಾಂಧಿ ಕುಟುಂಬದವರು ಸಕ್ರಿಯವಾಗಿದ್ದಾಗಲೇ, ಬೇರೆಯವರು ಪಕ್ಷದ ಚುಕ್ಕಾಣಿ ಹಿಡಿಯುವುದು ಸಾಧ್ಯವೇ ಎಂಬುದನ್ನು ಭವಿಷ್ಯದ ದಿನಗಳು ನಿರ್ಧರಿಸಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...