Homeಮುಖಪುಟಮಣಿಪುರದಲ್ಲಿ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಫಲ: ಕಾಂಗ್ರೆಸ್ ಆಕ್ರೋಶ

ಮಣಿಪುರದಲ್ಲಿ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಫಲ: ಕಾಂಗ್ರೆಸ್ ಆಕ್ರೋಶ

- Advertisement -
- Advertisement -

ರಾಜ್ಯದ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ “ವಿಫಲವಾಗಿದೆ” ಎಂದು ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೀಶಮ್ ಮೇಘಚಂದ್ರ ಅವರು ಆರೋಪಿಸಿದ್ದಾರೆ. ಸರ್ಕಾರಿ ಬಸ್ಸಿನ ವಿಂಡ್ ಶೀಲ್ಡ್ ಮೇಲೆ ರಾಜ್ಯದ ಹೆಸರನ್ನು ಮರೆಮಾಡಿದ್ದಕ್ಕಾಗಿ ಪಕ್ಷವು ಪ್ರತಿಭಟನೆ ನಡೆಸುತ್ತಿದೆ. ಈ ವರ್ಷದ ಜನವರಿಯಲ್ಲಿ ಅಧಿಕಾರ ವಹಿಸಿಕೊಂಡ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಕೇಂದ್ರವು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ಅವರು ಇದೇ ವೇಳೆ ಒತ್ತಾಯಿಸಿದ್ದಾರೆ. ಮಣಿಪುರದಲ್ಲಿ ಶಾಂತಿ

ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಕಾರಣ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ಕೇಂದ್ರ ಸರ್ಕಾರವು ಫೆಬ್ರವರಿ 13 ರಂದು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಿತ್ತು. ಈ ವೇಳೆ 2027 ರವರೆಗೆ ಅಧಿಕಾರಾವಧಿಯನ್ನು ಹೊಂದಿರುವ ರಾಜ್ಯ ವಿಧಾನಸಭೆಯನ್ನು ಅಮಾನತಿನಲ್ಲಿ ಇರಿಸಲಾಗಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಮೇಘಚಂದ್ರ, “ಡಬಲ್-ಎಂಜಿನ್ ಸರ್ಕಾರವು ಕಳೆದ 2 ವರ್ಷಗಳಿಗೂ ಹೆಚ್ಚು ಕಾಲ ಮಣಿಪುರವನ್ನು ವಿಫಲಗೊಳಿಸಿದೆ. ರಾಷ್ಟ್ರಪತಿ ಆಳ್ವಿಕೆಯೂ ಮಣಿಪುರವನ್ನು ವಿಫಲಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಮಣಿಪುರವನ್ನು ಪದೇ ಪದೇ ವಿಫಲಗೊಳಿಸುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು. ಮಣಿಪುರ ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು.” ಎಂದು ಆಗ್ರಹಿಸಿದ್ದಾರೆ.

‘ಡಬಲ್ ಎಂಜಿನ್’ ಎಂಬ ಪದವನ್ನು ಬಿಜೆಪಿ ನಾಯಕರು ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷದ ಸರ್ಕಾರವನ್ನು ಉಲ್ಲೇಖಿಸಲು ಬಳಸುತ್ತಾರೆ.

ಕಳೆದ ವಾರ ಸರ್ಕಾರಿ ಬಸ್‌ನ ವಿಂಡ್‌ಶೀಲ್ಡ್‌ನಲ್ಲಿ ರಾಜ್ಯದ ಹೆಸರನ್ನು ಮರೆಮಾಡಿದ್ದಕ್ಕಾಗಿ ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಮೇ 20 ರಂದು ನಡೆದ ಈ ಘಟನೆಗೆ ರಾಜ್ಯಪಾಲರು ಕ್ಷಮೆಯಾಚಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ.

