Homeಮುಖಪುಟ'ದಿ ವೈರ್‌'ನ ಸಿದ್ಧಾರ್ಥ್ ವರದರಾಜನ್, ಕರಣ್ ಥಾಪರ್ ವಿರುದ್ಧ ದೇಶದ್ರೋಹ ಪ್ರಕರಣ: ಪತ್ರಕರ್ತರ ಸಂಘಗಳಿಂದ ಖಂಡನೆ

‘ದಿ ವೈರ್‌’ನ ಸಿದ್ಧಾರ್ಥ್ ವರದರಾಜನ್, ಕರಣ್ ಥಾಪರ್ ವಿರುದ್ಧ ದೇಶದ್ರೋಹ ಪ್ರಕರಣ: ಪತ್ರಕರ್ತರ ಸಂಘಗಳಿಂದ ಖಂಡನೆ

- Advertisement -
- Advertisement -

‘ದಿ ವೈರ್’ ಸಂಪಾದಕ ಸಿದ್ಧಾರ್ಥ್ ವರದರಾಜನ್ ಮತ್ತು ಹಿರಿಯ ಪತ್ರಕರ್ತ ಕರಣ್ ಥಾಪರ್ ವಿರುದ್ಧ
ಅಸ್ಸಾಂ ಪೊಲೀಸರು ‘ದೇಶದ್ರೋಹ ಪ್ರಕರಣ’ ದಾಖಲಿಸಿರುವುದಕ್ಕೆ ಪತ್ರಕರ್ತರ ಸಂಘಗಳಾದ ಪ್ರೆಸ್ ಕ್ಲಬ್ ಆಫ್ ಇಂಡಿಯಾ (ಪಿಸಿಐ) ಮತ್ತು ವಿಮೆನ್ ಪ್ರೆಸ್ ಕಾರ್ಪ್ಸ್ ಮಂಗಳವಾರ (ಆ.19) ದಿಗ್ಭ್ರಮೆ ವ್ಯಕ್ತಪಡಿಸಿವೆ.

ಪತ್ರಕರ್ತರ ವಿರುದ್ದ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ಪ್ರತೀಕಾರದ ಕ್ರಮವಾಗಿದೆ ಎಂದು ಎರಡೂ ಸಂಘಗಳು ಜಂಟಿಯಾಗಿ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿವೆ. ತಕ್ಷಣ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿವೆ.

ಸಂವಿಧಾನದ 19(1)ಎ ವಿಧಿಯ ಅಡಿಯಲ್ಲಿ ನೀಡಲಾಗಿರುವ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಭಾರತೀಯ ನ್ಯಾಯ ಸಂಹಿತೆಯ (ಬಿಎಎನ್‌ಸ್‌) ಸೆಕ್ಷನ್ 152 ಅನ್ನು ರದ್ದುಪಡಿಸುವಂತೆ ಆಗ್ರಹಿಸಿವೆ.

ಸೆಕ್ಷನ್ 152 ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳಿಗೆ ಸಂಬಂಧಿಸಿದೆ. ‘ದೇಶದ್ರೋಹ ಕಾನೂನು’ ಎಂದು ಸುಲಭವಾಗಿ ಕರೆಯುವ ಈ ವಸಾಹತುಶಾಹಿ ಸೆಕ್ಷನ್, ಹಳೆಯ ಕ್ರಿಮಿನಲ್ ಕಾನೂನು ಭಾರತೀಯ ದಂಡ ಸಂಹಿತೆ(ಐಪಿಸಿ)ಯಲ್ಲಿ ಸೆಕ್ಷನ್ 124ಎ ಎಂದು ಗುರುತಿಸಲಾಗಿತ್ತು.

ಒಂದು ಪ್ರಕರಣದಲ್ಲಿ ಸಿದ್ದಾರ್ಥ್ ವರದರಾಜನ್ ಮತ್ತು ದಿ ವೈರ್ ನಡೆಸುತ್ತಿರುವ ಪ್ರತಿಷ್ಠಾನದ ಸದಸ್ಯರಿಗೆ ಬಂಧನದಿಂದ ಸುಪ್ರೀಂ ಕೋರ್ಟ್ ರಕ್ಷಣೆ ನೀಡಿದ್ದರೂ, ಯಾವುದೇ ಕಾರಣವಿಲ್ಲದೆ ಇನ್ನೊಂದು ಎಫ್‌ಐಆರ್ ದಾಖಲಿಸಿರುವ ಪೋಲಿಸರು ಆ.22ರಂದು ಗುವಾಹಟಿಯ ಕ್ರೈಂ ಬ್ರ್ಯಾಂಚ್ ಪೋಲಿಸ್ ಠಾಣೆಯಲ್ಲಿ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ವರದರಾಜನ್ ಮತ್ತು ಕರಣ್ ಥಾಪರ್ ಅವರಿಗೆ ಸೂಚಿಸಿದ್ದಾರೆ. ಹಾಜರಾಗದಿದ್ದರೆ ಅವರ ಬಂಧನವಾಗುವ ಭೀತಿಯಿದೆ ಎಂದು ಪತ್ರಕರ್ತರ ಸಂಘಟನೆಗಳು ಹೇಳಿಕೆಯಲ್ಲಿ ತಿಳಿಸಿವೆ.

