Homeಮುಖಪುಟಕಾಂಗ್ರೆಸ್ಸಿನ ಅಧ್ಯಕ್ಷ ಪಟ್ಟದ ಕೈ ಹಿಡಿತಾರ ರಾಹುಲ್ ಗಾಂಧಿ

ಕಾಂಗ್ರೆಸ್ಸಿನ ಅಧ್ಯಕ್ಷ ಪಟ್ಟದ ಕೈ ಹಿಡಿತಾರ ರಾಹುಲ್ ಗಾಂಧಿ

- Advertisement -
- Advertisement -

|| ಸೋಮಶೇಖರ್ ಚಲ್ಯ ||

ಆಧಾರ:: ಎನ್‍ಡಿಟಿವಿ ವರದಿ

ರಾಹುಲ್ ಗಾಂಧಿಯವರು ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ನೀಡಿ, ಹೀನಾಯ ಸೋಲು ಕಂಡ ನಂತರ ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಘೋಷಣೆ ಮಾಡಿದ್ದರು. ಆ ನಿರ್ಧಾರಕ್ಕೆ ಬದ್ದರಾಗಿದ್ದು, ಪಕ್ಷದ ಹೊಸ ಮುಖ್ಯಸ್ಥರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯ ವೈಫಲ್ಯಕ್ಕೆ ಸಂಪೂರ್ಣವಾಗಿ ತಾನೇ ಜವಾಬ್ದಾರನೆಂದು ಮೇ 26ರಂದು ಹೇಳಿದ್ದ ರಾಹುಲ್‍ಗಾಂಧಿ, ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಪಕ್ಷದ ಕಾರ್ಯಕಾರಿ ಸಮಿತಿಯ 52 ಸದಸ್ಯರಿಗೂ ತಿಳಿಸಿದ್ದರು. ಆದರೆ ಅವರೇ ಅಧ್ಯಕ್ಷರಾಗಿರಬೇಕು ಎಂಬ ನಿಲುವಿಗೆ ಅಂಟಿಕೊಂಡಿರುವ ಕಾಂಗ್ರೆಸ್ ರಾಹುಲ್‍ರವರ ನಿರ್ಧಾರವನ್ನು ನಿರಾಕರಿಸಿತ್ತು.

ಇದನ್ನು ಓದಿ:  ರಾಹುಲ್ ಅಲ್ಲದಿದ್ದರೆ ಇನ್ಯಾರು??

ಪಕ್ಷದ ಚುಕ್ಕಾಣಿಯನ್ನು ಗಾಂಧಿ ಕುಟುಂಬದ ಸದಸ್ಯರು ಮಾತ್ರ ಹಿಡಿದಿಟ್ಟುಕೊಳ್ಳಬೇಕು ಎಂದು ಪಕ್ಷದ ಹಿರಿಯರು ಸೂಚಿಸಿದ್ದಾರೆ. ರಾಹುಲ್ ಗಾಂಧಿಯವರೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಬೇಕೆಂದು ಪಕ್ಷದ ಹಿರಿಯರಿಂದ ಕಿರಿಯರವರೆಗೂ ಒತ್ತಾಯಿಸುತ್ತಿದ್ದಾರೆ. ಆದರೆ ರಾಹುಲ್ ಮಾತ್ರ ತಮ್ಮ ನಿರ್ಧಾರವನ್ನು ಬದಲಿಸಲು ನಿರಾಕರಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಸೋನಿಯಾ ಗಾಂಧಿ ಅಥವಾ ಪ್ರಿಯಾಂಕ ಗಾಂಧಿಯವರಿಗೂ ಪಕ್ಷದ ಜವಾಬ್ದಾರಿ ನೀಡಬಾರದೆಂದು ಹೇಳಿದ್ದಾರೆ.

ಪಕ್ಷದ ವ್ಯವಸ್ಥೆಯೊಳಗೆ ಪಕ್ಷವನ್ನು ಕಟ್ಟಿಬೆಳೆಸುವ ಹೊಣೆಗಾರಿಕೆ ಇರಬೇಕು. ಒಂದು ವಂಶದ ನಿಯಂತ್ರಣವು ಕಾಂಗ್ರೆಸ್ ವಿರುದ್ಧ ಬಿಜೆಪಿಗೆ ದೊಡ್ಡ ಅಸ್ತ್ರವನ್ನು ಒದಗಿಸಿತ್ತು. ಲೋಕಸಭಾ ಚುನಾವಣೆಯ ನಂತರ ಮತ್ತಷ್ಟು ಹೆಚ್ಚಾಗಿದೆ. ಚುನಾವಣೆಯಲ್ಲಿ ಎರಡನೆ ಬಾರಿಯೂ ಪಕ್ಷವು ಕೇವಲ 52 ಸ್ಥಾನಗಳನ್ನು ಪಡೆದುಕೊಂಡಿದೆ, ಇದು 2014ರ ಚುನಾವಣೆಯಲ್ಲಿ ಪಡೆದಿದ್ದ 44 ಸ್ಥಾನಗಳಿಗಿಂತ ಸ್ವಲ್ಪ ಹೆಚ್ಚಾಗಿದೆ ಅಷ್ಟೇ. ಇದರಿಂದ ಪಕ್ಷವನ್ನು ಗಟ್ಟಿಗೊಳಿಸಲಾಗಿಲ್ಲ, ಜವಾಬ್ದಾರಿಯಿಂದ ಪಕ್ಷವನ್ನು ಮುನ್ನಡೆಸಬೇಕು, ಅದರಲ್ಲಿ ತಾವು ವಿಫಲವಾಗಿದ್ದೇನೆ. ಆಯ್ಕೆ ಪ್ರಕ್ರಿಯೆಯಲ್ಲಿ ನನ್ನ ಭಾಗವಹಿಸುವಿಕೆಯು ವಿಷಯಗಳನ್ನು ಸಂಕೀರ್ಣಗೊಳಿಸುತ್ತದೆ. ಹಾಗಾಗಿ ತಾನು ಆಯ್ಕೆ ಪ್ರಕ್ರಿಯೆಗೆ ಹೋಗುವುದಿಲ್ಲ ಎಂದು ನಿರ್ಧರಿಸಿದ್ದಾರೆ.

