Homeರಾಷ್ಟ್ರೀಯರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಶರದ್‌ ಪವಾರ್‌‌ ಸಾಧ್ಯತೆ

ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಶರದ್‌ ಪವಾರ್‌‌ ಸಾಧ್ಯತೆ

- Advertisement -
- Advertisement -

ರಾಷ್ಟ್ರಪತಿ ಚುನಾವಣೆಗೆ ಮುನ್ನ, ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಸರಣೆ ಸಭೆಯು ಒಮ್ಮತದ ಅಭ್ಯರ್ಥಿಯ ಹುಡುಕಾಟವನ್ನು ತೀವ್ರಗೊಳಿಸುತ್ತಿದೆ ಎಂದು ಸೂಚಿಸುತ್ತದೆ. ಈ ಸಭೆಗಳು ಒಕ್ಕೂಟ ಸರ್ಕಾರದ ಮಾಜಿ ಸಚಿವ ಶರದ್ ಪವಾರ್ ಅವರನ್ನು ಸುತ್ತುವರೆದಿರುವುದರಿಂದ, ಜುಲೈನಲ್ಲಿ ನಡೆಯಲಿರುವ ರಾಷ್ಟ್ರಪತಿ ಹುದ್ದೆಯ ಚುನಾವಣೆಗೆ ಅವರು ವಿರೋಧ ಪಕ್ಷದ ಅಭ್ಯರ್ಥಿಯಾಗಿ ಹೊರಹೊಮ್ಮಲಿದ್ದಾರೆ ಎಂಬ ಊಹೆಯಿದೆ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ.

ರಾಷ್ಟ್ರಪತಿ ಹುದ್ದೆಗೆ ಶರದ್ ಪವಾರ್ ಅವರಿಗೆ ಕಾಂಗ್ರೆಸ್ ತನ್ನ ಬೆಂಬಲವನ್ನು ನೀಡಿದೆ ಎಂದು ವರದಿಯಾಗಿದೆ. ಕಳೆದ ಗುರುವಾರ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಯವರ ಸಂದೇಶದೊಂದಿಗೆ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶರದ್ ಪವಾರ್ ಅವರನ್ನು ಮುಂಬೈನಲ್ಲಿ ಭೇಟಿಯಾಗಿದ್ದರು.ಈ ಸಲಹೆಗೆ ಎನ್‌ಸಿಪಿ ನಾಯಕ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ, ಶರದ್‌ ಪವಾರ್ ಅವರು ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸಂಜಯ್ ಸಿಂಗ್ ಅವರಿಂದ ಕರೆ ಸ್ವೀಕರಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಹೇಳಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರೊಂದಿಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಶಿಕ್ಷಣವನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ರಾಷ್ಟ್ರಪತಿ ಚುನಾವಣೆಗೆ ಜಂಟಿ ಕಾರ್ಯತಂತ್ರದ ಕುರಿತು ಚರ್ಚಿಸಲು ಬುಧವಾರ ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಪ್ರತಿಪಕ್ಷಗಳ ಸಭೆಗೆ ಕರೆದಿರುವ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೂರವಾಣಿಯಲ್ಲಿ ಮಾತನಾಡಿದ್ದಾರೆ.

ರಾಷ್ಟ್ರಪತಿ ಚುನಾವಣೆ ಜುಲೈ 18 ರಂದು ನಡೆಯಲಿದೆ. ಇದಾಗಿ ಮೂರು ದಿನಗಳ ನಂತರ ಮತ ಎಣಿಕೆ ನಡೆಯಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಕೊನೆಗೊಳ್ಳಲಿದೆ.

ಭಾರತದ ಅತ್ಯಂತ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಶರದ್‌ ಪವಾರ್ ಅವರು ಅನೇಕ ಮೈತ್ರಿಗಳು ಮತ್ತು ಸಮ್ಮಿಶ್ರ ಸರ್ಕಾರಗಳನ್ನು ಮಾಡಿದ ಮತ್ತು ಮುರಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಬಿಜೆಪಿಯನ್ನು ವಿಫಲಗೊಳಿಸಲು ಸೈದ್ಧಾಂತಿಕ ವಿರೋಧ ಪಕ್ಷಗಳಾದ ಶಿವಸೇನೆ ಮತ್ತು ಕಾಂಗ್ರೆಸ್‌ಗಳನ್ನು ಒಟ್ಟುಗೂಡಿಸಿ ಮಹಾರಾಷ್ಟ್ರದಲ್ಲಿ ಮೈತ್ರಿ ಆಡಳಿತ ಒಕ್ಕೂಟವನ್ನು ರಚಿಸಿದ್ದಾರೆ.