ಸುಪ್ರೀಂ ಕೋರ್ಟ್ ಮೇ 2022ರಲ್ಲಿ ಈ ಹಿಂದಿನ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ ಅಡಿಯಲ್ಲಿ ದೇಶದ್ರೋಹದ ವಿಚಾರಣೆಗಳು ಮತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ಸ್ಥಗಿತಗೊಳಿಸಲು ಆದೇಶಿಸಿದೆ ಎಂದು ಪತ್ರಕರ್ತರ ಸಂಘಗಳು ಹೇಳಿವೆ.

ಬಿಎನ್‌ಎಸ್‌ನ ಸೆಕ್ಷನ್ 152 ಐಪಿಸಿಯ ಸೆಕ್ಷನ್ 124ಎನ ಹೊಸ ಆವೃತ್ತಿ ಎಂದಿರುವ ಸಂಘಗಳು, ದಿ ವೈರ್ ಬಿಎನ್‌ಎಸ್‌ನ ಸೆಕ್ಷನ್ 152 ಅನ್ನು ಪ್ರಶ್ನಿಸಿದೆ ಮತ್ತು ಸುಪ್ರೀಂ ಕೋರ್ಟ್ ಆಗಸ್ಟ್ 12 ರಂದು ಸರ್ಕಾರಕ್ಕೆ ನೋಟಿಸ್ ನೀಡಿದೆ ಎಂದಿವೆ.

ವರದರಾಜನ್ ಮತ್ತು ಥಾಪರ್ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಮಾಧ್ಯಮವನ್ನು ಗುರಿಯಾಗಿಸಲು ‘ಸೆಕ್ಷನ್ 152 ಒಂದು ಸಾಧನವಾಗಿದೆ’ ಎಂಬುವುದನ್ನು ಸ್ಪಷ್ಟಪಡಿಸುತ್ತದೆ ಎಂದು ಪತ್ರಕರ್ತರ ಸಂಘಗಳು ಆಕ್ರೋಶ ವ್ಯಕ್ತಪಡಿಸಿವೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 152 ಮತ್ತು ಇತರ ನಿಬಂಧನೆಗಳ ಅಡಿಯಲ್ಲಿ ಅಸ್ಸಾಂನ ಮೋರಿಗಾಂವ್‌ನಲ್ಲಿ ಸಿದ್ಧಾರ್ಥ್ ವರದರಾಜನ್ ವಿರುದ್ಧ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ. ಈ ಪ್ರಕರಣವು ಜೂನ್ 28,2025 ರಂದು ದಿ ವೈರ್‌ನಲ್ಲಿ ಪ್ರಕಟವಾದ ‘IAF Lost Fighter Jets to Pak Because of Political Leadership’s Constraints’: Indian Defence Attache’ಎಂಬ ಶೀರ್ಷಿಕೆಯ ವರದಿಗೆ ಸಂಬಂಧಿಸಿದೆ.

ವರದಿಯ ವಿರುದ್ದ ಅಸ್ಸಾಂ ಬಿಜೆಪಿ ಕಚೇರಿಯ ಅಧಿಕಾರಿಯೊಬ್ಬರು ದೂರು ನೀಡಿದ್ದರು. ಈ ಪ್ರಕರಣದಲ್ಲಿ ಆಗಸ್ಟ್ 12, 2025 ರಂದು ಸುಪ್ರೀಂ ಕೋರ್ಟ್ ವರದರಾಜನ್ ಮತ್ತು ದಿ ವೈರ್ ಪತ್ರಕರ್ತರಿಗೆ ಬಲವಂತದ ಕ್ರಮದಿಂದ ರಕ್ಷಣೆ ನೀಡಿದೆ.

ಗುವಾಹಟಿ ಅಪರಾಧ ವಿಭಾಗವು ಸಿದ್ಧಾರ್ಥ್ ವರದರಾಜನ್ ಮತ್ತು ಕರಣ್ ಥಾಪರ್ ವಿರುದ್ಧ ಮತ್ತೊಂದು ಹೊಸ ಎಫ್‌ಐಆರ್ ದಾಖಲಿಸಿದೆ. ಇದರಲ್ಲಿ, ಬಿಎನ್‌ಎಸ್‌ನ ಸೆಕ್ಷನ್ 152 ಜೊತೆಗೆ ಸೆಕ್ಷನ್ 196, 197(1)(D)/3(6), 353, 45, ಮತ್ತು 61 ರ ಅಡಿಯಲ್ಲಿ ದೇಶದ್ರೋಹದ ಆರೋಪಗಳನ್ನು ಹೊರಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 12, 2025 ರಂದು ಸಮನ್ಸ್ ಜಾರಿ ಮಾಡಲಾಗಿದ್ದು, ಇಬ್ಬರೂ ಪತ್ರಕರ್ತರು ಆಗಸ್ಟ್ 22, 2025 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಆಪಾದಿತ ಅಪರಾಧ ಅಥವಾ ಎಫ್‌ಐಆರ್ ದಿನಾಂಕದ ಬಗ್ಗೆ ಯಾವುದೇ ನಿರ್ದಿಷ್ಟ ವಿವರಗಳನ್ನು ಪೊಲೀಸರು ಒದಗಿಸಿಲ್ಲ.

ಖಾಸಗಿ ಸಿಮೆಂಟ್ ಕಂಪನಿಗೆ 1 ಸಾವಿರ ಎಕರೆ ಭೂಮಿ ಕೊಡಲು ಮುಂದಾದ ಅಸ್ಸಾಂ ಸರ್ಕಾರ: ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...