Homeಕರ್ನಾಟಕರಾಷ್ಟ್ರಪತಿ ಪದಕ ವಿಜೇತ ಐಪಿಎಸ್ ಡಿ. ರೂಪಾ: 20 ವರ್ಷದಲ್ಲಿ 40 ಸಲ ವರ್ಗಾ!

ರಾಷ್ಟ್ರಪತಿ ಪದಕ ವಿಜೇತ ಐಪಿಎಸ್ ಡಿ. ರೂಪಾ: 20 ವರ್ಷದಲ್ಲಿ 40 ಸಲ ವರ್ಗಾ!

ಟೆಂಡರ್ ಪ್ರಕ್ರಿಯೆಯೊಂದರಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ತಪ್ಪು ಎಸಗಿದ್ದಾರೆ ಎಂದು ಆರೋಪಿಸಿದ ಪರಿಣಾಮ ರಾಜ್ಯ ಗೃಹ ಕಾರ್ಯದರ್ಶಿ ಡಿ. ರೂಪಾರನ್ನು ವರ್ಗಾವಣೆ ಮಾಡಲಾಗಿದೆ.

- Advertisement -
- Advertisement -

ಸದ್ಯದ ವ್ಯವಸ್ಥೆಯಲ್ಲಿ ಪ್ರಬಲರು ಮತ್ತು ಅಧಿಕಾರಸ್ಥ ಬಲಾಢ್ಯರನ್ನು ಎದುರು ಹಾಕಿಕೊಂಡ ಅಧಿಕಾರಿಗೆ ಹೆಚ್ಚಿನ ಅಧಿಕಾರವಿಲ್ಲದ ಜಾಗಕ್ಕೆ ವರ್ಗಾವಣೆ ಮಾಡುವುದು ವೃತ್ತಿ ರಾಜಕಾರಣದ ಭಾಗವೇ ಆಗಿದೆ. ಅದರಂತೆ ಬುಧವಾರದವರೆಗೂ ರಾಜ್ಯ ಗೃಹ ಇಲಾಖೆಯ ಕಾರ್ಯದರ್ಶಿಯಾಗಿದ್ದ ಡಿ. ರೂಪಾ ಗುರುವಾರ ಮುಂಜಾನೆ ಹೊತ್ತಿಗೆ ಕರಕುಶಲ ನಿಗಮದ ಎಂ.ಡಿ. ಸ್ಥಾನಕ್ಕೆ ವರ್ಗಾವಣೆಗೊಂಡಿದ್ದಾರೆ.

ಅಂದಂತೆ ರೂಪಾರಿಗೆ ವರ್ಗಾವಣೆ ಹೊಸದೇನೂ ಅಲ್ಲ. ಅವರ ಸೇವಾವಧಿಯ ವರ್ಷಗಳ ಸಂಖ್ಯೆಗಿಂತ ಅವರ ವರ್ಗಾವಣೆಯ ಸಂಖ್ಯೆ ದುಪ್ಪಟ್ಟಾಗಿದೆ. ಅಂದರೆ, 20 ವರ್ಷಗಳಲ್ಲಿ ಅವರು 40 ಸಲ ವರ್ಗಾವಣೆಗೊಂಡಿದ್ದಾರೆ.

ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಹೇಮಂತ್ ನಿಂಬಾಳ್ಕರ್ (ಈಗ ಇವರನ್ನೂ ಈ ಹುದ್ದೆಯಿಂದ ವರ್ಗಾ ಮಾಡಲಾಗಿದೆ) ನಿರ್ಭಯಾ ನಿಧಿ ಅಡಿ ಕೈಗೊಳ್ಳಲಿರುವ ಬೆಂಗಳೂರು ಸುರಕ್ಷಾ ನಗರ ಪ್ರಾಜೆಕ್ಟ್‌ ಟೆಂಡರ್‌ನಲ್ಲಿ ಸ್ವ ಹಿತಾಸಕ್ತಿ ತೋರುವ ಮೂಲಕ ಪ್ರಾಜೆಕ್ಟ್ ವಿಳಂಬ ಮಾಡುತ್ತಿದ್ದಾರೆ ಎಂದು ರೂಪಾ ಅವರು ಪದೇ ಪದೇ ಆಕ್ಷೇಪಣೆ ಎತ್ತಿದ್ದೇ ಅವರ ವರ್ಗಾವಣೆಗೆ ಮೂಲ ಎನ್ನಲಾಗಿದೆ. ತಮ್ಮ ಅಧಿಕಾರ ವ್ಯಾಪ್ತಿಗೆ ಬರದಿದ್ದರೂ ರೂಪಾ ಅವರು ಟೆಂಡರ್ ವಿವರಗಳನ್ನು ಪಡೆಯಲು ಯತ್ನಿಸಿದ್ದರು ಎಂದು ನಿಂಬಾಳ್ಕರ್ ದೂರನ್ನೂ ದಾಖಲಿಸಿದ್ದರು.

