Homeಮುಖಪುಟಮಣಿಪುರದಲ್ಲಿ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಫಲ: ಕಾಂಗ್ರೆಸ್ ಆಕ್ರೋಶ

ಮಣಿಪುರದಲ್ಲಿ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಫಲ: ಕಾಂಗ್ರೆಸ್ ಆಕ್ರೋಶ

- Advertisement -
- Advertisement -

ರಾಜ್ಯದ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ “ವಿಫಲವಾಗಿದೆ” ಎಂದು ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೀಶಮ್ ಮೇಘಚಂದ್ರ ಅವರು ಆರೋಪಿಸಿದ್ದಾರೆ. ಸರ್ಕಾರಿ ಬಸ್ಸಿನ ವಿಂಡ್ ಶೀಲ್ಡ್ ಮೇಲೆ ರಾಜ್ಯದ ಹೆಸರನ್ನು ಮರೆಮಾಡಿದ್ದಕ್ಕಾಗಿ ಪಕ್ಷವು ಪ್ರತಿಭಟನೆ ನಡೆಸುತ್ತಿದೆ. ಈ ವರ್ಷದ ಜನವರಿಯಲ್ಲಿ ಅಧಿಕಾರ ವಹಿಸಿಕೊಂಡ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಕೇಂದ್ರವು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ಅವರು ಇದೇ ವೇಳೆ ಒತ್ತಾಯಿಸಿದ್ದಾರೆ. ಮಣಿಪುರದಲ್ಲಿ ಶಾಂತಿ

ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಕಾರಣ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ಕೇಂದ್ರ ಸರ್ಕಾರವು ಫೆಬ್ರವರಿ 13 ರಂದು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಿತ್ತು. ಈ ವೇಳೆ 2027 ರವರೆಗೆ ಅಧಿಕಾರಾವಧಿಯನ್ನು ಹೊಂದಿರುವ ರಾಜ್ಯ ವಿಧಾನಸಭೆಯನ್ನು ಅಮಾನತಿನಲ್ಲಿ ಇರಿಸಲಾಗಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಮೇಘಚಂದ್ರ, “ಡಬಲ್-ಎಂಜಿನ್ ಸರ್ಕಾರವು ಕಳೆದ 2 ವರ್ಷಗಳಿಗೂ ಹೆಚ್ಚು ಕಾಲ ಮಣಿಪುರವನ್ನು ವಿಫಲಗೊಳಿಸಿದೆ. ರಾಷ್ಟ್ರಪತಿ ಆಳ್ವಿಕೆಯೂ ಮಣಿಪುರವನ್ನು ವಿಫಲಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಮಣಿಪುರವನ್ನು ಪದೇ ಪದೇ ವಿಫಲಗೊಳಿಸುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು. ಮಣಿಪುರ ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು.” ಎಂದು ಆಗ್ರಹಿಸಿದ್ದಾರೆ.

‘ಡಬಲ್ ಎಂಜಿನ್’ ಎಂಬ ಪದವನ್ನು ಬಿಜೆಪಿ ನಾಯಕರು ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷದ ಸರ್ಕಾರವನ್ನು ಉಲ್ಲೇಖಿಸಲು ಬಳಸುತ್ತಾರೆ.

ಕಳೆದ ವಾರ ಸರ್ಕಾರಿ ಬಸ್‌ನ ವಿಂಡ್‌ಶೀಲ್ಡ್‌ನಲ್ಲಿ ರಾಜ್ಯದ ಹೆಸರನ್ನು ಮರೆಮಾಡಿದ್ದಕ್ಕಾಗಿ ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಮೇ 20 ರಂದು ನಡೆದ ಈ ಘಟನೆಗೆ ರಾಜ್ಯಪಾಲರು ಕ್ಷಮೆಯಾಚಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ.

