Homeಮುಖಪುಟ'ದಿ ವೈರ್‌'ನ ಸಿದ್ಧಾರ್ಥ್ ವರದರಾಜನ್, ಕರಣ್ ಥಾಪರ್ ವಿರುದ್ಧ ದೇಶದ್ರೋಹ ಪ್ರಕರಣ: ಪತ್ರಕರ್ತರ ಸಂಘಗಳಿಂದ ಖಂಡನೆ

‘ದಿ ವೈರ್‌’ನ ಸಿದ್ಧಾರ್ಥ್ ವರದರಾಜನ್, ಕರಣ್ ಥಾಪರ್ ವಿರುದ್ಧ ದೇಶದ್ರೋಹ ಪ್ರಕರಣ: ಪತ್ರಕರ್ತರ ಸಂಘಗಳಿಂದ ಖಂಡನೆ

- Advertisement -
- Advertisement -

‘ದಿ ವೈರ್’ ಸಂಪಾದಕ ಸಿದ್ಧಾರ್ಥ್ ವರದರಾಜನ್ ಮತ್ತು ಹಿರಿಯ ಪತ್ರಕರ್ತ ಕರಣ್ ಥಾಪರ್ ವಿರುದ್ಧ
ಅಸ್ಸಾಂ ಪೊಲೀಸರು ‘ದೇಶದ್ರೋಹ ಪ್ರಕರಣ’ ದಾಖಲಿಸಿರುವುದಕ್ಕೆ ಪತ್ರಕರ್ತರ ಸಂಘಗಳಾದ ಪ್ರೆಸ್ ಕ್ಲಬ್ ಆಫ್ ಇಂಡಿಯಾ (ಪಿಸಿಐ) ಮತ್ತು ವಿಮೆನ್ ಪ್ರೆಸ್ ಕಾರ್ಪ್ಸ್ ಮಂಗಳವಾರ (ಆ.19) ದಿಗ್ಭ್ರಮೆ ವ್ಯಕ್ತಪಡಿಸಿವೆ.

ಪತ್ರಕರ್ತರ ವಿರುದ್ದ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ಪ್ರತೀಕಾರದ ಕ್ರಮವಾಗಿದೆ ಎಂದು ಎರಡೂ ಸಂಘಗಳು ಜಂಟಿಯಾಗಿ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿವೆ. ತಕ್ಷಣ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿವೆ.

ಸಂವಿಧಾನದ 19(1)ಎ ವಿಧಿಯ ಅಡಿಯಲ್ಲಿ ನೀಡಲಾಗಿರುವ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಭಾರತೀಯ ನ್ಯಾಯ ಸಂಹಿತೆಯ (ಬಿಎಎನ್‌ಸ್‌) ಸೆಕ್ಷನ್ 152 ಅನ್ನು ರದ್ದುಪಡಿಸುವಂತೆ ಆಗ್ರಹಿಸಿವೆ.

ಸೆಕ್ಷನ್ 152 ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳಿಗೆ ಸಂಬಂಧಿಸಿದೆ. ‘ದೇಶದ್ರೋಹ ಕಾನೂನು’ ಎಂದು ಸುಲಭವಾಗಿ ಕರೆಯುವ ಈ ವಸಾಹತುಶಾಹಿ ಸೆಕ್ಷನ್, ಹಳೆಯ ಕ್ರಿಮಿನಲ್ ಕಾನೂನು ಭಾರತೀಯ ದಂಡ ಸಂಹಿತೆ(ಐಪಿಸಿ)ಯಲ್ಲಿ ಸೆಕ್ಷನ್ 124ಎ ಎಂದು ಗುರುತಿಸಲಾಗಿತ್ತು.

ಒಂದು ಪ್ರಕರಣದಲ್ಲಿ ಸಿದ್ದಾರ್ಥ್ ವರದರಾಜನ್ ಮತ್ತು ದಿ ವೈರ್ ನಡೆಸುತ್ತಿರುವ ಪ್ರತಿಷ್ಠಾನದ ಸದಸ್ಯರಿಗೆ ಬಂಧನದಿಂದ ಸುಪ್ರೀಂ ಕೋರ್ಟ್ ರಕ್ಷಣೆ ನೀಡಿದ್ದರೂ, ಯಾವುದೇ ಕಾರಣವಿಲ್ಲದೆ ಇನ್ನೊಂದು ಎಫ್‌ಐಆರ್ ದಾಖಲಿಸಿರುವ ಪೋಲಿಸರು ಆ.22ರಂದು ಗುವಾಹಟಿಯ ಕ್ರೈಂ ಬ್ರ್ಯಾಂಚ್ ಪೋಲಿಸ್ ಠಾಣೆಯಲ್ಲಿ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ವರದರಾಜನ್ ಮತ್ತು ಕರಣ್ ಥಾಪರ್ ಅವರಿಗೆ ಸೂಚಿಸಿದ್ದಾರೆ. ಹಾಜರಾಗದಿದ್ದರೆ ಅವರ ಬಂಧನವಾಗುವ ಭೀತಿಯಿದೆ ಎಂದು ಪತ್ರಕರ್ತರ ಸಂಘಟನೆಗಳು ಹೇಳಿಕೆಯಲ್ಲಿ ತಿಳಿಸಿವೆ.