ಇಂಫಾಲ್‌ನಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಗ್ವಾಲ್ತಾಬಿ ಚೆಕ್‌ಪೋಸ್ಟ್‌ನಲ್ಲಿ ಭದ್ರತಾ ಸಿಬ್ಬಂದಿ ಬಸ್ ಅನ್ನು ತಡೆದು, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯ (ಡಿಐಪಿಆರ್) ಸಿಬ್ಬಂದಿಯನ್ನು ವಾಹನದ ವಿಂಡ್‌ಶೀಲ್ಡ್‌ನ ಮೇಲ್ಭಾಗದಲ್ಲಿ ಬರೆದಿರುವ ರಾಜ್ಯದ ಹೆಸರನ್ನು ಬಿಳಿ ಕಾಗದದ ತುಣುಕಿನಿಂದ ಮರೆಮಾಡಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮೇ 20 ರಂದು ಉಖ್ರುಲ್ ಜಿಲ್ಲೆಯ ಶಿರುಯಿ ಲಿಲಿ ಉತ್ಸವಕ್ಕೆ ಪತ್ರಕರ್ತರನ್ನು ಹೊತ್ತ ಬಸ್ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗ್ವಾಲ್ತಾಬಿ ಘಟನೆಯನ್ನು ಉಲ್ಲೇಖಿಸಿದ ಮೇಘಚಂದ್ರ ಅವರು, “ಮಣಿಪುರ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ನಿಂದ ‘ಮಣಿಪುರ’ ಪದವನ್ನು ತೆಗೆದುಹಾಕಲು ಮಣಿಪುರ ರಾಜ್ಯಪಾಲರಿಗೆ ಯಾರು ಸೂಚನೆ ನೀಡಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಲು, ವಿದ್ಯಾರ್ಥಿಗಳು ಮತ್ತು ಮಹಿಳಾ ಗುಂಪುಗಳು ಸೋಮವಾರ ಇಂಫಾಲ್ ವಿಮಾನ ನಿಲ್ದಾಣದಿಂದ ಕೈಸಂಪತ್‌ವರೆಗೆ ಆರು ಕಿಲೋಮೀಟರ್‌ಗಳಷ್ಟು ಉದ್ದದ ಮಾನವ ಸರಪಳಿಯನ್ನು ರಚಿಸಿದ್ದವು. ಈ ಪ್ರದೇಶವು ರಾಜ್ಯಪಾಲರ ನಿವಾಸದಿಂದ ಸುಮಾರು 200 ಮೀಟರ್ ದೂರದಲ್ಲಿದೆ.

ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು, ಸೋಮವಾರ ನವದೆಹಲಿಯಿಂದ ಇಂಫಾಲ್‌ಗೆ ಆಗಮಿಸಿದ್ದ ರಾಜ್ಯಪಾಲರು, ರಾಜಭವನದಿಂದ ಸುಮಾರು 300 ಮೀಟರ್ ದೂರದಲ್ಲಿರುವ ಕಾಂಗ್ಲಾ ಕೋಟೆಯನ್ನು ತಲುಪಲು ಸೇನಾ ಹೆಲಿಕಾಪ್ಟರ್‌ನಲ್ಲಿ ತೆರಳಿದ್ದರು.

ಸೋಮವಾರ ತಡರಾತ್ರಿ ಪೋಸ್ಟ್‌ನಲ್ಲಿ, ಮೇಘಚಂದ್ರ, “ಇಂದು ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಸುಮಾರು 7 ಕಿ.ಮೀ ದೂರದಲ್ಲಿರುವ ರಾಜಭವನವನ್ನು ತಲುಪಲು ಮಣಿಪುರ ರಾಜ್ಯಪಾಲರು ಇಂಫಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ಹಾರಬೇಕಾಯಿತು” ಎಂದು ಹೇಳಿದ್ದಾರೆ.

ಮೇ 2023 ರಿಂದ ಭುಗಿಲೆದ್ದ ಮೈತೇಯಿ ಮತ್ತು ಕುಕಿ-ಜೋ ಗುಂಪುಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 260 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಮಣಿಪುರದಲ್ಲಿ ಶಾಂತಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೋವಿಡ್ | ರಾಜ್ಯದಲ್ಲಿ ಆತಂಕಪಡುವ ಪರಿಸ್ಥಿತಿಯಿಲ್ಲ: ಸಿಎಂ ಸಿದ್ದರಾಮಯ್ಯ

ಕೋವಿಡ್ | ರಾಜ್ಯದಲ್ಲಿ ಆತಂಕಪಡುವ ಪರಿಸ್ಥಿತಿಯಿಲ್ಲ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...