Homeರಾಷ್ಟ್ರೀಯರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಶರದ್‌ ಪವಾರ್‌‌ ಸಾಧ್ಯತೆ

ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಶರದ್‌ ಪವಾರ್‌‌ ಸಾಧ್ಯತೆ

- Advertisement -
- Advertisement -

ರಾಷ್ಟ್ರಪತಿ ಚುನಾವಣೆಗೆ ಮುನ್ನ, ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಸರಣೆ ಸಭೆಯು ಒಮ್ಮತದ ಅಭ್ಯರ್ಥಿಯ ಹುಡುಕಾಟವನ್ನು ತೀವ್ರಗೊಳಿಸುತ್ತಿದೆ ಎಂದು ಸೂಚಿಸುತ್ತದೆ. ಈ ಸಭೆಗಳು ಒಕ್ಕೂಟ ಸರ್ಕಾರದ ಮಾಜಿ ಸಚಿವ ಶರದ್ ಪವಾರ್ ಅವರನ್ನು ಸುತ್ತುವರೆದಿರುವುದರಿಂದ, ಜುಲೈನಲ್ಲಿ ನಡೆಯಲಿರುವ ರಾಷ್ಟ್ರಪತಿ ಹುದ್ದೆಯ ಚುನಾವಣೆಗೆ ಅವರು ವಿರೋಧ ಪಕ್ಷದ ಅಭ್ಯರ್ಥಿಯಾಗಿ ಹೊರಹೊಮ್ಮಲಿದ್ದಾರೆ ಎಂಬ ಊಹೆಯಿದೆ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ.

ರಾಷ್ಟ್ರಪತಿ ಹುದ್ದೆಗೆ ಶರದ್ ಪವಾರ್ ಅವರಿಗೆ ಕಾಂಗ್ರೆಸ್ ತನ್ನ ಬೆಂಬಲವನ್ನು ನೀಡಿದೆ ಎಂದು ವರದಿಯಾಗಿದೆ. ಕಳೆದ ಗುರುವಾರ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಯವರ ಸಂದೇಶದೊಂದಿಗೆ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶರದ್ ಪವಾರ್ ಅವರನ್ನು ಮುಂಬೈನಲ್ಲಿ ಭೇಟಿಯಾಗಿದ್ದರು.ಈ ಸಲಹೆಗೆ ಎನ್‌ಸಿಪಿ ನಾಯಕ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ, ಶರದ್‌ ಪವಾರ್ ಅವರು ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸಂಜಯ್ ಸಿಂಗ್ ಅವರಿಂದ ಕರೆ ಸ್ವೀಕರಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಹೇಳಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರೊಂದಿಗೆ ಮಾತನಾಡಿದ್ದಾರೆ.

ಇದನ್ನೂ ಓದಿ: ಶಿಕ್ಷಣವನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ರಾಷ್ಟ್ರಪತಿ ಚುನಾವಣೆಗೆ ಜಂಟಿ ಕಾರ್ಯತಂತ್ರದ ಕುರಿತು ಚರ್ಚಿಸಲು ಬುಧವಾರ ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಪ್ರತಿಪಕ್ಷಗಳ ಸಭೆಗೆ ಕರೆದಿರುವ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೂರವಾಣಿಯಲ್ಲಿ ಮಾತನಾಡಿದ್ದಾರೆ.

ರಾಷ್ಟ್ರಪತಿ ಚುನಾವಣೆ ಜುಲೈ 18 ರಂದು ನಡೆಯಲಿದೆ. ಇದಾಗಿ ಮೂರು ದಿನಗಳ ನಂತರ ಮತ ಎಣಿಕೆ ನಡೆಯಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಕೊನೆಗೊಳ್ಳಲಿದೆ.

ಭಾರತದ ಅತ್ಯಂತ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಶರದ್‌ ಪವಾರ್ ಅವರು ಅನೇಕ ಮೈತ್ರಿಗಳು ಮತ್ತು ಸಮ್ಮಿಶ್ರ ಸರ್ಕಾರಗಳನ್ನು ಮಾಡಿದ ಮತ್ತು ಮುರಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಬಿಜೆಪಿಯನ್ನು ವಿಫಲಗೊಳಿಸಲು ಸೈದ್ಧಾಂತಿಕ ವಿರೋಧ ಪಕ್ಷಗಳಾದ ಶಿವಸೇನೆ ಮತ್ತು ಕಾಂಗ್ರೆಸ್‌ಗಳನ್ನು ಒಟ್ಟುಗೂಡಿಸಿ ಮಹಾರಾಷ್ಟ್ರದಲ್ಲಿ ಮೈತ್ರಿ ಆಡಳಿತ ಒಕ್ಕೂಟವನ್ನು ರಚಿಸಿದ್ದಾರೆ.

