Homeಮುಖಪುಟರಾಷ್ಟ್ರಪತಿ ಚುನಾವಣೆ ಫಲಿತಾಂಶ: ಸಂಸದರ ಮತಗಳಲ್ಲಿ ದ್ರೌಪದಿ ಮುರ್ಮುಗೆ 540 ಮತ, ಸಿನ್ಹಾಗೆ 208

ರಾಷ್ಟ್ರಪತಿ ಚುನಾವಣೆ ಫಲಿತಾಂಶ: ಸಂಸದರ ಮತಗಳಲ್ಲಿ ದ್ರೌಪದಿ ಮುರ್ಮುಗೆ 540 ಮತ, ಸಿನ್ಹಾಗೆ 208

- Advertisement -
- Advertisement -

ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಪಾರ್ಲಿಮೆಂಟ್ ಹೌಸ್‌ನ 63ನೇ ರೂಂನಲ್ಲಿ ಆರಂಭಗೊಂಡಿದ್ದು, ಲೋಕಸಭೆ ಮತ್ತು ರಾಜ್ಯಸಭೆ ಸಂಸದರ ಮತ ಎಣಿಕೆ ಮುಕ್ತಾಯವಾಗಿದೆ. ಅದರಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ 540 ಮತ ಪಡೆದರೆ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ 208 ಮತಗಳನ್ನು ಪಡೆದಿದ್ದಾರೆ. ಉಳಿದ 15 ಮತಗಳು ಅಸಿಂಧುಗೊಂಡಿವೆ.

ರಾಷ್ಟ್ರಪತಿ ಚುನಾವಣೆಯಲ್ಲಿ ಸಂಸತ್ತಿನ ಸದಸ್ಯರು ಮತ್ತು ವಿಧಾನಸಭೆಯ ಸದಸ್ಯರಿಗೆ ವಿಭಿನ್ನ ಮೌಲ್ಯಗಳನ್ನು ನಿಗದಿಪಡಿಸಲಾಗಿದೆ. ಒಬ್ಬ ಸಂಸದನ ಮತದ ಮೌಲ್ಯವನ್ನು ‘700’ ಎಂದು ನಿಗದಿ ಪಡಿಸಲಾಗಿದೆ. ಈ ಮೌಲ್ಯವನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು ಮತಗಳ ಮೌಲ್ಯವನ್ನು, ಒಟ್ಟು ಚುನಾಯಿತ ಸಂಸದರ ಸಂಖ್ಯೆಯಿಂದ ಭಾಗಿಸುವ ಮೂಲಕ ಲೆಕ್ಕಹಾಕಲಾಗುತ್ತದೆ. ಭಾರತೀಯ ಚುನಾವಣಾ ಆಯೋಗದ ಪ್ರಕಾರ, ಸಂಸತ್ತಿನ ಒಟ್ಟು ಮತಗಳ ಸಂಖ್ಯೆ 5,43,200 ಮತ್ತು ಸಂಸದರ ಸಂಖ್ಯೆ 776 ಆಗಿರುವುದರಿಂದ, ಪ್ರತಿ ಸಂಸದರ ಮತದ ಮೌಲ್ಯ 700 ಆಗಿರುತ್ತದೆ.

ಈ ನಿಟ್ಟಿನಲ್ಲಿ ಇದುವರೆಗೂ ದ್ರೌಪದಿ ಮುರ್ಮುರವರು ಸದ್ಯಕ್ಕೆ 3.78 ಲಕ್ಷ ಮತಗಳ ಮೌಲ್ಯ (72%) ಪಡೆದರೆ ಯಶವಂತ ಸಿನ್ಹಾರವರು 1.45 ಮತಗಳ ಮೌಲ್ಯ (28%) ಪಡೆದಿದ್ದಾರೆ.

ಈಗ ವಿಧಾನಸಭಾ ಸದಸ್ಯರ ಮತಗಳನ್ನು ಎಣಿಕೆ ಮಾಡಲಾಗುತ್ತಿದೆ. ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದ್ದು, ದ್ರೌಪದಿ ಮುರ್ಮುರವರು ರಾಷ್ಟ್ರದ ಪ್ರಥಮ ಪ್ರಜೆಯಾಗುವುದು ಬಹುತೇಕ ಖಚಿತವಾಗಿದೆ. ಆ ಮೂಲಕ ಮೊದಲ ಆದಿವಾಸಿ ಮಹಿಳೆ ಮತ್ತು ಎರಡನೇ ಮಹಿಳಾ ರಾಷ್ಟ್ರಪತಿಯಾಗಿ ಅವರು ಆಯ್ಕೆಯಾಗಲಿದ್ದಾರೆ.

ಇದನ್ನೂ ಓದಿ: ಭಾರತದ ರಾಷ್ಟ್ರಪತಿಯನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ? | ಸಂಕ್ಷಿಪ್ತ ವಿವರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...