Homeಅಂತರಾಷ್ಟ್ರೀಯಅಧ್ಯಕ್ಷೀಯ ಚುನಾವಣೆ ಪ್ರಹಸನಕ್ಕೆ ತೆರೆ - ಇಂದು ಪ್ರಮಾಣವಚನ ಸ್ವೀಕರಿಸಲಿರುವ ಜೋ ಬೈಡೆನ್-ಕಮಲಾ ಹ್ಯಾರಿಸ್

ಅಧ್ಯಕ್ಷೀಯ ಚುನಾವಣೆ ಪ್ರಹಸನಕ್ಕೆ ತೆರೆ – ಇಂದು ಪ್ರಮಾಣವಚನ ಸ್ವೀಕರಿಸಲಿರುವ ಜೋ ಬೈಡೆನ್-ಕಮಲಾ ಹ್ಯಾರಿಸ್

ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಇದುವರೆಗೂ ಆರೋಪಿಸುತ್ತಲೇ ಇದ್ದ ಡೊನಾಲ್ಡ್ ಟ್ರಂಪ್, ಈಗ ಅಧಿಕಾರ ಹಸ್ತಾಂತರಿಸಲು ಒಲ್ಲದ ಮನಸ್ಸಿನಿಂದ ಒಪ್ಪಿಕೊಂಡಿದ್ದಾರೆ. 

- Advertisement -
- Advertisement -

2020 ರಲ್ಲಿ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್ ಅವರನ್ನು ಹಿಂದಿಕ್ಕಿ ಜೋ ಬೈಡೆನ್ ಅಧ್ಯಕ್ಷರಾಗಿ ಮತ್ತು ಕಮಲಾ ಹ್ಯಾರಿಸ್ ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದರು. ಇಂದು ರಾತ್ರಿ 10.30 ರ ನಂತರ (ಅಮೆರಿಕದಲ್ಲಿ 12 ಗಂಟೆ) ಇವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಡೆಮಾಕ್ರಟ್ ಪಕ್ಷದ ಟ್ರಂಪ್ ರಿಪಬ್ಲಿಕನ್ ಪಕ್ಷದ ಬೈಡೆನ್ ಎದುರು ದೊಡ್ಡ ಸೋಲನ್ನನುಭವಿಸಿದರು. ಇದನ್ನು ಒಪ್ಪಿಕೊಳ್ಳದ ಟ್ರಂಪ್ ಮಾಡಿದ ಕೆಲಸಗಳು ಅಮೆರಿಕದ ಇತಿಹಾಸದಲ್ಲಿ ಒಂದು ಕಪ್ಪು ಚುಕ್ಕೆಯಾಗಿ ಉಳಿಯಲಿದೆ.

ಇದನ್ನೂ ಓದಿ- ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ಪ್ರಜಾಪ್ರಭುತ್ವದ ಅತಿದೊಡ್ಡ ರಾಷ್ಟ್ರ ಅಮೆರಿಕ ಚುನಾವಣೆಯು, ಜಗತ್ತು ಇದುವರೆಗೂ ಕಂಡು-ಕೇಳರಿಯದ ಕೆಲವು ಘಟನೆಗಳಿಗೆ ಸಾಕ್ಷಿಯಾಯಿತು. ಅಮೆರಿಕ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದು, ಮತ ಎಣಿಕೆಯಿಂದ ಆರಂಭವಾದ ಟ್ರಂಪ್ ಪ್ರಲಾಪ ಜಾಗತಿಕವಾಗಿ ಅಮೆರಿಕವನ್ನು ಮುಜುಗರಕ್ಕೀಡು ಮಾಡಿತ್ತು.

ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಇದುವರೆಗೂ ಆರೋಪಿಸುತ್ತಲೇ ಇದ್ದ ಡೊನಾಲ್ಡ್ ಟ್ರಂಪ್, ಈಗ ಅಧಿಕಾರ ಹಸ್ತಾಂತರಿಸಲು ಒಲ್ಲದ ಮನಸ್ಸಿನಿಂದ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ- ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ಚುನಾವಣೆ ಮತ್ತು ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಮತ ಎಣಿಕೆಯ ದಿನದಿಂದ ಟ್ರಂಪ್ ಆರೋಪಿಸುತ್ತಲೇ ಇದ್ದಾರೆ. ಹಾಗಾಗಿ ಮರು ಎಣಿಕೆಗೆ ಒತ್ತಾಯಿಸುತ್ತಿದ್ದರಲ್ಲದೇ, ಚುನಾವಣೆಯನ್ನೆ ರದ್ದುಗಿಳಿಸಬೇಕು ಎಂದು ಹೇಳುತ್ತಿದ್ದರು. ಅಷ್ಟೇ ಅಲ್ಲದೇ ಇದರ ಕುರಿತಾಗಿ ಹಲವು ವಿವಾದಾತ್ಮಕ ಟ್ವೀಟ್‌ಗಳನ್ನು ಮಾಡಿದ್ದರಿಂದ, ಅದನ್ನು ಡಿಲೀಟ್ ಮಾಡುತ್ತಿದ್ದ ಟ್ವಿಟರ್ ಕಂಪನಿ, ಕೊನೆಗೆ ಟ್ರಂಪ್ ಅವರ ಖಾತೆಯನ್ನು ಬ್ಯಾನ್ ಕೂಡ ಮಾಡಿತ್ತು.

