Homeಮುಖಪುಟ'ದಿ ಕಾರವಾನ್‌' ಪತ್ರಕರ್ತರ ವಿರುದ್ಧದ ಎಫ್‌ಐಆರ್ ಖಂಡಿಸಿದ ಪ್ರೆಸ್ ಕ್ಲಬ್ ಆಫ್ ಇಂಡಿಯಾ

‘ದಿ ಕಾರವಾನ್‌’ ಪತ್ರಕರ್ತರ ವಿರುದ್ಧದ ಎಫ್‌ಐಆರ್ ಖಂಡಿಸಿದ ಪ್ರೆಸ್ ಕ್ಲಬ್ ಆಫ್ ಇಂಡಿಯಾ

- Advertisement -
- Advertisement -

ಈಶಾನ್ಯ ದೆಹಲಿಯ ಭಜನ್‌ಪುರ ಪೊಲೀಸ್ ಠಾಣೆಯಲ್ಲಿ ‘ದಿ ಕಾರವಾನ್‌’ನ ಪತ್ರಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಬಗ್ಗೆ ಪ್ರೆಸ್ ಕ್ಲಬ್ ಆಫ್ ಇಂಡಿಯಾ(ಪಿಸಿಐ) ತೀವ್ರ ಖಂಡನೆ ವ್ಯಕ್ತಪಡಿಸಿದೆ.

ಆಗಸ್ಟ್ 2020ರಲ್ಲಿ, ಪತ್ರಕರ್ತರಾದ ಶಾಹಿದ್ ತಂತ್ರಾಯ್, ಪ್ರಭ್‌ಜಿತ್ ಸಿಂಗ್ ಮತ್ತು ಮಹಿಳಾ ಪತ್ರಕರ್ತೆಯೊಬ್ಬರು ಈಶಾನ್ಯ ದೆಹಲಿಯ ಉತ್ತರ ಘೋಂಡಾ ಸಮೀಪ ವರದಿ ಮಾಡುತ್ತಿದ್ದಾಗ, ಅವರ ಮೇಲೆ ದಾಳಿ ಮಾಡಲಾಗಿದೆ. ಕೋಮು ದೂಷಣೆ, ಕೊಲೆ ಬೆದರಿಕೆ ಮತ್ತು ಲೈಂಗಿಕ ಕಿರುಕುಳ ನೀಡಲಾಗಿದೆ. ದಿ ಕ್ಯಾರವಾನ್ ಪ್ರಕಾರ, ಪತ್ರಕರ್ತರು ಆ ಪ್ರದೇಶದಲ್ಲಿ ಕೇಸರಿ ಧ್ವಜಗಳ ಪೋಟೋಗಳನ್ನು ತೆಗೆದುಕೊಳ್ಳುತ್ತಿದ್ದರು, ಆಗ ಸ್ಥಳೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸೇರಿ ಹಲವರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ  ಪತ್ರಕರ್ತರು ಭಜನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಸುಮಾರು ನಾಲ್ಕು ವರ್ಷಗಳ ನಂತರ, ಭಜನ್‌ಪುರ ಪೊಲೀಸರು ಪ್ರಭಜಿತ್ ಸಿಂಗ್ ಅವರು ಎಫ್‌ಐಆರ್‌ಗೆ ಸಂಬಂಧಿಸಿದ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಇದರಲ್ಲಿ ಮೂವರು ಪತ್ರಕರ್ತರ ವರುದ್ಧ 354 ಮತ್ತು 153ಎ ಯಂತಹ ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್‌ ದಾಖಲಿಸಲಾಗಿದೆ.

