Homeಮುಖಪುಟ'ದಿ ವೈರ್‌'ನ ಸಿದ್ಧಾರ್ಥ್ ವರದರಾಜನ್, ಕರಣ್ ಥಾಪರ್ ವಿರುದ್ಧ ದೇಶದ್ರೋಹ ಪ್ರಕರಣ: ಪತ್ರಕರ್ತರ ಸಂಘಗಳಿಂದ ಖಂಡನೆ

‘ದಿ ವೈರ್‌’ನ ಸಿದ್ಧಾರ್ಥ್ ವರದರಾಜನ್, ಕರಣ್ ಥಾಪರ್ ವಿರುದ್ಧ ದೇಶದ್ರೋಹ ಪ್ರಕರಣ: ಪತ್ರಕರ್ತರ ಸಂಘಗಳಿಂದ ಖಂಡನೆ

- Advertisement -
- Advertisement -

‘ದಿ ವೈರ್’ ಸಂಪಾದಕ ಸಿದ್ಧಾರ್ಥ್ ವರದರಾಜನ್ ಮತ್ತು ಹಿರಿಯ ಪತ್ರಕರ್ತ ಕರಣ್ ಥಾಪರ್ ವಿರುದ್ಧ
ಅಸ್ಸಾಂ ಪೊಲೀಸರು ‘ದೇಶದ್ರೋಹ ಪ್ರಕರಣ’ ದಾಖಲಿಸಿರುವುದಕ್ಕೆ ಪತ್ರಕರ್ತರ ಸಂಘಗಳಾದ ಪ್ರೆಸ್ ಕ್ಲಬ್ ಆಫ್ ಇಂಡಿಯಾ (ಪಿಸಿಐ) ಮತ್ತು ವಿಮೆನ್ ಪ್ರೆಸ್ ಕಾರ್ಪ್ಸ್ ಮಂಗಳವಾರ (ಆ.19) ದಿಗ್ಭ್ರಮೆ ವ್ಯಕ್ತಪಡಿಸಿವೆ.

ಪತ್ರಕರ್ತರ ವಿರುದ್ದ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ಪ್ರತೀಕಾರದ ಕ್ರಮವಾಗಿದೆ ಎಂದು ಎರಡೂ ಸಂಘಗಳು ಜಂಟಿಯಾಗಿ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿವೆ. ತಕ್ಷಣ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿವೆ.

ಸಂವಿಧಾನದ 19(1)ಎ ವಿಧಿಯ ಅಡಿಯಲ್ಲಿ ನೀಡಲಾಗಿರುವ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಭಾರತೀಯ ನ್ಯಾಯ ಸಂಹಿತೆಯ (ಬಿಎಎನ್‌ಸ್‌) ಸೆಕ್ಷನ್ 152 ಅನ್ನು ರದ್ದುಪಡಿಸುವಂತೆ ಆಗ್ರಹಿಸಿವೆ.

ಸೆಕ್ಷನ್ 152 ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳಿಗೆ ಸಂಬಂಧಿಸಿದೆ. ‘ದೇಶದ್ರೋಹ ಕಾನೂನು’ ಎಂದು ಸುಲಭವಾಗಿ ಕರೆಯುವ ಈ ವಸಾಹತುಶಾಹಿ ಸೆಕ್ಷನ್, ಹಳೆಯ ಕ್ರಿಮಿನಲ್ ಕಾನೂನು ಭಾರತೀಯ ದಂಡ ಸಂಹಿತೆ(ಐಪಿಸಿ)ಯಲ್ಲಿ ಸೆಕ್ಷನ್ 124ಎ ಎಂದು ಗುರುತಿಸಲಾಗಿತ್ತು.

ಒಂದು ಪ್ರಕರಣದಲ್ಲಿ ಸಿದ್ದಾರ್ಥ್ ವರದರಾಜನ್ ಮತ್ತು ದಿ ವೈರ್ ನಡೆಸುತ್ತಿರುವ ಪ್ರತಿಷ್ಠಾನದ ಸದಸ್ಯರಿಗೆ ಬಂಧನದಿಂದ ಸುಪ್ರೀಂ ಕೋರ್ಟ್ ರಕ್ಷಣೆ ನೀಡಿದ್ದರೂ, ಯಾವುದೇ ಕಾರಣವಿಲ್ಲದೆ ಇನ್ನೊಂದು ಎಫ್‌ಐಆರ್ ದಾಖಲಿಸಿರುವ ಪೋಲಿಸರು ಆ.22ರಂದು ಗುವಾಹಟಿಯ ಕ್ರೈಂ ಬ್ರ್ಯಾಂಚ್ ಪೋಲಿಸ್ ಠಾಣೆಯಲ್ಲಿ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ವರದರಾಜನ್ ಮತ್ತು ಕರಣ್ ಥಾಪರ್ ಅವರಿಗೆ ಸೂಚಿಸಿದ್ದಾರೆ. ಹಾಜರಾಗದಿದ್ದರೆ ಅವರ ಬಂಧನವಾಗುವ ಭೀತಿಯಿದೆ ಎಂದು ಪತ್ರಕರ್ತರ ಸಂಘಟನೆಗಳು ಹೇಳಿಕೆಯಲ್ಲಿ ತಿಳಿಸಿವೆ.

