Homeಅಂತರಾಷ್ಟ್ರೀಯಅಧ್ಯಕ್ಷೀಯ ಚುನಾವಣೆ ಪ್ರಹಸನಕ್ಕೆ ತೆರೆ - ಇಂದು ಪ್ರಮಾಣವಚನ ಸ್ವೀಕರಿಸಲಿರುವ ಜೋ ಬೈಡೆನ್-ಕಮಲಾ ಹ್ಯಾರಿಸ್

ಅಧ್ಯಕ್ಷೀಯ ಚುನಾವಣೆ ಪ್ರಹಸನಕ್ಕೆ ತೆರೆ – ಇಂದು ಪ್ರಮಾಣವಚನ ಸ್ವೀಕರಿಸಲಿರುವ ಜೋ ಬೈಡೆನ್-ಕಮಲಾ ಹ್ಯಾರಿಸ್

ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಇದುವರೆಗೂ ಆರೋಪಿಸುತ್ತಲೇ ಇದ್ದ ಡೊನಾಲ್ಡ್ ಟ್ರಂಪ್, ಈಗ ಅಧಿಕಾರ ಹಸ್ತಾಂತರಿಸಲು ಒಲ್ಲದ ಮನಸ್ಸಿನಿಂದ ಒಪ್ಪಿಕೊಂಡಿದ್ದಾರೆ. 

- Advertisement -
- Advertisement -

2020 ರಲ್ಲಿ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್ ಅವರನ್ನು ಹಿಂದಿಕ್ಕಿ ಜೋ ಬೈಡೆನ್ ಅಧ್ಯಕ್ಷರಾಗಿ ಮತ್ತು ಕಮಲಾ ಹ್ಯಾರಿಸ್ ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದರು. ಇಂದು ರಾತ್ರಿ 10.30 ರ ನಂತರ (ಅಮೆರಿಕದಲ್ಲಿ 12 ಗಂಟೆ) ಇವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಡೆಮಾಕ್ರಟ್ ಪಕ್ಷದ ಟ್ರಂಪ್ ರಿಪಬ್ಲಿಕನ್ ಪಕ್ಷದ ಬೈಡೆನ್ ಎದುರು ದೊಡ್ಡ ಸೋಲನ್ನನುಭವಿಸಿದರು. ಇದನ್ನು ಒಪ್ಪಿಕೊಳ್ಳದ ಟ್ರಂಪ್ ಮಾಡಿದ ಕೆಲಸಗಳು ಅಮೆರಿಕದ ಇತಿಹಾಸದಲ್ಲಿ ಒಂದು ಕಪ್ಪು ಚುಕ್ಕೆಯಾಗಿ ಉಳಿಯಲಿದೆ.

ಇದನ್ನೂ ಓದಿ- ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ಪ್ರಜಾಪ್ರಭುತ್ವದ ಅತಿದೊಡ್ಡ ರಾಷ್ಟ್ರ ಅಮೆರಿಕ ಚುನಾವಣೆಯು, ಜಗತ್ತು ಇದುವರೆಗೂ ಕಂಡು-ಕೇಳರಿಯದ ಕೆಲವು ಘಟನೆಗಳಿಗೆ ಸಾಕ್ಷಿಯಾಯಿತು. ಅಮೆರಿಕ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದು, ಮತ ಎಣಿಕೆಯಿಂದ ಆರಂಭವಾದ ಟ್ರಂಪ್ ಪ್ರಲಾಪ ಜಾಗತಿಕವಾಗಿ ಅಮೆರಿಕವನ್ನು ಮುಜುಗರಕ್ಕೀಡು ಮಾಡಿತ್ತು.

ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಇದುವರೆಗೂ ಆರೋಪಿಸುತ್ತಲೇ ಇದ್ದ ಡೊನಾಲ್ಡ್ ಟ್ರಂಪ್, ಈಗ ಅಧಿಕಾರ ಹಸ್ತಾಂತರಿಸಲು ಒಲ್ಲದ ಮನಸ್ಸಿನಿಂದ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ- ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ಚುನಾವಣೆ ಮತ್ತು ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಮತ ಎಣಿಕೆಯ ದಿನದಿಂದ ಟ್ರಂಪ್ ಆರೋಪಿಸುತ್ತಲೇ ಇದ್ದಾರೆ. ಹಾಗಾಗಿ ಮರು ಎಣಿಕೆಗೆ ಒತ್ತಾಯಿಸುತ್ತಿದ್ದರಲ್ಲದೇ, ಚುನಾವಣೆಯನ್ನೆ ರದ್ದುಗಿಳಿಸಬೇಕು ಎಂದು ಹೇಳುತ್ತಿದ್ದರು. ಅಷ್ಟೇ ಅಲ್ಲದೇ ಇದರ ಕುರಿತಾಗಿ ಹಲವು ವಿವಾದಾತ್ಮಕ ಟ್ವೀಟ್‌ಗಳನ್ನು ಮಾಡಿದ್ದರಿಂದ, ಅದನ್ನು ಡಿಲೀಟ್ ಮಾಡುತ್ತಿದ್ದ ಟ್ವಿಟರ್ ಕಂಪನಿ, ಕೊನೆಗೆ ಟ್ರಂಪ್ ಅವರ ಖಾತೆಯನ್ನು ಬ್ಯಾನ್ ಕೂಡ ಮಾಡಿತ್ತು.

