HomeಮುಖಪುಟBJP ನಾಯಕ ಕಪಿಲ್ ಮಿಶ್ರಾ ವಿರುದ್ಧ ಕ್ರಮಕ್ಕೆ ಕೋರಿದ್ದ ಅಧಿಕಾರಿಯ ಅಮಾನತು ಹಿಂಪಡೆದ ರಾಷ್ಟ್ರಪತಿ

BJP ನಾಯಕ ಕಪಿಲ್ ಮಿಶ್ರಾ ವಿರುದ್ಧ ಕ್ರಮಕ್ಕೆ ಕೋರಿದ್ದ ಅಧಿಕಾರಿಯ ಅಮಾನತು ಹಿಂಪಡೆದ ರಾಷ್ಟ್ರಪತಿ

- Advertisement -
- Advertisement -

2019 ರಲ್ಲಿ ಆಮ್‌ ಆದ್ಮಿ ಪಕ್ಷದಲ್ಲಿದ್ದ ದೆಹಲಿ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಹರಿಬಿಟ್ಟಿದ್ದ ವೀಡಿಯೊ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಳಿದ್ದಕ್ಕಾಗಿ ದೂರಸಂಪರ್ಕ ಇಲಾಖೆ ಅಧಿಕಾರಿ ಆಶಿಶ್ ಜೋಶಿ ದಂಡನೆಗೆ ಒಳಗಾಗಿದ್ದು ಅವರನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಅವರನ್ನು ಅಮಾನತುಗೊಳಿಸಿದ್ದ ಇಲಾಖೆಯ ಆದೇಶವನ್ನು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್‌ ರದ್ದುಗೊಳಿಸಿದ್ದಾರೆ.

ಅವರನ್ನು ಮತ್ತೇ ದೂರಸಂಪರ್ಕ ಇಲಾಖೆಗೆ ನೇಮಿಸಲಾಗಿದೆ ಎಂದು ವರದಿಯಾಗಿದ್ದು, ಈ ಬಗ್ಗೆ ಅವರು ಯಾವುದೆ ಪ್ರತಿಕ್ರಿಯೆಗೆ ಸಿಗಲಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. 2019 ರಲ್ಲಿ ಕಪಿಲ್ ಮಿಶ್ರಾ ಅವರ ದ್ವೇಷ ಕಾರುವ ವಿಡಿಯೊ ಬಗ್ಗೆ ಆಶಿಶ್‌ ಜೋಶಿ ದೆಹಲಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.

ಇದನ್ನೂ ಓದಿ: ‘ಅಗತ್ಯ ಬಿದ್ದರೆ, ಕಳೆದ ವರ್ಷ ಮಾಡಿದ್ದನ್ನು ಮತ್ತೆ ಮಾಡುತ್ತೇನೆ: ಕಪಿಲ್ ಮಿಶ್ರಾ ವಿವಾದಾತ್ಮಕ ಹೇಳಿಕೆ

ಕಪಿಲ್ ಮಿಶ್ರಾ 2019 ರ ಫೆಬ್ರವರಿ 24 ರಂದು ಟ್ವಿಟರ್‌‌ನಲ್ಲಿ ಕವಿತೆಯೊಂದನ್ನು ಓದಿ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದರು. ಅದರಲ್ಲಿ ಅವರು, “ದೇಶದ್ರೋಹಿಗಳ ವಿರುದ್ಧ ಯುದ್ಧ ಮಾಡುವುದಾಗಿ” ಪ್ರತಿಜ್ಞೆ ಮಾಡಿದ್ದರು.

ಅವರು ವಿಡಿಯೊದಲ್ಲಿ “ದೇಶದ್ರೋಹಿಗಳು” ಎಂದು ಪತ್ರಕರ್ತೆ ಬರ್ಖಾ ದತ್, ಹೋರಾಟಗಾರ್ತಿ ಕವಿತಾ ಕೃಷ್ಣನ್, ಶೆಹ್ಲಾ ರಶೀದ್, ರಾಜಕಾರಣಿ ನವಜೋತ್ ಸಿಂಗ್ ಸಿಧು ಮತ್ತು ನಟ ನಾಸಿರುದ್ದೀನ್ ಶಾ ಅವರ ಹೆಸರನ್ನು ಉಲ್ಲೇಖಿಸಿದ್ದರು. ಈ ವಿಡಿಯೊವನ್ನು ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದರು, ನಂತರ ಆಕ್ಷೇಪ ಬಂದದ್ದರಿಂದ ಅವನ್ನು ಡಿಲೀಟ್ ಮಾಡಿದ್ದರು.

