Homeಅಂತರಾಷ್ಟ್ರೀಯಅಧ್ಯಕ್ಷೀಯ ಚುನಾವಣೆ ಪ್ರಹಸನಕ್ಕೆ ತೆರೆ - ಇಂದು ಪ್ರಮಾಣವಚನ ಸ್ವೀಕರಿಸಲಿರುವ ಜೋ ಬೈಡೆನ್-ಕಮಲಾ ಹ್ಯಾರಿಸ್

ಅಧ್ಯಕ್ಷೀಯ ಚುನಾವಣೆ ಪ್ರಹಸನಕ್ಕೆ ತೆರೆ – ಇಂದು ಪ್ರಮಾಣವಚನ ಸ್ವೀಕರಿಸಲಿರುವ ಜೋ ಬೈಡೆನ್-ಕಮಲಾ ಹ್ಯಾರಿಸ್

ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಇದುವರೆಗೂ ಆರೋಪಿಸುತ್ತಲೇ ಇದ್ದ ಡೊನಾಲ್ಡ್ ಟ್ರಂಪ್, ಈಗ ಅಧಿಕಾರ ಹಸ್ತಾಂತರಿಸಲು ಒಲ್ಲದ ಮನಸ್ಸಿನಿಂದ ಒಪ್ಪಿಕೊಂಡಿದ್ದಾರೆ. 

- Advertisement -
- Advertisement -

2020 ರಲ್ಲಿ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್ ಅವರನ್ನು ಹಿಂದಿಕ್ಕಿ ಜೋ ಬೈಡೆನ್ ಅಧ್ಯಕ್ಷರಾಗಿ ಮತ್ತು ಕಮಲಾ ಹ್ಯಾರಿಸ್ ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದರು. ಇಂದು ರಾತ್ರಿ 10.30 ರ ನಂತರ (ಅಮೆರಿಕದಲ್ಲಿ 12 ಗಂಟೆ) ಇವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಡೆಮಾಕ್ರಟ್ ಪಕ್ಷದ ಟ್ರಂಪ್ ರಿಪಬ್ಲಿಕನ್ ಪಕ್ಷದ ಬೈಡೆನ್ ಎದುರು ದೊಡ್ಡ ಸೋಲನ್ನನುಭವಿಸಿದರು. ಇದನ್ನು ಒಪ್ಪಿಕೊಳ್ಳದ ಟ್ರಂಪ್ ಮಾಡಿದ ಕೆಲಸಗಳು ಅಮೆರಿಕದ ಇತಿಹಾಸದಲ್ಲಿ ಒಂದು ಕಪ್ಪು ಚುಕ್ಕೆಯಾಗಿ ಉಳಿಯಲಿದೆ.

ಇದನ್ನೂ ಓದಿ- ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ಪ್ರಜಾಪ್ರಭುತ್ವದ ಅತಿದೊಡ್ಡ ರಾಷ್ಟ್ರ ಅಮೆರಿಕ ಚುನಾವಣೆಯು, ಜಗತ್ತು ಇದುವರೆಗೂ ಕಂಡು-ಕೇಳರಿಯದ ಕೆಲವು ಘಟನೆಗಳಿಗೆ ಸಾಕ್ಷಿಯಾಯಿತು. ಅಮೆರಿಕ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದು, ಮತ ಎಣಿಕೆಯಿಂದ ಆರಂಭವಾದ ಟ್ರಂಪ್ ಪ್ರಲಾಪ ಜಾಗತಿಕವಾಗಿ ಅಮೆರಿಕವನ್ನು ಮುಜುಗರಕ್ಕೀಡು ಮಾಡಿತ್ತು.

ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಇದುವರೆಗೂ ಆರೋಪಿಸುತ್ತಲೇ ಇದ್ದ ಡೊನಾಲ್ಡ್ ಟ್ರಂಪ್, ಈಗ ಅಧಿಕಾರ ಹಸ್ತಾಂತರಿಸಲು ಒಲ್ಲದ ಮನಸ್ಸಿನಿಂದ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ- ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ಚುನಾವಣೆ ಮತ್ತು ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಮತ ಎಣಿಕೆಯ ದಿನದಿಂದ ಟ್ರಂಪ್ ಆರೋಪಿಸುತ್ತಲೇ ಇದ್ದಾರೆ. ಹಾಗಾಗಿ ಮರು ಎಣಿಕೆಗೆ ಒತ್ತಾಯಿಸುತ್ತಿದ್ದರಲ್ಲದೇ, ಚುನಾವಣೆಯನ್ನೆ ರದ್ದುಗಿಳಿಸಬೇಕು ಎಂದು ಹೇಳುತ್ತಿದ್ದರು. ಅಷ್ಟೇ ಅಲ್ಲದೇ ಇದರ ಕುರಿತಾಗಿ ಹಲವು ವಿವಾದಾತ್ಮಕ ಟ್ವೀಟ್‌ಗಳನ್ನು ಮಾಡಿದ್ದರಿಂದ, ಅದನ್ನು ಡಿಲೀಟ್ ಮಾಡುತ್ತಿದ್ದ ಟ್ವಿಟರ್ ಕಂಪನಿ, ಕೊನೆಗೆ ಟ್ರಂಪ್ ಅವರ ಖಾತೆಯನ್ನು ಬ್ಯಾನ್ ಕೂಡ ಮಾಡಿತ್ತು.