ಇದನ್ನೂ ಓದಿ: ಬಾಂಬೆ ಹೈಕೋರ್ಟ್‌ನ ವಿವಾದಾತ್ಮಕ ನ್ಯಾಯಮೂರ್ತಿ ಪುಷ್ಪಾ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ

ಬಿಜೆಪಿಯು ತನ್ನ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಸಚಿವ ರಾಜನಾಥ್ ಸಿಂಗ್ ಅವರಿಗೆ ವಿವಿಧ ಪಕ್ಷಗಳೊಂದಿಗೆ ಚರ್ಚೆ ನಡೆಸಿ ಅವಿರೋಧ ಆಯ್ಕೆ ನಡೆಯುವಂತೆ ನೋಡಿಕೊಳ್ಳಲು ನೇಮಿಸಿದೆ.

2017 ರಲ್ಲಿ ಬಿಜೆಪಿ ರಾಜನಾಥ್ ಸಿಂಗ್ ಮತ್ತು ವೆಂಕಯ್ಯ ನಾಯ್ಡು ಅವರನ್ನು ಪ್ರಚಾರಕ್ಕಾಗಿ ನಾಮನಿರ್ದೇಶನ ಮಾಡಿತ್ತು. ನಂತರ ವೆಂಕಯ್ಯ ನಾಯ್ಡು ಅವರನ್ನು ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಹೆಸರಿಸಲಾಯಿತು. ಒಮ್ಮತ ಮೂಡದಿದ್ದರೆ ಬಿಜೆಪಿ ಚುನಾವಣೆಗೆ ತಯಾರಿ ನಡೆಸಲಿದೆ. ಅನೇಕ ಹೆಸರುಗಳು ಮುನ್ನಲೆಗೆ ಬಂದಿದ್ದರೂ, ಬಿಜೆಪಿ ಯಾವುದನ್ನೂ ಖಚಿತಪಡಿಸಿಲ್ಲ.

ಶಾಸಕರು ಮತ್ತು ಸಂಸದರ ಮತಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನ ಆಧಾರದ ಮೇಲೆ ಅಧ್ಯಕ್ಷೀಯ ಚುನಾವಣೆ ನಡೆಯುತ್ತದೆ. ಸಂಸದರು ಮತ್ತು ಶಾಸಕರು ಸೇರಿದಂತೆ ಸುಮಾರು 4,809 ಮತದಾರರು ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಮತ ಚಲಾಯಿಸುತ್ತಾರೆ.

ಪ್ರತಿ ಶಾಸಕರ ಮತ ಮೌಲ್ಯವು ರಾಜ್ಯದ ಜನಸಂಖ್ಯೆ ಮತ್ತು ವಿಧಾನಸಭಾ ಸ್ಥಾನಗಳ ಸಂಖ್ಯೆಯನ್ನು ಅವಲಂಬಿಸಿರುತ್ತದೆ. ಚುನಾವಣಾ ಕಾಲೇಜಿನ ಒಟ್ಟು ಸಾಮರ್ಥ್ಯ 10,86,431 ಆಗಿದ್ದು, ಇದರಲ್ಲಿ 50% ದಷ್ಟು ಮತಗಳನ್ನು ದಾಟಿದ ಯಾವುದೇ ಅಭ್ಯರ್ಥಿ ಗೆಲ್ಲುತ್ತಾರೆ.

ಇದನ್ನೂ ಓದಿ: ಧರ್ಮ ಆಚರಿಸಿ, ದ್ವೇಷ ಭಾಷಣವನ್ನಲ್ಲ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಗೆ ಬಹುಮತಕ್ಕೆ 13,000 ಮತಗಳ ಕೊರತೆಯಿದೆ.

2017 ರಲ್ಲಿ, ಆಡಳಿತಾರೂಢ ಒಕ್ಕೂಟವು ಕೆ. ಚಂದ್ರಶೇಖರ ರಾವ್ ಅವರ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್), ಜಗನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಬಿಜೆಡಿ ಬೆಂಬಲವನ್ನು ಪಡೆದಿತ್ತು.

ಆದರೆ ಈ ಬಾರಿ, ಚಂದ್ರಶೇಖರ ರಾವ್ ಅವರ ಕೆಸಿಆರ್ ಪಕ್ಷವೂ, ಬಿಜೆಪಿಯನ್ನು ಜಂಟಿಯಾಗಿ ಎದುರಿಸಲು ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನಗಳನ್ನು ಮಾಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...