ಇತ್ತೀಚೆಗೆ ಅಮೆರಿಕದ ಕ್ಯಾಪಿಟಲ್ ಮೇಲೆ ಟ್ರಂಪ್  ಬೆಂಬಲಿಗರು ಮಾಡಿದ ದಾಳಿ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿತ್ತು. ಇದು ಪ್ರಜಾಪ್ರಭುತ್ವದ ಮೇಲೆ ನಡೆದ ಅತಿದೊಡ್ಡ ದಾಳಿ ಎಂದೂ ಬಣ್ಣಿಸಲಾಗಿತ್ತು. ಇದರ ಬೆನ್ನಲ್ಲೇ ಅಧಿಕಾರ ಹಸ್ತಾಂತರಿಸಲು ಹಿಂದೇಟು ಹಾಕುತ್ತಿದ್ದ ಟ್ರಂಪ್ ವಿರುದ್ಧ ಅಲ್ಲಿನ ಸಂಸತ್ ಎರಡು ಬಾರಿ ದೋಷಾರೋಪಣೆ (ಮಹಾಭಿಯೋಗ) ಸಲ್ಲಿಸಿತ್ತು. ಇದು ಅಮೆರಿಕದ ಇತಿಹಾಸದಲ್ಲೇ ಮೊದಲು.

ಇದನ್ನೂ ಓದಿ- ಜೋ ಬೈಡೆನ್‌ ಅವರಂತಹ ಬುದ್ಧಿವಂತ, ಪ್ರಬುದ್ಧ ನಾಯಕ ಜಗತ್ತಿಗೆ ಅವಶ್ಯಕ: ಸೋನಿಯಾ ಗಾಂಧಿ

ಇಂತಹ ಅಹಿತಕರ ಘಟನೆಗಳಿಗೆ ಸಾಕ್ಷಿಯಾದ ಅಮೆರಿಕ ಚುನಾವಣೆ ಮತ್ತಷ್ಟು ಐತಿಹಾಸಿಕ ತಿರುವುಗಳಿಗೂ ಕಾರಣವಾಗಿದೆ. ಇಡೀ ಅಮೆರಿಕದ ಇತಿಹಾಸದಲ್ಲೇ ಒಬ್ಬ ಮಹಿಳೆ ಉಪಾಧ್ಯಕ್ಷೆಯಾಗಿ ನೇಮಕವಾಗಿ ಶ್ವೇತ ಭವನದ ಮೆಟ್ಟಿಲು ಹತ್ತುತ್ತಿರುವುದು ಇದೇ ಮೊದಲು. ಇನ್ನೂ ವಿಶೇ‍ವೆಂದರೆ ಈಕೆ ಭಾರತೀಯ ಮೂಲದವರು ಎನ್ನುವುದು.

ಹೀಗೆ ಹತ್ತಾರು ಏಳು-ಬೀಳುಗಳನ್ನು ದಾಟಿದ ಅಧ್ಯಕ್ಷೀಯ ಚುನಾವಣೆಯ ಪ್ರಹಸನ ಇಂದು ತಾರ್ಕಿಕ ಅಂತ್ಯಕ್ಕೆ ಬಂದಿದೆ. ಜೋ ಬೈಡೆನ್ ಅಮೆರಿಕದ 46 ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಲಿದ್ದಾರೆ. ಈ ಮೂಲಕ ಅಧ್ಯಕ್ಷ ಚುನಾವಣೆಯ ನಾಟಕಕ್ಕೆ ತೆರೆ ಎಳೆದಿದ್ದಾರೆ.


ಇದನ್ನೂ ಓದಿ- ಜೋ ಬೈಡೆನ್ ಗೆಲುವು; ಭಾರತ-ಅಮೆರಿಕಾದ ಬಾಂಧವ್ಯ ಇನ್ನಷ್ಟು ಉತ್ತಮಗೊಳ್ಳಲಿ- ಮೋದಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...