Homeರಾಜಕೀಯರಾಷ್ಟ್ರಪತಿ ಚುನಾವಣೆ - ‘ದ್ರೌಪದಿ ಮುರ್ಮು ಬಗ್ಗೆ ಗೌರವವಿದೆ, ಆದರೆ...’: ಯಶವಂತ ಸಿನ್ಹಾ ಬೆಂಬಲಿಸಿದ ಆಮ್‌...

ರಾಷ್ಟ್ರಪತಿ ಚುನಾವಣೆ – ‘ದ್ರೌಪದಿ ಮುರ್ಮು ಬಗ್ಗೆ ಗೌರವವಿದೆ, ಆದರೆ…’: ಯಶವಂತ ಸಿನ್ಹಾ ಬೆಂಬಲಿಸಿದ ಆಮ್‌ ಆದ್ಮಿ ಪಕ್ಷ

- Advertisement -
- Advertisement -

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷದ ಜಂಟಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸುವುದಾಗಿ ಆಮ್ ಆದ್ಮಿ ಪಕ್ಷ ಶನಿವಾರ ಘೋಷಿಸಿದೆ. ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಈ ಘೋಷಣೆ ಮಾಡಿದ್ದಾರೆ.

“ನಮಗೆ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಬಗ್ಗೆ ಗೌರವವಿದೆ. ಆದರೆ ನಾವು ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸುತ್ತೇವೆ” ಎಂದು ಪಕ್ಷದ ರಾಜಕೀಯ ಸಲಹಾ ಸಮಿತಿ (ಪಿಎಸಿ) ಸಭೆಯ ನಂತರ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಮ್‌ ಆದ್ಮಿ ಪಕ್ಷವೂ ದೆಹಲಿ ಮತ್ತು ಪಂಜಾಬ್ ರಾಜ್ಯಗಳಲ್ಲಿ ಸರ್ಕಾರವನ್ನು ಹೊಂದಿದೆ. ದೆಹಲಿಯ ಮೂವರು ಸೇರಿದಂತೆ ಎರಡು ರಾಜ್ಯಗಳಲ್ಲಿ ಪಕ್ಷವೂ 10 ರಾಜ್ಯಸಭಾ ಸಂಸದರನ್ನು ಹೊಂದಿದೆ. ಅಲ್ಲದೆ, ಪಕ್ಷವು ಪಂಜಾಬ್‌ನಲ್ಲಿ 92, ದೆಹಲಿಯಲ್ಲಿ 62 ಮತ್ತು ಗೋವಾದಲ್ಲಿ ಇಬ್ಬರು ಸೇರಿದಂತೆ ಒಟ್ಟು 156 ಶಾಸಕರನ್ನು ಹೊಂದಿದೆ.

ಇದನ್ನೂ ಓದಿ: ಬಿಜೆಪಿ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಅಮರಿಂದರ್ ಸಿಂಗ್ ಸಾಧ್ಯತೆ

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಗೋಪಾಲಕೃಷ್ಣ ಗಾಂಧಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ ನಂತರ ಯಶವಂತ ಸಿನ್ಹಾ ಅವರು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.

ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ಆಯ್ಕೆಯಾದ ಅಭ್ಯರ್ಥಿ ದ್ರೌಪದಿ ಮುರ್ಮು ವಿರುದ್ಧ ಸ್ಪರ್ಧಿಸಲಿದ್ದಾರೆ.

ಬಿಜೆಡಿ, ವೈಎಸ್ಆರ್ ಕಾಂಗ್ರೆಸ್, ಬಿಜು ಜನತಾ ದಳ, ಬಹುಜನ ಸಮಾಜ ಪಕ್ಷ, ಶಿರೋಮಣಿ ಅಕಾಲಿದಳ ಮತ್ತು ಶಿವಸೇನೆಯಂತಹ ಕೆಲವು ಪ್ರಾದೇಶಿಕ ಪಕ್ಷಗಳ ಬೆಂಬಲವನ್ನು ದ್ರೌಪದಿ ಮುರ್ಮು ಅವರು ಪಡೆದಿದ್ದಾರೆ. ಹೀಗಾಗಿ ಅವರು ಬೆಂಬಲದ ಮತಗಳ ಪ್ರಮಾಣವು ಈಗಾಗಲೇ 60% ದಾಟಿದೆ. ಅವರು ಎನ್‌ಡಿಎ ಅಭ್ಯರ್ಥಿಯಾಗಿ ಆಯ್ಕೆಯಾಗುವ ಮುಂಚೆ ಎನ್‌ಡಿಎ ಬೆಂಬಲಕ್ಕೆ 50% ಮತಗಳು ಮಾತ್ರವಿತ್ತು.

ಇದನ್ನೂ ಓದಿ: Explained: ಭಾರತದ ರಾಷ್ಟ್ರಪತಿ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?

64 ವರ್ಷದ ದ್ರೌಪದಿ ಮುರ್ಮು ಅವರು ಆಯ್ಕೆಯಾದರೆ ಭಾರತದ ರಾಷ್ಟ್ರಪತಿಯಾದ ಮೊದಲ ಬುಡಕಟ್ಟು ಮಹಿಳೆಯಾಗಲಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಸೋಮವಾರ ಮತದಾನ ನಡೆಯಲಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...