Homeಕರ್ನಾಟಕಪತ್ರಕರ್ತರ ಮೇಲೆ ಸುಳ್ಳು ಆರೋಪ, ಬಂಧನ ಖಂಡನೀಯ - ಕೆ.ದೊರೈರಾಜ್‌

ಪತ್ರಕರ್ತರ ಮೇಲೆ ಸುಳ್ಳು ಆರೋಪ, ಬಂಧನ ಖಂಡನೀಯ – ಕೆ.ದೊರೈರಾಜ್‌

- Advertisement -
- Advertisement -

ಹಿರಿಯ ಪತ್ರಕರ್ತ ಹಾಗೂ ಸಾಮಾಜಿಕ ಹೋರಾಟಗಾರ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಸುಳ್ಳು ಆರೋಪಗಳನ್ನು ಹೊರಿಸಿ ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಜನಪರ ಸಂಘಟನೆಗಳ ಒಕ್ಕೂಟ ಕೂಡಲೇ ಅವರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿವೆ.

ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಜನಪರ ಸಂಘಟನೆಗಳ ಒಕ್ಕೂಟ, ಪಿಯುಸಿಎಲ್, ಜನಸಂಗ್ರಾಮ ಪರಿಷತ್, ಸ್ವರಾಜ್ ಇಂಡಿಯಾ, ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರ ದೊಡ್ಡಿಪಾಳ್ಯ ನರಸಿಂಹಮೂರ್ತಿ ದೇಶದ್ರೋಹಿ, ತಲೆಮರೆಸಿಕೊಂಡ ವ್ಯಕ್ತಿ ಎಂದು ಬಿಂಬಿಸುತ್ತಿರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

 

ಪಿಯುಸಿಎಲ್ ಜಿಲ್ಲಾ ಘಟಕ ಅಧ್ಯಕ್ಷ ಕೆ.ದೊರೈರಾಜ್ ಮಾತನಾಡಿ ದೊಡ್ಡಪಾಳ್ಯ ನರಸಿಂಹಮೂರ್ತಿ ಪತ್ರಕರ್ತರಾಗಿ ಹೋರಾಟಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಅಂಥವರ ಮೇಲೆ ಸುಳ್ಳು ಆರೋಪ ಹೊರಿಸ ಬಂದಿಸಿರುವುದು ಖಂಡನೀಯ. ಜನಪರ ಕೆಲಸ ಮಾಡುವವರ ಮೇಲೆ ಸುಳ್ಳು ಆರೋಪ ಮಾಡಿ ಬಂಧಿಸುವುದು ಆತಂಕಕಾರಿ ಮತ್ತು ಸರ್ಕಾರದ ಸರ್ವಾಧಿಕಾರಿ ಧೋರಣೆಯಾಗಿದೆ.

ಸರ್ಕಾರ ಜಾರಿಗೆ ತರುವ ಜನವಿರೋಧಿ ನೀತಿಗಳನ್ನು ವಿರೋಧಿಸುವ, ಅದರ ವಿರುದ್ಧ ಹೋರಾಟ ರೂಪಿಸುವವರ ದನಿಗಳನ್ನು ಅಡಗಿಸುವ ಕೆಲಸ ಮಾಡುತ್ತಿದೆ. ಸರ್ಕಾರ ಇಂಥ  ಸರ್ವಾಧಿಕಾರಿ ಧೋರಣೆ ಬಿಡಬೇಕು. ಸಾರ್ವತ್ರಿಕವಾಗಿ ಸುಳ್ಳು ಆರೋಪ ಮತ್ತು ದೇಶದ್ರೋಹಿ ಪಟ್ಟ ಕಟ್ಟುವ ಕೆಲಸ ವ್ಯಾಪಕವಾಗಿ ನಡೆಯುತ್ತಿದ್ದ ಪ್ರಭುತ್ವ ಭಯೋತ್ಪಾದನೆ  ಮಾಡುತ್ತಿದೆ ಎಂದು ಆರೋಪಿಸಿದರು