ಇದನ್ನೂ ಓದಿ: ಬಾಂಬೆ ಹೈಕೋರ್ಟ್‌ನ ವಿವಾದಾತ್ಮಕ ನ್ಯಾಯಮೂರ್ತಿ ಪುಷ್ಪಾ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ

ಬಿಜೆಪಿಯು ತನ್ನ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಸಚಿವ ರಾಜನಾಥ್ ಸಿಂಗ್ ಅವರಿಗೆ ವಿವಿಧ ಪಕ್ಷಗಳೊಂದಿಗೆ ಚರ್ಚೆ ನಡೆಸಿ ಅವಿರೋಧ ಆಯ್ಕೆ ನಡೆಯುವಂತೆ ನೋಡಿಕೊಳ್ಳಲು ನೇಮಿಸಿದೆ.

2017 ರಲ್ಲಿ ಬಿಜೆಪಿ ರಾಜನಾಥ್ ಸಿಂಗ್ ಮತ್ತು ವೆಂಕಯ್ಯ ನಾಯ್ಡು ಅವರನ್ನು ಪ್ರಚಾರಕ್ಕಾಗಿ ನಾಮನಿರ್ದೇಶನ ಮಾಡಿತ್ತು. ನಂತರ ವೆಂಕಯ್ಯ ನಾಯ್ಡು ಅವರನ್ನು ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಹೆಸರಿಸಲಾಯಿತು. ಒಮ್ಮತ ಮೂಡದಿದ್ದರೆ ಬಿಜೆಪಿ ಚುನಾವಣೆಗೆ ತಯಾರಿ ನಡೆಸಲಿದೆ. ಅನೇಕ ಹೆಸರುಗಳು ಮುನ್ನಲೆಗೆ ಬಂದಿದ್ದರೂ, ಬಿಜೆಪಿ ಯಾವುದನ್ನೂ ಖಚಿತಪಡಿಸಿಲ್ಲ.

ಶಾಸಕರು ಮತ್ತು ಸಂಸದರ ಮತಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನ ಆಧಾರದ ಮೇಲೆ ಅಧ್ಯಕ್ಷೀಯ ಚುನಾವಣೆ ನಡೆಯುತ್ತದೆ. ಸಂಸದರು ಮತ್ತು ಶಾಸಕರು ಸೇರಿದಂತೆ ಸುಮಾರು 4,809 ಮತದಾರರು ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಮತ ಚಲಾಯಿಸುತ್ತಾರೆ.

ಪ್ರತಿ ಶಾಸಕರ ಮತ ಮೌಲ್ಯವು ರಾಜ್ಯದ ಜನಸಂಖ್ಯೆ ಮತ್ತು ವಿಧಾನಸಭಾ ಸ್ಥಾನಗಳ ಸಂಖ್ಯೆಯನ್ನು ಅವಲಂಬಿಸಿರುತ್ತದೆ. ಚುನಾವಣಾ ಕಾಲೇಜಿನ ಒಟ್ಟು ಸಾಮರ್ಥ್ಯ 10,86,431 ಆಗಿದ್ದು, ಇದರಲ್ಲಿ 50% ದಷ್ಟು ಮತಗಳನ್ನು ದಾಟಿದ ಯಾವುದೇ ಅಭ್ಯರ್ಥಿ ಗೆಲ್ಲುತ್ತಾರೆ.

ಇದನ್ನೂ ಓದಿ: ಧರ್ಮ ಆಚರಿಸಿ, ದ್ವೇಷ ಭಾಷಣವನ್ನಲ್ಲ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಗೆ ಬಹುಮತಕ್ಕೆ 13,000 ಮತಗಳ ಕೊರತೆಯಿದೆ.

2017 ರಲ್ಲಿ, ಆಡಳಿತಾರೂಢ ಒಕ್ಕೂಟವು ಕೆ. ಚಂದ್ರಶೇಖರ ರಾವ್ ಅವರ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್), ಜಗನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಬಿಜೆಡಿ ಬೆಂಬಲವನ್ನು ಪಡೆದಿತ್ತು.

ಆದರೆ ಈ ಬಾರಿ, ಚಂದ್ರಶೇಖರ ರಾವ್ ಅವರ ಕೆಸಿಆರ್ ಪಕ್ಷವೂ, ಬಿಜೆಪಿಯನ್ನು ಜಂಟಿಯಾಗಿ ಎದುರಿಸಲು ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನಗಳನ್ನು ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...