Homeಕರ್ನಾಟಕಪತ್ರಕರ್ತರ ಮೇಲೆ ಸುಳ್ಳು ಆರೋಪ, ಬಂಧನ ಖಂಡನೀಯ - ಕೆ.ದೊರೈರಾಜ್‌

ಪತ್ರಕರ್ತರ ಮೇಲೆ ಸುಳ್ಳು ಆರೋಪ, ಬಂಧನ ಖಂಡನೀಯ – ಕೆ.ದೊರೈರಾಜ್‌

- Advertisement -
- Advertisement -

ಹಿರಿಯ ಪತ್ರಕರ್ತ ಹಾಗೂ ಸಾಮಾಜಿಕ ಹೋರಾಟಗಾರ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಸುಳ್ಳು ಆರೋಪಗಳನ್ನು ಹೊರಿಸಿ ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಜನಪರ ಸಂಘಟನೆಗಳ ಒಕ್ಕೂಟ ಕೂಡಲೇ ಅವರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿವೆ.

ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಜನಪರ ಸಂಘಟನೆಗಳ ಒಕ್ಕೂಟ, ಪಿಯುಸಿಎಲ್, ಜನಸಂಗ್ರಾಮ ಪರಿಷತ್, ಸ್ವರಾಜ್ ಇಂಡಿಯಾ, ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರ ದೊಡ್ಡಿಪಾಳ್ಯ ನರಸಿಂಹಮೂರ್ತಿ ದೇಶದ್ರೋಹಿ, ತಲೆಮರೆಸಿಕೊಂಡ ವ್ಯಕ್ತಿ ಎಂದು ಬಿಂಬಿಸುತ್ತಿರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

 

ಪಿಯುಸಿಎಲ್ ಜಿಲ್ಲಾ ಘಟಕ ಅಧ್ಯಕ್ಷ ಕೆ.ದೊರೈರಾಜ್ ಮಾತನಾಡಿ ದೊಡ್ಡಪಾಳ್ಯ ನರಸಿಂಹಮೂರ್ತಿ ಪತ್ರಕರ್ತರಾಗಿ ಹೋರಾಟಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಅಂಥವರ ಮೇಲೆ ಸುಳ್ಳು ಆರೋಪ ಹೊರಿಸ ಬಂದಿಸಿರುವುದು ಖಂಡನೀಯ. ಜನಪರ ಕೆಲಸ ಮಾಡುವವರ ಮೇಲೆ ಸುಳ್ಳು ಆರೋಪ ಮಾಡಿ ಬಂಧಿಸುವುದು ಆತಂಕಕಾರಿ ಮತ್ತು ಸರ್ಕಾರದ ಸರ್ವಾಧಿಕಾರಿ ಧೋರಣೆಯಾಗಿದೆ.

ಸರ್ಕಾರ ಜಾರಿಗೆ ತರುವ ಜನವಿರೋಧಿ ನೀತಿಗಳನ್ನು ವಿರೋಧಿಸುವ, ಅದರ ವಿರುದ್ಧ ಹೋರಾಟ ರೂಪಿಸುವವರ ದನಿಗಳನ್ನು ಅಡಗಿಸುವ ಕೆಲಸ ಮಾಡುತ್ತಿದೆ. ಸರ್ಕಾರ ಇಂಥ  ಸರ್ವಾಧಿಕಾರಿ ಧೋರಣೆ ಬಿಡಬೇಕು. ಸಾರ್ವತ್ರಿಕವಾಗಿ ಸುಳ್ಳು ಆರೋಪ ಮತ್ತು ದೇಶದ್ರೋಹಿ ಪಟ್ಟ ಕಟ್ಟುವ ಕೆಲಸ ವ್ಯಾಪಕವಾಗಿ ನಡೆಯುತ್ತಿದ್ದ ಪ್ರಭುತ್ವ ಭಯೋತ್ಪಾದನೆ  ಮಾಡುತ್ತಿದೆ ಎಂದು ಆರೋಪಿಸಿದರು

