Homeಮುಖಪುಟಕಾಶ್ಮೀರಿ ಪತ್ರಕರ್ತ ಫಹಾದ್ ಶಾ ಬಿಡುಗಡೆಗೆ ಪತ್ರಿಕಾ ಸಂಸ್ಥೆಗಳ ಒತ್ತಾಯ

ಕಾಶ್ಮೀರಿ ಪತ್ರಕರ್ತ ಫಹಾದ್ ಶಾ ಬಿಡುಗಡೆಗೆ ಪತ್ರಿಕಾ ಸಂಸ್ಥೆಗಳ ಒತ್ತಾಯ

- Advertisement -
- Advertisement -

‘ದಿ ಕಾಶ್ಮೀರ ವಾಲಾ’ ನ್ಯೂಸ್ ಪೋರ್ಟಲ್ ಸಂಪಾದಕರಾದ ಕಾಶ್ಮೀರಿ ಪತ್ರಕರ್ತ ಫಹಾದ್ ಶಾ ಬಂಧನವನ್ನು ಖಂಡಿಸಿರುವ ಹಲವಾರು ಪತ್ರಿಕಾ ಸಂಸ್ಥೆಗಳು ತಕ್ಷಣವೇ ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿವೆ.

ಜಮ್ಮು ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವಂತೆ ಸಾರ್ವಜನಿಕರನ್ನು ಪ್ರಚೋದಿಸುವ ಉದ್ದೇಶದೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ದೇಶ ವಿರೋಧಿ ವಿಷಯವನ್ನು ಅಪ್ಲೋಡ್ ಮಾಡಿದ್ದಾರೆ ಎಂದು ಆರೋಪಿಸಿ ಕಾಶ್ಮೀರದ ಪತ್ರಕರ್ತ ಫಹಾದ್ ಶಾ ಅವರನ್ನು ಪೊಲೀಸರು ಶುಕ್ರವಾರ (ಫೆ.4) ಬಂಧಿಸಿದ್ದಾರೆ.

‘ದಿ ಕಾಶ್ಮೀರ ವಾಲಾ’ ನ್ಯೂಸ್ ಪೋರ್ಟಲ್ ಸಂಪಾದಕರಾದ ಫಹಾದ್ ಅವರ ಮೇಲೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜನವರಿ 30 ರಂದು ಪುಲ್ವಾಮಾದ ನೈರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತರಾದ ಭಯೋತ್ಪಾದಕನ ಕುಟುಂಬದ ಹೇಳಿಕೆಯನ್ನು ಆಧರಿಸಿ ಸುದ್ದಿ ಮಾಡಿ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡಿದ ನಂತರ ಅವರನ್ನು ಈ ಹಿಂದೆ ಪೊಲೀಸರು ಪ್ರಶ್ನಿಸಿದ್ದರು. ಅವರ ಪೋಸ್ಟ್‌ಗಳು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟುಮಾಡುತ್ತವೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ: ಚರಣ್‌ಜಿತ್ ಸಿಂಗ್ ಚನ್ನಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ- ರಾಹುಲ್ ಗಾಂಧಿ ಘೋಷಣೆ

ಭಾನುವಾರ ಹೇಳಿಕೆ ಬಿಡುಗಡೆ ಮಾಡಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಹೇಳಿಕೆಯಲ್ಲಿ ಫಹಾದ್ ಶಾ ಬಂಧನವನ್ನು ಬಲವಾಗಿ ಖಂಡಿಸಿದೆ. “ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಕಾಶ್ಮೀರ ವಾಲಾ ಪತ್ರಿಕೆಯ ಸಂಪಾದಕ ಫಹಾದ್ ಶಾ ಅವರ ಬಂಧನವನ್ನು ಬಲವಾಗಿ ಖಂಡಿಸುತ್ತದೆ. ಅವರನ್ನು ತಕ್ಷಣವೇ ಬಿಡುಗಡೆ ಮಾಡಲು ಒತ್ತಾಯಿಸುತ್ತದೆ. ಎಫ್‌ಐಆರ್‌ಗಳು, ಬೆದರಿಸುವ ಪ್ರಶ್ನೆಗಳು ಮತ್ತು ತಪ್ಪಾದ ಬಂಧನವನ್ನು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಸಾಧನಗಳಾಗಿ ಬಳಸುವುದಿಲ್ಲ ಎಂದು ರಾಜ್ಯದ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು” ಎಂದು ಒತ್ತಾಯಿಸಿದೆ.

