Homeಕರ್ನಾಟಕಪತ್ರಕರ್ತರ ಮೇಲೆ ಸುಳ್ಳು ಆರೋಪ, ಬಂಧನ ಖಂಡನೀಯ - ಕೆ.ದೊರೈರಾಜ್‌

ಪತ್ರಕರ್ತರ ಮೇಲೆ ಸುಳ್ಳು ಆರೋಪ, ಬಂಧನ ಖಂಡನೀಯ – ಕೆ.ದೊರೈರಾಜ್‌

- Advertisement -
- Advertisement -

ಹಿರಿಯ ಪತ್ರಕರ್ತ ಹಾಗೂ ಸಾಮಾಜಿಕ ಹೋರಾಟಗಾರ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಸುಳ್ಳು ಆರೋಪಗಳನ್ನು ಹೊರಿಸಿ ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಜನಪರ ಸಂಘಟನೆಗಳ ಒಕ್ಕೂಟ ಕೂಡಲೇ ಅವರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿವೆ.

ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಜನಪರ ಸಂಘಟನೆಗಳ ಒಕ್ಕೂಟ, ಪಿಯುಸಿಎಲ್, ಜನಸಂಗ್ರಾಮ ಪರಿಷತ್, ಸ್ವರಾಜ್ ಇಂಡಿಯಾ, ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರ ದೊಡ್ಡಿಪಾಳ್ಯ ನರಸಿಂಹಮೂರ್ತಿ ದೇಶದ್ರೋಹಿ, ತಲೆಮರೆಸಿಕೊಂಡ ವ್ಯಕ್ತಿ ಎಂದು ಬಿಂಬಿಸುತ್ತಿರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

 

ಪಿಯುಸಿಎಲ್ ಜಿಲ್ಲಾ ಘಟಕ ಅಧ್ಯಕ್ಷ ಕೆ.ದೊರೈರಾಜ್ ಮಾತನಾಡಿ ದೊಡ್ಡಪಾಳ್ಯ ನರಸಿಂಹಮೂರ್ತಿ ಪತ್ರಕರ್ತರಾಗಿ ಹೋರಾಟಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಅಂಥವರ ಮೇಲೆ ಸುಳ್ಳು ಆರೋಪ ಹೊರಿಸ ಬಂದಿಸಿರುವುದು ಖಂಡನೀಯ. ಜನಪರ ಕೆಲಸ ಮಾಡುವವರ ಮೇಲೆ ಸುಳ್ಳು ಆರೋಪ ಮಾಡಿ ಬಂಧಿಸುವುದು ಆತಂಕಕಾರಿ ಮತ್ತು ಸರ್ಕಾರದ ಸರ್ವಾಧಿಕಾರಿ ಧೋರಣೆಯಾಗಿದೆ.

ಸರ್ಕಾರ ಜಾರಿಗೆ ತರುವ ಜನವಿರೋಧಿ ನೀತಿಗಳನ್ನು ವಿರೋಧಿಸುವ, ಅದರ ವಿರುದ್ಧ ಹೋರಾಟ ರೂಪಿಸುವವರ ದನಿಗಳನ್ನು ಅಡಗಿಸುವ ಕೆಲಸ ಮಾಡುತ್ತಿದೆ. ಸರ್ಕಾರ ಇಂಥ  ಸರ್ವಾಧಿಕಾರಿ ಧೋರಣೆ ಬಿಡಬೇಕು. ಸಾರ್ವತ್ರಿಕವಾಗಿ ಸುಳ್ಳು ಆರೋಪ ಮತ್ತು ದೇಶದ್ರೋಹಿ ಪಟ್ಟ ಕಟ್ಟುವ ಕೆಲಸ ವ್ಯಾಪಕವಾಗಿ ನಡೆಯುತ್ತಿದ್ದ ಪ್ರಭುತ್ವ ಭಯೋತ್ಪಾದನೆ  ಮಾಡುತ್ತಿದೆ ಎಂದು ಆರೋಪಿಸಿದರು

