Homeಕರ್ನಾಟಕರಾಷ್ಟ್ರಪತಿ ಪದಕ ವಿಜೇತ ಐಪಿಎಸ್ ಡಿ. ರೂಪಾ: 20 ವರ್ಷದಲ್ಲಿ 40 ಸಲ ವರ್ಗಾ!

ರಾಷ್ಟ್ರಪತಿ ಪದಕ ವಿಜೇತ ಐಪಿಎಸ್ ಡಿ. ರೂಪಾ: 20 ವರ್ಷದಲ್ಲಿ 40 ಸಲ ವರ್ಗಾ!

ಟೆಂಡರ್ ಪ್ರಕ್ರಿಯೆಯೊಂದರಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ತಪ್ಪು ಎಸಗಿದ್ದಾರೆ ಎಂದು ಆರೋಪಿಸಿದ ಪರಿಣಾಮ ರಾಜ್ಯ ಗೃಹ ಕಾರ್ಯದರ್ಶಿ ಡಿ. ರೂಪಾರನ್ನು ವರ್ಗಾವಣೆ ಮಾಡಲಾಗಿದೆ.

- Advertisement -
- Advertisement -

ಸದ್ಯದ ವ್ಯವಸ್ಥೆಯಲ್ಲಿ ಪ್ರಬಲರು ಮತ್ತು ಅಧಿಕಾರಸ್ಥ ಬಲಾಢ್ಯರನ್ನು ಎದುರು ಹಾಕಿಕೊಂಡ ಅಧಿಕಾರಿಗೆ ಹೆಚ್ಚಿನ ಅಧಿಕಾರವಿಲ್ಲದ ಜಾಗಕ್ಕೆ ವರ್ಗಾವಣೆ ಮಾಡುವುದು ವೃತ್ತಿ ರಾಜಕಾರಣದ ಭಾಗವೇ ಆಗಿದೆ. ಅದರಂತೆ ಬುಧವಾರದವರೆಗೂ ರಾಜ್ಯ ಗೃಹ ಇಲಾಖೆಯ ಕಾರ್ಯದರ್ಶಿಯಾಗಿದ್ದ ಡಿ. ರೂಪಾ ಗುರುವಾರ ಮುಂಜಾನೆ ಹೊತ್ತಿಗೆ ಕರಕುಶಲ ನಿಗಮದ ಎಂ.ಡಿ. ಸ್ಥಾನಕ್ಕೆ ವರ್ಗಾವಣೆಗೊಂಡಿದ್ದಾರೆ.

ಅಂದಂತೆ ರೂಪಾರಿಗೆ ವರ್ಗಾವಣೆ ಹೊಸದೇನೂ ಅಲ್ಲ. ಅವರ ಸೇವಾವಧಿಯ ವರ್ಷಗಳ ಸಂಖ್ಯೆಗಿಂತ ಅವರ ವರ್ಗಾವಣೆಯ ಸಂಖ್ಯೆ ದುಪ್ಪಟ್ಟಾಗಿದೆ. ಅಂದರೆ, 20 ವರ್ಷಗಳಲ್ಲಿ ಅವರು 40 ಸಲ ವರ್ಗಾವಣೆಗೊಂಡಿದ್ದಾರೆ.

ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಹೇಮಂತ್ ನಿಂಬಾಳ್ಕರ್ (ಈಗ ಇವರನ್ನೂ ಈ ಹುದ್ದೆಯಿಂದ ವರ್ಗಾ ಮಾಡಲಾಗಿದೆ) ನಿರ್ಭಯಾ ನಿಧಿ ಅಡಿ ಕೈಗೊಳ್ಳಲಿರುವ ಬೆಂಗಳೂರು ಸುರಕ್ಷಾ ನಗರ ಪ್ರಾಜೆಕ್ಟ್‌ ಟೆಂಡರ್‌ನಲ್ಲಿ ಸ್ವ ಹಿತಾಸಕ್ತಿ ತೋರುವ ಮೂಲಕ ಪ್ರಾಜೆಕ್ಟ್ ವಿಳಂಬ ಮಾಡುತ್ತಿದ್ದಾರೆ ಎಂದು ರೂಪಾ ಅವರು ಪದೇ ಪದೇ ಆಕ್ಷೇಪಣೆ ಎತ್ತಿದ್ದೇ ಅವರ ವರ್ಗಾವಣೆಗೆ ಮೂಲ ಎನ್ನಲಾಗಿದೆ. ತಮ್ಮ ಅಧಿಕಾರ ವ್ಯಾಪ್ತಿಗೆ ಬರದಿದ್ದರೂ ರೂಪಾ ಅವರು ಟೆಂಡರ್ ವಿವರಗಳನ್ನು ಪಡೆಯಲು ಯತ್ನಿಸಿದ್ದರು ಎಂದು ನಿಂಬಾಳ್ಕರ್ ದೂರನ್ನೂ ದಾಖಲಿಸಿದ್ದರು.

