Homeಮುಖಪುಟಕಾಶ್ಮೀರಿ ಪತ್ರಕರ್ತ ಫಹಾದ್ ಶಾ ಬಿಡುಗಡೆಗೆ ಪತ್ರಿಕಾ ಸಂಸ್ಥೆಗಳ ಒತ್ತಾಯ

ಕಾಶ್ಮೀರಿ ಪತ್ರಕರ್ತ ಫಹಾದ್ ಶಾ ಬಿಡುಗಡೆಗೆ ಪತ್ರಿಕಾ ಸಂಸ್ಥೆಗಳ ಒತ್ತಾಯ

- Advertisement -
- Advertisement -

‘ದಿ ಕಾಶ್ಮೀರ ವಾಲಾ’ ನ್ಯೂಸ್ ಪೋರ್ಟಲ್ ಸಂಪಾದಕರಾದ ಕಾಶ್ಮೀರಿ ಪತ್ರಕರ್ತ ಫಹಾದ್ ಶಾ ಬಂಧನವನ್ನು ಖಂಡಿಸಿರುವ ಹಲವಾರು ಪತ್ರಿಕಾ ಸಂಸ್ಥೆಗಳು ತಕ್ಷಣವೇ ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿವೆ.

ಜಮ್ಮು ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವಂತೆ ಸಾರ್ವಜನಿಕರನ್ನು ಪ್ರಚೋದಿಸುವ ಉದ್ದೇಶದೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ದೇಶ ವಿರೋಧಿ ವಿಷಯವನ್ನು ಅಪ್ಲೋಡ್ ಮಾಡಿದ್ದಾರೆ ಎಂದು ಆರೋಪಿಸಿ ಕಾಶ್ಮೀರದ ಪತ್ರಕರ್ತ ಫಹಾದ್ ಶಾ ಅವರನ್ನು ಪೊಲೀಸರು ಶುಕ್ರವಾರ (ಫೆ.4) ಬಂಧಿಸಿದ್ದಾರೆ.

‘ದಿ ಕಾಶ್ಮೀರ ವಾಲಾ’ ನ್ಯೂಸ್ ಪೋರ್ಟಲ್ ಸಂಪಾದಕರಾದ ಫಹಾದ್ ಅವರ ಮೇಲೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜನವರಿ 30 ರಂದು ಪುಲ್ವಾಮಾದ ನೈರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತರಾದ ಭಯೋತ್ಪಾದಕನ ಕುಟುಂಬದ ಹೇಳಿಕೆಯನ್ನು ಆಧರಿಸಿ ಸುದ್ದಿ ಮಾಡಿ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡಿದ ನಂತರ ಅವರನ್ನು ಈ ಹಿಂದೆ ಪೊಲೀಸರು ಪ್ರಶ್ನಿಸಿದ್ದರು. ಅವರ ಪೋಸ್ಟ್‌ಗಳು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟುಮಾಡುತ್ತವೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ: ಚರಣ್‌ಜಿತ್ ಸಿಂಗ್ ಚನ್ನಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ- ರಾಹುಲ್ ಗಾಂಧಿ ಘೋಷಣೆ

ಭಾನುವಾರ ಹೇಳಿಕೆ ಬಿಡುಗಡೆ ಮಾಡಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಹೇಳಿಕೆಯಲ್ಲಿ ಫಹಾದ್ ಶಾ ಬಂಧನವನ್ನು ಬಲವಾಗಿ ಖಂಡಿಸಿದೆ. “ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಕಾಶ್ಮೀರ ವಾಲಾ ಪತ್ರಿಕೆಯ ಸಂಪಾದಕ ಫಹಾದ್ ಶಾ ಅವರ ಬಂಧನವನ್ನು ಬಲವಾಗಿ ಖಂಡಿಸುತ್ತದೆ. ಅವರನ್ನು ತಕ್ಷಣವೇ ಬಿಡುಗಡೆ ಮಾಡಲು ಒತ್ತಾಯಿಸುತ್ತದೆ. ಎಫ್‌ಐಆರ್‌ಗಳು, ಬೆದರಿಸುವ ಪ್ರಶ್ನೆಗಳು ಮತ್ತು ತಪ್ಪಾದ ಬಂಧನವನ್ನು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಸಾಧನಗಳಾಗಿ ಬಳಸುವುದಿಲ್ಲ ಎಂದು ರಾಜ್ಯದ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು” ಎಂದು ಒತ್ತಾಯಿಸಿದೆ.