ಸ್ವರಾಜ್ ಇಂಡಿಯಾದ ಮುಖಂಡ ಸಿ.ಯತಿರಾಜು ಮಾತನಾಡಿ, ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಬಂಧಿಸುವ ಮೂಲಕ ಪತ್ರಿಕಾ ಸ್ವಾತಂತ್ರ್ಯ ಸ್ವಾತಂತ್ರ್ಯ ಮತ್ತು ವಿರೋಧಿ ಅಭಿಪ್ರಾಯ ವ್ಯಕ್ತಪಡಿಸುವವರ ದನಿಯನ್ನು ಬಗ್ಗು ಬಡಿಯುವ ಕೆಲಸ ಮಾಡುತ್ತಿದೆ. ಇದನ್ನು ಜನಪರ ಸಂಘಟನೆಗಳು ಬಲವಾಗಿ ಖಂಡಿಸುತ್ತವೆ ಎಂದರು.

ಜನಸಂಗ್ರಾಮ ಪರಿಷತ್ ಮುಖಂಡ ಪಂಡಿತ್ ಜವಹಾರ್ ಮಾತನಾಡಿ ಜನಪರ ಹೋರಾಟಗಾರರನ್ನು ಬಂಧಿಸುವುದರಿಂದ ಸರ್ಕಾರದ ಜನ ವಿರೋಧಿ ನೀತಿಗಳನ್ನು ನೋಡಿಕೊಂಡು ಸುಮ್ಮನೆ ಕೂರಬೇಕಾಗುತ್ತದೆ. ಅವರ ಬೆಂಗಳೂರಿನಲ್ಲಿ 20-25 ವರ್ಷಗಳಿಂದ ಸಾರ್ವಜನಿಕವಾಗಿ ಕೆಲಸ ಮಾಡುತ್ತಿದ್ದಾರೆ. ಬಟ್ಟೆ ಅಂಗಡಿ ಇಟ್ಟುಕೊಂಡಿದ್ದರು. ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದರು. ಆದರೆ ಈಗ ಬಂಧಿಸಿರುವುದು ಖಂಡನೀಯ ಎಂದು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಮಾತನಾಡಿ, ಜನಪರ ಮತ್ತು ಪ್ರಗತಿಪರ ದನಿಗಳನ್ನು ಅಡಗಿಸುವ ಹುನ್ನಾರ ನಿರಂತರವಾಗಿ ನಡೆಯುತ್ತಿದೆ. 1994ರಲ್ಲಿ ವಿನೋದ್ ಎಂಬ ವ್ಯಕ್ತಿ ಇದ್ದರು. ಅವರೇ ದೊಡ್ಡಿಪಾಳ್ಯ ನರಸಿಂಹಮೂರ್ತಿ ಎಂದು ಸುಳ್ಳು ಆರೋಪಿಸಿ ಬಂಧಿಸಿರುವುದು ಖಂಡನೀಯ. ಸ್ವರಾಜ್ ಇಂಡಿಯಾದ ಮುಖಂಡರಾಗಿ ಗೌರಿ ಲಂಕೇಶ್ ಹತ್ಯೆಯ ನಂತರ ನ್ಯಾಯಪಥ ಪತ್ರಿಕೆ ನಡೆಸಿಕೊಂಡು ಬರುತ್ತಿದ್ದರು. ಅವರನ್ನು ಬಂಧಿಸಿ ಪತ್ರಿಕಾ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾಡಿದೆ ಎಂದು ದೂರಿದರು.

ಮಾಧ್ಯಮಗೋಷ್ಠಿಯಲ್ಲಿ ಸ್ವರಾಜ್ ಇಂಡಿಯಾದ ನಾದೂರು ಕೆಂಚಪ್ಪ, ಹಂದ್ರಾಳ್ ನಾಗಭೂಷಣ, ಮೋಹನ್ ಉಪಸ್ಥಿತರಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನರಸಿಂಹ ಮೂರ್ತಿಯವರ ಬಿಡುಗಡೆಗಾಗಿ ಇಂತಹ ಸಭೆ, ಸಮಾವೇಶಗಳು ಹೆಚ್ಚು ಹೆಚ್ಚಾಗಿ ನಡೆಯಬೇಕು.

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...