Homeಮುಖಪುಟಫ್ಯಾಕ್ಟ್‌ಚೆಕ್ಕರ್ ಝುಬೈರ್ ವಿರುದ್ಧ 'ದೇಶದ್ರೋಹ ಸಮಾನ' ಪ್ರಕರಣ : ಪತ್ರಿಕಾ ಸಂಸ್ಥೆಗಳಿಂದ ಖಂಡನೆ

ಫ್ಯಾಕ್ಟ್‌ಚೆಕ್ಕರ್ ಝುಬೈರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ : ಪತ್ರಿಕಾ ಸಂಸ್ಥೆಗಳಿಂದ ಖಂಡನೆ

- Advertisement -
- Advertisement -

ಆಲ್ಟ್‌ ನ್ಯೂಸ್ ಫ್ಯಾಕ್ಟ್‌ಚೆಕ್ ಸುದ್ದಿ ಸಂಸ್ಥೆಯ ಸಹ-ಸಂಸ್ಥಾಪಕ ಮೊಹಮ್ಮದ್ ಝುಬೈರ್ ವಿರುದ್ದ ‘ದೇಶದ್ರೋಹ ಸಮಾನ’ ಪ್ರಕರಣ ದಾಖಲಿಸಿರುವುದನ್ನು ಪ್ರೆಸ್ ಕ್ಲಬ್ ಆಫ್ ಇಂಡಿಯಾ (ಪಿಸಿಐ) ಸೇರಿದಂತೆ ಪತ್ರಿಕಾ ಸಂಸ್ಥೆಗಳು ಖಂಡಿಸಿವೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಪಿಸಿಐ,”ಅಲಹಾಬಾದ್ ಹೈಕೋರ್ಟ್‌ಗೆ ಉತ್ತರ ಪ್ರದೇಶ ಪೊಲೀಸರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಝುಬೈರ್ ಅವರು ‘ಭಾರತದ ಸಾರ್ವಭೌಮತೆ ಮತ್ತು ಏಕತೆಗೆ ಅಪಾಯವನ್ನುಂಟುಮಾಡುತ್ತಿದ್ದಾರೆ’ ಎಂದು ಆರೋಪಿಸಿರುವುದು ಖಂಡನೀಯ ಎಂದಿದೆ.

“ಝುಬೈರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಕಾಯ್ದೆಯ ಸೆಕ್ಷನ್‌ 152ರ ಅಡಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಸೆಕ್ಷನ್‌ ಸ್ವತಂತ್ರ ಚಿಂತಕರು ಮತ್ತು ಮಾಧ್ಯಮಗಳನ್ನು ಮೌನಗೊಳಿಸುವ ಸಾಮರ್ಥ್ಯ ಹೊಂದಿರುವುದರಿಂದ ಎಲ್ಲಾ ವಿವೇಕಯುತ ಮನಸ್ಸುಗಳು ಇದನ್ನು ವಿರೋಧಿಸುತ್ತಿವೆ. ಟೀಕಾಕಾರ ವಿರುದ್ಧವೂ ಈ ಸೆಕ್ಸನ್ ವಿಧಿಸಬಹುದು” ಎಂದು ಹೇಳಿದೆ.

ದೇಶದ್ರೋಹದ ಕಾನೂನನ್ನು ದುರುಪಯೋಗಪಡಿಸಿಕೊಂಡ ಹಲವಾರು ಪ್ರಕರಣಗಳನ್ನು ನಾವು ಈ ಹಿಂದೆ ನೋಡಿದ್ದೇವೆ. ಬಿಎನ್ಎಸ್‌ ಸೆಕ್ಷನ್‌ 152 ಕೂಡ ಅದೇ, ಆದರೆ ಹೊಸ ಅವತಾರದಲ್ಲಿದೆ. ಝುಬೈರ್ ವಿರುದ್ದ ದಾಖಲಾಗಿರುವ ಎಫ್‌ಐಆರ್‌ ಹಿಂಪಡೆಯುವಂತೆ ಒತ್ತಾಯಿಸುತ್ತೇವೆ ಎಂದು ಪಿಸಿಐ ತಿಳಿಸಿದೆ.

ಡಿಜಿಟಲ್ ಸುದ್ದಿ ಸಂಸ್ಥೆಗಳ ಸಂಘವಾದ DIGIPUB ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಝಬೈರ್ ಗೆ ಕಿರುಕುಳ ನೀಡಲಾಗುತ್ತಿದೆ. ಝಬೈರ್ ವಿರುದ್ಧದ ಆರೋಪಗಳು ಆಧಾರ ರಹಿತವಾಗಿವೆ ಮತ್ತು ಇದು ತನಿಖಾ ಸಂಸ್ಥೆಗಳ ಸೇಡಿನ ಮತ್ತು ವಿವೇಚನಾರಹಿತ ಕ್ರಮವಾಗಿದೆ” ಎಂದಿದೆ.

ಕೋಮುದ್ವೇಷದ ಭಾಷಣ ಮಾಡುವ ಮೂಲಕವೇ ಕುಖ್ಯಾತಿಯನ್ನು ಪಡೆದಿರುವ ಯತಿ ನರಸಿಂಗಾನಂದನ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಕ್ಕೆ ಝುಬೈರ್ ವಿರುದ್ದ ಉತ್ತರ ಪ್ರದೇಶ ಪೊಲೀಸರು ಬಿಎನ್‌ಎಸ್‌ ಸೆಕ್ಷನ್ 152ರ ಅಡಿ ಎಫ್‌ಐಆರ್ ದಾಖಲಿಸಿದ್ದಾರೆ. ಇದು ದೇಶದ್ರೋಹಕ್ಕೆ ಸಮನಾದ ಪ್ರಕರಣವಾಗಿದೆ.

ಇದನ್ನೂ ಓದಿ : ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...