ಕಾಶ್ಮೀರದಲ್ಲಿ ಪತ್ರಕರ್ತರನ್ನು ಭದ್ರತಾ ಪಡೆಗಳು ಪ್ರಶ್ನಿಸಲು ಕರೆಯುವುದು ಮತ್ತು ವಿಮರ್ಶಾತ್ಮಕವಾಗಿ ವರದಿ ಮಾಡಿದ ಕಾರಣ ಅವರನ್ನು ಆಗಾಗ್ಗೆ ಬಂಧಿಸುವುದು ದೊಡ್ಡ ಕೆಲಸ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದೆ.

“ಕಳೆದ ತಿಂಗಳು, ಕಾಶ್ಮೀರ ಪ್ರೆಸ್ ಕ್ಲಬ್ ಆಡಳಿತದಲ್ಲಿ ಮೂಗು ತೂರಿಸಿದ ಭದ್ರತಾ ಪಡೆಗಳು ಕೆಲವು ಪತ್ರಕರ್ತರಿಗೆ ಕುಮ್ಮಕ್ಕು ನೀಡಿದ್ದವು. ನಂತರ ರಾಜ್ಯದ ಆಡಳಿತಾಧಿಕಾರಿಗಳು ಕ್ಲಬ್ ಅನ್ನು ಸಂಪೂರ್ಣವಾಗಿ ಮುಚ್ಚಿದ್ದು, ಆ ಸ್ಥಳವನ್ನು ಎಸ್ಟೇಟ್ ಇಲಾಖೆಗೆ ಹಿಂತಿರುಗಿಸಿದ್ದಾರೆ” ಎಂದು ಎಡಿಟರ್ಸ್ ಗಿಲ್ಡ್ ತಿಳಿಸಿದೆ.

ಹಲವಾರು ಮಾಧ್ಯಮ ಸಂಸ್ಥೆಗಳ ಸಂಘ ಡಿಜಿಪಬ್ ತನ್ನ ಹೇಳಿಕೆಯಲ್ಲಿ ಫಹಾದ್ ಶಾ ಅವರು ಕಾನೂನುಬಾಹಿರವಾದ ಯಾವುದೇ ಕೆಲಸದಲ್ಲಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಯಿಲ್ಲ ಎಂದು ಹೇಳಿದೆ.

ಪತ್ರಕರ್ತರ ಬಂಧನದ ನಂತರ, ಪತ್ರಕರ್ತರ ರಕ್ಷಣಾ ಸಮಿತಿ ಕೂಡ ಅವರನ್ನು ಬಿಡುಗಡೆ ಮಾಡಲು ಒತ್ತಾಯಿಸಿತ್ತು. “ಫಹಾದ್ ಶಾ ಬಂಧನದಿಂದ ಜಮ್ಮು ಮತ್ತು ಕಾಶ್ಮೀರದ ಅಧಿಕಾರಿಗಳು ಪತ್ರಿಕಾ ಸ್ವಾತಂತ್ರ್ಯ ಮತ್ತು ಪತ್ರಕರ್ತರ ಮೂಲಭೂತ ಹಕ್ಕನ್ನು ಮುಕ್ತವಾಗಿ ಮತ್ತು ಸುರಕ್ಷಿತವಾಗಿ ವರದಿ ಮಾಡುವ ಹಕ್ಕನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ” ಎಂದು ಪತ್ರಕರ್ತರ ರಕ್ಷಣಾ ಸಮಿತಿಯ ಏಷ್ಯಾ ಕಾರ್ಯಕ್ರಮ ಸಂಯೋಜಕ ಸ್ಟೀವನ್ ಬಟ್ಲರ್ ಹೇಳಿದ್ದಾರೆ.

ಶ್ರೀನಗರದ ಹೊರವಲಯದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಸಲೀಂ ಪರ್ರೆ ಅವರ ಸಾವಿನ ನಂತರ ಅವರ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ಪ್ರತಿಭಟಿಸುವ ವೀಡಿಯೊವನ್ನು ಪೋಸ್ಟ್ ಮಾಡಿದ್ದ ಬಳಿಕ ಪತ್ರಕರ್ತರನ್ನು ಜನವರಿ 6 ರಂದು ಬಂಧಿಸಲಾಗಿತ್ತು.  ಈಗ ಮತ್ತೆ ಪುಲ್ವಾಮಾದ ನೈರಾ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತರಾದ ಉಗ್ರರ ಕುಟುಂಬದ ಹೇಳಿಕೆಯನ್ನು ಆಧರಿಸಿ ಸುದ್ದಿ ಮಾಡಿ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡಿದಕ್ಕೆ ಬಂಧಿಸಲಾಗಿದೆ.


ಇದನ್ನೂ ಓದಿ: ಕಾಶ್ಮೀರದ ಪತ್ರಕರ್ತ ಫಹಾದ್ ಶಾ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...