ಸ್ವರಾಜ್ ಇಂಡಿಯಾದ ಮುಖಂಡ ಸಿ.ಯತಿರಾಜು ಮಾತನಾಡಿ, ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಬಂಧಿಸುವ ಮೂಲಕ ಪತ್ರಿಕಾ ಸ್ವಾತಂತ್ರ್ಯ ಸ್ವಾತಂತ್ರ್ಯ ಮತ್ತು ವಿರೋಧಿ ಅಭಿಪ್ರಾಯ ವ್ಯಕ್ತಪಡಿಸುವವರ ದನಿಯನ್ನು ಬಗ್ಗು ಬಡಿಯುವ ಕೆಲಸ ಮಾಡುತ್ತಿದೆ. ಇದನ್ನು ಜನಪರ ಸಂಘಟನೆಗಳು ಬಲವಾಗಿ ಖಂಡಿಸುತ್ತವೆ ಎಂದರು.

ಜನಸಂಗ್ರಾಮ ಪರಿಷತ್ ಮುಖಂಡ ಪಂಡಿತ್ ಜವಹಾರ್ ಮಾತನಾಡಿ ಜನಪರ ಹೋರಾಟಗಾರರನ್ನು ಬಂಧಿಸುವುದರಿಂದ ಸರ್ಕಾರದ ಜನ ವಿರೋಧಿ ನೀತಿಗಳನ್ನು ನೋಡಿಕೊಂಡು ಸುಮ್ಮನೆ ಕೂರಬೇಕಾಗುತ್ತದೆ. ಅವರ ಬೆಂಗಳೂರಿನಲ್ಲಿ 20-25 ವರ್ಷಗಳಿಂದ ಸಾರ್ವಜನಿಕವಾಗಿ ಕೆಲಸ ಮಾಡುತ್ತಿದ್ದಾರೆ. ಬಟ್ಟೆ ಅಂಗಡಿ ಇಟ್ಟುಕೊಂಡಿದ್ದರು. ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದರು. ಆದರೆ ಈಗ ಬಂಧಿಸಿರುವುದು ಖಂಡನೀಯ ಎಂದು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಮಾತನಾಡಿ, ಜನಪರ ಮತ್ತು ಪ್ರಗತಿಪರ ದನಿಗಳನ್ನು ಅಡಗಿಸುವ ಹುನ್ನಾರ ನಿರಂತರವಾಗಿ ನಡೆಯುತ್ತಿದೆ. 1994ರಲ್ಲಿ ವಿನೋದ್ ಎಂಬ ವ್ಯಕ್ತಿ ಇದ್ದರು. ಅವರೇ ದೊಡ್ಡಿಪಾಳ್ಯ ನರಸಿಂಹಮೂರ್ತಿ ಎಂದು ಸುಳ್ಳು ಆರೋಪಿಸಿ ಬಂಧಿಸಿರುವುದು ಖಂಡನೀಯ. ಸ್ವರಾಜ್ ಇಂಡಿಯಾದ ಮುಖಂಡರಾಗಿ ಗೌರಿ ಲಂಕೇಶ್ ಹತ್ಯೆಯ ನಂತರ ನ್ಯಾಯಪಥ ಪತ್ರಿಕೆ ನಡೆಸಿಕೊಂಡು ಬರುತ್ತಿದ್ದರು. ಅವರನ್ನು ಬಂಧಿಸಿ ಪತ್ರಿಕಾ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾಡಿದೆ ಎಂದು ದೂರಿದರು.

ಮಾಧ್ಯಮಗೋಷ್ಠಿಯಲ್ಲಿ ಸ್ವರಾಜ್ ಇಂಡಿಯಾದ ನಾದೂರು ಕೆಂಚಪ್ಪ, ಹಂದ್ರಾಳ್ ನಾಗಭೂಷಣ, ಮೋಹನ್ ಉಪಸ್ಥಿತರಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನರಸಿಂಹ ಮೂರ್ತಿಯವರ ಬಿಡುಗಡೆಗಾಗಿ ಇಂತಹ ಸಭೆ, ಸಮಾವೇಶಗಳು ಹೆಚ್ಚು ಹೆಚ್ಚಾಗಿ ನಡೆಯಬೇಕು.

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...