ಈಗ ಆಗಿದ್ದು ಏನೆಂದರೆ, ಈ ಇಬ್ಬರನ್ನೂ ಬೇರೆ ಹುದ್ದೆಗೆ ವರ್ಗಾ ಮಾಡಿರುವ ಸರ್ಕಾರ, ಟೆಂಡರ್ ವಿವಾದ ಕುರಿತು ಏನನ್ನೂ ಹೇಳದೇ ಇರುವುದು. 2019ರಲ್ಲೇ ಮುಗಿಯಬೇಕಿದ್ದ ಟೆಂಡರ್ ಪ್ರಕ್ರಿಯೆ ವಿಳಂಬವಾಗಿದ್ದೇಕೆ? ರೂಪಾ ಮಾಡಿರುವ ಆರೋಪಗಳ ಕುರಿತು ಸರ್ಕಾರದ ನಿಲುವೇನು? ಇದು ಯಾವುದು ಸ್ಪಷ್ಟವಾಗಿಲ್ಲ.

ಒಟ್ಟಿನಲ್ಲಿ ವಿಶಲ್ ಬ್ಲೋ ಮಾಡಿದ ರೂಪಾ ಅಮೋಘ 40ನೆ ಬಾರಿಗೆ ವರ್ಗಾವಣೆಯಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಬಲರು ಮತ್ತು ಅಧಿಕಾರಸ್ಥ ಬಲಾಢ್ಯರ ಬಗ್ಗೆ ಪ್ರಶ್ನಿಸುವುದು ರಿಸ್ಕ್ ಕೆಲಸವೇ. ಆದರೂ ತಪ್ಪುಗಳಾದಾಗ ನಾನು ಧ್ವನಿ ಎತ್ತದೆ ಇರಲಾರೆ. ಆ ಹುದ್ದೆ ಈ ಹುದ್ದೆ ಯಾವುದೇ ಹುದ್ದೆ ಇರಲಿ ನಾನು ನನ್ನ ಬದ್ಧತೆಯೊಂದಿಗೆ ಕೆಲಸ ಮಾಡುತ್ತೇನೆ ಎಂದಿದ್ದರು.

‘ದಿ ಪ್ರಿಂಟ್’ ಜೊತೆ ಮಾತಾಡಿರುವ ರೂಪಾ, ಯಾವುದೇ ತಪ್ಪುಗಳ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳದೇ ಇರುವುದು ನನ್ನ ವ್ಯಕ್ತಿತ್ವದ ಭಾಗ. ಅದು ನನ್ನ ಸಹಜ ಗುಣ. ಮನಶಾಂತಿ ಬಯಸುವ ಬಹಳಷ್ಟು ಅಧಿಕಾರಿಗಳು ‘ದೊಡ್ಡವರಿಗೆ’ ಕಿರಿಕಿರಿಯಾಗುವ ವಿಷಯಗಳ ತಂಟೆಗೆ ಹೋಗುವುದಿಲ್ಲ. ಆದರೆ ಎಲ್ಲಿವರೆಗೆ ನಾನು ಸರಿಯಾದ ಮಾರ್ಗದಲ್ಲಿ ಕೆಲಸ ಮಾಡುತ್ತೇನೆಯೋ ಅಲ್ಲಿವರೆಗೆ ನಾನು ಅವ್ಯವಸ್ಥೆ ಮತ್ತು ಇಂತಹ ಸಂಘರ್ಷಗಳನ್ನು ಎದುರಿಸಲು ಹಿಂಜರಿಯುವುದಿಲ್ಲ ಎಂದಿದ್ದಾರೆ.

‘ಉನ್ನತ ಸ್ಥಾನಗಳಲ್ಲಿರುವ ಅಧಿಕಾರಿಗಳು ತಾವು ಮಾಡಬೇಕಾದ್ದನ್ನು ಮಾಡಲೇಬೇಕು. ಹೊಗಿನವರು ಬಂದು ಈ ವ್ಯವಸ್ಥೆ ಬದಲಿಸಲಾಗದು; ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಮೂರು ವರ್ಷಗಳ ಹಿಂದೆ, ಜಯಲಲಿತಾರ ಆಪ್ತೆ ಶಶಿಕಲಾ ಅವರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾನೂನುಬಾಹಿರವಾಗಿ ವಿಶೇಷ ಸವಲತ್ತು ನೀಡಲಾಗಿದೆ ಎಂದು ಆರೋಪಿಸಿದ್ದರು. ಇದಕ್ಕಾಗಿ ರೂಪಾ ಮೇಲೆ 20 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು.

2000 ಬ್ಯಾಚ್‌ನ ರೂಪಾ ಎರಡು ಸಲ (2016 ಮತ್ತು 2017) ರಾಷ್ಟ್ರಪತಿಗಳ ಚಿನ್ನದ ಪದಕ ಪಡೆದಿದ್ದಾರೆ.

ಕೃಪೆ: ದಿ ಪ್ರಿಂಟ್‌


ಇದನ್ನೂ ಓದಿ: ಫ್ಲ್ಯಾಟ್ ವಿಚಾರದಲ್ಲಿ ಕಂಗನಾ ರಾಣಾವತ್ ನಿಯಮ ಉಲ್ಲಂಘಿಸಿದ್ದಾರೆ: ಮುಂಬೈ ಸಿವಿಲ್ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...