ಈ ಸಮಯ ಡೆಹ್ರಾಡೂನ್‌ನಲ್ಲಿ ಸಂವಹನ ಖಾತೆಯ ನಿಯಂತ್ರಕರಾಗಿದ್ದ ಆಶಿಶ್‌ ಜೋಶಿ ಕಳವಳ ವ್ಯಕ್ತಪಡಿಸಿ ದೆಹಲಿ ಪೊಲೀಸ್‌ ಕಮಿಷನರ್‌ ಆಗಿದ್ದ ಅಮೂಲ್ಯ ಪಟ್ನಾಯಕ್‌ಗೆ ಪತ್ರ ಬರೆದಿದ್ದರು. ಪತ್ರದಲ್ಲಿ, “ವೀಡಿಯೊ ವಿಷಯವು ಸ್ವಯಂ ವಿವರಣಾತ್ಮಕವಾಗಿದ್ದು, ಭಾರತೀಯ ದಂಡ ಸಂಹಿತೆ ಮತ್ತು ಐಟಿ ಕಾಯ್ದೆಯನ್ನು ಉಲ್ಲಂಘಿಸುತ್ತದೆ. ದ್ವೇಷ ಕಾರುವ ವಿಡಿಯೊ ಜನರನ್ನು ದಾಳಿ ಮಾಡಲು ಪ್ರೇರೇಪಿಸುತ್ತದೆ” ಎಂದು ಉಲ್ಲೇಖಿಸಿದ್ದರು.

ಇದನ್ನೂ ಓದಿ: 3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

ಈ ಪತ್ರ 2019 ಫೆಬ್ರವರಿ 26 ರಂದು ವ್ಯಾಪಕವಾಗಿ ಹರಿದಾಡಿದ ನಂತರ ಅವರನ್ನು ಐಎಎಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಕಪಿಲ್ ಮಿಶ್ರಾ ಟ್ವೀಟ್ ಮಾಡಿದ್ದರು.

ಸರ್ಕಾರದ ಲೆಟರ್‌ಹೆಡ್ ಅನ್ನು ದುರುಪಯೋಗಪಡಿಸಿಕೊಂಡು ಅಂದಿನ ದೆಹಲಿ ಪೊಲೀಸ್ ಕಮಿಷನರ್ ಅಮೂಲ್ಯ ಪಟ್ನಾಯಕ್ ಪತ್ರ ಬರೆದಿದ್ದಕ್ಕಾಗಿ ದೂರಸಂಪರ್ಕ ಇಲಾಖೆಯು ಆಶಿಶ್‌ ಜೋಶಿಯನ್ನು ಅಮಾನತುಗೊಳಿಸಿತ್ತು ಹಾಗೂ ಅಧಿಕಾರ ವ್ಯಾಪ್ತಿಯನ್ನು ಮೀರಿ ವರ್ತಿಸಿದ್ದಕ್ಕಾಗಿ ಇಲಾಖೆಯು ಜೋಶಿ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು.

ಕಪಿಲ್ ಮಿಶ್ರಾ ಕೊನೆಗೆ ಎಎಪಿ ತೊರೆದು ಬಿಜೆಪಿಯನ್ನು ಸೇರಿದ್ದರು. ಇದರ ನಂತರ ಅವರು ವಿವಾದಾತ್ಮಕ ಹೇಳಿಕೆ ನೀಡುವುದನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. 2020 ರಲ್ಲಿ ಈಶಾನ್ಯ ದೆಹಲಿಯ ಮೌಜ್‌ಪುರದಲ್ಲಿ ಕೋಮು ಹಿಂಸಾಚಾರ ಭುಗಿಲೇಳುವ ಮುನ್ನ ಅವರು ಮಾಡಿದ ಭಾಷಣದಿಂದಾಗಿ ಫೆಬ್ರವರಿಯಲ್ಲಿ ಕೋಮುಗಲಭೆ ಭುಗಿಲೆದ್ದತ್ತು ಎಂದು ಆರೋಪಿಸಲಾಗಿದೆ. ಇಡೀ ಗಲಭೆಯನ್ನು ಅವರೇ ಪ್ರಚೋದಿಸಿದ್ದರು ಎಂಬ ಆರೋಪ ಕೂಡಾ ಅವರ ಮೇಲಿದೆ.

ಇದನ್ನೂ ಓದಿ: ಆಪ್ ಮುಖಂಡರ ಮೇಲೆ ಆರೋಪ: ಬೇಷರತ್ ಕ್ಷಮೆ ಕೇಳಿದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...