ಸ್ವರಾಜ್ ಇಂಡಿಯಾದ ಮುಖಂಡ ಸಿ.ಯತಿರಾಜು ಮಾತನಾಡಿ, ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಬಂಧಿಸುವ ಮೂಲಕ ಪತ್ರಿಕಾ ಸ್ವಾತಂತ್ರ್ಯ ಸ್ವಾತಂತ್ರ್ಯ ಮತ್ತು ವಿರೋಧಿ ಅಭಿಪ್ರಾಯ ವ್ಯಕ್ತಪಡಿಸುವವರ ದನಿಯನ್ನು ಬಗ್ಗು ಬಡಿಯುವ ಕೆಲಸ ಮಾಡುತ್ತಿದೆ. ಇದನ್ನು ಜನಪರ ಸಂಘಟನೆಗಳು ಬಲವಾಗಿ ಖಂಡಿಸುತ್ತವೆ ಎಂದರು.

ಜನಸಂಗ್ರಾಮ ಪರಿಷತ್ ಮುಖಂಡ ಪಂಡಿತ್ ಜವಹಾರ್ ಮಾತನಾಡಿ ಜನಪರ ಹೋರಾಟಗಾರರನ್ನು ಬಂಧಿಸುವುದರಿಂದ ಸರ್ಕಾರದ ಜನ ವಿರೋಧಿ ನೀತಿಗಳನ್ನು ನೋಡಿಕೊಂಡು ಸುಮ್ಮನೆ ಕೂರಬೇಕಾಗುತ್ತದೆ. ಅವರ ಬೆಂಗಳೂರಿನಲ್ಲಿ 20-25 ವರ್ಷಗಳಿಂದ ಸಾರ್ವಜನಿಕವಾಗಿ ಕೆಲಸ ಮಾಡುತ್ತಿದ್ದಾರೆ. ಬಟ್ಟೆ ಅಂಗಡಿ ಇಟ್ಟುಕೊಂಡಿದ್ದರು. ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದರು. ಆದರೆ ಈಗ ಬಂಧಿಸಿರುವುದು ಖಂಡನೀಯ ಎಂದು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಮಾತನಾಡಿ, ಜನಪರ ಮತ್ತು ಪ್ರಗತಿಪರ ದನಿಗಳನ್ನು ಅಡಗಿಸುವ ಹುನ್ನಾರ ನಿರಂತರವಾಗಿ ನಡೆಯುತ್ತಿದೆ. 1994ರಲ್ಲಿ ವಿನೋದ್ ಎಂಬ ವ್ಯಕ್ತಿ ಇದ್ದರು. ಅವರೇ ದೊಡ್ಡಿಪಾಳ್ಯ ನರಸಿಂಹಮೂರ್ತಿ ಎಂದು ಸುಳ್ಳು ಆರೋಪಿಸಿ ಬಂಧಿಸಿರುವುದು ಖಂಡನೀಯ. ಸ್ವರಾಜ್ ಇಂಡಿಯಾದ ಮುಖಂಡರಾಗಿ ಗೌರಿ ಲಂಕೇಶ್ ಹತ್ಯೆಯ ನಂತರ ನ್ಯಾಯಪಥ ಪತ್ರಿಕೆ ನಡೆಸಿಕೊಂಡು ಬರುತ್ತಿದ್ದರು. ಅವರನ್ನು ಬಂಧಿಸಿ ಪತ್ರಿಕಾ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾಡಿದೆ ಎಂದು ದೂರಿದರು.

ಮಾಧ್ಯಮಗೋಷ್ಠಿಯಲ್ಲಿ ಸ್ವರಾಜ್ ಇಂಡಿಯಾದ ನಾದೂರು ಕೆಂಚಪ್ಪ, ಹಂದ್ರಾಳ್ ನಾಗಭೂಷಣ, ಮೋಹನ್ ಉಪಸ್ಥಿತರಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನರಸಿಂಹ ಮೂರ್ತಿಯವರ ಬಿಡುಗಡೆಗಾಗಿ ಇಂತಹ ಸಭೆ, ಸಮಾವೇಶಗಳು ಹೆಚ್ಚು ಹೆಚ್ಚಾಗಿ ನಡೆಯಬೇಕು.

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...