ಇತ್ತೀಚೆಗೆ ಅಮೆರಿಕದ ಕ್ಯಾಪಿಟಲ್ ಮೇಲೆ ಟ್ರಂಪ್  ಬೆಂಬಲಿಗರು ಮಾಡಿದ ದಾಳಿ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿತ್ತು. ಇದು ಪ್ರಜಾಪ್ರಭುತ್ವದ ಮೇಲೆ ನಡೆದ ಅತಿದೊಡ್ಡ ದಾಳಿ ಎಂದೂ ಬಣ್ಣಿಸಲಾಗಿತ್ತು. ಇದರ ಬೆನ್ನಲ್ಲೇ ಅಧಿಕಾರ ಹಸ್ತಾಂತರಿಸಲು ಹಿಂದೇಟು ಹಾಕುತ್ತಿದ್ದ ಟ್ರಂಪ್ ವಿರುದ್ಧ ಅಲ್ಲಿನ ಸಂಸತ್ ಎರಡು ಬಾರಿ ದೋಷಾರೋಪಣೆ (ಮಹಾಭಿಯೋಗ) ಸಲ್ಲಿಸಿತ್ತು. ಇದು ಅಮೆರಿಕದ ಇತಿಹಾಸದಲ್ಲೇ ಮೊದಲು.

ಇದನ್ನೂ ಓದಿ- ಜೋ ಬೈಡೆನ್‌ ಅವರಂತಹ ಬುದ್ಧಿವಂತ, ಪ್ರಬುದ್ಧ ನಾಯಕ ಜಗತ್ತಿಗೆ ಅವಶ್ಯಕ: ಸೋನಿಯಾ ಗಾಂಧಿ

ಇಂತಹ ಅಹಿತಕರ ಘಟನೆಗಳಿಗೆ ಸಾಕ್ಷಿಯಾದ ಅಮೆರಿಕ ಚುನಾವಣೆ ಮತ್ತಷ್ಟು ಐತಿಹಾಸಿಕ ತಿರುವುಗಳಿಗೂ ಕಾರಣವಾಗಿದೆ. ಇಡೀ ಅಮೆರಿಕದ ಇತಿಹಾಸದಲ್ಲೇ ಒಬ್ಬ ಮಹಿಳೆ ಉಪಾಧ್ಯಕ್ಷೆಯಾಗಿ ನೇಮಕವಾಗಿ ಶ್ವೇತ ಭವನದ ಮೆಟ್ಟಿಲು ಹತ್ತುತ್ತಿರುವುದು ಇದೇ ಮೊದಲು. ಇನ್ನೂ ವಿಶೇ‍ವೆಂದರೆ ಈಕೆ ಭಾರತೀಯ ಮೂಲದವರು ಎನ್ನುವುದು.

ಹೀಗೆ ಹತ್ತಾರು ಏಳು-ಬೀಳುಗಳನ್ನು ದಾಟಿದ ಅಧ್ಯಕ್ಷೀಯ ಚುನಾವಣೆಯ ಪ್ರಹಸನ ಇಂದು ತಾರ್ಕಿಕ ಅಂತ್ಯಕ್ಕೆ ಬಂದಿದೆ. ಜೋ ಬೈಡೆನ್ ಅಮೆರಿಕದ 46 ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಲಿದ್ದಾರೆ. ಈ ಮೂಲಕ ಅಧ್ಯಕ್ಷ ಚುನಾವಣೆಯ ನಾಟಕಕ್ಕೆ ತೆರೆ ಎಳೆದಿದ್ದಾರೆ.


ಇದನ್ನೂ ಓದಿ- ಜೋ ಬೈಡೆನ್ ಗೆಲುವು; ಭಾರತ-ಅಮೆರಿಕಾದ ಬಾಂಧವ್ಯ ಇನ್ನಷ್ಟು ಉತ್ತಮಗೊಳ್ಳಲಿ- ಮೋದಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...