ಈಗ ಆಗಿದ್ದು ಏನೆಂದರೆ, ಈ ಇಬ್ಬರನ್ನೂ ಬೇರೆ ಹುದ್ದೆಗೆ ವರ್ಗಾ ಮಾಡಿರುವ ಸರ್ಕಾರ, ಟೆಂಡರ್ ವಿವಾದ ಕುರಿತು ಏನನ್ನೂ ಹೇಳದೇ ಇರುವುದು. 2019ರಲ್ಲೇ ಮುಗಿಯಬೇಕಿದ್ದ ಟೆಂಡರ್ ಪ್ರಕ್ರಿಯೆ ವಿಳಂಬವಾಗಿದ್ದೇಕೆ? ರೂಪಾ ಮಾಡಿರುವ ಆರೋಪಗಳ ಕುರಿತು ಸರ್ಕಾರದ ನಿಲುವೇನು? ಇದು ಯಾವುದು ಸ್ಪಷ್ಟವಾಗಿಲ್ಲ.

ಒಟ್ಟಿನಲ್ಲಿ ವಿಶಲ್ ಬ್ಲೋ ಮಾಡಿದ ರೂಪಾ ಅಮೋಘ 40ನೆ ಬಾರಿಗೆ ವರ್ಗಾವಣೆಯಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಬಲರು ಮತ್ತು ಅಧಿಕಾರಸ್ಥ ಬಲಾಢ್ಯರ ಬಗ್ಗೆ ಪ್ರಶ್ನಿಸುವುದು ರಿಸ್ಕ್ ಕೆಲಸವೇ. ಆದರೂ ತಪ್ಪುಗಳಾದಾಗ ನಾನು ಧ್ವನಿ ಎತ್ತದೆ ಇರಲಾರೆ. ಆ ಹುದ್ದೆ ಈ ಹುದ್ದೆ ಯಾವುದೇ ಹುದ್ದೆ ಇರಲಿ ನಾನು ನನ್ನ ಬದ್ಧತೆಯೊಂದಿಗೆ ಕೆಲಸ ಮಾಡುತ್ತೇನೆ ಎಂದಿದ್ದರು.

‘ದಿ ಪ್ರಿಂಟ್’ ಜೊತೆ ಮಾತಾಡಿರುವ ರೂಪಾ, ಯಾವುದೇ ತಪ್ಪುಗಳ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳದೇ ಇರುವುದು ನನ್ನ ವ್ಯಕ್ತಿತ್ವದ ಭಾಗ. ಅದು ನನ್ನ ಸಹಜ ಗುಣ. ಮನಶಾಂತಿ ಬಯಸುವ ಬಹಳಷ್ಟು ಅಧಿಕಾರಿಗಳು ‘ದೊಡ್ಡವರಿಗೆ’ ಕಿರಿಕಿರಿಯಾಗುವ ವಿಷಯಗಳ ತಂಟೆಗೆ ಹೋಗುವುದಿಲ್ಲ. ಆದರೆ ಎಲ್ಲಿವರೆಗೆ ನಾನು ಸರಿಯಾದ ಮಾರ್ಗದಲ್ಲಿ ಕೆಲಸ ಮಾಡುತ್ತೇನೆಯೋ ಅಲ್ಲಿವರೆಗೆ ನಾನು ಅವ್ಯವಸ್ಥೆ ಮತ್ತು ಇಂತಹ ಸಂಘರ್ಷಗಳನ್ನು ಎದುರಿಸಲು ಹಿಂಜರಿಯುವುದಿಲ್ಲ ಎಂದಿದ್ದಾರೆ.

‘ಉನ್ನತ ಸ್ಥಾನಗಳಲ್ಲಿರುವ ಅಧಿಕಾರಿಗಳು ತಾವು ಮಾಡಬೇಕಾದ್ದನ್ನು ಮಾಡಲೇಬೇಕು. ಹೊಗಿನವರು ಬಂದು ಈ ವ್ಯವಸ್ಥೆ ಬದಲಿಸಲಾಗದು; ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಮೂರು ವರ್ಷಗಳ ಹಿಂದೆ, ಜಯಲಲಿತಾರ ಆಪ್ತೆ ಶಶಿಕಲಾ ಅವರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾನೂನುಬಾಹಿರವಾಗಿ ವಿಶೇಷ ಸವಲತ್ತು ನೀಡಲಾಗಿದೆ ಎಂದು ಆರೋಪಿಸಿದ್ದರು. ಇದಕ್ಕಾಗಿ ರೂಪಾ ಮೇಲೆ 20 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು.

2000 ಬ್ಯಾಚ್‌ನ ರೂಪಾ ಎರಡು ಸಲ (2016 ಮತ್ತು 2017) ರಾಷ್ಟ್ರಪತಿಗಳ ಚಿನ್ನದ ಪದಕ ಪಡೆದಿದ್ದಾರೆ.

ಕೃಪೆ: ದಿ ಪ್ರಿಂಟ್‌


ಇದನ್ನೂ ಓದಿ: ಫ್ಲ್ಯಾಟ್ ವಿಚಾರದಲ್ಲಿ ಕಂಗನಾ ರಾಣಾವತ್ ನಿಯಮ ಉಲ್ಲಂಘಿಸಿದ್ದಾರೆ: ಮುಂಬೈ ಸಿವಿಲ್ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...