ಕಾಶ್ಮೀರದಲ್ಲಿ ಪತ್ರಕರ್ತರನ್ನು ಭದ್ರತಾ ಪಡೆಗಳು ಪ್ರಶ್ನಿಸಲು ಕರೆಯುವುದು ಮತ್ತು ವಿಮರ್ಶಾತ್ಮಕವಾಗಿ ವರದಿ ಮಾಡಿದ ಕಾರಣ ಅವರನ್ನು ಆಗಾಗ್ಗೆ ಬಂಧಿಸುವುದು ದೊಡ್ಡ ಕೆಲಸ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದೆ.

“ಕಳೆದ ತಿಂಗಳು, ಕಾಶ್ಮೀರ ಪ್ರೆಸ್ ಕ್ಲಬ್ ಆಡಳಿತದಲ್ಲಿ ಮೂಗು ತೂರಿಸಿದ ಭದ್ರತಾ ಪಡೆಗಳು ಕೆಲವು ಪತ್ರಕರ್ತರಿಗೆ ಕುಮ್ಮಕ್ಕು ನೀಡಿದ್ದವು. ನಂತರ ರಾಜ್ಯದ ಆಡಳಿತಾಧಿಕಾರಿಗಳು ಕ್ಲಬ್ ಅನ್ನು ಸಂಪೂರ್ಣವಾಗಿ ಮುಚ್ಚಿದ್ದು, ಆ ಸ್ಥಳವನ್ನು ಎಸ್ಟೇಟ್ ಇಲಾಖೆಗೆ ಹಿಂತಿರುಗಿಸಿದ್ದಾರೆ” ಎಂದು ಎಡಿಟರ್ಸ್ ಗಿಲ್ಡ್ ತಿಳಿಸಿದೆ.

ಹಲವಾರು ಮಾಧ್ಯಮ ಸಂಸ್ಥೆಗಳ ಸಂಘ ಡಿಜಿಪಬ್ ತನ್ನ ಹೇಳಿಕೆಯಲ್ಲಿ ಫಹಾದ್ ಶಾ ಅವರು ಕಾನೂನುಬಾಹಿರವಾದ ಯಾವುದೇ ಕೆಲಸದಲ್ಲಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಯಿಲ್ಲ ಎಂದು ಹೇಳಿದೆ.

ಪತ್ರಕರ್ತರ ಬಂಧನದ ನಂತರ, ಪತ್ರಕರ್ತರ ರಕ್ಷಣಾ ಸಮಿತಿ ಕೂಡ ಅವರನ್ನು ಬಿಡುಗಡೆ ಮಾಡಲು ಒತ್ತಾಯಿಸಿತ್ತು. “ಫಹಾದ್ ಶಾ ಬಂಧನದಿಂದ ಜಮ್ಮು ಮತ್ತು ಕಾಶ್ಮೀರದ ಅಧಿಕಾರಿಗಳು ಪತ್ರಿಕಾ ಸ್ವಾತಂತ್ರ್ಯ ಮತ್ತು ಪತ್ರಕರ್ತರ ಮೂಲಭೂತ ಹಕ್ಕನ್ನು ಮುಕ್ತವಾಗಿ ಮತ್ತು ಸುರಕ್ಷಿತವಾಗಿ ವರದಿ ಮಾಡುವ ಹಕ್ಕನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ” ಎಂದು ಪತ್ರಕರ್ತರ ರಕ್ಷಣಾ ಸಮಿತಿಯ ಏಷ್ಯಾ ಕಾರ್ಯಕ್ರಮ ಸಂಯೋಜಕ ಸ್ಟೀವನ್ ಬಟ್ಲರ್ ಹೇಳಿದ್ದಾರೆ.

ಶ್ರೀನಗರದ ಹೊರವಲಯದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಸಲೀಂ ಪರ್ರೆ ಅವರ ಸಾವಿನ ನಂತರ ಅವರ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ಪ್ರತಿಭಟಿಸುವ ವೀಡಿಯೊವನ್ನು ಪೋಸ್ಟ್ ಮಾಡಿದ್ದ ಬಳಿಕ ಪತ್ರಕರ್ತರನ್ನು ಜನವರಿ 6 ರಂದು ಬಂಧಿಸಲಾಗಿತ್ತು.  ಈಗ ಮತ್ತೆ ಪುಲ್ವಾಮಾದ ನೈರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತರಾದ ಉಗ್ರರ ಕುಟುಂಬದ ಹೇಳಿಕೆಯನ್ನು ಆಧರಿಸಿ ಸುದ್ದಿ ಮಾಡಿ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡಿದಕ್ಕೆ ಬಂಧಿಸಲಾಗಿದೆ.


ಇದನ್ನೂ ಓದಿ: ಕಾಶ್ಮೀರದ ಪತ್ರಕರ್ತ ಫಹಾದ್ ಶಾ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...