Homeಕರ್ನಾಟಕರಾಷ್ಟ್ರಪತಿ ಪದಕ ವಿಜೇತ ಐಪಿಎಸ್ ಡಿ. ರೂಪಾ: 20 ವರ್ಷದಲ್ಲಿ 40 ಸಲ ವರ್ಗಾ!

ರಾಷ್ಟ್ರಪತಿ ಪದಕ ವಿಜೇತ ಐಪಿಎಸ್ ಡಿ. ರೂಪಾ: 20 ವರ್ಷದಲ್ಲಿ 40 ಸಲ ವರ್ಗಾ!

ಟೆಂಡರ್ ಪ್ರಕ್ರಿಯೆಯೊಂದರಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ತಪ್ಪು ಎಸಗಿದ್ದಾರೆ ಎಂದು ಆರೋಪಿಸಿದ ಪರಿಣಾಮ ರಾಜ್ಯ ಗೃಹ ಕಾರ್ಯದರ್ಶಿ ಡಿ. ರೂಪಾರನ್ನು ವರ್ಗಾವಣೆ ಮಾಡಲಾಗಿದೆ.

- Advertisement -
- Advertisement -

ಸದ್ಯದ ವ್ಯವಸ್ಥೆಯಲ್ಲಿ ಪ್ರಬಲರು ಮತ್ತು ಅಧಿಕಾರಸ್ಥ ಬಲಾಢ್ಯರನ್ನು ಎದುರು ಹಾಕಿಕೊಂಡ ಅಧಿಕಾರಿಗೆ ಹೆಚ್ಚಿನ ಅಧಿಕಾರವಿಲ್ಲದ ಜಾಗಕ್ಕೆ ವರ್ಗಾವಣೆ ಮಾಡುವುದು ವೃತ್ತಿ ರಾಜಕಾರಣದ ಭಾಗವೇ ಆಗಿದೆ. ಅದರಂತೆ ಬುಧವಾರದವರೆಗೂ ರಾಜ್ಯ ಗೃಹ ಇಲಾಖೆಯ ಕಾರ್ಯದರ್ಶಿಯಾಗಿದ್ದ ಡಿ. ರೂಪಾ ಗುರುವಾರ ಮುಂಜಾನೆ ಹೊತ್ತಿಗೆ ಕರಕುಶಲ ನಿಗಮದ ಎಂ.ಡಿ. ಸ್ಥಾನಕ್ಕೆ ವರ್ಗಾವಣೆಗೊಂಡಿದ್ದಾರೆ.

ಅಂದಂತೆ ರೂಪಾರಿಗೆ ವರ್ಗಾವಣೆ ಹೊಸದೇನೂ ಅಲ್ಲ. ಅವರ ಸೇವಾವಧಿಯ ವರ್ಷಗಳ ಸಂಖ್ಯೆಗಿಂತ ಅವರ ವರ್ಗಾವಣೆಯ ಸಂಖ್ಯೆ ದುಪ್ಪಟ್ಟಾಗಿದೆ. ಅಂದರೆ, 20 ವರ್ಷಗಳಲ್ಲಿ ಅವರು 40 ಸಲ ವರ್ಗಾವಣೆಗೊಂಡಿದ್ದಾರೆ.

ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಹೇಮಂತ್ ನಿಂಬಾಳ್ಕರ್ (ಈಗ ಇವರನ್ನೂ ಈ ಹುದ್ದೆಯಿಂದ ವರ್ಗಾ ಮಾಡಲಾಗಿದೆ) ನಿರ್ಭಯಾ ನಿಧಿ ಅಡಿ ಕೈಗೊಳ್ಳಲಿರುವ ಬೆಂಗಳೂರು ಸುರಕ್ಷಾ ನಗರ ಪ್ರಾಜೆಕ್ಟ್‌ ಟೆಂಡರ್‌ನಲ್ಲಿ ಸ್ವ ಹಿತಾಸಕ್ತಿ ತೋರುವ ಮೂಲಕ ಪ್ರಾಜೆಕ್ಟ್ ವಿಳಂಬ ಮಾಡುತ್ತಿದ್ದಾರೆ ಎಂದು ರೂಪಾ ಅವರು ಪದೇ ಪದೇ ಆಕ್ಷೇಪಣೆ ಎತ್ತಿದ್ದೇ ಅವರ ವರ್ಗಾವಣೆಗೆ ಮೂಲ ಎನ್ನಲಾಗಿದೆ. ತಮ್ಮ ಅಧಿಕಾರ ವ್ಯಾಪ್ತಿಗೆ ಬರದಿದ್ದರೂ ರೂಪಾ ಅವರು ಟೆಂಡರ್ ವಿವರಗಳನ್ನು ಪಡೆಯಲು ಯತ್ನಿಸಿದ್ದರು ಎಂದು ನಿಂಬಾಳ್ಕರ್ ದೂರನ್ನೂ ದಾಖಲಿಸಿದ್ದರು.