ಸುಪ್ರೀಂ ಕೋರ್ಟ್ ಮೇ 2022ರಲ್ಲಿ ಈ ಹಿಂದಿನ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ ಅಡಿಯಲ್ಲಿ ದೇಶದ್ರೋಹದ ವಿಚಾರಣೆಗಳು ಮತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ಸ್ಥಗಿತಗೊಳಿಸಲು ಆದೇಶಿಸಿದೆ ಎಂದು ಪತ್ರಕರ್ತರ ಸಂಘಗಳು ಹೇಳಿವೆ.

ಬಿಎನ್‌ಎಸ್‌ನ ಸೆಕ್ಷನ್ 152 ಐಪಿಸಿಯ ಸೆಕ್ಷನ್ 124ಎನ ಹೊಸ ಆವೃತ್ತಿ ಎಂದಿರುವ ಸಂಘಗಳು, ದಿ ವೈರ್ ಬಿಎನ್‌ಎಸ್‌ನ ಸೆಕ್ಷನ್ 152 ಅನ್ನು ಪ್ರಶ್ನಿಸಿದೆ ಮತ್ತು ಸುಪ್ರೀಂ ಕೋರ್ಟ್ ಆಗಸ್ಟ್ 12 ರಂದು ಸರ್ಕಾರಕ್ಕೆ ನೋಟಿಸ್ ನೀಡಿದೆ ಎಂದಿವೆ.

ವರದರಾಜನ್ ಮತ್ತು ಥಾಪರ್ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಮಾಧ್ಯಮವನ್ನು ಗುರಿಯಾಗಿಸಲು ‘ಸೆಕ್ಷನ್ 152 ಒಂದು ಸಾಧನವಾಗಿದೆ’ ಎಂಬುವುದನ್ನು ಸ್ಪಷ್ಟಪಡಿಸುತ್ತದೆ ಎಂದು ಪತ್ರಕರ್ತರ ಸಂಘಗಳು ಆಕ್ರೋಶ ವ್ಯಕ್ತಪಡಿಸಿವೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 152 ಮತ್ತು ಇತರ ನಿಬಂಧನೆಗಳ ಅಡಿಯಲ್ಲಿ ಅಸ್ಸಾಂನ ಮೋರಿಗಾಂವ್‌ನಲ್ಲಿ ಸಿದ್ಧಾರ್ಥ್ ವರದರಾಜನ್ ವಿರುದ್ಧ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ. ಈ ಪ್ರಕರಣವು ಜೂನ್ 28,2025 ರಂದು ದಿ ವೈರ್‌ನಲ್ಲಿ ಪ್ರಕಟವಾದ ‘IAF Lost Fighter Jets to Pak Because of Political Leadership’s Constraints’: Indian Defence Attache’ಎಂಬ ಶೀರ್ಷಿಕೆಯ ವರದಿಗೆ ಸಂಬಂಧಿಸಿದೆ.

ವರದಿಯ ವಿರುದ್ದ ಅಸ್ಸಾಂ ಬಿಜೆಪಿ ಕಚೇರಿಯ ಅಧಿಕಾರಿಯೊಬ್ಬರು ದೂರು ನೀಡಿದ್ದರು. ಈ ಪ್ರಕರಣದಲ್ಲಿ ಆಗಸ್ಟ್ 12, 2025 ರಂದು ಸುಪ್ರೀಂ ಕೋರ್ಟ್ ವರದರಾಜನ್ ಮತ್ತು ದಿ ವೈರ್ ಪತ್ರಕರ್ತರಿಗೆ ಬಲವಂತದ ಕ್ರಮದಿಂದ ರಕ್ಷಣೆ ನೀಡಿದೆ.

ಗುವಾಹಟಿ ಅಪರಾಧ ವಿಭಾಗವು ಸಿದ್ಧಾರ್ಥ್ ವರದರಾಜನ್ ಮತ್ತು ಕರಣ್ ಥಾಪರ್ ವಿರುದ್ಧ ಮತ್ತೊಂದು ಹೊಸ ಎಫ್‌ಐಆರ್ ದಾಖಲಿಸಿದೆ. ಇದರಲ್ಲಿ, ಬಿಎನ್‌ಎಸ್‌ನ ಸೆಕ್ಷನ್ 152 ಜೊತೆಗೆ ಸೆಕ್ಷನ್ 196, 197(1)(D)/3(6), 353, 45, ಮತ್ತು 61 ರ ಅಡಿಯಲ್ಲಿ ದೇಶದ್ರೋಹದ ಆರೋಪಗಳನ್ನು ಹೊರಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 12, 2025 ರಂದು ಸಮನ್ಸ್ ಜಾರಿ ಮಾಡಲಾಗಿದ್ದು, ಇಬ್ಬರೂ ಪತ್ರಕರ್ತರು ಆಗಸ್ಟ್ 22, 2025 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಆಪಾದಿತ ಅಪರಾಧ ಅಥವಾ ಎಫ್‌ಐಆರ್ ದಿನಾಂಕದ ಬಗ್ಗೆ ಯಾವುದೇ ನಿರ್ದಿಷ್ಟ ವಿವರಗಳನ್ನು ಪೊಲೀಸರು ಒದಗಿಸಿಲ್ಲ.

ಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...