ನಮ್ಮ ಸಿಬ್ಬಂದಿ ವಿರುದ್ಧದ ಎಫ್‌ಐಆರ್‌ನ ದೃಢೀಕೃತ ಪ್ರತಿಯನ್ನು ನಮಗೆ ನೀಡಲಾಗಿಲ್ಲ. 2020ರ ಘಟನೆ ನಡೆದ ದಿನ ನಮ್ಮ ಎಫ್‌ಐಆರ್‌ಗೆ ಒಂದು ಗಂಟೆಯ ಮೊದಲು ನಮ್ಮ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ನಾವು ತಿಳಿದುಕೊಂಡಿದ್ದೇವೆ. ಘಟನೆಯ ದಿನವೇ ನಾವು ದೂರುಗಳನ್ನು ನೀಡಿದ್ದರೂ, ಪೊಲೀಸರು ನಮ್ಮ ಪ್ರಕರಣವನ್ನು ದಾಖಲಿಸಿರಲಿಲ್ಲ. ಎಫ್‌ಐಆರ್ ಆದ ಮೂರು ದಿನಗಳ ನಂತರ 2020ರ ಆ.14ರಂದು ನಮ್ಮ ಎಫ್‌ಐಆರ್‌ನ್ನು ‘ಕೌಂಟರ್ ಎಫ್‌ಐಆರ್’ ಎಂದು ಪರಿಗಣಿಸಲಾಗುತ್ತಿದೆ ಎಂದು ಪೊಲೀಸರು ನಮಗೆ ತಿಳಿಸಿದ್ದಾರೆ ಎಂದು ಕಾರವಾನ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪ್ರೆಸ್ ಕ್ಲಬ್ ಆಫ್ ಇಂಡಿಯಾ ಈ ಹಿಂದೆ ದಾಳಿಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿತ್ತು ಮತ್ತು ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಗೆ ಒತ್ತಾಯಿಸಿತ್ತು. ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಲು ವಿಳಂಬ ಮಾಡಿ ಪತ್ರಕರ್ತರ ವಿರುದ್ಧವೇ ತನಿಖೆ ಆರಂಭಿಸಿದ್ದಾರೆ. ಎಫ್ಐಆರ್ ವಿವರಗಳು ಸತ್ಯಗಳಿಗೆ ವಿರುದ್ಧವಾಗಿವೆ. ಪೊಲೀಸರ ದುರ್ವರ್ತನೆ ಬಗ್ಗೆ ವರದಿ ಮಾಡುತ್ತಿದ್ದ ಪತ್ರಕರ್ತರ ವಿರುದ್ಧ ಇದೀಗ  ಗಂಭೀರ ಎಫ್ ಐಆರ್ ದಾಖಲಾಗಿರುವುದು ಆತಂಕಕ್ಕೀಡು ಮಾಡಿದೆ. ಆದರೆ ಪತ್ರಕರ್ತರು ದಾಖಲಿಸಿದ ಎಫ್‌ಐಆರ್‌ ಬಗ್ಗೆ ಪೊಲೀಸರು ಸರಿಯಾಗಿ ತನಿಖೆ ನಡೆಸಿಲ್ಲ. ಈ ಬೆಳವಣಿಗೆಯನ್ನು ಪತ್ರಿಕೋದ್ಯಮವನ್ನು ಹತ್ತಿಕ್ಕುವ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಹಾಳುಮಾಡುವ ಪ್ರಯತ್ನವೆಂದು ಪರಿಗಣಿಸಲಾಗಿದೆ. ಕಾರವಾನ್‌ನ ಕಿರುಕುಳಕ್ಕೊಳಗಾದ ಪತ್ರಕರ್ತರನ್ನು ಸಂಪೂರ್ಣವಾಗಿ ಬೆಂಬಲಿಸುತ್ತಿದ್ದೇವೆ ಮತ್ತು ದೆಹಲಿ ಪೊಲೀಸರ ಪಕ್ಷಪಾತೀಯ ಪ್ರತೀಕಾರದ ಕ್ರಮಗಳನ್ನು ಖಂಡಿಸುತ್ತೇವೆ ಎಂದು ಪ್ರೆಸ್ ಕ್ಲಬ್ ಆಫ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ.

ದೆಹಲಿ ಪೊಲೀಸರು ನ್ಯಾಯಯುತವಾಗಿ ಮತ್ತು ನಿಷ್ಪಕ್ಷಪಾತವಾಗಿ ವರ್ತಿಸುವಂತೆ, ಪತ್ರಕರ್ತರ ವಿರುದ್ಧದ ಎಫ್‌ಐಆರ್ ಹಿಂಪಡೆಯಲು ಮತ್ತು ದಿ ಕ್ಯಾರವಾನ್ ಪತ್ರಕರ್ತರು ದಾಖಲಿಸಿರುವ ಎಫ್‌ಐಆರ್‌ ಬಗ್ಗೆ ಸರಿಯಾಗಿ ತನಿಖೆ ಮಾಡಲು ಪ್ರೆಸ್ ಕ್ಲಬ್ ಆಫ್ ಇಂಡಿಯಾ ಆಗ್ರಹಿಸಿದೆ.

ಇದನ್ನು ಓದಿ: ‘ನಕಾರಾತ್ಮಕ’ ರಾಜಕೀಯದ ಅಂತ್ಯ: ಚುನಾವಣಾ ಫಲಿತಾಂಶದ ಬಗ್ಗೆ ಅಖಿಲೇಶ್ ಯಾದವ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...