ಇತ್ತೀಚೆಗೆ ಅಮೆರಿಕದ ಕ್ಯಾಪಿಟಲ್ ಮೇಲೆ ಟ್ರಂಪ್  ಬೆಂಬಲಿಗರು ಮಾಡಿದ ದಾಳಿ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿತ್ತು. ಇದು ಪ್ರಜಾಪ್ರಭುತ್ವದ ಮೇಲೆ ನಡೆದ ಅತಿದೊಡ್ಡ ದಾಳಿ ಎಂದೂ ಬಣ್ಣಿಸಲಾಗಿತ್ತು. ಇದರ ಬೆನ್ನಲ್ಲೇ ಅಧಿಕಾರ ಹಸ್ತಾಂತರಿಸಲು ಹಿಂದೇಟು ಹಾಕುತ್ತಿದ್ದ ಟ್ರಂಪ್ ವಿರುದ್ಧ ಅಲ್ಲಿನ ಸಂಸತ್ ಎರಡು ಬಾರಿ ದೋಷಾರೋಪಣೆ (ಮಹಾಭಿಯೋಗ) ಸಲ್ಲಿಸಿತ್ತು. ಇದು ಅಮೆರಿಕದ ಇತಿಹಾಸದಲ್ಲೇ ಮೊದಲು.

ಇದನ್ನೂ ಓದಿ- ಜೋ ಬೈಡೆನ್‌ ಅವರಂತಹ ಬುದ್ಧಿವಂತ, ಪ್ರಬುದ್ಧ ನಾಯಕ ಜಗತ್ತಿಗೆ ಅವಶ್ಯಕ: ಸೋನಿಯಾ ಗಾಂಧಿ

ಇಂತಹ ಅಹಿತಕರ ಘಟನೆಗಳಿಗೆ ಸಾಕ್ಷಿಯಾದ ಅಮೆರಿಕ ಚುನಾವಣೆ ಮತ್ತಷ್ಟು ಐತಿಹಾಸಿಕ ತಿರುವುಗಳಿಗೂ ಕಾರಣವಾಗಿದೆ. ಇಡೀ ಅಮೆರಿಕದ ಇತಿಹಾಸದಲ್ಲೇ ಒಬ್ಬ ಮಹಿಳೆ ಉಪಾಧ್ಯಕ್ಷೆಯಾಗಿ ನೇಮಕವಾಗಿ ಶ್ವೇತ ಭವನದ ಮೆಟ್ಟಿಲು ಹತ್ತುತ್ತಿರುವುದು ಇದೇ ಮೊದಲು. ಇನ್ನೂ ವಿಶೇ‍ವೆಂದರೆ ಈಕೆ ಭಾರತೀಯ ಮೂಲದವರು ಎನ್ನುವುದು.

ಹೀಗೆ ಹತ್ತಾರು ಏಳು-ಬೀಳುಗಳನ್ನು ದಾಟಿದ ಅಧ್ಯಕ್ಷೀಯ ಚುನಾವಣೆಯ ಪ್ರಹಸನ ಇಂದು ತಾರ್ಕಿಕ ಅಂತ್ಯಕ್ಕೆ ಬಂದಿದೆ. ಜೋ ಬೈಡೆನ್ ಅಮೆರಿಕದ 46 ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಲಿದ್ದಾರೆ. ಈ ಮೂಲಕ ಅಧ್ಯಕ್ಷ ಚುನಾವಣೆಯ ನಾಟಕಕ್ಕೆ ತೆರೆ ಎಳೆದಿದ್ದಾರೆ.


ಇದನ್ನೂ ಓದಿ- ಜೋ ಬೈಡೆನ್ ಗೆಲುವು; ಭಾರತ-ಅಮೆರಿಕಾದ ಬಾಂಧವ್ಯ ಇನ್ನಷ್ಟು ಉತ್ತಮಗೊಳ್ಳಲಿ- ಮೋದಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...