Homeಮುಖಪುಟ'ದಿ ವೈರ್‌'ನ ಸಿದ್ಧಾರ್ಥ್ ವರದರಾಜನ್, ಕರಣ್ ಥಾಪರ್ ವಿರುದ್ಧ ದೇಶದ್ರೋಹ ಪ್ರಕರಣ: ಪತ್ರಕರ್ತರ ಸಂಘಗಳಿಂದ ಖಂಡನೆ

‘ದಿ ವೈರ್‌’ನ ಸಿದ್ಧಾರ್ಥ್ ವರದರಾಜನ್, ಕರಣ್ ಥಾಪರ್ ವಿರುದ್ಧ ದೇಶದ್ರೋಹ ಪ್ರಕರಣ: ಪತ್ರಕರ್ತರ ಸಂಘಗಳಿಂದ ಖಂಡನೆ

- Advertisement -
- Advertisement -

‘ದಿ ವೈರ್’ ಸಂಪಾದಕ ಸಿದ್ಧಾರ್ಥ್ ವರದರಾಜನ್ ಮತ್ತು ಹಿರಿಯ ಪತ್ರಕರ್ತ ಕರಣ್ ಥಾಪರ್ ವಿರುದ್ಧ
ಅಸ್ಸಾಂ ಪೊಲೀಸರು ‘ದೇಶದ್ರೋಹ ಪ್ರಕರಣ’ ದಾಖಲಿಸಿರುವುದಕ್ಕೆ ಪತ್ರಕರ್ತರ ಸಂಘಗಳಾದ ಪ್ರೆಸ್ ಕ್ಲಬ್ ಆಫ್ ಇಂಡಿಯಾ (ಪಿಸಿಐ) ಮತ್ತು ವಿಮೆನ್ ಪ್ರೆಸ್ ಕಾರ್ಪ್ಸ್ ಮಂಗಳವಾರ (ಆ.19) ದಿಗ್ಭ್ರಮೆ ವ್ಯಕ್ತಪಡಿಸಿವೆ.

ಪತ್ರಕರ್ತರ ವಿರುದ್ದ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ಪ್ರತೀಕಾರದ ಕ್ರಮವಾಗಿದೆ ಎಂದು ಎರಡೂ ಸಂಘಗಳು ಜಂಟಿಯಾಗಿ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿವೆ. ತಕ್ಷಣ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿವೆ.

ಸಂವಿಧಾನದ 19(1)ಎ ವಿಧಿಯ ಅಡಿಯಲ್ಲಿ ನೀಡಲಾಗಿರುವ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಭಾರತೀಯ ನ್ಯಾಯ ಸಂಹಿತೆಯ (ಬಿಎಎನ್‌ಸ್‌) ಸೆಕ್ಷನ್ 152 ಅನ್ನು ರದ್ದುಪಡಿಸುವಂತೆ ಆಗ್ರಹಿಸಿವೆ.

ಸೆಕ್ಷನ್ 152 ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳಿಗೆ ಸಂಬಂಧಿಸಿದೆ. ‘ದೇಶದ್ರೋಹ ಕಾನೂನು’ ಎಂದು ಸುಲಭವಾಗಿ ಕರೆಯುವ ಈ ವಸಾಹತುಶಾಹಿ ಸೆಕ್ಷನ್, ಹಳೆಯ ಕ್ರಿಮಿನಲ್ ಕಾನೂನು ಭಾರತೀಯ ದಂಡ ಸಂಹಿತೆ(ಐಪಿಸಿ)ಯಲ್ಲಿ ಸೆಕ್ಷನ್ 124ಎ ಎಂದು ಗುರುತಿಸಲಾಗಿತ್ತು.

ಒಂದು ಪ್ರಕರಣದಲ್ಲಿ ಸಿದ್ದಾರ್ಥ್ ವರದರಾಜನ್ ಮತ್ತು ದಿ ವೈರ್ ನಡೆಸುತ್ತಿರುವ ಪ್ರತಿಷ್ಠಾನದ ಸದಸ್ಯರಿಗೆ ಬಂಧನದಿಂದ ಸುಪ್ರೀಂ ಕೋರ್ಟ್ ರಕ್ಷಣೆ ನೀಡಿದ್ದರೂ, ಯಾವುದೇ ಕಾರಣವಿಲ್ಲದೆ ಇನ್ನೊಂದು ಎಫ್‌ಐಆರ್ ದಾಖಲಿಸಿರುವ ಪೋಲಿಸರು ಆ.22ರಂದು ಗುವಾಹಟಿಯ ಕ್ರೈಂ ಬ್ರ್ಯಾಂಚ್ ಪೋಲಿಸ್ ಠಾಣೆಯಲ್ಲಿ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ವರದರಾಜನ್ ಮತ್ತು ಕರಣ್ ಥಾಪರ್ ಅವರಿಗೆ ಸೂಚಿಸಿದ್ದಾರೆ. ಹಾಜರಾಗದಿದ್ದರೆ ಅವರ ಬಂಧನವಾಗುವ ಭೀತಿಯಿದೆ ಎಂದು ಪತ್ರಕರ್ತರ ಸಂಘಟನೆಗಳು ಹೇಳಿಕೆಯಲ್ಲಿ ತಿಳಿಸಿವೆ.