ಇಂಫಾಲ್‌ನಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಗ್ವಾಲ್ತಾಬಿ ಚೆಕ್‌ಪೋಸ್ಟ್‌ನಲ್ಲಿ ಭದ್ರತಾ ಸಿಬ್ಬಂದಿ ಬಸ್ ಅನ್ನು ತಡೆದು, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯ (ಡಿಐಪಿಆರ್) ಸಿಬ್ಬಂದಿಯನ್ನು ವಾಹನದ ವಿಂಡ್‌ಶೀಲ್ಡ್‌ನ ಮೇಲ್ಭಾಗದಲ್ಲಿ ಬರೆದಿರುವ ರಾಜ್ಯದ ಹೆಸರನ್ನು ಬಿಳಿ ಕಾಗದದ ತುಣುಕಿನಿಂದ ಮರೆಮಾಡಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮೇ 20 ರಂದು ಉಖ್ರುಲ್ ಜಿಲ್ಲೆಯ ಶಿರುಯಿ ಲಿಲಿ ಉತ್ಸವಕ್ಕೆ ಪತ್ರಕರ್ತರನ್ನು ಹೊತ್ತ ಬಸ್ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗ್ವಾಲ್ತಾಬಿ ಘಟನೆಯನ್ನು ಉಲ್ಲೇಖಿಸಿದ ಮೇಘಚಂದ್ರ ಅವರು, “ಮಣಿಪುರ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ನಿಂದ ‘ಮಣಿಪುರ’ ಪದವನ್ನು ತೆಗೆದುಹಾಕಲು ಮಣಿಪುರ ರಾಜ್ಯಪಾಲರಿಗೆ ಯಾರು ಸೂಚನೆ ನೀಡಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಲು, ವಿದ್ಯಾರ್ಥಿಗಳು ಮತ್ತು ಮಹಿಳಾ ಗುಂಪುಗಳು ಸೋಮವಾರ ಇಂಫಾಲ್ ವಿಮಾನ ನಿಲ್ದಾಣದಿಂದ ಕೈಸಂಪತ್‌ವರೆಗೆ ಆರು ಕಿಲೋಮೀಟರ್‌ಗಳಷ್ಟು ಉದ್ದದ ಮಾನವ ಸರಪಳಿಯನ್ನು ರಚಿಸಿದ್ದವು. ಈ ಪ್ರದೇಶವು ರಾಜ್ಯಪಾಲರ ನಿವಾಸದಿಂದ ಸುಮಾರು 200 ಮೀಟರ್ ದೂರದಲ್ಲಿದೆ.

ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು, ಸೋಮವಾರ ನವದೆಹಲಿಯಿಂದ ಇಂಫಾಲ್‌ಗೆ ಆಗಮಿಸಿದ್ದ ರಾಜ್ಯಪಾಲರು, ರಾಜಭವನದಿಂದ ಸುಮಾರು 300 ಮೀಟರ್ ದೂರದಲ್ಲಿರುವ ಕಾಂಗ್ಲಾ ಕೋಟೆಯನ್ನು ತಲುಪಲು ಸೇನಾ ಹೆಲಿಕಾಪ್ಟರ್‌ನಲ್ಲಿ ತೆರಳಿದ್ದರು.

ಸೋಮವಾರ ತಡರಾತ್ರಿ ಪೋಸ್ಟ್‌ನಲ್ಲಿ, ಮೇಘಚಂದ್ರ, “ಇಂದು ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಸುಮಾರು 7 ಕಿ.ಮೀ ದೂರದಲ್ಲಿರುವ ರಾಜಭವನವನ್ನು ತಲುಪಲು ಮಣಿಪುರ ರಾಜ್ಯಪಾಲರು ಇಂಫಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ಹಾರಬೇಕಾಯಿತು” ಎಂದು ಹೇಳಿದ್ದಾರೆ.

ಮೇ 2023 ರಿಂದ ಭುಗಿಲೆದ್ದ ಮೈತೇಯಿ ಮತ್ತು ಕುಕಿ-ಜೋ ಗುಂಪುಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 260 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಮಣಿಪುರದಲ್ಲಿ ಶಾಂತಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೋವಿಡ್ | ರಾಜ್ಯದಲ್ಲಿ ಆತಂಕಪಡುವ ಪರಿಸ್ಥಿತಿಯಿಲ್ಲ: ಸಿಎಂ ಸಿದ್ದರಾಮಯ್ಯ

ಕೋವಿಡ್ | ರಾಜ್ಯದಲ್ಲಿ ಆತಂಕಪಡುವ ಪರಿಸ್ಥಿತಿಯಿಲ್ಲ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...