ಹಾಗೆ ನೋಡಿದರೆ, ಮಾಜಿ ಪ್ರಧಾನಿ ರಾಜೀವ್ ಗಾಂಧಿ 1991ರಲ್ಲಿ ಹತ್ಯೆಯಾದ ಸಂದರ್ಭವನ್ನು ಹೊರತು ಪಡಿಸಿದರೆ ಎಲ್ಲಾ ಕಾಲದಲ್ಲಿಯೂ ಗಾಂಧಿ ಕುಟುಂಬವೇ ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದು ಮುನ್ನಡೆಸಿಕೊಂಡು ಬಂದಿದೆ. ಆದರೆ 1991ರಲ್ಲಿ ಪಕ್ಷದ ನೇತೃತ್ವದ ವಹಿಸಿಕೊಂಡ ಪಿ.ವಿ.ನರಸಿಂಹರಾವ್‍ರವರು ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ಪ್ರಧಾನಿ ಪಟ್ಟ ಎರಡನ್ನೂ ನಿರ್ವಹಿಸಿದ್ದರು. ಅವರನ್ನು ಕೆಳಗಿಳಿಸಿದ ನಂತರ ಸೀತಾರಾಂ ಕೇಸರಿಯವರು ಪಕ್ಷವನ್ನು ಸಕ್ರಿಯವಾಗಿ ಮುಂದುವರೆಸಲು ವಿಫರಾದರು. ಆ ಅವಧಿಯಲ್ಲಿ ಪಕ್ಷವು ಉತ್ತಮವಾಗಿ ಕಾರ್ಯನಿರ್ವಹಿಸಲಿಲ್ಲ. ಹಾಗಾಗಿ ಹಲವು ನಾಯಕರು ಸೋನಿಯಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಬರುವಂತೆ ಮನವೊಲಿಸಿದ್ದರು. ಸೋನಿಯಾ ಗಾಂಧಿಯವರ ರಾಜಕೀಯ ಪ್ರವೇಶದಿಂದ ಕಾಂಗ್ರೆಸ್ ಮತ್ತಷ್ಟು ಚೇತರಿಸಿಕೊಂಡಿತ್ತು. 2004ರಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಗಿತ್ತು. 10 ವರ್ಷಗಳ ಯಶಸ್ವಿ ಆಡಳಿತದ ಕೊನೆಯಲ್ಲಿ ಹಗರಣಗಳು ಮತ್ತು ಮೋದಿ ಅಲೆಯಿಂದ ಕಾಂಗ್ರೆಸ್ ಧೂಳೀಪಟವಾಗಿತ್ತು.

ಇದನ್ನು ಓದಿ:  ರಾಹುಲ್ ಗಾಂಧಿ ಹೋರಾಟವನ್ನು ಮಣ್ಣುಗೂಡಿಸಿದ ರಾಜ್ಯ ಸರ್ಕಾರ! ಕಾರಣ ಜೆಡಿಎಸ್ಸೋ? ಕಾಂಗ್ರೆಸ್ಸೋ?

ಆ ನಂತರ ನೇತೃತ್ವ ವಹಿಸಿಕೊಂಡ ರಾಹುಲ್‍ಗಾಂಧಿ ಕೊನೆ ಕೊನೆಗೆ ಒಂದಷ್ಟು ಭರವಸೆ ಮೂಡಿಸಿದ್ದರಾದರೂ, ಅದು ಚುನಾವಣಾ ಫಲಿತಾಂಶದಲ್ಲಿ ವ್ಯಕ್ತವಾಗಿಲ್ಲ. ಪುರಾತನ ಬಂಡಿಯಲ್ಲಿ ಸ್ಥಾಪಿತರಾಗಿರುವ ಹಳೇ ತಲೆಗಳನ್ನು ಕಟ್ಟಿಕೊಂಡು ಪ್ರಯಾಣ ಕಷ್ಟ ಎನ್ನುವ ಅಭಿಪ್ರಾಯ ರಾಹುಲ್‍ರದ್ದಾಗಿರಬಹುದು ಎನಿಸುತ್ತದೆ.

ಅದೇನೇ ಇರಲಿ, ಗಾಂಧಿ ಕುಟುಂಬದವರು ಸಕ್ರಿಯವಾಗಿದ್ದಾಗಲೇ, ಬೇರೆಯವರು ಪಕ್ಷದ ಚುಕ್ಕಾಣಿ ಹಿಡಿಯುವುದು ಸಾಧ್ಯವೇ ಎಂಬುದನ್ನು ಭವಿಷ್ಯದ ದಿನಗಳು ನಿರ್ಧರಿಸಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...