ಸುಪ್ರೀಂ ಕೋರ್ಟ್ ಮೇ 2022ರಲ್ಲಿ ಈ ಹಿಂದಿನ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ ಅಡಿಯಲ್ಲಿ ದೇಶದ್ರೋಹದ ವಿಚಾರಣೆಗಳು ಮತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ಸ್ಥಗಿತಗೊಳಿಸಲು ಆದೇಶಿಸಿದೆ ಎಂದು ಪತ್ರಕರ್ತರ ಸಂಘಗಳು ಹೇಳಿವೆ.

ಬಿಎನ್‌ಎಸ್‌ನ ಸೆಕ್ಷನ್ 152 ಐಪಿಸಿಯ ಸೆಕ್ಷನ್ 124ಎನ ಹೊಸ ಆವೃತ್ತಿ ಎಂದಿರುವ ಸಂಘಗಳು, ದಿ ವೈರ್ ಬಿಎನ್‌ಎಸ್‌ನ ಸೆಕ್ಷನ್ 152 ಅನ್ನು ಪ್ರಶ್ನಿಸಿದೆ ಮತ್ತು ಸುಪ್ರೀಂ ಕೋರ್ಟ್ ಆಗಸ್ಟ್ 12 ರಂದು ಸರ್ಕಾರಕ್ಕೆ ನೋಟಿಸ್ ನೀಡಿದೆ ಎಂದಿವೆ.

ವರದರಾಜನ್ ಮತ್ತು ಥಾಪರ್ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಮಾಧ್ಯಮವನ್ನು ಗುರಿಯಾಗಿಸಲು ‘ಸೆಕ್ಷನ್ 152 ಒಂದು ಸಾಧನವಾಗಿದೆ’ ಎಂಬುವುದನ್ನು ಸ್ಪಷ್ಟಪಡಿಸುತ್ತದೆ ಎಂದು ಪತ್ರಕರ್ತರ ಸಂಘಗಳು ಆಕ್ರೋಶ ವ್ಯಕ್ತಪಡಿಸಿವೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 152 ಮತ್ತು ಇತರ ನಿಬಂಧನೆಗಳ ಅಡಿಯಲ್ಲಿ ಅಸ್ಸಾಂನ ಮೋರಿಗಾಂವ್‌ನಲ್ಲಿ ಸಿದ್ಧಾರ್ಥ್ ವರದರಾಜನ್ ವಿರುದ್ಧ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ. ಈ ಪ್ರಕರಣವು ಜೂನ್ 28,2025 ರಂದು ದಿ ವೈರ್‌ನಲ್ಲಿ ಪ್ರಕಟವಾದ ‘IAF Lost Fighter Jets to Pak Because of Political Leadership’s Constraints’: Indian Defence Attache’ಎಂಬ ಶೀರ್ಷಿಕೆಯ ವರದಿಗೆ ಸಂಬಂಧಿಸಿದೆ.

ವರದಿಯ ವಿರುದ್ದ ಅಸ್ಸಾಂ ಬಿಜೆಪಿ ಕಚೇರಿಯ ಅಧಿಕಾರಿಯೊಬ್ಬರು ದೂರು ನೀಡಿದ್ದರು. ಈ ಪ್ರಕರಣದಲ್ಲಿ ಆಗಸ್ಟ್ 12, 2025 ರಂದು ಸುಪ್ರೀಂ ಕೋರ್ಟ್ ವರದರಾಜನ್ ಮತ್ತು ದಿ ವೈರ್ ಪತ್ರಕರ್ತರಿಗೆ ಬಲವಂತದ ಕ್ರಮದಿಂದ ರಕ್ಷಣೆ ನೀಡಿದೆ.

ಗುವಾಹಟಿ ಅಪರಾಧ ವಿಭಾಗವು ಸಿದ್ಧಾರ್ಥ್ ವರದರಾಜನ್ ಮತ್ತು ಕರಣ್ ಥಾಪರ್ ವಿರುದ್ಧ ಮತ್ತೊಂದು ಹೊಸ ಎಫ್‌ಐಆರ್ ದಾಖಲಿಸಿದೆ. ಇದರಲ್ಲಿ, ಬಿಎನ್‌ಎಸ್‌ನ ಸೆಕ್ಷನ್ 152 ಜೊತೆಗೆ ಸೆಕ್ಷನ್ 196, 197(1)(D)/3(6), 353, 45, ಮತ್ತು 61 ರ ಅಡಿಯಲ್ಲಿ ದೇಶದ್ರೋಹದ ಆರೋಪಗಳನ್ನು ಹೊರಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 12, 2025 ರಂದು ಸಮನ್ಸ್ ಜಾರಿ ಮಾಡಲಾಗಿದ್ದು, ಇಬ್ಬರೂ ಪತ್ರಕರ್ತರು ಆಗಸ್ಟ್ 22, 2025 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಆಪಾದಿತ ಅಪರಾಧ ಅಥವಾ ಎಫ್‌ಐಆರ್ ದಿನಾಂಕದ ಬಗ್ಗೆ ಯಾವುದೇ ನಿರ್ದಿಷ್ಟ ವಿವರಗಳನ್ನು ಪೊಲೀಸರು ಒದಗಿಸಿಲ್ಲ.

ಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...