ಈಗ ಆಗಿದ್ದು ಏನೆಂದರೆ, ಈ ಇಬ್ಬರನ್ನೂ ಬೇರೆ ಹುದ್ದೆಗೆ ವರ್ಗಾ ಮಾಡಿರುವ ಸರ್ಕಾರ, ಟೆಂಡರ್ ವಿವಾದ ಕುರಿತು ಏನನ್ನೂ ಹೇಳದೇ ಇರುವುದು. 2019ರಲ್ಲೇ ಮುಗಿಯಬೇಕಿದ್ದ ಟೆಂಡರ್ ಪ್ರಕ್ರಿಯೆ ವಿಳಂಬವಾಗಿದ್ದೇಕೆ? ರೂಪಾ ಮಾಡಿರುವ ಆರೋಪಗಳ ಕುರಿತು ಸರ್ಕಾರದ ನಿಲುವೇನು? ಇದು ಯಾವುದು ಸ್ಪಷ್ಟವಾಗಿಲ್ಲ.

ಒಟ್ಟಿನಲ್ಲಿ ವಿಶಲ್ ಬ್ಲೋ ಮಾಡಿದ ರೂಪಾ ಅಮೋಘ 40ನೆ ಬಾರಿಗೆ ವರ್ಗಾವಣೆಯಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಬಲರು ಮತ್ತು ಅಧಿಕಾರಸ್ಥ ಬಲಾಢ್ಯರ ಬಗ್ಗೆ ಪ್ರಶ್ನಿಸುವುದು ರಿಸ್ಕ್ ಕೆಲಸವೇ. ಆದರೂ ತಪ್ಪುಗಳಾದಾಗ ನಾನು ಧ್ವನಿ ಎತ್ತದೆ ಇರಲಾರೆ. ಆ ಹುದ್ದೆ ಈ ಹುದ್ದೆ ಯಾವುದೇ ಹುದ್ದೆ ಇರಲಿ ನಾನು ನನ್ನ ಬದ್ಧತೆಯೊಂದಿಗೆ ಕೆಲಸ ಮಾಡುತ್ತೇನೆ ಎಂದಿದ್ದರು.

‘ದಿ ಪ್ರಿಂಟ್’ ಜೊತೆ ಮಾತಾಡಿರುವ ರೂಪಾ, ಯಾವುದೇ ತಪ್ಪುಗಳ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳದೇ ಇರುವುದು ನನ್ನ ವ್ಯಕ್ತಿತ್ವದ ಭಾಗ. ಅದು ನನ್ನ ಸಹಜ ಗುಣ. ಮನಶಾಂತಿ ಬಯಸುವ ಬಹಳಷ್ಟು ಅಧಿಕಾರಿಗಳು ‘ದೊಡ್ಡವರಿಗೆ’ ಕಿರಿಕಿರಿಯಾಗುವ ವಿಷಯಗಳ ತಂಟೆಗೆ ಹೋಗುವುದಿಲ್ಲ. ಆದರೆ ಎಲ್ಲಿವರೆಗೆ ನಾನು ಸರಿಯಾದ ಮಾರ್ಗದಲ್ಲಿ ಕೆಲಸ ಮಾಡುತ್ತೇನೆಯೋ ಅಲ್ಲಿವರೆಗೆ ನಾನು ಅವ್ಯವಸ್ಥೆ ಮತ್ತು ಇಂತಹ ಸಂಘರ್ಷಗಳನ್ನು ಎದುರಿಸಲು ಹಿಂಜರಿಯುವುದಿಲ್ಲ ಎಂದಿದ್ದಾರೆ.

‘ಉನ್ನತ ಸ್ಥಾನಗಳಲ್ಲಿರುವ ಅಧಿಕಾರಿಗಳು ತಾವು ಮಾಡಬೇಕಾದ್ದನ್ನು ಮಾಡಲೇಬೇಕು. ಹೊಗಿನವರು ಬಂದು ಈ ವ್ಯವಸ್ಥೆ ಬದಲಿಸಲಾಗದು; ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಮೂರು ವರ್ಷಗಳ ಹಿಂದೆ, ಜಯಲಲಿತಾರ ಆಪ್ತೆ ಶಶಿಕಲಾ ಅವರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾನೂನುಬಾಹಿರವಾಗಿ ವಿಶೇಷ ಸವಲತ್ತು ನೀಡಲಾಗಿದೆ ಎಂದು ಆರೋಪಿಸಿದ್ದರು. ಇದಕ್ಕಾಗಿ ರೂಪಾ ಮೇಲೆ 20 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು.

2000 ಬ್ಯಾಚ್‌ನ ರೂಪಾ ಎರಡು ಸಲ (2016 ಮತ್ತು 2017) ರಾಷ್ಟ್ರಪತಿಗಳ ಚಿನ್ನದ ಪದಕ ಪಡೆದಿದ್ದಾರೆ.

ಕೃಪೆ: ದಿ ಪ್ರಿಂಟ್‌


ಇದನ್ನೂ ಓದಿ: ಫ್ಲ್ಯಾಟ್ ವಿಚಾರದಲ್ಲಿ ಕಂಗನಾ ರಾಣಾವತ್ ನಿಯಮ ಉಲ್ಲಂಘಿಸಿದ್ದಾರೆ: ಮುಂಬೈ ಸಿವಿಲ್ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...