ಸುಪ್ರೀಂ ಕೋರ್ಟ್ ಮೇ 2022ರಲ್ಲಿ ಈ ಹಿಂದಿನ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ ಅಡಿಯಲ್ಲಿ ದೇಶದ್ರೋಹದ ವಿಚಾರಣೆಗಳು ಮತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ಸ್ಥಗಿತಗೊಳಿಸಲು ಆದೇಶಿಸಿದೆ ಎಂದು ಪತ್ರಕರ್ತರ ಸಂಘಗಳು ಹೇಳಿವೆ.

ಬಿಎನ್‌ಎಸ್‌ನ ಸೆಕ್ಷನ್ 152 ಐಪಿಸಿಯ ಸೆಕ್ಷನ್ 124ಎನ ಹೊಸ ಆವೃತ್ತಿ ಎಂದಿರುವ ಸಂಘಗಳು, ದಿ ವೈರ್ ಬಿಎನ್‌ಎಸ್‌ನ ಸೆಕ್ಷನ್ 152 ಅನ್ನು ಪ್ರಶ್ನಿಸಿದೆ ಮತ್ತು ಸುಪ್ರೀಂ ಕೋರ್ಟ್ ಆಗಸ್ಟ್ 12 ರಂದು ಸರ್ಕಾರಕ್ಕೆ ನೋಟಿಸ್ ನೀಡಿದೆ ಎಂದಿವೆ.

ವರದರಾಜನ್ ಮತ್ತು ಥಾಪರ್ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಮಾಧ್ಯಮವನ್ನು ಗುರಿಯಾಗಿಸಲು ‘ಸೆಕ್ಷನ್ 152 ಒಂದು ಸಾಧನವಾಗಿದೆ’ ಎಂಬುವುದನ್ನು ಸ್ಪಷ್ಟಪಡಿಸುತ್ತದೆ ಎಂದು ಪತ್ರಕರ್ತರ ಸಂಘಗಳು ಆಕ್ರೋಶ ವ್ಯಕ್ತಪಡಿಸಿವೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 152 ಮತ್ತು ಇತರ ನಿಬಂಧನೆಗಳ ಅಡಿಯಲ್ಲಿ ಅಸ್ಸಾಂನ ಮೋರಿಗಾಂವ್‌ನಲ್ಲಿ ಸಿದ್ಧಾರ್ಥ್ ವರದರಾಜನ್ ವಿರುದ್ಧ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ. ಈ ಪ್ರಕರಣವು ಜೂನ್ 28,2025 ರಂದು ದಿ ವೈರ್‌ನಲ್ಲಿ ಪ್ರಕಟವಾದ ‘IAF Lost Fighter Jets to Pak Because of Political Leadership’s Constraints’: Indian Defence Attache’ಎಂಬ ಶೀರ್ಷಿಕೆಯ ವರದಿಗೆ ಸಂಬಂಧಿಸಿದೆ.

ವರದಿಯ ವಿರುದ್ದ ಅಸ್ಸಾಂ ಬಿಜೆಪಿ ಕಚೇರಿಯ ಅಧಿಕಾರಿಯೊಬ್ಬರು ದೂರು ನೀಡಿದ್ದರು. ಈ ಪ್ರಕರಣದಲ್ಲಿ ಆಗಸ್ಟ್ 12, 2025 ರಂದು ಸುಪ್ರೀಂ ಕೋರ್ಟ್ ವರದರಾಜನ್ ಮತ್ತು ದಿ ವೈರ್ ಪತ್ರಕರ್ತರಿಗೆ ಬಲವಂತದ ಕ್ರಮದಿಂದ ರಕ್ಷಣೆ ನೀಡಿದೆ.

ಗುವಾಹಟಿ ಅಪರಾಧ ವಿಭಾಗವು ಸಿದ್ಧಾರ್ಥ್ ವರದರಾಜನ್ ಮತ್ತು ಕರಣ್ ಥಾಪರ್ ವಿರುದ್ಧ ಮತ್ತೊಂದು ಹೊಸ ಎಫ್‌ಐಆರ್ ದಾಖಲಿಸಿದೆ. ಇದರಲ್ಲಿ, ಬಿಎನ್‌ಎಸ್‌ನ ಸೆಕ್ಷನ್ 152 ಜೊತೆಗೆ ಸೆಕ್ಷನ್ 196, 197(1)(D)/3(6), 353, 45, ಮತ್ತು 61 ರ ಅಡಿಯಲ್ಲಿ ದೇಶದ್ರೋಹದ ಆರೋಪಗಳನ್ನು ಹೊರಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 12, 2025 ರಂದು ಸಮನ್ಸ್ ಜಾರಿ ಮಾಡಲಾಗಿದ್ದು, ಇಬ್ಬರೂ ಪತ್ರಕರ್ತರು ಆಗಸ್ಟ್ 22, 2025 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಆಪಾದಿತ ಅಪರಾಧ ಅಥವಾ ಎಫ್‌ಐಆರ್ ದಿನಾಂಕದ ಬಗ್ಗೆ ಯಾವುದೇ ನಿರ್ದಿಷ್ಟ ವಿವರಗಳನ್ನು ಪೊಲೀಸರು ಒದಗಿಸಿಲ್ಲ.

ಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...